Web Stories
Suddimoola News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಐದು ವರ್ಷದಲ್ಲಿ ಒಂದು ಟ್ರಿಿಲಿಯನ್ ಡಾಲರ್ ಆರ್ಥಿಕತೆ ಗುರಿ: ಡಾ.ಶರಣಪ್ರಕಾಶ್ ಪಾಟೀಲ್ ಕರ್ನಾಟಕ ಕೌಶಲ್ಯ ಅಭಿವೃದ್ಧಿಿ ನೀತಿಗೆ ಸಂಪುಟ ಅನುಮೋದನೆ

ಸುದ್ದಿಮೂಲ ವಾರ್ತೆ ಬೆಂಗಳೂರು, ಸೆ.25:
ಕರ್ನಾಟಕದಲ್ಲಿ ಕೌಶಲ್ಯ ಅಭಿವೃದ್ಧಿಿಗೆ ಹೆಚ್ಚು ಆದ್ಯತೆ ನೀಡಬೇಕು, ಯುವ ಸಮೂಹ ಜಾಗತಿಕ ಮಟ್ಟದಲ್ಲಿ ಉದ್ಯೋೋಗ ಗಿಟ್ಟಿಿಸುವ ಸಾಮರ್ಥ್ಯ ಬೆಳೆಸಿಕೊಳ್ಳಬೇಕೆಂಬ ಉದ್ದೇಶ ಹೊಂದಿರುವ ರಾಜ್ಯ ಸರ್ಕಾರ ಈಗ ಕರ್ನಾಟಕ ಕೌಶಲ್ಯ ಅಭಿವೃದ್ಧಿಿ ನೀತಿ 2025-2032 ಜಾರಿಗೆ ತರಲು ಕ್ರಮ ಕೈಗೊಂಡಿದೆ.
ಮುಖ್ಯಮಂತ್ರಿಿ ಸಿದ್ದರಾಮಯ್ಯ ನೇತೃತ್ವದಲ್ಲಿ ನಡೆದ ರಾಜ್ಯ ಸಚಿವ ಸಂಪುಟ ಕೌಶಲ್ಯ ನೀತಿಗೆ ಅನುಮೋದನೆ ನೀಡಿದೆ ಎಂದು ವೈದ್ಯಕೀಯ ಶಿಕ್ಷಣ, ಕೌಶಲ್ಯಾಾಭಿವೃದ್ಧಿಿ, ಜೀವನೋಪಾಯ ಮತ್ತು ರಾಯಚೂರು ಜಿಲ್ಲಾ ಉಸ್ತುವಾರಿ ಸಚಿವರಾದ ಡಾ. ಶರಣ ಪ್ರಕಾಶ್ ಆರ್. ಪಾಟೀಲ್ ಮಾಹಿತಿ ನೀಡಿದ್ದಾರೆ.
ಈ ಅಭಿವೃದ್ಧಿಿ ನೀತಿಯಿಂದ ರಾಜ್ಯದ ಪ್ರಗತಿಗೆ ಅತ್ಯಂತ ಪೂರಕವಾದ ಯೋಜನೆಗಳನ್ನು ಜಾರಿಗೆ ತರಲು ರಾಜ್ಯ ಸರ್ಕಾರ ಮುಂದಾಗಿದ್ದು, 2032 ರ ವೇಳೆಗೆ 1 ಟ್ರಿಿಲಿಯನ್ ಡಾಲರ್ ಆರ್ಥಿಕತೆ ಗುರಿಯನ್ನು ಹೊಂದಲಾಗಿದ್ದು, ಇದನ್ನು ಸಾಕಾರಗೊಳಿಸಲು ನಾವು ಬದ್ಧವಾಗಿದ್ದೇವೆ ಎಂದು ಸಚಿವ ಡಾ. ಪಾಟೀಲ್ ಸ್ಪಷ್ಟಪಡಿಸಿದ್ದಾರೆ.
ಕಲಿಕೆ ಜೊತೆಗೆ ಕೌಶಲ್ಯ, ನನ್ನ ವೃತ್ತಿಿ ನನ್ನ ಆಯ್ಕೆೆ ಯೋಜನೆಗೆ ಆದ್ಯತೆ, ಅಪ್ರೆೆಂಟಿಸ್‌ಶಿಪ್, ಐಟಿಐ ತರಬೇತಿ ಮೂಲಕ ಮೂಲಕ ವಿಶೇಷ ಸಹಯೋಗ, ತಾಂತ್ರಿಿಕ ಮತ್ತು ಕೈಗಾರಿಕಾ ಬದಲಾವಣೆಗಳಿಗೆ ನಿರಂತರ ಕಲಿಕೆಗೆ ಗಮನ, ಮಹಿಳೆಯರು, ಅಂಗವಿಕಲರು, ನಗರ ಬಡವರು, ದಮನಿತ ಸಮುದಾಯಗಳಿಗೆ ತರಬೇತಿ, ಐಟಿಐ ಆಧುನೀಕರಣ, ಜಿಟಿಟಿಸಿ ವಿಸ್ತರಣೆ ಮತ್ತು ಗ್ರಾಾಮೀಣ ಮತ್ತು ನಗರ ಕೌಶಲ್ಯ ಕೇಂದ್ರಗಳ ಸ್ಥಾಾಪನೆ, ಮೂಲಸೌಕರ್ಯ ಹೆಚ್ಚಳಕ್ಕೆೆ ಕ್ರಮ ಮುಂತಾದ ಅಂಶಗಳನ್ನು ನೀತಿಯು ಒಳಗೊಂಡಿದೆ.
ಕೌಶಲ್ಯ ನೀತಿ ಜಾರಿಗೆ ಮೂಲಕ ರಾಜ್ಯದಲ್ಲಿ ವಿಶೇಷ ಪ್ರತಿಭಾ ಕಣಜ ಸ್ಥಾಾಪಿಸಲಾಗುತ್ತದೆ. ವಿಶೇಷ ತರಬೇತಿಗಳನ್ನು ಯುವ ಸಮೂಹಕ್ಕೆೆ ನೀಡುವ ಮೂಲಕ ಅಂತಾರಾಷ್ಟ್ರೀಯ ಮಟ್ಟದಲ್ಲಿಯೂ ಸಮರ್ಥವಾಗಿ ಪ್ರತಿಭೆ ಪ್ರದರ್ಶಿಸಲು ವೇದಿಕೆ ಕಲ್ಪಿಿಸಲಾಗುತ್ತದೆ. ರಾಜ್ಯ, ರಾಷ್ಟ್ರೀಯ ಮತ್ತು ಜಾಗತಿಕ ಅಗತ್ಯಗಳನ್ನು ಪೂರೈಸಲು ಕೌಶಲ್ಯಪೂರ್ಣ ಕಾರ್ಯಪಡೆ ರಚನೆ ಮಾಡುವುದು ನಮ್ಮ ಉದ್ದೇಶವಾಗಿದೆ. ಕರ್ನಾಟಕ ಕೌಶಲ್ಯ ಅಭಿವೃದ್ಧಿಿ ನೀತಿ 2025-2032 ಕೌಶಲ್ಯ ತರಬೇತಿಯನ್ನು ಶಿಕ್ಷಣ, ಉದ್ಯೋೋಗ ಮತ್ತು ಉದ್ಯಮದ ನಡುವಿನ ಅಂತರವನ್ನು ಕಡಿಮೆಗೊಳಿಸುತ್ತದೆ ಮತ್ತು ಉತ್ತಮ ಭವಿಷ್ಯವನ್ನು ರೂಪಿಸುತ್ತದೆ ಎಂದು ಸಚಿವ ಡಾ.ಶರಣಪ್ರಕಾಶ ಪಾಟೀಲ್ ಹೇಳಿದ್ದಾರೆ.
Author
Suddi Moola
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಶ್ರೀ ಶಂಕರಭಾರತಿ ಶಾಲೆಯ ವಾರ್ಷಿಕೋತ್ಸವ ಮಾರ್ಕ್‌ಸ್‌ ಕಾರ್ಡ್‌ಗಾಗಿ ಮಕ್ಕಳನ್ನು ತಯಾರು ಮಾಡಬೇಡಿ - ಬೆಳಗಲ್ಸಮಾಜ ಸೇವಾ ಮನೋಭಾವ ರೂಪಿಸಿಕೊಳ್ಳಿ - ಪ್ರೊ. ಶಿವಾನಂದ ಕೆಳಗಿನಮನಿಚನ್ನಪ್ಪ ಅವರಿಗೆ ರಾಜ್ಯಮಟ್ಟದ ಜ್ಯೋತಿಬಾ ಪುಲೆ ಪ್ರಶಸ್ತಿಜಿಲ್ಲಾ ಟಾಸ್‌‌ಕೆರ್ಸ್ ಸಮಿತಿ ಸಭೆ ‘ರೈತರಿಗೆ ಯಾವುದೇ ತೊಂದರೆಯಾಗದಂತೆ ನೋಡಿಕೊಳ್ಳಿ’ರಾಷ್ಟ್ರೀಯ ಹೆದ್ದಾರಿ ಪಕ್ಕದ ಜಮೀನುಗಳಿಗೆ ಹೋಗಲು ದಾರಿ ಮಾಡಿಕೊಡಲು ಆಗ್ರಹಜವಾಹರ ನವೋದಯ ವಿದ್ಯಾರ್ಥಿ ಪ್ರಜ್ವಲ್ ರಾಜ್ಯಕ್ಕೆ ಪ್ರಥಮಮುದಗಲ್ ಪಿಎಸ್‌ಐ ಸೇರಿ ಪೊಲೀಸರ ಅಮಾನತ್ತು ಮಾಡಲು ಒತ್ತಾಯಹುಲಿಕೇರಿ ಒತ್ತುವರಿಯಾಗಿದ್ದರೆ ಕ್ರಮ ಕೈಗೊಳ್ಳಲಿ - ಹಿಟ್ನಾಳಪಟ್ಟಣ ಸಹಕಾರ ಬ್ಯಾಾಂಕ್ ಮಹಾಮಂಡಳದ ನಿರ್ದೇಶಕರಿಗೆ ಡಿ.ಎಚ್.ಓ ಸನ್ಮಾನ ಗೆಳೆಯರ ಬಳಗದ ಬೆಂಬಲ, ನೌಕರರೊಂದಿಗಿನ ಒಳ್ಳೆಯ ಒಡನಾಟದಿಂದ ಉನ್ನತ ಸ್ಥಾನಮಾನಇಂದು ಗ್ರಾಮೀಣ ಭಾಗದ ವಿವಿಧ ಪ್ರದೇಶದಲ್ಲಿ ವಿದ್ಯುತ್ ವ್ಯತ್ಯಯ