Web Stories
Suddimoola News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಶಿಡ್ಲಘಟ್ಟದಲ್ಲಿ ವಿಜೃಂಭಣೆಯ ಕನಕದಾಸ ಜಯಂತ್ಯುತ್ಸವ

ಸುದ್ದಿಮೂಲ ವಾರ್ತೆ

ಶಿಡ್ಲಘಟ್ಟ, ನ.30: ನಗರದ ತಾಲ್ಲೂಕು ಕಚೇರಿ ಹಾಗೂ ತಾಲ್ಲೂಕು ಕುರುಬರ ಸಂಘದ ವತಿಯಿಂದ 536ನೇ ದಾಸ ಶ್ರೇಷ್ಠರಾದ ಕನಕದಾಸರ ಜಯಂತ್ಯುತ್ಸವವನ್ನು ವಿಜೃಂಭಣೆಯಿಂದ ಆಚರಿಸಲಾಯಿತು.

ಶಿಡ್ಲಘಟ್ಟ ನಗರದ ಪ್ರಮುಖ ಬೀದಿಗಳಲ್ಲಿ ಕನಕದಾಸರ ಭಾವಚಿತ್ರವುಳ್ಳ ಪಲ್ಲಕ್ಕಿಗಳ ಮೆರವಣಿಗೆಯೊಂದಿಗೆ ವಿವಿಧ ಸಾಂಸ್ಕೃತಿಕ ಕಲಾತಂಡಗಳು ಈ ಕಾರ್ಯಕ್ರಮಕ್ಕೆ ಮೆರೆಗು ತಂದವು.

ಕನಕದಾಸರ ಜಯಂತಿ ಅಂಗವಾಗಿ ಕುರುಬರ ಸಮುದಾಯದ 5 ಜನ ಹಿರಿಯ ಮುಖಂಡರಿಗೆ ಸನ್ಮಾನ ಮಾಡಲಾಯಿತು. ಅಲ್ಲದೆ, ಕುರುಬ ಸಮುದಾಯದ ಎಸ್ ಎಸ್ ಎಲ್ ಸಿ ಹಾಗೂ ದ್ವಿತೀಯ ಪಿಯುಸಿಯಲ್ಲಿ ಅತಿ ಹೆಚ್ಚು ಅಂಕ ಗಳಿಸಿದ ವಿದ್ಯಾರ್ಥಿಗಳನ್ನು ಗುರುತಿಸಿ ಅವರಿಗೆ ಎಚ್.ಡಿ ದೇವೇಗೌಡ ಹಾಗೂ ಜಯಪ್ರಕಾಶ್ ನಾರಾಯಣ್ ಚಾರಿಟಬಲ್ ಟ್ರಸ್ಟ್ ವತಿಯಿಂದ 5000 ಸಹಾಯಧನವನ್ನು ನೀಡಿ ಸನ್ಮಾನಿಸಲಾಯಿತು.

ಈ ಸಂದರ್ಭದಲ್ಲಿ ಮಾತನಾಡಿದ ಶಾಸಕ ಬಿ. ಎನ್ ರವಿಕುಮಾರ್, ಮೊದಲಿಗೆ ಕ್ಷೇತ್ರ ಜನತೆಗೆ ಕನಕದಾಸರ ಜಯಂತಿ ಶುಭಾಶಯಗಳು ತಿಳಿಸಿ ಕನಕ ಎಂಬುದು ಹಿಂದಿನ ಕಾಲದಲ್ಲಿ ಬಂಗಾರವನ್ನ ಕನಕ ಎಂದು ಕರೆಯುತ್ತಾರೆ. ಇದು ಒಂದು ಇತಿಹಾಸ. ನಾವು ಸಹ ಎಲ್ಲಾ ಮಹನೀಯರ ತತ್ವ ಆದರ್ಶಗಳನ್ನು ಅಳವಡಿಸಿಕೊಂಡರೆ ಈ ಸಮಾಜದಲ್ಲಿ ನಮ್ಮ ಕೈಲಾದ ಮಟ್ಟಿಗೆ ನಾವು ಕೆಲಸ ಮಾಡಬೇಕು. ಆಗ ಸಾಮಾಜಕ್ಕೆ ಒಳ್ಳೆದಾಗುತ್ತದೆ. ಸಮುದಾಯದ ಪರವಾಗಿ ನಾನೂ ಅಧಿಕಾರದಲ್ಲಿರುವ ತನಕ ಪ್ರಾಮಾಣಿಕತೆಯಿಂದ ಕೆಲಸ ಮಾಡುತ್ತೇನೆ ಎಂದು ತಿಳಿಸಿದರು.

ಈ ಸಂದರ್ಭದಲ್ಲಿ ತಹಸೀಲ್ದಾರ್ ಬಿ.ಎನ್ ಸ್ವಾಮಿ, ರಾಜ್ಯ ಕಂಡ ಅತ್ಯಂತ ಶ್ರೇಷ್ಠರಲ್ಲಿ ಒಬ್ಬರಾದಂತಹ ಮಹನೀಯರು ಹಳೆಯ ಸಮಾಜದಲ್ಲಿ ಹೆಚ್ಚು ಜಾತಿ ವ್ಯವಸ್ಥೆ ಇದ್ದಂತಹ ಸಮಾಜದಲ್ಲಿ ಕೆಳವರ್ಗದಲ್ಲಿ ಜನಸಿ ಎಲ್ಲಾರು ಮೆಚ್ಚುವಂತಹ ಸಾಮಾಜಿಕ ಸುಧಾರಣೆ ಮಾಡಿದರು. ಅವರ ಕೀರ್ತನೆಗಳು ಸಮಾಜದಲ್ಲಿದ್ದಂತಹ ಹಲವು ಮೂಡನಂಬಿಕೆಗಳು ಜಾತಿ ವ್ಯವಸ್ಥೆಯ ವಿರುದ್ಧ ಅರಿವು ಮೂಡಿಸುವ ಕೆಲಸ ಮಾಡಿದರು ಎಂದು ತಿಳಿಸಿದರು.

ಈ ಸಂದರ್ಭದಲ್ಲಿ ಆರಕ್ಷಕ ವೃತ್ತ ನಿರೀಕ್ಷಕರಾದ ಎನ್.ಶ್ರೀನಿವಾಸ್ ತಾಲ್ಲೂಕು ಕಾರ್ಯನಿರ್ವಾಹಣಾಧಿಕಾರಿ ಮುನಿರಾಜು. ನಗರಸಭೆ ಪೌರಾಯುಕ್ತರು ಮಂಜುನಾಥ್, ಡಿಸಿಸಿ ಬ್ಯಾಂಕ್ ನ ಉಪಾಧ್ಯಕ್ಷ ಎ.ನಾಗರಾಜ್, ಡಾ.ಡಿ.ಟಿ.ಸತ್ಯ ನಾರಾಯಣ್, ಡಾ.ಸಂದೀಪ್, ತಾಲ್ಲೂಕು ಕುರುಬರ ಸಂಘದ ಅಧ್ಯಕ್ಷ ಕೆ.ಮಂಜುನಾಥ್ , ಗೌರವ ಅಧ್ಯಕ್ಷ ಗಣೇಶಪ್ಪ, ಪ್ರಧಾನ ಕಾರ್ಯದರ್ಶಿ ರಾಮಾಂಜಿನಪ್ಪ, ಮುಂಖಡರಾದ ಬಂಕ್ ಮುನಿಯಪ್ಪ, ಎ.ರಾಮಚಂದ್ರಪ್ಪ, ಮೇಲೂರು ಟಿ.ಮಂಜುನಾಥ್, ಭಕ್ತರಹಳ್ಳಿ ಬೈರೇಗೌಡ, ಸಿ.ವಿ.ಲಕ್ಷ್ಮಣ್ ರಾಜು ಹಾಗೂ ಕುರುಬರ ಸಮುದಾಯ ಮುಖಂಡರು ಇನ್ನು ಮುಂತಾದವರು ಹಾಜರಿದ್ದರು.
Author
Suddi Moola
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಶ್ರೀ ಶಂಕರಭಾರತಿ ಶಾಲೆಯ ವಾರ್ಷಿಕೋತ್ಸವ ಮಾರ್ಕ್‌ಸ್‌ ಕಾರ್ಡ್‌ಗಾಗಿ ಮಕ್ಕಳನ್ನು ತಯಾರು ಮಾಡಬೇಡಿ - ಬೆಳಗಲ್ಸಮಾಜ ಸೇವಾ ಮನೋಭಾವ ರೂಪಿಸಿಕೊಳ್ಳಿ - ಪ್ರೊ. ಶಿವಾನಂದ ಕೆಳಗಿನಮನಿಚನ್ನಪ್ಪ ಅವರಿಗೆ ರಾಜ್ಯಮಟ್ಟದ ಜ್ಯೋತಿಬಾ ಪುಲೆ ಪ್ರಶಸ್ತಿಜಿಲ್ಲಾ ಟಾಸ್‌‌ಕೆರ್ಸ್ ಸಮಿತಿ ಸಭೆ ‘ರೈತರಿಗೆ ಯಾವುದೇ ತೊಂದರೆಯಾಗದಂತೆ ನೋಡಿಕೊಳ್ಳಿ’ರಾಷ್ಟ್ರೀಯ ಹೆದ್ದಾರಿ ಪಕ್ಕದ ಜಮೀನುಗಳಿಗೆ ಹೋಗಲು ದಾರಿ ಮಾಡಿಕೊಡಲು ಆಗ್ರಹಜವಾಹರ ನವೋದಯ ವಿದ್ಯಾರ್ಥಿ ಪ್ರಜ್ವಲ್ ರಾಜ್ಯಕ್ಕೆ ಪ್ರಥಮಮುದಗಲ್ ಪಿಎಸ್‌ಐ ಸೇರಿ ಪೊಲೀಸರ ಅಮಾನತ್ತು ಮಾಡಲು ಒತ್ತಾಯಹುಲಿಕೇರಿ ಒತ್ತುವರಿಯಾಗಿದ್ದರೆ ಕ್ರಮ ಕೈಗೊಳ್ಳಲಿ - ಹಿಟ್ನಾಳಪಟ್ಟಣ ಸಹಕಾರ ಬ್ಯಾಾಂಕ್ ಮಹಾಮಂಡಳದ ನಿರ್ದೇಶಕರಿಗೆ ಡಿ.ಎಚ್.ಓ ಸನ್ಮಾನ ಗೆಳೆಯರ ಬಳಗದ ಬೆಂಬಲ, ನೌಕರರೊಂದಿಗಿನ ಒಳ್ಳೆಯ ಒಡನಾಟದಿಂದ ಉನ್ನತ ಸ್ಥಾನಮಾನಇಂದು ಗ್ರಾಮೀಣ ಭಾಗದ ವಿವಿಧ ಪ್ರದೇಶದಲ್ಲಿ ವಿದ್ಯುತ್ ವ್ಯತ್ಯಯ