ಸುದ್ದಿಮೂಲ ವಾರ್ತೆ ಬೆಂಗಳೂರು , ಡಿ.09:
ಭಾರತದ ತಂತ್ರಜ್ಞಾನ ರಾಜಧಾನಿ ಬೆಂಗಳೂರಿನಲ್ಲಿ ’ಕ್ವಾಾಂಟಮ್ ಮೆಟೀರಿಯಲ್ಸ್ ಇನ್ನೋೋವೇಶನ್ ನೆಟ್ವರ್ಕ್(ಕ್ವಾಾಂಟಮ್ ಜಾಲ ನಿರ್ಮಾಣ) ಸ್ಥಾಾಪಿಸಲು ರಾಷ್ಟ್ರೀಯ ಕ್ವಾಾಂಟಮ್ ಮಿಷನ್ ಅಡಿಯಲ್ಲಿ 150 ಕೋಟಿ ರೂ. ಆರ್ಥಿಕ ನೆರವು ನೀಡುವಂತೆ ಕೋರಿ ಮುಖ್ಯಮಂತ್ರಿಿ ಸಿದ್ದರಾಮಯ್ಯ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದಾರೆ.
ಸಣ್ಣ ನೀರಾವರಿ ಹಾಗೂ ವಿಜ್ಞಾನ ಮತ್ತು ತಂತ್ರಜ್ಞಾನ ಸಚಿವ ಎನ್.ಎಸ್. ಬೋಸರಾಜು ಅವರ ನೇತೃತ್ವದಲ್ಲಿ ಈ ಪ್ರಸ್ತಾಾವನೆಯನ್ನು ರೂಪಿಸಲಾಗಿದ್ದು, ರಾಜ್ಯದ ಮಹತ್ವಾಾಕಾಂಕ್ಷೆಯ ’ಕ್ವಾಾಂಟಮ್ ಸಿಟಿ’ ಯೋಜನೆಗೆ ಇದು ಬಹಳ ಅಗತ್ಯವಾಗಿದೆ ಎಂದು ಸರ್ಕಾರ ಪ್ರತಿಪಾದಿಸಿದೆ.
ಈ ಕುರಿತು ಪ್ರತಿಕ್ರಿಿಯಿಸಿರುವ ಸಚಿವ ಎನ್.ಎಸ್. ಬೋಸರಾಜು ಅವರು, ಕ್ವಾಾಂಟಮ್ ತಂತ್ರಜ್ಞಾನಕ್ಕೆೆ ಮೆಟೀರಿಯಲ್ಸ್ಗಳೆ ಮೂಲ ಆಧಾರ. ಸಂಶೋಧನೆ ಮತ್ತು ಕೈಗಾರಿಕಾ ಸಾಧ್ಯತೆಯ ನಡುವಿನ ಅಂತರವನ್ನು ಕಡಿಮೆ ಮಾಡಲು ಈ ಯೋಜನೆ ಒಂದು ಹೆಗ್ಗುರುತು ಆಗಲಿದೆ. ಜಾಗತಿಕ ಕ್ವಾಾಂಟಮ್ ಕ್ರಾಾಂತಿಯಲ್ಲಿ ಭಾರತವನ್ನು ಹಾಗೂ ಬೆಂಗಳೂರು ನಗರವನ್ನು ಮುಂಚೂಣಿಯಲ್ಲಿ ಇರಿಸಲು ಇದು ಬಹಳ ಅಗತ್ಯವಾಗಿದೆ ಎಂದು ತಿಳಿಸಿದ್ದಾರೆ.
ತಮ್ಮ ಪತ್ರದಲ್ಲಿ ಈ ಯೋಜನೆಯ ಮಹತ್ವವನ್ನು ವಿವರಿಸಿರುವ ಮುಖ್ಯಮಂತ್ರಿಿ ವಸ್ತುಗಳ ಸಂಶೋಧನೆ ಮತ್ತು ತಂತ್ರಜ್ಞಾನ ಅಭಿವೃದ್ಧಿಿ ಒಂದೇ ಕಡೆ ನಡೆಯುವಂತ ಸ್ವಾಾವಲಂಬಿ ಮತ್ತು ಸುಸ್ಥಿಿರ ಆವಿಷ್ಕಾಾರದ ಪರಿಸರವನ್ನು ನಿರ್ಮಿಸುವುದು ನಮ್ಮ ಗುರಿ. ಪ್ರಸ್ತಾಾವಿತ ಕ್ಯೂ ಮಿಂಟ್ ಕೇವಲ ರಾಜ್ಯಕ್ಕಷ್ಟೇ ಅಲ್ಲದೆ, ಇಡೀ ದೇಶದ ಕ್ವಾಾಂಟಮ್ ಸಂಶೋಧನೆ ಮತ್ತು ಉದ್ಯಮದ ಅಗತ್ಯಗಳನ್ನು ಪೂರೈಸುವ ರಾಷ್ಟ್ರೀಯ ಸಂಪನ್ಮೂಲವಾಗಿ ಕಾರ್ಯನಿರ್ವಹಿಸಲಿದೆ ಎಂದು ಪ್ರತಿಪಾದಿಸಿದ್ದಾರೆ.
ಈ ಯೋಜನೆಯು ಸ್ಥಳೀಯ ಮೂಲಸೌಕರ್ಯ ಅಭಿವೃದ್ಧಿಿ, ಕೌಶಲ್ಯಾಾಭಿವೃದ್ಧಿಿ ಹಾಗೂ ಅಂತರರಾಷ್ಟ್ರೀಯ ಸಹಯೋಗಕ್ಕೆೆ ಒತ್ತು ನೀಡಲಿದ್ದು, ಈ ನಿಟ್ಟಿಿನಲ್ಲಿ ಕೇಂದ್ರದೊಂದಿಗೆ ನಿಕಟವಾಗಿ ಕೆಲಸ ಮಾಡಲು ರಾಜ್ಯ ಸರ್ಕಾರ ಸನ್ನದ್ಧವಾಗಿದೆ ಎಂದು ಪತ್ರದಲ್ಲಿ ತಿಳಿಸಲಾಗಿದೆ.
ಪ್ರಧಾನಿ ನರೇಂದ್ರ ಮೋದಿಗೆ ಸಿಎಂ ಪತ್ರಬರೆದಿದ್ದಾರೆ ಎಂದ ಸಚಿವ ಬೋಸರಾಜು ಬೆಂಗಳೂರಿನಲ್ಲಿ ಕ್ವಾಾಂಟಮ್ ಜಾಲ ನಿರ್ಮಾಣ

