Web Stories
Suddimoola News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಆನೇಕಲ್: ತೋಟಗಾರಿಕೆ ರೈತ ಉತ್ಪಾದಕರ ಸಂಸ್ಥೆ ಸರ್ವ ಸದಸ್ಯರ ಸಭೆ

ಸುದ್ದಿಮೂಲ ವಾರ್ತೆ

ಆನೇಕಲ್, ಸೆ.27: ಆನೇಕಲ್ ತೋಟಗಾರಿಕೆ ರೈತ ಉತ್ಪಾದಕರ ಕಂಪನಿ ನಿಯಮಿತ ಸಂಸ್ಥೆಯ ಸರ್ವ ಸದಸ್ಯರ ವಾರ್ಷಿಕ ಮಹಾಸಭೆ ಸಭೆ ನಡೆಯಿತು.

ಆನೇಕಲ್ ಪಟ್ಟಣದಲ್ಲಿ ಇರುವ ಸ್ವರ್ಣ ಭವನದಲ್ಲಿ ಅಧ್ಯಕ್ಷರಾದ ಎಸ್ ನಾರಾಯಣ್ ರವರ ನೇತೃತ್ವದಲ್ಲಿ ಸರ್ವ ಸದಸ್ಯರ ಸಾಮಾನ್ಯ ಸಭೆಯನ್ನು ಹಮ್ಮಿಕೊಳ್ಳಲಾಗಿತ್ತು.

ಈ ವೇಳೆ ಮಾತನಾಡಿದ ಎಸ್. ನಾರಾಯಣ್ ಅವರು, ರೈತ ಉತ್ಪಾದಕ ಕಂಪನಿಗಳಿಂದ ಅನೇಕ ಸಲಕರಣೆಗಳನ್ನು ಕೋಡಲಾಗಿದೆ. ಬೆಳೆಯುವ ಬೆಳೆಗಳಿಗೆ ಹೆಚ್ಚು ಇಳುವರಿ ಬರಲು ಸಾಧ್ಯವಾದಷ್ಟು ಮಾಹಿತಿಯನ್ನ ರೈತರಿಗೆ ಕೊಟ್ಟಿದ್ದೇವೆ. ರೈತರಿಗೆ ರಿಯಾತಿ ದರದಲ್ಲಿ ಕೀಟನಾಶಕಗಳು ರಸಗೊಬ್ಬರಗಳು ಪೂರೈಸಿದ್ದೇವೆ ಎಂದು ಹೇಳಿದರು.

ತೋಟಗಾರಿಕೆ ಇಲಾಖೆಯ ಲೆಕ್ಕಪರಿಶೋಧಕರಾದ ಶ್ಯಾಮಲ ಅವರು ಸಂಸ್ಥೆಯ ಆಯವ್ಯಯಗಳನ್ನು ಸಂಘದ ಸದಸ್ಯರಿಗೆ ತಿಳಿಸಿದರು.

ಇದೇ ಕಾರ್ಯಕ್ರಮದಲ್ಲಿ ಹಲ್ದೇನಹಳ್ಳಿ ರೈತ ಮುಖಂಡರಾದ ರಾಜಗೋಪಾಲ್ ಅವರ ಕೆಲವು ಪ್ರಶ್ನೆಗಳಿಗೆ ಸಂಸ್ಥೆಯ ಮುಖ್ಯ ಅಧಿಕಾರಿ ಸಿದ್ದರಾಜು ಉತ್ತರಿಸಿದರು. ಕೃಷಿ ಇಲಾಖೆಯ ಅನೇಕ ಅಧಿಕಾರಿಗಳು ಸಂಘದ ಸದಸ್ಯರಿಗೆ ಹಾಗೂ ರೈತರಿಗೆ ಬೆಳೆಗಳನ್ನು ಬೆಳೆಯಲು ಅಧುನಿಕವಾಗಿ ಸಲಹೆ ಗಳನ್ನ ನೀಡಿದರು. ಈ ವೇಳೆ ಕೃಷಿ ಉಪಕರಣಗಳ ವಸ್ತು ಪ್ರದರ್ಶನ ಆಯೋಜಿಸಲಾಗಿತ್ತು.

ಹತ್ತಾರು ರೈತರಿಗೆ ಸನ್ಮಾನ ಮಾಡಿ ಗೌರವಿಸಿದರು. ಈ ಕಾರ್ಯಕ್ರಮದಲ್ಲಿ ಆನೇಕಲ್ ತಾಲ್ಲೂಕಿನ ಸಹಾಯಕ ಕೃಷಿ ನಿರ್ದೇಶಕರಾದ ಕೆ.ದನಂಜಯ, ಆನೇಕಲ್ ತೋಟಗಾರಿಕೆ ಇಲಾಖೆ ಹಿರಿಯ ಸಹಾಯಕ ನಿರ್ದೇಶಕ

ಕೇಶವಮೂರ್ತಿ, ಮಾಜಿ ಜಿಲ್ಲಾ ಪಂಚಾಯತಿ ಸದಸ್ಯರಾದ ಮಂಚನಹಳ್ಳಿ ಸಂಪಂಗ್ಗಿರಾಮಯ್ಯ, ಹರೀಶ್ ರೆಡ್ಡಿ, ಮುರುಗೇಶ್, ಸುರೇಶ್, ಹಾಗೂ ಬೆಂಗಳೂರು ನಗರ ಜಿಲ್ಲೆಯ ಹೆಸರುಘಟ್ಟ ಸಂಸ್ಥೆಯ ತೋಟಗಾರಿಕೆ ಇಲಾಖೆಯ ನಿವೃತ್ತ ವಿಜ್ಞಾನಿಗಳಾದ ಬಿ.ನಾರಾಯಣಸ್ವಾಮಿ, ಆನೇಕಲ್ ತಾಲ್ಲೂಕು ಪಂಚಾಯತಿ ಅಧಿಕಾರಿ ಅನಿಲ್, ಆನೇಕಲ್ ತಾಲ್ಲೂಕಿನ ಕೃಷಿ ಇಲಾಖೆಯ ಹಾಗೂ ತೋಟಗಾರಿಕೆ ಇಲಾಖೆಯ ಎಲ್ಲಾ ಅಧಿಕಾರಿಗಳು ಭಾಗವಹಿಸಿದ್ದರು.
Author
Suddi Moola
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಶ್ರೀ ಶಂಕರಭಾರತಿ ಶಾಲೆಯ ವಾರ್ಷಿಕೋತ್ಸವ ಮಾರ್ಕ್‌ಸ್‌ ಕಾರ್ಡ್‌ಗಾಗಿ ಮಕ್ಕಳನ್ನು ತಯಾರು ಮಾಡಬೇಡಿ - ಬೆಳಗಲ್ಸಮಾಜ ಸೇವಾ ಮನೋಭಾವ ರೂಪಿಸಿಕೊಳ್ಳಿ - ಪ್ರೊ. ಶಿವಾನಂದ ಕೆಳಗಿನಮನಿಚನ್ನಪ್ಪ ಅವರಿಗೆ ರಾಜ್ಯಮಟ್ಟದ ಜ್ಯೋತಿಬಾ ಪುಲೆ ಪ್ರಶಸ್ತಿಜಿಲ್ಲಾ ಟಾಸ್‌‌ಕೆರ್ಸ್ ಸಮಿತಿ ಸಭೆ ‘ರೈತರಿಗೆ ಯಾವುದೇ ತೊಂದರೆಯಾಗದಂತೆ ನೋಡಿಕೊಳ್ಳಿ’ರಾಷ್ಟ್ರೀಯ ಹೆದ್ದಾರಿ ಪಕ್ಕದ ಜಮೀನುಗಳಿಗೆ ಹೋಗಲು ದಾರಿ ಮಾಡಿಕೊಡಲು ಆಗ್ರಹಜವಾಹರ ನವೋದಯ ವಿದ್ಯಾರ್ಥಿ ಪ್ರಜ್ವಲ್ ರಾಜ್ಯಕ್ಕೆ ಪ್ರಥಮಮುದಗಲ್ ಪಿಎಸ್‌ಐ ಸೇರಿ ಪೊಲೀಸರ ಅಮಾನತ್ತು ಮಾಡಲು ಒತ್ತಾಯಹುಲಿಕೇರಿ ಒತ್ತುವರಿಯಾಗಿದ್ದರೆ ಕ್ರಮ ಕೈಗೊಳ್ಳಲಿ - ಹಿಟ್ನಾಳಪಟ್ಟಣ ಸಹಕಾರ ಬ್ಯಾಾಂಕ್ ಮಹಾಮಂಡಳದ ನಿರ್ದೇಶಕರಿಗೆ ಡಿ.ಎಚ್.ಓ ಸನ್ಮಾನ ಗೆಳೆಯರ ಬಳಗದ ಬೆಂಬಲ, ನೌಕರರೊಂದಿಗಿನ ಒಳ್ಳೆಯ ಒಡನಾಟದಿಂದ ಉನ್ನತ ಸ್ಥಾನಮಾನಇಂದು ಗ್ರಾಮೀಣ ಭಾಗದ ವಿವಿಧ ಪ್ರದೇಶದಲ್ಲಿ ವಿದ್ಯುತ್ ವ್ಯತ್ಯಯ