Web Stories
Suddimoola News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ವಿಶ್ವಕರ್ಮ ಜನಾಂಗದವರು ಪ್ರೋತ್ಸಾಯಿಸಲು 13,000 ಕೋಟಿ ಧನಸಹಾಯ

ಸುದ್ದಿಮೂಲ ವಾರ್ತೆ

ಬೆಂಗಳೂರು, ಸೆ.17: ದೇಶದಾದ್ಯಂತ ವಿಶ್ವಕರ್ಮರು ಮಾಡುವ ಸಾಂಪ್ರದಾಯಿಕ ಕೆಲಸಗಳಿಗೆ ತಾಂತ್ರಿಕ ಬೆಂಬಲವನ್ನು ನೀಡುವುದು ಪ್ರಧಾನಿಯವರ ದೂರದೃಷ್ಟಿಯಾಗಿದ್ದು ವಿಶ್ವಕರ್ಮ ಜನಾಂಗದವರು ಯೋಜನೆಯ ಗರಿಷ್ಠ ಪ್ರಯೋಜನವನ್ನು ಪಡೆದುಕೊಳ್ಳುವಂತೆ ಎಂದು ಕೇಂದ್ರ ಕೃಷಿ ಮತ್ತು ರೈತ ಕಲ್ಯಾಣ ಖಾತೆ ರಾಜ್ಯ ಸಚಿವೆ ಶೋಭಾ ಕರಂದ್ಲಾಜೆ ಅವರು ಕೋರಿದರು.

ಅವರು ಇಂದು ನಗರದ ನಿಮಾನ್ಸ್ ಕನ್ವೆನ್ಷನ್ ಸೆಂಟರ್ ನಲ್ಲಿ ಕೇಂದ್ರ ಸರ್ಕಾರದ ವತಿಯಿಂದ ಪಿಎಂ ವಿಶ್ವಕರ್ಮ ಯೋಜನೆಯನ್ನು ಉದ್ಘಾಟಿಸಿ ಅವರು ಮಾತನಾಡಿದರು. ಈ ಯೋಜನೆಯು ಸಾಂಪ್ರದಾಯಿಕ ಕರಕುಶಲತೆಯಲ್ಲಿ ತೊಡಗಿರುವ ಜನರನ್ನು ಬೆಂಬಲಿಸುವ ಮತ್ತು ಕೌಶಲ್ಯಗೊಳಿಸುವ ಪ್ರಧಾನ ಮಂತ್ರಿಯವರ ಆಶಯದಿಂದ ಸ್ಫೂರ್ತಿ ಪಡೆದಿದೆ, ಪಿಎಂ ವಿಶ್ವಕರ್ಮ ಯೋಜನೆಗೆ ಕೇಂದ್ರ ಸರ್ಕಾರವು 13,000 ಕೋಟಿ ರೂಗಳ ಸಂಪೂರ್ಣ ಧನಸಹಾಯ ನೀಡಲಿದೆ ಎಂದರು.

ಕುಶಲಕರ್ಮಿಗಳನ್ನು ಆರ್ಥಿಕವಾಗಿ ಬೆಂಬಲಿಸುವುದು ಮಾತ್ರವಲ್ಲದೆ ಸ್ಥಳೀಯ ಉತ್ಪನ್ನಗಳು, ಕಲೆ ಮತ್ತು ಕರಕುಶಲ ವಸ್ತುಗಳ ಮೂಲಕ ಪ್ರಾಚೀನ ಸಂಪ್ರದಾಯ, ಸಂಸ್ಕೃತಿ ಮತ್ತು ವೈವಿಧ್ಯಮಯ ಪರಂಪರೆಯನ್ನು ಜೀವಂತವಾಗಿರಿಸುವ ಹಾಗೂ ಪ್ರವರ್ಧಮಾನಕ್ಕೆ ತರುವ ಬಯಕೆಯೊಂದಿಗೆ ಈ ಉಪಕ್ರಮ ಕೈಕೊಳ್ಳಲಾಗಿದೆ ಎಂದು ತಿಳಿಸಿದರು.

ಪಿಎಂ ವಿಶ್ವಕರ್ಮ ಯೋಜನೆಯಡಿ, ಬಯೋಮೆಟ್ರಿಕ್ ಆಧಾರಿತ ಪಿಎಂ ವಿಶ್ವಕರ್ಮ ಪೋರ್ಟಲ್ ಬಳಸಿ ಸಾಮಾನ್ಯ ಸೇವಾ ಕೇಂದ್ರಗಳ ಮೂಲಕ ವಿಶ್ವಕರ್ಮರು ಉಚಿತವಾಗಿ ನೋಂದಾಯಿಸಿಕೊಳ್ಳಬಹುದು. ಅವರಿಗೆ ʻಪಿಎಂ ವಿಶ್ವಕರ್ಮ ಪ್ರಮಾಣಪತ್ರʼ ಮತ್ತು ಗುರುತಿನ ಚೀಟಿ ನೀಡಲಾಗುವುದು. ಜೊತೆಗೆ, ಮೂಲ ಮತ್ತು ಸುಧಾರಿತ ತರಬೇತಿಯನ್ನು ಒಳಗೊಂಡ ಕೌಶಲ್ಯ ಉನ್ನತೀಕರಣ, 15,000 ರೂ.ಗಳ ಟೂಲ್ಕಿಟ್ ಪ್ರೋತ್ಸಾಹಧನ, ಮೊದಲ ಕಂತಿನಲ್ಲಿ 1 ಲಕ್ಷ ರೂ.ಗಳವರೆಗೆ ಮೇಲಾಧಾರ ರಹಿತ ಸಾಲ ಬೆಂಬಲ ಹಾಗೂ ಎರಡನೇ ಕಂತಿನಲ್ಲಿ 2 ಲಕ್ಷ ರೂ.ಗಳವರೆಗೆ 5% ರಿಯಾಯಿತಿ ಬಡ್ಡಿದರದಲ್ಲಿ ಸಾಲ, ಡಿಜಿಟಲ್ ವಹಿವಾಟುಗಳಿಗೆ ಪ್ರೋತ್ಸಾಹ ಮತ್ತು ಮಾರ್ಕೆಟಿಂಗ್ ಬೆಂಬಲವನ್ನು ನೀಡಲಾಗುವುದು ಎಂದರು.

ಕರ್ನಾಟಕದಲ್ಲಿ ಬೆಂಗಳೂರು ಹೊರತುಪಡಿಸಿ ಮಂಗಳೂರು ಮತ್ತು ಹುಬ್ಬಳ್ಳಿಯ ಇತರ ಎರಡು ಜಿಲ್ಲೆಗಳಲ್ಲಿ ಈ ಯೋಜನೆಯನ್ನು ವಾಸ್ತವಿಕವಾಗಿ ಪ್ರಾರಂಭಿಸಲಾಗಿದೆ.

ಕಾರ್ಯಕ್ರಮದಲ್ಲಿ ಸಂಸದ ತೇಜಸ್ವಿ ಸೂರ್ಯ ಮತ್ತು ಶಾಸಕರಾದ ಸಿಕೆ ರಾಮಮೂರ್ತಿ, ಉದಯ ಗರುಡಚಾರ್ ಉಪಸ್ಥಿತರಿದ್ದರು.
Author
Suddi Moola
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಶ್ರೀ ಶಂಕರಭಾರತಿ ಶಾಲೆಯ ವಾರ್ಷಿಕೋತ್ಸವ ಮಾರ್ಕ್‌ಸ್‌ ಕಾರ್ಡ್‌ಗಾಗಿ ಮಕ್ಕಳನ್ನು ತಯಾರು ಮಾಡಬೇಡಿ - ಬೆಳಗಲ್ಸಮಾಜ ಸೇವಾ ಮನೋಭಾವ ರೂಪಿಸಿಕೊಳ್ಳಿ - ಪ್ರೊ. ಶಿವಾನಂದ ಕೆಳಗಿನಮನಿಚನ್ನಪ್ಪ ಅವರಿಗೆ ರಾಜ್ಯಮಟ್ಟದ ಜ್ಯೋತಿಬಾ ಪುಲೆ ಪ್ರಶಸ್ತಿಜಿಲ್ಲಾ ಟಾಸ್‌‌ಕೆರ್ಸ್ ಸಮಿತಿ ಸಭೆ ‘ರೈತರಿಗೆ ಯಾವುದೇ ತೊಂದರೆಯಾಗದಂತೆ ನೋಡಿಕೊಳ್ಳಿ’ರಾಷ್ಟ್ರೀಯ ಹೆದ್ದಾರಿ ಪಕ್ಕದ ಜಮೀನುಗಳಿಗೆ ಹೋಗಲು ದಾರಿ ಮಾಡಿಕೊಡಲು ಆಗ್ರಹಜವಾಹರ ನವೋದಯ ವಿದ್ಯಾರ್ಥಿ ಪ್ರಜ್ವಲ್ ರಾಜ್ಯಕ್ಕೆ ಪ್ರಥಮಮುದಗಲ್ ಪಿಎಸ್‌ಐ ಸೇರಿ ಪೊಲೀಸರ ಅಮಾನತ್ತು ಮಾಡಲು ಒತ್ತಾಯಹುಲಿಕೇರಿ ಒತ್ತುವರಿಯಾಗಿದ್ದರೆ ಕ್ರಮ ಕೈಗೊಳ್ಳಲಿ - ಹಿಟ್ನಾಳಪಟ್ಟಣ ಸಹಕಾರ ಬ್ಯಾಾಂಕ್ ಮಹಾಮಂಡಳದ ನಿರ್ದೇಶಕರಿಗೆ ಡಿ.ಎಚ್.ಓ ಸನ್ಮಾನ ಗೆಳೆಯರ ಬಳಗದ ಬೆಂಬಲ, ನೌಕರರೊಂದಿಗಿನ ಒಳ್ಳೆಯ ಒಡನಾಟದಿಂದ ಉನ್ನತ ಸ್ಥಾನಮಾನಇಂದು ಗ್ರಾಮೀಣ ಭಾಗದ ವಿವಿಧ ಪ್ರದೇಶದಲ್ಲಿ ವಿದ್ಯುತ್ ವ್ಯತ್ಯಯ