ಸುದ್ದಿಮೂಲ ವಾರ್ತೆ ಬೆಳಗಾವಿ, ಡಿ.16:
ಬೆಂಗಳೂರು-ಕಲಬುರಗಿ ಮಾರ್ಗದಲ್ಲಿ ಪ್ರಸ್ತುತ ಕಾರ್ಯಾಚರಣೆ ಮಾಡುತ್ತಿಿರುವ ಸಂಸ್ಥೆೆಯ ವಿಮಾನ ಯಾನ ಸೇವೆ ಮುಂದುವರೆಸಲು ಇಲ್ಲವೇ ಪ್ರಾಾದೇಶಿಕ ಸಂಪರ್ಕ ಯೋಜನೆಯ ಅಡಿಯಲ್ಲಿ ಇತರ ಅರ್ಹ ನಿರ್ವಾಹಕರಿಂದ ಹೊಸದಾಗಿ ಬಿಡ್ಗಳನ್ನು ಆಹ್ವಾಾನಿಸುವಂತೆ ಕೇಂದ್ರ ಸರ್ಕಾರವನ್ನು ಕೋರಿ ದಿನಾಂಕ: 26.10.2025 ರಂದು ಪತ್ರ ಬರೆಯಲಾಗಿದೆ ಎಂದು ಬೃಹತ್ ಮತ್ತು ಮಧ್ಯಮ ಕೈಗಾರಿಕೆ ಹಾಗೂ ಮೂಲಸೌಲಭ್ಯ ಅಭಿವೃದ್ಧಿಿ ಸಚಿವ ಎಂ. ಬಿ. ಪಾಟೀಲ್ ತಿಳಿಸಿದ್ದಾರೆ.
ಅವರು ವಿಧಾನ ಪರಿಷತ್ ನಲ್ಲಿ ಸದಸ್ಯ ತಿಪ್ಪಣ್ಣಪ್ಪ ಕಮಕನೂರ ಅವರ ಚುಕ್ಕೆೆ ಗುರುತಿನ ಪ್ರಶ್ನೆೆಗೆ ಉತ್ತರಿಸಿದರು.
ಬೆಂಗಳೂರು-ಕಲಬುರಗಿ ಮಾರ್ಗದಲ್ಲಿ ಸೇವೆ ಒದಗಿಸುತ್ತಿಿರುವ ಸಂಸ್ಥೆೆಯು ಈ ಮಾರ್ಗದಲ್ಲಿ ಪ್ರಯಾಣಿಸುವ ಪ್ರಯಾಣಿಕರ ಬೇಡಿಕೆಯು ಕಡಿಮೆಯಾಗಿರುವ ಕಾರಣ ಅಕ್ಟೋೋಬರ್ 15, 2025 ರಂದು ಸೇವೆ ಸ್ಥಗಿತಗೊಳಿಸಿದೆ ಎಂದು ತಿಳಿಸಿದರು.

