Web Stories
Suddimoola News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಕೋಗಿಲು ಮನೆ ತೆರವು: 76 ಅರ್ಜಿಗಳು ಹೆಚ್ಚುವರಿ ಸಲ್ಲಿಕೆ

ಸುದ್ದಿಮೂಲ ವಾರ್ತೆ ಬೆಂಗಳೂರು, ಜ.06:
ಕೋಗಿಲು ನಿರಾಶ್ರಿತರಿಗೆ ಮನೆ ಹಂಚಿಕೆ ಮಾಡುವುದು ಜಿಲ್ಲಾಡಳಿತಕ್ಕೆೆ ದೊಡ್ಡ ತಲೆನೋವಾಗಿ ಪರಿಣಮಿಸಿದೆ.
ಕೋಗಿಲು ಲೇಔಟ್ನ ಮನೆ ತೆರವು ವೇಳೆ ನಿರಾಶಿತ್ರಗೊಂಡಿದ್ದೇವೆ ಎಂದು 245 ಕುಟುಂಬಗಳು ಅರ್ಜಿ ಸಲ್ಲಿವೆ. ಜಿಲ್ಲಾಡಳಿತ ಮನೆಗಳನ್ನು ಮನೆ ತೆರವುಗೊಳಿಸಿದಾಗ ಅಲ್ಲಿ 167 ಕುಟುಂಬಗಳು ಇದ್ದವು. ಈಗ ಹೆಚ್ಚುವರಿ 76 ಅರ್ಜಿಗಳು ಸಲ್ಲಿಕೆಯಾಗಿವೆ ಎಂದು ರಾಜೀವ್ ಗಾಂಧಿ ವಸತಿ ನಿಗಮದ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.
ಮುಖ್ಯಮಂತ್ರಿಿ ಸಿದ್ದರಾಮಯ್ಯ ಹಾಗೂ ಉಪ ಮುಖ್ಯಮಂತ್ರಿಿ ಡಿ.ಕೆ.ಶಿವಕುಮಾರ್ ಅವರು ಒಟ್ಟಿಿಗೆ ಸಭೆ ನಡೆಸಿ ಶೀಘ್ರದಲ್ಲೇ ಕೋಗಿಲು ನಿರಾಶ್ರಿತರಿಗೆ ಮನೆ ನೀಡುವುದಾಗಿ ಘೋಷಿಸಿದ್ದರು. ಅಲ್ಲದೆ ಮನೆ ಕಳೆದುಕೊಂಡ ನಿರಾಶ್ರಿತರು ರಾಜೀವ್ ಗಾಂಧಿ ವಸತಿ ನಿಗಮದಲ್ಲಿ ಅರ್ಜಿ ಸಲ್ಲಿಸುವಂತೆ ಹೇಳಿದ್ದರು. ಈಗ ಅರ್ಜಿ ಸಲ್ಲಿಕೆಯಾಗಿದ್ದು ತಲೆ ನೋವು ಆರಂಭವಾಗಿದೆ.
ಸರ್ಕಾರ ಕೋಗಿಲು ನಿರಾಶ್ರಿತರಿಗೆ ಗುರುವಾರ ಮನೆ ಹಂಚಿಕೆ ಮಾಡುವುದಾಗಿ ಹೇಳಿತ್ತು. ಈಗ ಹೆಚ್ಚಿಿನ ಅರ್ಜಿಗಳು ಸಲ್ಲಿಕೆಯಾಗಿರುವುದರಿಂದ ಮನೆ ಹಂಚಿಕೆ ಮುಂದೂಡಿಕೆಯಾಗಬಹುದು ಎಂದು ತಿಳಿದು ಬಂದಿದೆ.
ಎಲ್ಲರೂ ಕನ್ನಡಿಗರು: ರಾಜೀವ್ ಗಾಂಧಿ ವಸತಿ ನಿಗಮಕ್ಕೆೆ ಅರ್ಜಿ ಸಲ್ಲಿಸಿದ 245 ಕುಟುಂಬದವರು ಕನ್ನಡಿಗರು. ಅವರು ಹಲವು ವರ್ಷಗಳಿಂದ ಕೋಗಿಲ್ ಲೇಔಟ್ನ ಶೆಡ್ಗಳಲ್ಲಿ ವಾಸವಾಗಿದ್ದರು. ಆಧಾರ್ ಕಾರ್ಡ್, ಚುನಾವಣಾ ಗುರುತಿನ ಚೀಟಿ, ಮನೆ ಯಜಮಾನರ ಹೆಸರು ಹಾಗೂ ಮೊಬೈಲ್ ಸಂಖ್ಯೆೆಗಳನ್ನು ನೀಡಿದ್ದಾರೆ. ಇದನ್ನು ಪರಿಶೀಲಿಸಿದ ನಿಗಮದ ಅಧಿಕಾರಿಗಳು ಎಲ್ಲ ಆಧಾರ್ ಕಾರ್ಡ್ ಹಾಗೂ ಮಾಹಿತಿ ನೈಜ್ಯವಾಗಿದ್ದು ಮನೆಕೊಡುವುದು ಕಷ್ಟವಾಗಿದೆ ಎಂದು ಹೇಳಿದ್ದಾರೆ.
ಬಾಕ್ಸ್
ನಾವು ಕನ್ನಡಿಗರು ಬಿಜೆಪಿ ನಾಯಕರು ಸುಳ್ಳು ಹೇಳುತ್ತಿಿದ್ದಾರೆ
ನಾವು ಅಪ್ಪಟ ಕನ್ನಡಿಗರು. ನಾವು ಕೋಗಿಲು ಬಡಾವಣೆಯಲ್ಲಿ ಹಲವು ವರ್ಷಗಳಿಂದ ವಾಸ ಮಾಡುತ್ತಿಿದ್ದೇವೆ. ಆದರೆ ಬಿಜೆಪಿ ನಾಯಕರು ನಮ್ಮನ್ನು ಬಾಂಗ್ಲಾಾ ದೇಶದಿಂದ ಅಕ್ರಮವಾಗಿ ವಲಸೆ ಬಂದವರು ಎಂದು ಸುಳ್ಳು ಹೇಳುತ್ತಿಿದ್ದಾರೆ. ನಮ್ಮ ಬಳಿ ಆಧಾರ್ ಕಾರ್ಡ್ ಸೇರಿದಂತೆ ಎಲ್ಲ ದಾಖಲೆಗಳಿವೆ ಎಂದು ನಿರಾಶ್ರಿತರಾದ ಲಕ್ಷ್ಮೀಬಾಯಿ ಹೇಳಿದರು.
ಕೋಟ್
ನಾವು ಬೆಂಗಳೂರಿನಲ್ಲೇ ಹುಟ್ಟಿಿದವರು. ಇದಕ್ಕೆೆ ನಮ್ಮ ಬಳಿ ದಾಖಲೆ ಇದೆ. ನಾವು ಬಾಂಗ್ಲಾಾ ವಲಸಿಗರಲ್ಲ.
ಆರೀಪ್ ಪಾಷಾ. ಕೋಗಿಲು ನಿರಾಶ್ರಿತ.
Author
Suddi Moola
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಶ್ರೀ ಶಂಕರಭಾರತಿ ಶಾಲೆಯ ವಾರ್ಷಿಕೋತ್ಸವ ಮಾರ್ಕ್‌ಸ್‌ ಕಾರ್ಡ್‌ಗಾಗಿ ಮಕ್ಕಳನ್ನು ತಯಾರು ಮಾಡಬೇಡಿ - ಬೆಳಗಲ್ಸಮಾಜ ಸೇವಾ ಮನೋಭಾವ ರೂಪಿಸಿಕೊಳ್ಳಿ - ಪ್ರೊ. ಶಿವಾನಂದ ಕೆಳಗಿನಮನಿಚನ್ನಪ್ಪ ಅವರಿಗೆ ರಾಜ್ಯಮಟ್ಟದ ಜ್ಯೋತಿಬಾ ಪುಲೆ ಪ್ರಶಸ್ತಿಜಿಲ್ಲಾ ಟಾಸ್‌‌ಕೆರ್ಸ್ ಸಮಿತಿ ಸಭೆ ‘ರೈತರಿಗೆ ಯಾವುದೇ ತೊಂದರೆಯಾಗದಂತೆ ನೋಡಿಕೊಳ್ಳಿ’ರಾಷ್ಟ್ರೀಯ ಹೆದ್ದಾರಿ ಪಕ್ಕದ ಜಮೀನುಗಳಿಗೆ ಹೋಗಲು ದಾರಿ ಮಾಡಿಕೊಡಲು ಆಗ್ರಹಜವಾಹರ ನವೋದಯ ವಿದ್ಯಾರ್ಥಿ ಪ್ರಜ್ವಲ್ ರಾಜ್ಯಕ್ಕೆ ಪ್ರಥಮಮುದಗಲ್ ಪಿಎಸ್‌ಐ ಸೇರಿ ಪೊಲೀಸರ ಅಮಾನತ್ತು ಮಾಡಲು ಒತ್ತಾಯಹುಲಿಕೇರಿ ಒತ್ತುವರಿಯಾಗಿದ್ದರೆ ಕ್ರಮ ಕೈಗೊಳ್ಳಲಿ - ಹಿಟ್ನಾಳಪಟ್ಟಣ ಸಹಕಾರ ಬ್ಯಾಾಂಕ್ ಮಹಾಮಂಡಳದ ನಿರ್ದೇಶಕರಿಗೆ ಡಿ.ಎಚ್.ಓ ಸನ್ಮಾನ ಗೆಳೆಯರ ಬಳಗದ ಬೆಂಬಲ, ನೌಕರರೊಂದಿಗಿನ ಒಳ್ಳೆಯ ಒಡನಾಟದಿಂದ ಉನ್ನತ ಸ್ಥಾನಮಾನಇಂದು ಗ್ರಾಮೀಣ ಭಾಗದ ವಿವಿಧ ಪ್ರದೇಶದಲ್ಲಿ ವಿದ್ಯುತ್ ವ್ಯತ್ಯಯ