ಸುದ್ದಿಮೂಲ ವಾರ್ತೆ ಕಲಬುರಗಿ, ಅ.16:
ಸರ್ಕಾರಿ ಸ್ಥಳಗಳಲ್ಲಿ ಆರ್ ಎಸ್ ಎಸ್ ಚಟುವಟಿಕೆಗಳನ್ನು ನಿರ್ಬಂಧಿಸುವಂತೆ ಕೋರಿ ಮುಖ್ಯಮಂತ್ರಿಿಗೆ ಪತ್ರ ಬರೆದಿದ್ದ ಗ್ರಾಾಮೀಣಾಭಿವೃದ್ಧಿಿ ಮತ್ತು ಪಂಚಾಯತ್ ರಾಜ್ ಸಚಿವ ಪ್ರಿಿಯಾಂಕ್ ಖರ್ಗೆಯವರಿಗೆ ಕರೆ ಮಾಡಿ ಬೆದರಿಸಿದ್ದ ವ್ಯಕ್ತಿಿಯನ್ನು ಪೊಲೀಸರು ಬಂಧಿಸಿದ್ದಾರೆ.
ಮಹಾರಾಷ್ಟ್ರದ ಸೊಲ್ಲಾಪುರ ನಿವಾಸಿ ದಿನೇಶ್ ನರೋಣಿ ಬಂಧಿತ ಆರೋಪಿ ಎಂದು ಪೊಲೀಸ್ ಮೂಲಗಳು ತಿಳಿಸಿವೆ. ಆರೋಪಿಯನ್ನು ಕಲಬುರಗಿ ಹಾಗೂ ಬೆಂಗಳೂರಿನ ಪೊಲೀಸರು ಜಂಟಿ ತನಿಖಾ ತಂಡವು ಮಹಾರಾಷ್ಟ್ರದ ಲಾತೂರದಲ್ಲಿ ಬಂಧಿಸುವಲ್ಲಿ ಯಶಸ್ವಿಿಯಾಗಿದ್ದಾರೆ ಎಂದು ತಿಳಿದು ಬಂದಿದೆ.
ಸರ್ಕಾರಿ ಸ್ಥಳಗಳಲ್ಲಿ ಆರೆಸ್ಸೆೆಸ್ ಚಟುವಟಿಕೆಗಳನ್ನು ನಿರ್ಬಂಧಿಸುವಂತೆ ಕೋರಿ ಸಚಿವ ಪ್ರಿಿಯಾಂಕ್ ಖರ್ಗೆಯವರು ಇತ್ತೀಚೆಗೆ ಮುಖ್ಯಮಂತ್ರಿಿಗೆ ಪತ್ರ ಬರೆದಿದ್ದರು. ಈ ಕಾರಣಕ್ಕೆೆ ಅವರಿಗೆ ಬೆದರಿಕೆ ಕರೆ ಬಂದಿದ್ದವು. ತನಗೆ ಬಂದ ಬೆದರಿಕೆ ಕರೆಯೊಂದನ್ನು ರೆಕಾರ್ಡ್ ಮಾಡಿರುವ ಸಚಿವ ಪ್ರಿಿಯಾಂಕ್ ಖರ್ಗೆ ಅದನ್ನು ತನ್ನ ಎಕ್ಸ್ ಖಾತೆಯಲ್ಲಿ ಹಾಕಿದ್ದರು.
ಈ ಬೆದರಿಕೆ ಕರೆ ಬಗ್ಗೆೆ ತನಿಖೆಗಿಳಿದ ಕಲಬುರಗಿ ಹಾಗೂ ಬೆಂಗಳೂರಿನ ಪೊಲೀಸರು ಜಂಟಿ ತನಿಖಾ ತಂಡವನ್ನು ರಚಿಸಿ, ಆರೋಪಿಯ ಪತ್ತೆೆಗೆ ಬಲೆ ಬೀಸಿದ್ದರು. ಕೊನೆಗೂ ಆರೋಪಿಯನ್ನು ಮಹಾರಾಷ್ಟ್ರದ ಲಾತೂರಿನಲ್ಲಿ ಬಂಧಿಸುವಲ್ಲಿ ಯಶಸ್ವಿಿಯಾಗಿದ್ದಾರೆ.