Web Stories
Suddimoola News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಗುಂಪು ಮನೆಗಳ ಅಭಿವೃದ್ದಿಗೆ 100 ಕೋಟಿ ಪ್ರಸ್ತಾವನೆ:ಹಿಟ್ನಾಳ

ಸುದ್ದಿಮೂಲವಾರ್ತೆ

ಕೊಪ್ಪಳ ಸೆ 15: ಕೊಪ್ಪಳ ನಗರಸಭೆಯಿಂದ 2000 ಮನೆಗಳನ್ನು ನೀಡುವ ಯೋಜನೆಯಲ್ಲಿ ನಿವೇಶನಗಳಿಗೆ ಮೂಲಭೂತ ಸೌಲಭ್ಯಕ್ಕಾಗಿ ಇನ್ನೂ 100 ಕೋಟಿ ರೂಪಾಯಿ ಬೇಕಾಗಿದೆ. ನಗರಾಭಿವೃದ್ದಿ ಸಚಿವ ಜಮೀರ್ ಅಹ್ಮದರಿಗೆ ಹಣ ಬಿಡುಗಡೆಗಾಗಿ ಒತ್ತಾಯಿಸಲಾಗುವುದು ಎಂದು ಶಾಸಕ ರಾಘವೇಂದ್ರ ಹಿಟ್ನಾಳ ಹೇಳಿದರು.

ಅವರು ಇಂದು ಕೊಪ್ಪಳದಲ್ಲಿ ಮೇದಾರ ಸಮಾಜದ 36 ಕುಟುಂಬಗಳಿಗೆ ನಿವೇಶನ ಹಕ್ಕು ಪತ್ರ ವಿತರಿಸಿ ಮಾತನಾಡಿದರು. ಹಲವು ವರ್ಷಗಳ ಹಿಂದೆ ಆರಂಭವಾದ 2000 ಮನೆಗಳ ವಿತರಣೆ ಕಾರ್ಯಕ್ಕೆ ಸಕಾಲಕ್ಕೆ ಹಂಚಿಕೆಯಾಗದೆ. ಫಲಾನುಭವಿಗಳಿಗೆ ಸಾಲ ನೀಡಲು ಬ್ಯಾಂಕಿನವರು ಮುಂದೆ ಬಾರದ ಹಿನ್ನೆಲೆಯಲ್ಲಿ ನೆನೆಗುದಿಗೆ ಬಿದ್ದಿದೆ. ಈಗಾಗಲೇ 1500 ಕ್ಕೂ ನಿವೇಶನಗಳ ಹಕ್ಕು ಪತ್ರ ವಿತರಿಸಲಾಗಿದೆ. ಉಳಿದ 400ಕ್ಕೂ ಅಧಿಕ ನಿವೇಶನಗಳನ್ನು ಅರ್ಹರಿಗೆ ವಿತರಿಸಲಾಗುವುದು. ಇಲ್ಲಿಯ ಮೂಲಭೂತ ಸೌಲಭ್ಯಕ್ಕಾಗಿ ಹೆಚ್ಚುವರಿ ಅನುದಾನ ಬೇಕಾಗಿದೆ. ಈ ನಿಟ್ಟಿನಲ್ಲಿ ಸಚಿವ ಜಮೀರ್ ಅಹ್ಮದರನ್ನು ಕೊಪ್ಪಳ ಆಹ್ವಾನಿಸಿ ಮೂಲಭೂತ ಸೌಲಭ್ಯಕ್ಕಾಗಿ ಆಗ್ರಹಿಸಲಾಗುವುದು ಎಂದು ಹೇಳಿದರು.

ಈ ಸಂದರ್ಭದಲ್ಲಿ ಮಾತನಾಡಿದ ನಗರಸಭೆ ಅಧ್ಯಕ್ಷೆ ಶ್ರೀಮತಿ ಶಿವಗಂಗಾ ಭೂಮಕ್ಕನವರ ಬಡವರಿಗೆ ಸೂರು ಕಲ್ಪಿಸುವ ಈ ಯೋಜನೆಯನ್ನು ಬೇಗನೇ ಪೂರ್ಣಗೊಳಿಸಿ ಫಲಾನುಭವಿಗಳಿಗೆ ಅನುಕೂಲ ಮಾಡಲಾಗುವುದು. ಈ ಕುರಿತು ಶಾಸಕರ ಪ್ರಯತ್ನ ಬಹಳಷ್ಟು ಇದೆ ಎಂದು ಹೇಳಿದರು.

ಇದೇ ಸಂದರ್ಭದಲ್ಲಿ ಶಾಸಕರನ್ನು ನಗರಸಭೆಯಿಂದ ಸನ್ಮಾನಿಸಲಾಯಿತು. ಮೇದಾರ ಸಮಾಜಕ್ಕೆ ನಿವೇಶನಕ್ಕಾಗಿ ಹಲವು ಬಾರಿ ಹೋರಾಟ ಮಾಡಿದ್ದರು. ಈಗ ಅವರಿಗೆ ನಿವೇಶನ ನೀಡಿದ್ದು ಮೇದಾರರಿಗೆ ಖುಷಿ ನೀಡಿದೆ.

ಈ ಸಂದರ್ಭದಲ್ಲಿ ನಗರಸಭೆ ಉಪಾಧ್ಯಕ್ಷೆ ಆಯಿಷಾ ರುಬಿನಾ, ಸ್ಥಾಯಿ ಸಮಿತಿ ಅಧ್ಯಕ್ಷೆ ಯಲ್ಲಮ್ಮ . ನಗರಸಭೆ ಪೌರಾಯುಕ್ತರಾದ ಗಣಪತಿ ಪಾಟೀಲ ಸೇರಿ ಹಲವರು ಇದ್ದರು.
Author
Suddi Moola
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಶ್ರೀ ಶಂಕರಭಾರತಿ ಶಾಲೆಯ ವಾರ್ಷಿಕೋತ್ಸವ ಮಾರ್ಕ್‌ಸ್‌ ಕಾರ್ಡ್‌ಗಾಗಿ ಮಕ್ಕಳನ್ನು ತಯಾರು ಮಾಡಬೇಡಿ - ಬೆಳಗಲ್ಸಮಾಜ ಸೇವಾ ಮನೋಭಾವ ರೂಪಿಸಿಕೊಳ್ಳಿ - ಪ್ರೊ. ಶಿವಾನಂದ ಕೆಳಗಿನಮನಿಚನ್ನಪ್ಪ ಅವರಿಗೆ ರಾಜ್ಯಮಟ್ಟದ ಜ್ಯೋತಿಬಾ ಪುಲೆ ಪ್ರಶಸ್ತಿಜಿಲ್ಲಾ ಟಾಸ್‌‌ಕೆರ್ಸ್ ಸಮಿತಿ ಸಭೆ ‘ರೈತರಿಗೆ ಯಾವುದೇ ತೊಂದರೆಯಾಗದಂತೆ ನೋಡಿಕೊಳ್ಳಿ’ರಾಷ್ಟ್ರೀಯ ಹೆದ್ದಾರಿ ಪಕ್ಕದ ಜಮೀನುಗಳಿಗೆ ಹೋಗಲು ದಾರಿ ಮಾಡಿಕೊಡಲು ಆಗ್ರಹಜವಾಹರ ನವೋದಯ ವಿದ್ಯಾರ್ಥಿ ಪ್ರಜ್ವಲ್ ರಾಜ್ಯಕ್ಕೆ ಪ್ರಥಮಮುದಗಲ್ ಪಿಎಸ್‌ಐ ಸೇರಿ ಪೊಲೀಸರ ಅಮಾನತ್ತು ಮಾಡಲು ಒತ್ತಾಯಹುಲಿಕೇರಿ ಒತ್ತುವರಿಯಾಗಿದ್ದರೆ ಕ್ರಮ ಕೈಗೊಳ್ಳಲಿ - ಹಿಟ್ನಾಳಪಟ್ಟಣ ಸಹಕಾರ ಬ್ಯಾಾಂಕ್ ಮಹಾಮಂಡಳದ ನಿರ್ದೇಶಕರಿಗೆ ಡಿ.ಎಚ್.ಓ ಸನ್ಮಾನ ಗೆಳೆಯರ ಬಳಗದ ಬೆಂಬಲ, ನೌಕರರೊಂದಿಗಿನ ಒಳ್ಳೆಯ ಒಡನಾಟದಿಂದ ಉನ್ನತ ಸ್ಥಾನಮಾನಇಂದು ಗ್ರಾಮೀಣ ಭಾಗದ ವಿವಿಧ ಪ್ರದೇಶದಲ್ಲಿ ವಿದ್ಯುತ್ ವ್ಯತ್ಯಯ