Web Stories
Suddimoola News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಕೊಟ್ಟಿಗೇನಹಳ್ಳಿ ಸರ್ವೆ ನಂ.28 ರಲ್ಲಿ 6.05 ಎಕರೆ ಒತ್ತುವರಿ ತೆರವು  

ಸುದ್ದಿಮೂಲ ವಾರ್ತೆ

ಬೆಂಗಳೂರು,ಅ.6: ಬೆಂಗಳೂರಿನಲ್ಲಿ ಒತ್ತುವರಿ ತೆರವು ಕಾರ್ಯಾಚರಣೆ ಮುಂದುವರಿಸಿರುವ ಕಂದಾಯ ಇಲಾಖೆ ಅಧಿಕಾರಿಗಳು, ಯಲಹಂಕ ತಾಲೂಕು, ಜಾಲ ಹೋಬಳಿ, ಕಟ್ಟಿಗೇನಹಳ್ಳಿ ಗ್ರಾಮದ ಸರ್ವೆ ನಂ.28 ರಲ್ಲಿ ಒತ್ತುವರಿಯಾಗಿದ್ದ ಸುಮಾರು 10 ಕೋಟಿ ರೂ. ಮೌಲ್ಯದ 6.05 ಎಕರೆ ಸರ್ಕಾರಿ ಜಮೀನನ್ನು ವಶಕ್ಕೆ ಪಡೆದಿದ್ದಾರೆ.

ಈ ಮೂಲಕ ಭೂ ಒತ್ತುವರಿದಾರರು ಹಾಗೂ ಭೂ ಮಾಫಿಯಾಗೆ ಸರ್ಕಾರ ಬಿಸಿ ಮುಟ್ಟಿಸಿದೆ. ಬೆಂಗಳೂರಿನಾದ್ಯಂತ ಭೂ ಒತ್ತುವರಿ ತೆರವು ಮಾಡುವಂತೆ ಕಂದಾಯ ಸಚಿವ ಕೃಷ್ಣ ಭೈರೇಗೌಡ ಅವರು ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದ್ದರು. ಅದರಂತೆ ಕಳೆದ ವಾರ ಯಲಹಂಕದ ಬಾಗಲೂರಿನ ಬಳಿ 25 ಕೋಟಿ ರೂ. ಮೌಲ್ಯದ 6.07 ಎಕರೆ ಸರ್ಕಾರಿ ಭೂ ಒತ್ತುವರಿ ತೆರವುಗೊಳಿಸಲಾಗಿತ್ತು. ಈಗ ಕಾರ್ಯಾಚರಣೆ ಮುಂದುವರಿಸಿ ಇನ್ನಷ್ಟು ಒತ್ತುವರಿ ತೆರವು ಮಾಡಲಾಗಿದೆ.

ಯಲಹಂಕ ತಾಲ್ಲೂಕು ಜಾಲ ಹೋಬಳಿ, ಕಟ್ಟಿಗೇನಹಳ್ಳಿ ಗ್ರಾಮದ ಸರ್ವೆ ನಂ.28 ರ ಜಮೀನಿಗೆ ಸಂಬಂಧಿಸಿದಂತೆ, ಗೋಮಾಳದ ಜಮೀನಿಗೆ ವಿವರವಾದ ವರದಿಯನ್ನು ದಾಖಲೆಗಳೊಂದಿಗೆ ಸಲ್ಲಿಸಲು ಮತ್ತು ಜಮೀನಿನಲ್ಲಿ ಯಾವುದೇ ಖಾತೆ ಅನುಭವವಿಲ್ಲದೇ ಇರುವ ಒತ್ತುವರಿದಾರರನ್ನು ಖುಲ್ಲಾಪಡಿಸಿ ಕ್ರಮವಹಿಸುವಂತೆ ನಿರ್ದೇಶಿಸಲಾಗಿತ್ತು. ಕರ್ನಾಟಕ ಭೂ ಕಂದಾಯ ಕಾಯ್ದೆ 1964 ಕಲಂ 104 ರ ಅಡಿ ವಿಚಾರಣೆ ನಡೆಸಲು ನಿರ್ಧರಿಸಿ ಪ್ರತಿವಾದಿಗಳಿಗೆ ನೋಟೀಸ್ ಕೂಡ ನೀಡಲಾಗಿತ್ತು. ಅದರಂತೆ ಕಟ್ಟಿಗೇನಹಳ್ಳಿಯ ಸರ್ವೆ ನಂ.28 ರ ಜಮೀನಿನಲ್ಲಿ ತಾಲೂಕು ಮೋಜಿಣಿದಾರರು ಒತ್ತುವರಿ ಎಂದು ಗುರುತಿಸಿದ 6.05 ಎಕರೆ ಜಮೀನನಲ್ಲಿ ಒತ್ತುವರಿ ತೆರವುಗೊಳಿಸಲಾಗಿದೆ.

ಒತ್ತುವರಿದಾರರ ವಿವರ:

ಕೋಗಿಲು ಗ್ರಾಮದ ಸರ್ವೆ ನಂ. 100 ರ ಹಿಡುವಳಿದಾರರಾದ ಉಡುಪ ಅವರಿಂದ ಕಟ್ಟಿಗೇನಹಳ್ಳಿಯ ಸರ್ವೆ ನಂ.28 ರಲ್ಲಿ 0-10 ಗುಂಟೆ ಜಮೀನನ್ನು ಒತ್ತುವರಿ ಮಾಡಿದ್ದು, ಇದನ್ನು ತೆರವುಗೊಳಿಸಿ ಸರ್ಕಾರದ ವಶಕ್ಕೆ ಪಡೆಯಲಾಗಿದೆ.

ಎಸ್.ಜಯರಾಮ್ ಬಿನ್ ಸುಬ್ರಮಣ್ಯ ಮೊದಲಿಯಾರ್ ಅವರು ಹೆಚ್ಚುವರಿಯಾಗಿ ಸ್ವಾಧೀನ ಹೊಂದಿರುವ 0-20 ಗುಂಟೆ ಜಮೀನನ್ನು ತೆರವುಗೊಳಿಸಿ ಸರ್ಕಾರದ ವಶಕ್ಕೆ ಪಡೆಯಲಾಗಿದೆ.

ಸುಬ್ಬಣ್ಣ ಬಿನ್ ಚಿಕ್ಕಮುನಿಯಪ್ಪ ಅವರು ಹೆಚ್ಚುವರಿಯಾಗಿ ಸ್ವಾಧೀನ ಹೊಂದಿರುವ 2-29 ಎಕರೆ ಜಮೀನನ್ನು ತೆರವುಗೊಳಿಸಿ ಸರ್ಕಾರದ ವಶಕ್ಕೆ ಪಡೆಯಲಾಗಿದೆ.

ದೊಡ್ಡಕ್ಕಮ್ಮ ಕೋಂ ಲೇಟ್ ಕೆ.ಮುನಿಯಪ್ಪ, ಮುನಿರಾಜು ಮತ್ತು ಎಂ. ಮಂಜುನಾಥ ಅವರು ಹೆಚ್ಚುವರಿಯಾಗಿ ಸ್ವಾಧೀನ ಹೊಂದಿರುವ 0-12 ಗುಂಟೆ ಜಮೀನನ್ನು ತೆರವುಗೊಳಿಸಿ ಸರ್ಕಾರದ ವಶಕ್ಕೆ ಪಡೆಯಲಾಗಿದೆ.

ವೈ.ಜಿ.ಕೇಶವ ಬಿನ್ ಗೋವಿಂದಪ್ಪ ಅವರಿಗೆ ಸಂಬಂಧಿಸಿದಂತೆ, ನಂ.ಎಲ್ಎನ್ ಡಿ/ಎಸ್ ಆರ್/1/104/78-79 ರಂತೆ ಅಬ್ದುಲ್ ಸತ್ತಾರ್ ರವರಿಗೆ 2-00 ಎಕರೆ ಮಂಜೂರಾಗಿತ್ತು. ನಂತರ ಕ್ರಯವಿಕ್ರಯ ನಡೆದು, ವೈ.ಜಿ ಕೇಶವ ಬಿನ್ ಗೋವಿಂದಪ್ಪ ರವರಿಗೆ ಖಾತೆ ದಾಖಲಾಗಿತ್ತು. ವಿಶೇಷ ಜಿಲ್ಲಾಧಿಕಾರಿಗಳ ಆದೇಶದಂತೆ ಸರ್ಕಾರದ ಹೆಸರಿಗೆ ಖಾತೆ ದಾಖಲಾಗಿ, ಗೋಮಾಳ ಶೀರ್ಷಿಕೆಯಲ್ಲಿ ಖಾತೆ ಮುಂದುವರೆಯುತ್ತಿದೆ. 2.00 ಎಕರೆ ಜಮೀನಿನ ಪ್ರಕರಣ ವಿಶೇಷ ಜಿಲ್ಲಾಧಿಕಾರಿಗಳ ನ್ಯಾಯಾಲಯದಲ್ಲಿ ವಿಚಾರಣಾ ಹಂತದಲ್ಲಿದೆ. ಆದರೆ, ಇವರು ಹೆಚ್ಚುವರಿಯಾಗಿ ಸ್ವಾಧೀನ ಹೊಂದಿರುವ 0.05 ಗುಂಟೆ ಜಮೀನನ್ನು ತೆರವುಗೊಳಿಸಿ ಸರ್ಕಾರದ ವಶಕ್ಕೆ ಪಡೆಯಲಾಗಿದೆ.

ರಮೇಶ್ ಬಿನ್ ಚಿಕ್ಕಪಾಪಮ್ಮ ಅವರು ಹೆಚ್ಚುವರಿಯಾಗಿ ಸ್ವಾಧೀನ ಹೊಂದಿರುವ 0.12 ಎಕರೆ ಜಮೀನು ಒತ್ತುವರಿ ತೆರವುಗೊಳಿಸಲಾಗಿದೆ. ಇದೇ ಗ್ರಾಮದಲ್ಲಿ ಬ್ಲಾಕ್ ನಂ.12ರಲ್ಲಿ 0.15 ಗುಂಟೆ ವಿಸ್ತೀರ್ಣದಲ್ಲಿ 4 ಮನೆಗಳು ನಿರ್ಮಾಣವಾಗಿದ್ದು, ತೆರವುಗೊಳಿಸಲು ಮೌಖಿಕವಾಗಿ 2 ದಿನಗಳ ಕಾಲಾವಕಾಶ ಕೋರಿದ್ದರು. ಅದರಂತೆ ಕಾಲಾವಕಾಶ ನೀಡಿ, ಸೂಕ್ತ ಪೊಲೀಸ್ ಬಂದೋಬಸ್ತ್‌ನೊಂದಿಗೆ ತೆರವುಗೊಳಿಸಲಾಗಿದೆ.
Author
Suddi Moola
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಶ್ರೀ ಶಂಕರಭಾರತಿ ಶಾಲೆಯ ವಾರ್ಷಿಕೋತ್ಸವ ಮಾರ್ಕ್‌ಸ್‌ ಕಾರ್ಡ್‌ಗಾಗಿ ಮಕ್ಕಳನ್ನು ತಯಾರು ಮಾಡಬೇಡಿ - ಬೆಳಗಲ್ಸಮಾಜ ಸೇವಾ ಮನೋಭಾವ ರೂಪಿಸಿಕೊಳ್ಳಿ - ಪ್ರೊ. ಶಿವಾನಂದ ಕೆಳಗಿನಮನಿಚನ್ನಪ್ಪ ಅವರಿಗೆ ರಾಜ್ಯಮಟ್ಟದ ಜ್ಯೋತಿಬಾ ಪುಲೆ ಪ್ರಶಸ್ತಿಜಿಲ್ಲಾ ಟಾಸ್‌‌ಕೆರ್ಸ್ ಸಮಿತಿ ಸಭೆ ‘ರೈತರಿಗೆ ಯಾವುದೇ ತೊಂದರೆಯಾಗದಂತೆ ನೋಡಿಕೊಳ್ಳಿ’ರಾಷ್ಟ್ರೀಯ ಹೆದ್ದಾರಿ ಪಕ್ಕದ ಜಮೀನುಗಳಿಗೆ ಹೋಗಲು ದಾರಿ ಮಾಡಿಕೊಡಲು ಆಗ್ರಹಜವಾಹರ ನವೋದಯ ವಿದ್ಯಾರ್ಥಿ ಪ್ರಜ್ವಲ್ ರಾಜ್ಯಕ್ಕೆ ಪ್ರಥಮಮುದಗಲ್ ಪಿಎಸ್‌ಐ ಸೇರಿ ಪೊಲೀಸರ ಅಮಾನತ್ತು ಮಾಡಲು ಒತ್ತಾಯಹುಲಿಕೇರಿ ಒತ್ತುವರಿಯಾಗಿದ್ದರೆ ಕ್ರಮ ಕೈಗೊಳ್ಳಲಿ - ಹಿಟ್ನಾಳಪಟ್ಟಣ ಸಹಕಾರ ಬ್ಯಾಾಂಕ್ ಮಹಾಮಂಡಳದ ನಿರ್ದೇಶಕರಿಗೆ ಡಿ.ಎಚ್.ಓ ಸನ್ಮಾನ ಗೆಳೆಯರ ಬಳಗದ ಬೆಂಬಲ, ನೌಕರರೊಂದಿಗಿನ ಒಳ್ಳೆಯ ಒಡನಾಟದಿಂದ ಉನ್ನತ ಸ್ಥಾನಮಾನಇಂದು ಗ್ರಾಮೀಣ ಭಾಗದ ವಿವಿಧ ಪ್ರದೇಶದಲ್ಲಿ ವಿದ್ಯುತ್ ವ್ಯತ್ಯಯ