ಸುದ್ದಿಮೂಲ ವಾರ್ತೆ
ರಾಯಚೂರು,ನ.17-
ಹೊಸ ಏಕಲವ್ಯ ಮಾದರಿ ವಸತಿ ಶಾಲೆ ಸ್ಥಾಾಪನೆಗೆ ಸಂಬಂಧಿಸಿದ ಅರ್ಹತಾ ಮಾನದಂಡಗಳಲ್ಲಿ ಸಡಿಲಿಕೆ ಮಾಡುವಂತೆ ಕೋರಿ ರಾಯಚೂರು ಲೋಕಸಭೆ ಕ್ಷೇತ್ರದ ಸಂಸದ ಜಿ.ಕುಮಾರ ನಾಯಕ ಕೇಂದ್ರ ಬುಡಕಟ್ಟು ವ್ಯವಹಾರ ಸಚಿವಾಲಯ ಕಾರ್ಯದರ್ಶಿ ವಿಭು ನಾಯರ್ ಅವರಿಗೆ ಮನವಿ ಮಾಡಿದ್ದಾರೆ.
ಕರ್ನಾಟಕದಲ್ಲಿ 20 ಸಾವಿರಕ್ಕಿಿಂತ ಹೆಚ್ಚು ಎಸ್ಟಿಿ ಸಮುದಾಯದ ಜನಸಂಖ್ಯೆೆ ಹೊಂದಿರುವ 68 ಬ್ಲಾಾಕ್ಗಳಿವೆ ಆದರೆ ಇವು ಹೊಸದಾಗಿ ಪರಿಷ್ಕರಿಸಲಾದ ಮಾರ್ಗಸೂಚಿಗಳನ್ನು ಪೂರೈಸುವುದಿಲ್ಲ. ಇದರಿಂದಾಗಿ ಈ ಸಮುದಾಯಗಳು ಗುಣಮಟ್ಟದ ಶಿಕ್ಷಣ ಪಡೆಯಲು ವಂಚಿತರಾಗುತ್ತಿಿವೆ. 2011ರ ಜನಗಣತಿಯ ಪ್ರಕಾರ ರಾಜ್ಯದ ಐದು ಭೌಗೋಳಿಕ ವಲಯಗಳಾದ 22 ಜಿಲ್ಲೆಗಳು ಮತ್ತು 70 ವಿಧಾನಸಭಾ ಕ್ಷೇತ್ರಗಳಲ್ಲಿ ಎಸ್ಟಿಿ ಜನಸಾಂದ್ರತೆ ಹೆಚ್ಚಿಿನ ಪ್ರಮಾಣದಲ್ಲಿದೆ. ಈ ಸಮುದಾಯ ಮತ್ತು ಇತರ ಅತ್ಯಂತ ಹಿಂದುಳಿದ ಸಮುದಾಯಗಳ ಸಾಮಾಜಿಕ, ಆರ್ಥಿಕ ಸ್ಥಿಿತಿ ಸುಧಾರಣೆಯಾಗದೆ ಕರ್ನಾಟಕ ತನ್ನ ನಿಜವಾದ ಸಾಮರ್ಥ್ಯ ಸಾಧಿಸಲು ಸಾಧ್ಯವಿಲ್ಲ. ಮಾರ್ಗಸೂಚಿಗಳ ಸಡಿಲಿಕೆ ಮೂಲಕ ಕರ್ನಾಟಕದ ಹೆಚ್ಚಿಿನ ಎಸ್ಟಿಿ ಸಮುದಾಯದ ವಿದ್ಯಾಾರ್ಥಿಗಳು ಹೊಸ ಏಕಲವ್ಯ ಮಾದರಿ ವಸತಿ ಶಾಲೆ ಮುಖಾಂತರ ಗುಣಮಟ್ಟದ, ಸಮಗ್ರ ಶಿಕ್ಷಣ ಪಡೆಯಲು ಅವಕಾಶ ಸಿಗುತ್ತದೆ. ನಿಯಮ ಬದಲಾವಣೆ ಅತಿ ತುರ್ತು ಮತ್ತು ಅಗತ್ಯವಾದ ವಿಷಯವಾಗಿದೆ ಎಂದು ಕೋರಲಾಗಿದೆ.
ಅ.18ರಂದು ಹೊಸ ಏಕಲವ್ಯ ಮಾದರಿ ವಸತಿ ಶಾಲೆ ಮಂಜೂರಿಗೆ ಮನವಿ ಮಾಡಿ ಪತ್ರ ಬರೆದಿದ್ದರು ಅದನ್ನು ಬೆಂಬಲಿಸಿ ಕರ್ನಾಟಕ ಸರ್ಕಾರದ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಉಮಾ ಮಹಾದೇವನ್ ಸಹ ಪತ್ರ ಬರೆದು ಕೋರಿದ್ದರು.

