Web Stories
Suddimoola News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

50ನೇ ವಸಂತಕ್ಕೆ ಕಾಲಿಟ್ಟ ಆನೇಕಲ್‌ ನವಜ್ಯೋತಿ ಕನ್ನಡ ಕಲಾ ಸಂಘ

ಸುದ್ದಿಮೂಲ ವಾರ್ತೆ

ಆನೇಕಲ್, ಜು 11 : ಸಮುದಾಯ ಹಾಗೂ ಜನಹಿತಕ್ಕಾಗಿ ಹಲವು ಕಾರ್ಯಕ್ರಮಗಳನ್ನು ರೂಪಿಸುವ ಮೂಲಕ ಸಾಮಾಜಿಕ ಕಾರ್ಯದಲ್ಲಿ ಸಂಘ ತೊಡಗಿಸಿಕೊಂಡಿದೆ ಎಂದು ಸಾಹಿತ್ಯೋಪಾಸಕ ಜಿ. ಮುನಿರಾಜು ಹೇಳಿದರು.

ಆನೇಕಲ್ ಪಟ್ಟಣದಲ್ಲಿರುವ ನವಜ್ಯೋತಿ ಕನ್ನಡ ಕಲಾ ಸಂಘ ಐವತ್ತು ವಸಂತಗಳನ್ನು ಪೂರೈಸುತ್ತಿರುವ ಅಂಗವಾಗಿ ಕನಕಮಹೋತ್ಸವ ವೇದಿಕೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.

ನವಜ್ಯೋತಿ ಸಂಘ ಪರಿಶುದ್ಧವಾದ ಅಮೃತದ ಮಡು ಅಥವಾ ತಿಳಿನೀರಿನ ಕೊಳವಿದ್ದಂತೆ. ಅದರ ಪದಾಧಿಕಾರಿಗಳು , ಸದಸ್ಯರು ಯಥಾಕೊಳದ ಪರಿಶುದ್ಧತೆಗೆ ಅಡ್ಡಿ ಉಂಟು ಮಾಡದಂತೆ ಎಚ್ಚರಿಕೆಯಿಂದ ಹೆಜ್ಜೆ ಇಡುವ ಮೂಲಕ ಸಂಘದ ಅಭಿವೃದ್ಧಿಗೆ ಶ್ರಮಿಸಿದ್ದಾರೆ. ಸಂಘ ಸಂಸ್ಥೆ ನೂರು ವಸಂತಗಳನ್ನು ಪೂರೈಸಲು ಅನುಕೂಲವಾಗುತ್ತದೆಯೇ ಹೊರತು ಯಥಾ ಕೊಳದಲ್ಲಿ ಮಿಂದು ಮದವೇರಿ ಮರ್ಧಿಸಿ, ಪರಿಶುದ್ಧ ನೀರಿನ ಕೊಳವನ್ನು ಮಲೀನಗೊಳಿಸುವಂತಹ ಎಮ್ಮೆಯಂತಹ ಸದಸ್ಯರು ಸಂಘದ ಏಳಿಗೆಗೆ ಬಾಧಕರಾಗುತ್ತಾರೆ. ಸಾಧನಾಶೀಲ ಸಂಘ-ಸಂಸ್ಥೆಗಳ ಪದಾಧಿಕಾರಿಗಳು ಎಮ್ಮೆ ಸ್ವಭಾವದ ಸದಸ್ಯರ ಬಗ್ಗೆ ಮುನ್ನೆಚ್ಚರಿಕೆಯಿಂದ ಇರಬೇಕಾದ ಅನಿವಾರ್ಯತೆ ಇದೆ ಎಂದು ಸಲಹೆ ನೀಡಿದರು.

ಪ್ರಾಸ್ತಾವಿಕವಾಗಿ ಮಾತನಾಡಿದ ವಿ. ಉಮಾಪತಿರವರು ಸಂಘ ನಡೆದು ಬಂದ ಹಾದಿ ಹಾಗೂ ಸಾಧನೆಗಳ ಬಗ್ಗೆ ಮೆಲುಕು ಹಾಕಿದರು. ಆನೇಕಲ್ ವಿಧಾನಸಭಾ ಕ್ಷೇತ್ರದ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ಆದೂರು ಪ್ರಕಾಶ್, ಸಂಘದ ಸಾಧನಾಶೀಲತೆಯ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದರು. ತಾ. ನಂ. ಕುಮಾರಸ್ವಾಮಿ ಹಾಗೂ ಎ. ವಿ. ವಸಂತರಾಜು ರವರು ನವ ಜ್ಯೋತಿ ಕನ್ನಡ ಕಲಾ ಸಂಘದ ಕಾರ್ಯವೈಖರಿಯನ್ನು ಸ್ಮರಿಸಿ ಹಾರೈಸಿದರು.

ನವಜ್ಯೋತಿ ಕನ್ನಡ ಕಲಾ ಸಂಘದ 50ನೇ ವರ್ಷದ ವಾರ್ಷಿಕೋತ್ಸವದ ನೆನಪಿನಲ್ಲಿ ಆನೇಕಲ್ ಪಟ್ಟಣದ ನರಸಮ್ಮ ವೆಂಕಟರಾಜು,ದೇವರಾಜು ,ನರಸಿಂಹಯ್ಯ ಮುಂತಾದವರನ್ನು ಈ ಸಂದರ್ಭದಲ್ಲಿ ಸನ್ಮಾನಿಸಲಾಯಿತು.

ಕಾರ್ಯಕ್ರಮದಲ್ಲಿ ಸಂಘದ ಪದಾಧಿಕಾರಿಗಳು ಹಾಗೂ ಸದಸ್ಯರು ಹಾಜರಿದ್ದರು.

ಆನೇಕಲ್ ತಾಲ್ಲೂಕು ಪ್ರಾ.ಶಾ.ಶಿ.ಸಂಘದ ಅಧ್ಯಕ್ಷರಾದ ಕೆ. ಚಂದ್ರಶೇಖರ್, ಖಜಾಂಚಿ ಎಂ. ಗೋವಿಂದರಾಜು, ಭುವನೇಶ್ವರ್, ಸೌಭಾಗ್ಯಮ್ಮ ಉಪಸ್ಥಿತರಿದ್ದರು.
Author
Suddi Moola
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಶ್ರೀ ಶಂಕರಭಾರತಿ ಶಾಲೆಯ ವಾರ್ಷಿಕೋತ್ಸವ ಮಾರ್ಕ್‌ಸ್‌ ಕಾರ್ಡ್‌ಗಾಗಿ ಮಕ್ಕಳನ್ನು ತಯಾರು ಮಾಡಬೇಡಿ - ಬೆಳಗಲ್ಸಮಾಜ ಸೇವಾ ಮನೋಭಾವ ರೂಪಿಸಿಕೊಳ್ಳಿ - ಪ್ರೊ. ಶಿವಾನಂದ ಕೆಳಗಿನಮನಿಚನ್ನಪ್ಪ ಅವರಿಗೆ ರಾಜ್ಯಮಟ್ಟದ ಜ್ಯೋತಿಬಾ ಪುಲೆ ಪ್ರಶಸ್ತಿಜಿಲ್ಲಾ ಟಾಸ್‌‌ಕೆರ್ಸ್ ಸಮಿತಿ ಸಭೆ ‘ರೈತರಿಗೆ ಯಾವುದೇ ತೊಂದರೆಯಾಗದಂತೆ ನೋಡಿಕೊಳ್ಳಿ’ರಾಷ್ಟ್ರೀಯ ಹೆದ್ದಾರಿ ಪಕ್ಕದ ಜಮೀನುಗಳಿಗೆ ಹೋಗಲು ದಾರಿ ಮಾಡಿಕೊಡಲು ಆಗ್ರಹಜವಾಹರ ನವೋದಯ ವಿದ್ಯಾರ್ಥಿ ಪ್ರಜ್ವಲ್ ರಾಜ್ಯಕ್ಕೆ ಪ್ರಥಮಮುದಗಲ್ ಪಿಎಸ್‌ಐ ಸೇರಿ ಪೊಲೀಸರ ಅಮಾನತ್ತು ಮಾಡಲು ಒತ್ತಾಯಹುಲಿಕೇರಿ ಒತ್ತುವರಿಯಾಗಿದ್ದರೆ ಕ್ರಮ ಕೈಗೊಳ್ಳಲಿ - ಹಿಟ್ನಾಳಪಟ್ಟಣ ಸಹಕಾರ ಬ್ಯಾಾಂಕ್ ಮಹಾಮಂಡಳದ ನಿರ್ದೇಶಕರಿಗೆ ಡಿ.ಎಚ್.ಓ ಸನ್ಮಾನ ಗೆಳೆಯರ ಬಳಗದ ಬೆಂಬಲ, ನೌಕರರೊಂದಿಗಿನ ಒಳ್ಳೆಯ ಒಡನಾಟದಿಂದ ಉನ್ನತ ಸ್ಥಾನಮಾನಇಂದು ಗ್ರಾಮೀಣ ಭಾಗದ ವಿವಿಧ ಪ್ರದೇಶದಲ್ಲಿ ವಿದ್ಯುತ್ ವ್ಯತ್ಯಯ