ಸುದ್ದಿಮೂಲ ವಾರ್ತೆ ಕಲಬುರಗಿ: ನ.16:
ಜಿಲ್ಲೆಯ ಎಲ್ಲಾ ಐದು ಹಾಗೂ ಯಾದಗಿರಿ ಜಿಲ್ಲೆಯ ಒಂದು ಸಕ್ಕರೆ ಕಾರ್ಖಾನೆಗಳು ಟನ್ ಕಬ್ಬಿಿಗೆ 2,950 ರೂ ಗಳಂತೆ ಕಬ್ಬು ಪೂರೈಸಿದ 14 ದಿನಗಳೊಳಗಾಗಿ 2950 ರೂ ನೀಡಲು ಒಪ್ಪಿಿದ್ದಾರೆ ಎಂದು ಗ್ರಾಾಮೀಣಾಭಿವೃದ್ಧಿಿ ಹಾಗೂ ಪಂಚಾಯತ್ ರಾಜ್ ಮತ್ತು ಜಿಲ್ಲಾ ಉಸ್ತುವಾರಿ ಸಚಿವ ಪ್ರಿಿಯಾಂಕ್ ಖರ್ಗೆ ಹೇಳಿದರು.
ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ಪತ್ರಿಿಕಾಗೋಷ್ಠಿಿಯಲ್ಲಿ ಮಾತನಾಡುತ್ತಿಿದ್ದ ಅವರು, ಮುಖ್ಯಮಂತ್ರಿಿಗಳು ನಿರಂತರವಾಗಿ ಸಕ್ಕರೆ ಕಾರ್ಖಾನೆ ಮಾಲೀಕರು ಹಾಗೂ ಪ್ರತಿನಿಧಿಗಳೊಂದಿಗೆ ಚರ್ಚೆ ನಡೆಸಿದ ನಂತರ ರೈತರ ಹಿತಾಸಕ್ತಿಿಯನ್ನು ಗಮನದಲ್ಲಿಟ್ಟುಕೊಂಡು ಕಬ್ಬಿಿನ ದರ ನಿಗದಿಪಡಿಸಲಾಗಿದೆ. ಜಿಲ್ಲೆಯ ಸಕ್ಕರೆ ಕಾರ್ಖಾನೆಯವರೊಂದಿಗೆ ಕೂಡಾ ಈ ವಿಚಾರದಲ್ಲಿ ಚರ್ಚೆ ನಡೆಸಲಾಗಿದೆ. ದರ ನಿಗದಿಪಡಿಸಿದಂತೆ ಕೊಡಲು ಅವರು ಒಪ್ಪಿಿಗೆ ನೀಡಿದ್ದಾರೆ ಎಂದರು.
ಬೆಳೆ ಹಾನಿ:
ಆಗಷ್ಟ ತಿಂಗಳಿನಲ್ಲಿ ಶೇ.69 ಹೆಚ್ಚುವರಿ ಹಾಗೂ ಸೆಪ್ಟೆೆಂಬರ್ ಶೇ 63 ಹೆಚ್ಚುವರಿಯಾಗಿ ಸತತ ಸುರಿದ ಮಳೆಯಿಂದಾಗಿ (ಅತಿವೃಷ್ಠಿಿಯಿಂದಾಗಿ) ಎನ್ ಡಿ ಆರ್ ಎ್ ಮಾರ್ಗಸೂಚಿಯನ್ವಯ ಕೃಷಿ, ತೋಟಗಾರಿಕೆ ಮತ್ತು ಕಂದಾಯ ಇಲಾಖೆಯ ಜಂಟಿ ಸಮೀಕ್ಷೆಯ ವರದಿಯ ಅನುಸಾರ 3,24,205 ಹೇಕ್ಟರ್ ಪ್ರದೇಶದಲ್ಲಿ ಬೆಳೆ ಹಾನಿ ವರದಿಯಾಗಿರುತ್ತದೆ ಎಂದು ಸರ್ಕಾರಕ್ಕೆೆ ವರದಿ ಸಲ್ಲಿಸಲಾಗಿರುತ್ತದೆ. ಬೆಳೆ ಹಾನಿಯಾದ ರೈತರ ವಿವರವನ್ನು ಈಗಾಗಲೇ ಪರಿಹಾರ ತಂತ್ರಾಾಂಶದಲ್ಲಿ ದಾಖಲಿಸಿದ್ದು, ಒಟ್ಟು 3,26,183 ರೈತರಿಗೆ ರೂ. 250.97 ಕೋಟಿ ಬೆಳೆ ಹಾನಿ ಪರಿಹಾರ ಮುಂದಿನ 3-4 ದಿನಗಳಲ್ಲಿ ರೈತರ ಬ್ಯಾಾಂಕ್ ಖಾತೆಗೆ ಜಮೆಯಾಗಲಿದೆ ಎಂದು ಸಚಿವರು ಹೇಳಿದರು.
ಬೆಳೆ ವಿಮೆ ಯೋಜನೆಯಡಿಯಲ್ಲಿ ಮಧ್ಯಂತರ ಪರಿಹಾರ 243.41 ರೂ ಕೋಟಿ ಬಿಡುಗಡೆ : 2025-26 ನೇ ಸಾಲಿನಲ್ಲಿ ಆಗಷ್ಟ (ಶೇ 69 ಹೆಚ್ಚುವರಿ) ಹಾಗೂ ಸೆಪ್ಟೆೆಂಬರ್ (ಶೇ.63 ಹೆಚ್ಚುವರಿ) ತಿಂಗಳಲ್ಲಿ ಸತತವಾಗಿ ಸುರಿದ ಮಳೆಯಿಂದಾಗಿ (ಅತಿವೃಷ್ಟಿಿಯಿಂದಾಗಿ) ಅತಿ ಹೆಚ್ಚಿಿನ ಪ್ರದೇಶದಲ್ಲಿ ಬೆಳೆ ಹಾನಿಯಾಗಿದೆ. ಬೆಳೆ ಹಾನಿಯಾದ ಹತ್ತಿಿ, ತೊಗರಿ, ಸೂರ್ಯಕಾಂತಿ ಹಾಗೂ ಅರಿಶಿಣ ಬೆಳೆಗಳಿಗೆ ಬೆಳೆ ವಿಮೆ ಮಾಡಿಸಿದ ಒಟ್ಟು 2,67,560 ರೈತರ 3,35,046.2 ಹೇ ಪ್ರದೇಶಕ್ಕೆೆ ಬೆಳೆ ವಿಮೆ ಮಧ್ಯಂತರ ಪರಿಹಾರ ನೀಡಲು ಸರ್ಕಾರ ಆದೇಶಿಸಿದೆ. ಬೆಳೆವಿಮೆ ಪರಿಹಾರ ಕೆಲವೇ ದಿನಗಳಲ್ಲಿ ರೈತರ ಬ್ಯಾಾಂಕ್ ಖಾತೆಗೆ ಜಮೆಯಾಗಲಿದೆ ಎಂದರು.
ಹತ್ತಿಿ :
ಬೆಳೆ ವಿಮೆ ನೋಂದಣಿ ಮಾಡಿಸಿದ ರೈತರ- ಸಂಖ್ಯೆೆ10,025. ಪ್ರದೇಶ-11,727.5 ಹೆಕ್ಟೇರ್. ಅಂದಾಜು ಬೆಳೆ ವಿಮೆ ಮಧ್ಯಂತರ ಪರಿಹಾರ- ರೂ 9.95 ಕೋಟಿ.
ತೊಗರಿ :
ಬೆಳೆ ವಿಮೆ ನೋಂದಣಿ ಮಾಡಿಸಿದ ರೈತರ- ಸಂಖ್ಯೆೆ
2,56,845. ಪ್ರದೇಶ- 3,22,734 ಹೆಕ್ಟೇರ್. ಅಂದಾಜು ಬೆಳೆ ವಿಮೆ ಮಧ್ಯಂತರ ಪರಿಹಾರ- ರೂ 232.81ಕೋಟಿ
ಸೂರ್ಯಕಾಂತಿ:
ಬೆಳೆ ವಿಮೆ ನೋಂದಣಿ ಮಾಡಿಸಿದ ರೈತರ ಸಂಖ್ಯೆೆ- 382.
ಪ್ರದೇಶ- 392.088 ಹೆಕ್ಟೇರ್. ಅಂದಾಜು ಬೆಳೆ ವಿಮೆ ಮಧ್ಯಂತರ ಪರಿಹಾರ ರೂ 0.24 ಕೋಟಿ.
ಅರಿಶಿಣ:
ಬೆಳೆ ವಿಮೆ ನೋಂದಣಿ ಮಾಡಿಸಿದ ರೈತರ ಸಂಖ್ಯೆೆ- 308.
ಪ್ರದೇಶ- 192.615 ಹೆಕ್ಟೇರ್. ಅಂದಾಜು ಬೆಳೆ ವಿಮೆ ಮಧ್ಯಂತರ ಪರಿಹಾರ ರೂ 0.41ಕೋಟಿ.
ಒಟ್ಟು ಬೆಳೆ ವಿಮೆ ನೋಂದಣಿ ಮಾಡಿಸಿದ ರೈತರ ಸಂಖ್ಯೆೆ -2,67,560. ಪ್ರದೇಶ- 3,35,046.2 ಹೆಕ್ಟೇರ್ ಹಾಗೂ ಒಟ್ಟು ಪರಿಹಾರ ರೂ 243.41ಕೋಟಿ.
ಉದ್ದು, ಹೆಸರು, ಸೋಯಾ ಅವರೆ ಹಾಗೂ ಇನ್ನಿಿತರ ಬೆಳಗಳಿಗೆ ಬೆಳೆ ಹಾನಿ ಕುರಿತು ಸ್ಥಳ ನಿರ್ದಿಷ್ಟ ಪ್ರಕೃತಿ ವಿಕೋಪದಡಿ ದೂರು ನೀಡಿದ ಒಟ್ಟು 22,385 ರೈತರಿಗೆ ರೂ. 8.79 ಕೊಟಿ ಬೆಳೆವಿಮೆ ಪರಿಹಾರ ಕೆಲವೇ ದಿನಗಳಲ್ಲಿ ರೈತರ ಬ್ಯಾಾಂಕ್ ಖಾತೆಗೆ ಜಮೆಯಾಗಲಿದೆ ಎಂದು ಸಚಿವರು ವಿವರಿಸಿದರು.
ಎ್ ಆರ್ಪಿ ಮತ್ತು ಎಂ ಎಸ್ ಪಿ ನಿಗದಿ ಕೇಂದ್ರದ ಜವಾಬ್ದಾಾರಿ :
ಎ್ ಆರ್ ಪಿ ಹಾಗೂ ಎಂ ಎಸ್ ಪಿ ನಿಗದಿ ಮಾಡುವುದು ಕೇಂದ್ರದ ಜಬಾಬ್ದಾಾರಿಯಾಗಿದೆ. ಸಿಐಎಸ್ಎ ಅವರು ಕೇಂದ್ರಕ್ಕೆೆ ಪತ್ರ ಬರೆದು ಎ್ ಆರ್ ಪಿ, ಎಂ ಎಸ್ ಪಿ ವಿಚಾರದಲ್ಲಿ ಪತ್ರ ಬರೆದಿದ್ದಾರೆ. ಈ ಸಂಘದಲ್ಲಿ ಬಿಜೆಪಿಯವರೇ ಇದ್ದಾರೆ. ಸ್ವತಃ ಮುರುಗೇಶ್ ನಿರಾಣಿ ಅವರು ಸಕ್ಕರೆ ಕಾರ್ಖಾನೆ ನಡೆಸಲು ಆಗದು ಸರ್ಕಾರಕ್ಕೆೆ ಬರೆದು ಕೊಡುತ್ತೇವೆ ಅಂದಿದ್ದಾರೆ. ಬಿಜೆಪಿಯವರು ಹೇಳಿದರೆ ಅದು ಸರಿ, ಅದೇ ನಾವು ಬೇಡಿಕೆ ಇಟ್ಟರೆ ತಪ್ಪುು ಎಂದು ಬಿಂಬಿಸಲಾಗುತ್ತದೆ ಎಂದು ಅಸಮಧಾನ ವ್ಯಕ್ತಪಡಿಸಿದರು.
ಈ ಸಂಧರ್ಭದಲ್ಲಿ ಶಾಸಕಿ ಕನೀಜ್ ಾತೀಮ್, ಜೆಸ್ಕಾಾಂ ಅಧ್ಯಕ್ಷ ಪ್ರವೀಣ ಪಾಟೀಲ ಹರವಾಳ, ಕೆಕೆಆರ್ಟಿಸಿ ಅಧ್ಯಕ್ಷ ಅರುಣ್ ಕುಮಾರ್ಪಾಟೀಲ್, ಕುಡಾ ಅಧ್ಯಕ್ಷ ಮಜಹರ್ ಆಲಂ ಖಾನ್, ಜಿಲ್ಲಾಧಿಕಾರಿ ಬಿ ೌಜಿಯಾ ತರನ್ನುಮ್, ಜಿಲ್ಲಾ ಪಂಚಾಯತ್ ಸಿ.ಇ.ಓ.ಭಂವರ್ ಸಿಂಗ್ ಮೀನಾ, ಅಪರ ಜಿಲ್ಲಾಧಿಕಾರಿ ರಾಯಪ್ಪ ಹುಣಸಗಿ, ಕೃಷಿ ಜಂಟಿ ನಿರ್ದೇಶಕ ಸಮದ ಪಟೇಲ್ ಇದ್ದರು.

