Web Stories
Suddimoola News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಹೆದ್ದಾರಿ ಅಪಘಾತಗಳಿಗೆ ಬಿಜೆಪಿ ಸರ್ಕಾರವೇ ಹೊಣೆ: ಆಪ್ ಪ್ರತಿಭಟನೆ

ಸುದ್ದಿಮೂಲ ವಾರ್ತೆ

ಬೆಂಗಳೂರು, ಜೂ.30: ಆಮ್ ಆದ್ಮಿ ಪಕ್ಷದ ನೂರಾರು ಕಾರ್ಯಕರ್ತರುಗಳು ಇಂದು ಬೆಳಿಗ್ಗೆ ಮೈಸೂರು ಬೆಂಗಳೂರು ಎಕ್ಸ್ಪ್ರೆಸ್ ವೇ ಹೆದ್ದಾರಿ ರಸ್ತೆಯ ಕಣಮಣಿಕೆ ಟೋಲ್ ಪ್ಲಾಜಾ ಬಳಿ ಸಾವಿನ ರಹದಾರಿ ಅಭಿಯಾನ ನಡೆಸಿದರು.

ಪಕ್ಷದ ಕಾರ್ಯಾಧ್ಯಕ್ಷ ಮೋಹನ್ ದಾಸರಿ ನೇತೃತ್ವದಲ್ಲಿ ನಡೆದ ಅಭಿಯಾನದಲ್ಲಿ ಸಾವಿರಾರು ವಾಹನ ಚಲಾಯಿಸುವವರಿಗೆ ಕರಪತ್ರಗಳನ್ನು ನೀಡುವ ಮೂಲಕ ಜಾಗರೂಕತೆಯಿಂದ ಚಲಿಸಿ, ಪ್ರಾಣವನ್ನು ಉಳಿಸಿಕೊಳ್ಳಿ ಎಂಬ ಸಂದೇಶವನ್ನು ನೀಡಿದರು.

ಕಳೆದ 9 ತಿಂಗಳುಗಳಿಂದ 165ಕ್ಕೂ ಹೆಚ್ಚು ಅಮಾಯಕ ಚಾಲಕರುಗಳ ಹಾಗೂ ಪ್ರಯಾಣಿಕರುಗಳ ಸಾವಿಗೆ ಬಿಜೆಪಿ ಸರ್ಕಾರವೇ ನೇರ ಹೊಣೆಯನ್ನು ಹೊರಬೇಕಾಗುತ್ತದೆ. ಹತ್ತು ಸಾವಿರ ಕೋಟಿ ರೂಪಾಯಿಗಳನ್ನು ಖರ್ಚು ಮಾಡಿಯೂ ಸಹ ಅವೈಜ್ಞಾನಿಕವಾಗಿ ಹಾಗೂ ಭ್ರಷ್ಟಾಚಾರ ಕೂಡಿರುವಂತಹ ಇಂತಹ ಹೆದ್ದಾರಿಗಳು ದೇಶಕ್ಕೆ ಅಪಮಾನಕಾರಿ ಆದಂತಹ ಸಂಗತಿ ಎಂದು ತಿಳಿಸಿದರು. ಸ್ವಾಧೀನ ಪ್ರಕ್ರಿಯೆಯಲ್ಲಿ ಸಂಪೂರ್ಣ ಭ್ರಷ್ಟಾಚಾರವಾಗಿದ್ದು ಈ ಹಿಂದಿನ ಬಿಜೆಪಿ ಸರ್ಕಾರವು ಸಂಪೂರ್ಣ ಹೊಣೆಗಾರಿಕೆಯನ್ನು ಹೊರಬೇಕಾಗುತ್ತದೆ ಹಾಗೂ ಈಗಿನ ಕಾಂಗ್ರೆಸ್ ಸರ್ಕಾರವು ಸೂಕ್ತ ತನಿಖೆ ನಡೆಸಿ ಹೆದ್ದಾರಿಯನ್ನು ಸರಿಪಡಿಸಬೇಕಾಗುತ್ತದೆ ಎಂದು ಮೋಹನ್ ದಾಸರಿ ತಿಳಿಸಿದರು.

ಸರ್ಕಾರವೇ ಈ ಹೆದ್ದಾರಿಯ ಟೋಲ್ ಸಂಗ್ರಹ ಮಾಡಬಾರದೆಂದು ತಿಳಿಸಿದ್ದರೂ ಸಹ ಜುಲೈ ಒಂದರಿಂದ ಶ್ರೀರಂಗಪಟ್ಟಣದಲ್ಲಿ ಟೋಲ್ ಸಂಗ್ರಹಣೆ ಮಾಡುತ್ತಿರುವುದು ಭಾರತೀಯ ಹೆದ್ದಾರಿ ಪ್ರಾಧಿಕಾರದ ಅಧಿಕಾರಿಗಳ ದುರ್ನಡತೆಗೆ ಸಾಕ್ಷಿ. ರಾಜ್ಯ ಕಾಂಗ್ರೆಸ್ ಸರ್ಕಾರವು ಸೂಕ್ತ ಆದೇಶವನ್ನು ನೀಡಬೇಕಾಗಿದೆ ಎಂದು ತಿಳಿಸಿದರು.

ಅಭಿಯಾನದಲ್ಲಿ ರಾಜ್ಯ ಮಾಧ್ಯಮ ಸಂಚಾಲಕ ಜಗದೀಶ್ ವಿ.ಸದಂ, ರಾಜ್ಯ ಉಪಾಧ್ಯಕ್ಷ ಚನ್ನಪ್ಪ ಗೌಡ ನೆಲ್ಲೂರು, ಉಪಾಧ್ಯಕ್ಷ ಸುರೇಶ್ ರಾಥೋಡ್,ಬೆಂಗಳೂರು ನಗರ ಅಧ್ಯಕ್ಷ ಸತೀಶ್ ಮೋಹನ್, ಪ್ರಧಾನ ಕಾರ್ಯದರ್ಶಿ ಜಗದೀಶ್ ಚಂದ್ರ, ರಾಮನಗರ ಜಿಲ್ಲಾಧ್ಯಕ್ಷ ಬೈರೇಗೌಡ, ಸುಷ್ಮಾ ವೀರ್, ನಾಗೇಂದ್ರ, ನಿರಂಜನ್,ಅಶೋಕ್ ಮೃತ್ಯುಂಜಯ, ವೀಣಾ ಸರ್ರಾವ್, ಜಗದೀಶ್ ಬಾಬು, ಜ್ಯೋತಿಶ್ ಕುಮಾರ್, ಮಹಾಲಕ್ಷ್ಮಿ, ವಿಶ್ವನಾಥ್ ಸೇರಿದಂತೆ ನೂರಾರು ಕಾರ್ಯಕರ್ತರುಗಳು ಭಾಗವಹಿಸಿದ್ದರು.

 
Author
Suddi Moola
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಶ್ರೀ ಶಂಕರಭಾರತಿ ಶಾಲೆಯ ವಾರ್ಷಿಕೋತ್ಸವ ಮಾರ್ಕ್‌ಸ್‌ ಕಾರ್ಡ್‌ಗಾಗಿ ಮಕ್ಕಳನ್ನು ತಯಾರು ಮಾಡಬೇಡಿ - ಬೆಳಗಲ್ಸಮಾಜ ಸೇವಾ ಮನೋಭಾವ ರೂಪಿಸಿಕೊಳ್ಳಿ - ಪ್ರೊ. ಶಿವಾನಂದ ಕೆಳಗಿನಮನಿಚನ್ನಪ್ಪ ಅವರಿಗೆ ರಾಜ್ಯಮಟ್ಟದ ಜ್ಯೋತಿಬಾ ಪುಲೆ ಪ್ರಶಸ್ತಿಜಿಲ್ಲಾ ಟಾಸ್‌‌ಕೆರ್ಸ್ ಸಮಿತಿ ಸಭೆ ‘ರೈತರಿಗೆ ಯಾವುದೇ ತೊಂದರೆಯಾಗದಂತೆ ನೋಡಿಕೊಳ್ಳಿ’ರಾಷ್ಟ್ರೀಯ ಹೆದ್ದಾರಿ ಪಕ್ಕದ ಜಮೀನುಗಳಿಗೆ ಹೋಗಲು ದಾರಿ ಮಾಡಿಕೊಡಲು ಆಗ್ರಹಜವಾಹರ ನವೋದಯ ವಿದ್ಯಾರ್ಥಿ ಪ್ರಜ್ವಲ್ ರಾಜ್ಯಕ್ಕೆ ಪ್ರಥಮಮುದಗಲ್ ಪಿಎಸ್‌ಐ ಸೇರಿ ಪೊಲೀಸರ ಅಮಾನತ್ತು ಮಾಡಲು ಒತ್ತಾಯಹುಲಿಕೇರಿ ಒತ್ತುವರಿಯಾಗಿದ್ದರೆ ಕ್ರಮ ಕೈಗೊಳ್ಳಲಿ - ಹಿಟ್ನಾಳಪಟ್ಟಣ ಸಹಕಾರ ಬ್ಯಾಾಂಕ್ ಮಹಾಮಂಡಳದ ನಿರ್ದೇಶಕರಿಗೆ ಡಿ.ಎಚ್.ಓ ಸನ್ಮಾನ ಗೆಳೆಯರ ಬಳಗದ ಬೆಂಬಲ, ನೌಕರರೊಂದಿಗಿನ ಒಳ್ಳೆಯ ಒಡನಾಟದಿಂದ ಉನ್ನತ ಸ್ಥಾನಮಾನಇಂದು ಗ್ರಾಮೀಣ ಭಾಗದ ವಿವಿಧ ಪ್ರದೇಶದಲ್ಲಿ ವಿದ್ಯುತ್ ವ್ಯತ್ಯಯ