Web Stories
Suddimoola News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

38 ನೇ ರಾಜ್ಯ ಮಟ್ಟದ ಟೇಕ್ವಾಂಡೋ ಪಂದ್ಯಾವಳಿ: ಬೆಂಗಳೂರು, ತುಮಕೂರು, ಬೆಳಗಾವಿಗೆ ಹಾಗೂ ಚಿತ್ರದುರ್ಗಕ್ಕೆ ಅಗ್ರ ಸ್ಥಾನ

ಬೆಂಗಳೂರು, ಜು, 25; ಚಿತ್ರದುರ್ಗದಲ್ಲಿ ಕರ್ನಾಟಕ ಟೇಕ್ವಾಂಡೋ ಅಸೋಸಿಯೇಷನ್ ನ 38ನೇ ರಾಜ್ಯ ಮಟ್ಟದ ಸಬ್‌ಜ್ಯೂನಿಯರ್, ಜ್ಯೂನಿಯರ್ ಮತ್ತು ಸೀನಿಯರ್ ಟೇಕ್ವಾಂಡೋ ಪಂದ್ಯಾವಳಿ ಯಶಸ್ವಿಯಾಗಿ ಮುಕ್ತಾಯವಾಗಿದೆ.

ಚಿತ್ರದರ್ಗದ ಕೆಇಬಿ ಸಮುದಾಯ ಭವನದಲ್ಲಿ ನಡೆದ ಪಂದ್ಯಾವಳಿಯಲ್ಲಿ ಸಬ್‌ಜ್ಯೂನಿಯರ್ ವಿಭಾಗದಲ್ಲಿ ಬೆಂಗಳೂರು ನಗರ ಟೇಕ್ವಾಂಡೋ ಅಸೋಸಿಯೇಷನ್ [186 ಅಂಕಗಳು] ಮತ್ತು ಚಿತ್ರದುರ್ಗ ಜಿಲ್ಲಾ ಟೇಕ್ವಾಂಡೋ ಅಸೋಸಿಯೇಷನ್ [114 ಅಂಕಗಳು] ಪ್ರಥಮ ಮತ್ತು ದ್ವಿತೀಯ ಸ್ಥಾನ ಪಡೆದಿವೆ.

ಕೆಡೆಟ್ ವಿಭಾಗದಲ್ಲಿ ಬೆಂಗಳೂರು ನಗರ ಟೇಕ್ವಾಂಡೋ ಅಸೋಸಿಯೇಷನ್ [81 ಅಂಕಗಳು] ಮತ್ತು ತುಮಕೂರು ಜಿಲ್ಲಾ ಟೇಕ್ವಾಂಡೋ ಅಸೋಸಿಯೇಷನ್ [40 ಅಂಕಗಳು] ಪ್ರಶಸ್ತಿಗೆ ಭಾಜನವಾಗಿದ್ದು, ಜ್ಯೂನಿಯರ್ ವಿಭಾಗದಲ್ಲಿ ಬೆಳಗಾವಿ ಟೇಕ್ವಾಂಡೋ ಫೌಂಡೇಷನ್ [46 ಅಂಕಗಳು] ಮತ್ತು ಬೆಂಗಳೂರು ನಗರ ಟೇಕ್ವಾಂಡೋ ಅಸೋಸಿಯೇಷನ್ [28 ಅಂಕಗಳು] ತಂಡಗಳು ಪ್ರಶಸ್ತಿಗಳನ್ನು ಗಳಿಸಿವೆ.

ಹಿರಿಯರ ವಿಭಾಗದಲ್ಲಿ ತುಮಕೂರು ಜಿಲ್ಲಾ ಟೇಕ್ವಾಂಡೋ ಅಸೋಸಿಯೇಷನ್ [36 ಅಂಕಗಳು] ಮತ್ತು ಬೆಂಗಳೂರು ನಗರದ ಟೇಕ್ವಾಂಡೋ ಅಸೋಸಿಯೇಷನ್ [23 ಅಂಕಗಳು] ಪ್ರಶಸ್ತಿ ಪಡೆದಿವೆ ಎಂದು ಕರ್ನಾಟಕ ಟೇಕ್ವಾಂಡೋ ಅಸೋಸಿಯಷೇನ್ ಅಧ್ಯಕ್ಷ ತಿರುಮಾಲ್ ಮತ್ತು ಪ್ರಧಾನ ಕಾರ್ಯದರ್ಶಿ ಬಿ.ಎನ್. ವೆಂಕಟೇಶ್ ತಿಳಿಸಿದ್ದಾರೆ.

ರಾಜ್ಯದ 18 ಜಿಲ್ಲೆಗಳಿಂದ ಸುಮಾರು 1000 ಕ್ರೀಡಾ ಪಟುಗಳು ಭಾಗವಹಿಸಿದ್ದರು. ಈ ಪಂದ್ಯವಳಿಗೆ ಆಂಧ್ರ, ಗೋವಾ, ತಮಿಳುನಾಡು ಮತ್ತು ಕರ್ನಾಟಕ ದಿ೦ದ ತೀರ್ಪುಗಾರರನ್ನು ಕರೆಸಲಾಗಿತ್ತು. ಬಾಲಕ ಮತ್ತು ಬಾಲಕಿಯರಿಗೆ ಅಂದರೆ 8 ವರ್ಷ ಮೇಲ್ಪಟ್ಟು ಹಾಗೂ 17 ವರ್ಷ ಮೇಲ್ಪಟ್ಟವರಿಗೆ ಸ್ಪರ್ಧೆಗಳು ಪ್ರತ್ಯೇಕವಾಗಿ ನಡೆಯಿತು.
Author
Suddi Moola
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಶ್ರೀ ಶಂಕರಭಾರತಿ ಶಾಲೆಯ ವಾರ್ಷಿಕೋತ್ಸವ ಮಾರ್ಕ್‌ಸ್‌ ಕಾರ್ಡ್‌ಗಾಗಿ ಮಕ್ಕಳನ್ನು ತಯಾರು ಮಾಡಬೇಡಿ - ಬೆಳಗಲ್ಸಮಾಜ ಸೇವಾ ಮನೋಭಾವ ರೂಪಿಸಿಕೊಳ್ಳಿ - ಪ್ರೊ. ಶಿವಾನಂದ ಕೆಳಗಿನಮನಿಚನ್ನಪ್ಪ ಅವರಿಗೆ ರಾಜ್ಯಮಟ್ಟದ ಜ್ಯೋತಿಬಾ ಪುಲೆ ಪ್ರಶಸ್ತಿಜಿಲ್ಲಾ ಟಾಸ್‌‌ಕೆರ್ಸ್ ಸಮಿತಿ ಸಭೆ ‘ರೈತರಿಗೆ ಯಾವುದೇ ತೊಂದರೆಯಾಗದಂತೆ ನೋಡಿಕೊಳ್ಳಿ’ರಾಷ್ಟ್ರೀಯ ಹೆದ್ದಾರಿ ಪಕ್ಕದ ಜಮೀನುಗಳಿಗೆ ಹೋಗಲು ದಾರಿ ಮಾಡಿಕೊಡಲು ಆಗ್ರಹಜವಾಹರ ನವೋದಯ ವಿದ್ಯಾರ್ಥಿ ಪ್ರಜ್ವಲ್ ರಾಜ್ಯಕ್ಕೆ ಪ್ರಥಮಮುದಗಲ್ ಪಿಎಸ್‌ಐ ಸೇರಿ ಪೊಲೀಸರ ಅಮಾನತ್ತು ಮಾಡಲು ಒತ್ತಾಯಹುಲಿಕೇರಿ ಒತ್ತುವರಿಯಾಗಿದ್ದರೆ ಕ್ರಮ ಕೈಗೊಳ್ಳಲಿ - ಹಿಟ್ನಾಳಪಟ್ಟಣ ಸಹಕಾರ ಬ್ಯಾಾಂಕ್ ಮಹಾಮಂಡಳದ ನಿರ್ದೇಶಕರಿಗೆ ಡಿ.ಎಚ್.ಓ ಸನ್ಮಾನ ಗೆಳೆಯರ ಬಳಗದ ಬೆಂಬಲ, ನೌಕರರೊಂದಿಗಿನ ಒಳ್ಳೆಯ ಒಡನಾಟದಿಂದ ಉನ್ನತ ಸ್ಥಾನಮಾನಇಂದು ಗ್ರಾಮೀಣ ಭಾಗದ ವಿವಿಧ ಪ್ರದೇಶದಲ್ಲಿ ವಿದ್ಯುತ್ ವ್ಯತ್ಯಯ