Web Stories
Suddimoola News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ನೂರು ದಿನಗಳ ಸಂಭ್ರಮಾಚರಣೆ ಅರ್ಥಹೀನ: ಮೋಹನ್ ದಾಸರಿ

ಸುದ್ದಿಮೂಲ ವಾರ್ತೆ

ಬೆಂಗಳೂರು,ಆ.27: ಅಧಿಕಾರಕ್ಕೆ ಬಂದು ನೂರು ದಿನ ಕಳೆದರೂ ಮೇಕೆದಾಟು ಯೋಜನೆ ಅನುಷ್ಠಾನದ ಬಗ್ಗೆ ಕಾಂಗ್ರೆಸ್ ಏಕೆ ಏನು ಮಾತನಾಡುತ್ತಿಲ್ಲ? ಬೆಂಗಳೂರಿಗೆ ಅಗತ್ಯ ಕುಡಿಯುವ ನೀರಿನ ಸಮಸ್ಯೆಗೆ ಪರಿಹಾರವೇನು? ಎಂದು ಆಮ್‌ ಆದ್ಮಿ ಪಕ್ಷದ ರಾಜ್ಯ ಉಪಾಧ್ಯಕ್ಷ ಮೋಹನ್‌ ದಾಸರಿ ಅವರು ಪ್ರಶ್ನಿಸಿದರು.

ರಾಜ್ಯದಲ್ಲಿ ಕಾಂಗ್ರೆಸ್‌ ಸರ್ಕಾರವು ಅಧಿಕಾರಕ್ಕೆ ಬಂದು ನೂರು ದಿನಗಳು ಪೂರೈಸಿದ ಹಿನ್ನೆಲೆ ಹೇಳಿಕೆ ಬಿಡುಗಡೆ ಮಾಡಿದ ಮೋಹನ್‌ ದಾಸರಿ, ಸಂಭ್ರಮಾಚರಣೆ ಮಾಡಲು ಕಾಂಗ್ರೆಸ್‌ ಯಾವ ಸಾಧನೆ ಮಾಡಿದೆ? ಶಕ್ತಿ ಯೋಜನೆ ಮೂಲಕ ಮಹಿಳೆಯರಿಗೆ ಉಚಿತ ಬಸ್‌ ಪ್ರಯಾಣದ ಸೌಲಭ್ಯ ಮತ್ತು ಗೃಹಜ್ಯೋತಿ ಯೋಜನೆಯ ವಿದ್ಯುತ್‌ ಉಚಿತ ಸೌಲಭ್ಯವನ್ನು ಹೊರತು ಪಡಿಸಿ ಬೇರೆ ಏನು ಸಾಧನೆ ಮಾಡಿದ್ದಾರೆ? ಚುನಾವಣೆಗೂ ಮುನ್ನ ಐದು ಗ್ಯಾರಂಟಿಗಳನ್ನು ಘೋಷಿಸಿ ನುಡಿದಂತೆ ನಡೆಯುವ ಸರ್ಕಾರ ಎಂದಿದ್ದರು. ಅಧಿಕಾರಕ್ಕೆ ಬಂದ ಬಳಿಕ ತಮ್ಮದೇ ನುಡಿಯನ್ನು ಅನುಸರಿಸುತ್ತಿಲ್ಲ ಏಕೆ? ಎಂದು ರಾಜ್ಯ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡರು.

ರಾಜ್ಯದ ನಿಜವಾದ ಸಮಸ್ಯೆಗಳ ಬಗ್ಗೆ ಗಮನ ಹರಿಸುತ್ತಿಲ್ಲ. ಬೆಂಗಳೂರಲ್ಲಿ ರಸ್ತೆಗುಂಡಿಗಳ ಸಮಸ್ಯೆ ಹೆಚ್ಚಾಗುತ್ತಲೇ ಇದೆ, ಕುಡಿಯುವ ನೀರಿನ ಸಮಸ್ಯೆ ಹೆಚ್ಚಾಗುತ್ತಿದೆ. ಡಿಸಿಎಂ ಡಿ.ಕೆ.ಶಿವಕುಮಾರ್‌ ಅವರು ಸಮಸ್ಯೆಗಳನ್ನು ಆಲಿಸುತ್ತಿದ್ದೇನೆ ಎಂದು ಸುತ್ತಾಡುತ್ತಿದ್ದಾರೆ. ಡಿ.ಕೆ.ಶಿವಕುಮಾರ್‌ ಅವರೇನು ವಿರೋಧ ಪಕ್ಷದಲ್ಲಿಲ್ಲ. ತಮ್ಮದೇ ಸರ್ಕಾರದಲ್ಲಿ ಉಪಮುಖ್ಯಮಂತ್ರಿಯಾಗಿದ್ದಾರೆ. ಬ್ರಾಂಡ್‌ ಬೆಂಗಳೂರು ಮಾಡುತ್ತೇನೆಂದು ಹೇಳಿಕೊಳ್ಳುತ್ತಿದ್ದಾರೆ. ಬೆಂಗಳೂರಿನ ಸಮಸ್ಯೆಗಳೇನು ಎಂಬ ಅರಿವಿದ್ದುಕೊಂಡು ಪುನಃ ಆಲಿಸುವ ನಾಟಕ ಏಕೆ ಮಾಡುತ್ತಿದ್ದೀರಿ? ಪರಿಹರಿಸುವ ನಿಟ್ಟಿನಲ್ಲಿ ಕೆಲಸ ಮಾಡಿ ಎಂದು ಮೋಹನ್‌ ದಾಸರಿ ವಾಗ್ದಾಳಿ ನಡೆಸಿದರು.

ರಾಜ್ಯದಲ್ಲಿ ಮಳೆಯೇ ಇಲ್ಲದ ಪರಿಸ್ಥಿತಿ ಇದೆ. ರಾಜ್ಯದ ರೈತರ ಸಂಕಷ್ಟದ ದಿನಗಳನ್ನು ಲೆಕ್ಕಿಸದೆ ತಮಿಳುನಾಡಿಗೆ ಕಾವೇರಿ ನದಿ ನೀರನ್ನು ಹರಿಸಲಾಗುತ್ತಿದೆ. ನಾಡು, ನುಡಿ, ಜಲಕ್ಕೆ ಬದ್ಧ ಎಂದರೆ ಇದೇನಾ? ಎಂದು ಪ್ರಶ್ನಿಸಿದರು.

ಹಿಂದಿನ ಸರ್ಕಾರದ 40% ಕಮಿಷನ್‌, ಪೇಸಿಎಂ ವಿರುದ್ಧ ಸಿಎಂ ಸಿದ್ದರಾಮಯ್ಯ ಅವರು ರಾಜ್ಯಾದ್ಯಂತ ಹೋರಾಟ ಮಾಡಿ ಅಧಿಕಾರಕ್ಕೆ ಬಂದ ಕೆಲವೇ ದಿನಗಳಲ್ಲಿ ಗುತ್ತಿಗೆದಾರರ ಬಾಕಿ ಪಾವತಿಗೆ 20% ಕಮಿಷನ್‌ ಕೇಳುತ್ತಿರುವ ಆರೋಪ ಕೇಳಿಬಂದಿದೆ. ಡಿ.ಕೆ.ಶಿವಕುಮಾರ್‌ ವಿರುದ್ಧವೇ ದೂರುಗಳು ವ್ಯಕ್ತವಾಗಿವೆ. ಬೆನ್ನಲ್ಲೇ ಕೃಷಿ ಇಲಾಖೆಯ ಅಧಿಕಾರಿ ಮತ್ತು ಸಿಬ್ಬಂದಿಯಿಂದ ತಿಂಗಳಿಗೆ ತಲಾ 6 ರಿಂದ 8 ಲಕ್ಷ ರೂ. ಕಮಿಷನ್ ಅನ್ನು ಕೃಷಿ ಸಚಿವ ಚಲುವರಾಯಸ್ವಾಮಿ ಕೇಳುತ್ತಿದ್ದಾರೆ ಎಂಬ ಆರೋಪ ಕೇಳಿ ಬಂದಿದೆ. ಕೇವಲ ಸರ್ಕಾರ ಬದಲಾಗಿದೆ, ಆದರೆ ಭ್ರಷ್ಟಾಚಾರ, ಕಮಿಷನ್‌ ದಂಧೆ, ವರ್ಗಾವಣೆ ದಂಧೆ ಎಲ್ಲವೂ ಮೊದಲಿನಂತೆ ಮುಂದುವರಿದಿದೆ. ಕ್ಷೇತ್ರದ ಅಭಿವೃದ್ಧಿಗೆ ಅನುದಾನ ಸಿಗುತ್ತಿಲ್ಲ ಎಂದು ಶಾಸಕರು ದೂರುತ್ತಿದ್ದಾರೆ. ಹಾಗಿದ್ದರೆ ಸರ್ಕಾರದ ದುಡ್ಡು ಎಲ್ಲಿ ಹೋಯ್ತು? ಅಭಿವೃದ್ಧಿ ಕೆಲಸಗಳಿಗೆ ಮೀಸಲಿಟ್ಟ ದುಡ್ಡನ್ನು ಗ್ಯಾರಂಟಿ ಯೋಜನೆಗಳಿಗೆ ಬಳಸುತ್ತಿರುವುದು ಏಕೆ? ಅಧಿಕಾರ ಹಿಡಿಯಲೇ ಬೇಕು ಎಂಬ ದುರಾಸೆಗೆ ಅವೈಜ್ಞಾನಿಕವಾಗಿ, ಅಧ್ಯಾಯನ ನಡೆಸದೆ ಏಕಾಏಕಿ ಗ್ಯಾರಂಟಿ ಯೋಜನೆಗಳನ್ನು ಘೋಷಿಸಿ ರಾಜ್ಯದ ಹಿತಾಸಕ್ತಿಯನ್ನು ಬಲಿಕೊಟ್ಟಿರುವುದೇ ನಿಮ್ಮ ನೂರು ದಿನದ ಸಾಧನೆಯೇ? ಎಂದು ಮೋಹನ್‌ ದಾಸರಿ ಕಿಡಿಕಾರಿದರು.

ಈ ನಡುವೆ ಬಿಜೆಪಿ ವಿರುದ್ಧವೂ ಹರಿಹಾಯ್ದ ಮೋಹನ್‌ ದಾಸರಿ, ನೂರು ದಿನಗಳು ಕಳೆದರು ಪ್ರತಿಪಕ್ಷ ನಾಯಕನನ್ನು ಆಯ್ಕೆ ಮಾಡಲು ಸಾಧ್ಯವಾಗಿಲ್ಲ. ಪಕ್ಷದ ರಾಜ್ಯಾಧ್ಯಕ್ಷನನ್ನು ಆಯ್ಕೆ ಮಾಡಲಾಗಿಲ್ಲ. ರಾಜ್ಯದಲ್ಲಿv ಪ್ರತಿಪಕ್ಷವೇ ಇಲ್ಲದಂತಹ ಸ್ಥಿತಿ ನಿರ್ಮಾಣವಾಗಿದೆ. ಇದು ರಾಜ್ಯದ ದೌರ್ಭಾಗ್ಯವಾಗಿದೆ ಎಂದು ಬೇಸರ ವ್ಯಕ್ತಪಡಿಸಿದರು.
Author
Suddi Moola
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಶ್ರೀ ಶಂಕರಭಾರತಿ ಶಾಲೆಯ ವಾರ್ಷಿಕೋತ್ಸವ ಮಾರ್ಕ್‌ಸ್‌ ಕಾರ್ಡ್‌ಗಾಗಿ ಮಕ್ಕಳನ್ನು ತಯಾರು ಮಾಡಬೇಡಿ - ಬೆಳಗಲ್ಸಮಾಜ ಸೇವಾ ಮನೋಭಾವ ರೂಪಿಸಿಕೊಳ್ಳಿ - ಪ್ರೊ. ಶಿವಾನಂದ ಕೆಳಗಿನಮನಿಚನ್ನಪ್ಪ ಅವರಿಗೆ ರಾಜ್ಯಮಟ್ಟದ ಜ್ಯೋತಿಬಾ ಪುಲೆ ಪ್ರಶಸ್ತಿಜಿಲ್ಲಾ ಟಾಸ್‌‌ಕೆರ್ಸ್ ಸಮಿತಿ ಸಭೆ ‘ರೈತರಿಗೆ ಯಾವುದೇ ತೊಂದರೆಯಾಗದಂತೆ ನೋಡಿಕೊಳ್ಳಿ’ರಾಷ್ಟ್ರೀಯ ಹೆದ್ದಾರಿ ಪಕ್ಕದ ಜಮೀನುಗಳಿಗೆ ಹೋಗಲು ದಾರಿ ಮಾಡಿಕೊಡಲು ಆಗ್ರಹಜವಾಹರ ನವೋದಯ ವಿದ್ಯಾರ್ಥಿ ಪ್ರಜ್ವಲ್ ರಾಜ್ಯಕ್ಕೆ ಪ್ರಥಮಮುದಗಲ್ ಪಿಎಸ್‌ಐ ಸೇರಿ ಪೊಲೀಸರ ಅಮಾನತ್ತು ಮಾಡಲು ಒತ್ತಾಯಹುಲಿಕೇರಿ ಒತ್ತುವರಿಯಾಗಿದ್ದರೆ ಕ್ರಮ ಕೈಗೊಳ್ಳಲಿ - ಹಿಟ್ನಾಳಪಟ್ಟಣ ಸಹಕಾರ ಬ್ಯಾಾಂಕ್ ಮಹಾಮಂಡಳದ ನಿರ್ದೇಶಕರಿಗೆ ಡಿ.ಎಚ್.ಓ ಸನ್ಮಾನ ಗೆಳೆಯರ ಬಳಗದ ಬೆಂಬಲ, ನೌಕರರೊಂದಿಗಿನ ಒಳ್ಳೆಯ ಒಡನಾಟದಿಂದ ಉನ್ನತ ಸ್ಥಾನಮಾನಇಂದು ಗ್ರಾಮೀಣ ಭಾಗದ ವಿವಿಧ ಪ್ರದೇಶದಲ್ಲಿ ವಿದ್ಯುತ್ ವ್ಯತ್ಯಯ