Web Stories
Suddimoola News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಮಾಜಿ ಶಾಸಕರಿಂದ ಶ್ಲಾಘನೆ

ಸುದ್ದಿಮೂಲ ವಾರ್ತೆ ರಾಯಚೂರು, ಫೆ.19:
ರಾಯಚೂರು ನಗರದ ವಾರ್ಡ್ 27ರ ನೀರಬಾವಿ ಕುಂಟಾ ಬಡಾವಣೆಯ ಸ್ಲಂ ನಿವಾಸಿಗಳಿಗೆ ಶಾಸಕ ಡಾ.ಶಿವರಾಜ ಪಾಟೀಲ ಹಾಗೂ ಮಾಜಿ ಶಾಸಕ ಪಾಪಾರೆಡ್ಡಿ ಜೊತೆಯಾಗಿ ವಸತಿ ಹಕ್ಕುಪತ್ರ ವಿತರಿಸಿದರು.
ಇಂದು ಬಡಾವಣೆಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಫಲಾನುಭವಿಗಳಿಗೆ ಸಾಂಕೇತಿಕವಾಗಿ ಹಕ್ಕು ಪತ್ರ ಹಾಲಿ ಶಾಸಕ ಡಾ.ಶಿವರಾಜ ಪಾಟೀಲ, ಮಾಜಿ ಶಾಸಕ ಎ.ಪಾಪಾರೆಡ್ಡಿ ವಿತರಿಸಿದರು.
ನಂತರ ಮಾತನಾಡಿದ ಮಾಜಿ ಶಾಸಕ ಎ.ಪಾಪಾರೆಡ್ಡಿ ಕ್ಷೇತ್ರದ ಸ್ಲಂ ನಿವಾಸಿಗಳಿಗೆ ಹಲವು ವರ್ಷಗಳ ಹಿಂದೆ ತಾವು ನಗರಸಭೆ ಅಧ್ಯಕ್ಷರಾಗಿದ್ದಾಗ ಕೊಳಚೆ ಪ್ರದೇಶದಲ್ಲಿ ನಿವೇಶನ ಮಾಡಿ, ಮನೆ ನಿರ್ಮಾಣಕ್ಕೆ ಅವಕಾಶ ನೀಡಿದ್ದೆ. ಆದರೆ, ವಾಸ, ಮನೆಯ ಹಕ್ಕುಪತ್ರಗಳಿರದೆ ಸೌಲಭ್ಯಗಳಿಂದ ವಂಚಿತರಾಗಿದ್ದರು. ಶಾಸಕ ಶಿವರಾಜ ಪಾಟೀಲ ಯಾರೂ ಇದುವರೆಗೆ ಮಾಡದ ಮಹತ್ವದ ಕೆಲಸ ಮಾಡಿದ್ದಾರೆ ಎಂದು ಶ್ಲಾಘಿಸಿದರು.
ಕ್ಷೇತ್ರದ ಅಭಿವೃದ್ದಿಗೆ ಅನುದಾನ ತಂದಿದ್ದು ಕೆಲಸ ಮಾಡುವವರಿಗೆ ಜನ ಬೆಂಬಲಿಸಿದರೆ ಮತ್ತಷ್ಟು ಹುಮ್ಮಸ್ಸು ಕೆಲಸ ಮಾಡಲು ಬರಲಿದೆ ಎಂದು ಪರೋಕ್ಷವಾಗಿ ಶಾಸಕರ ಪರ ವಹಿಸಿ ಮಾತನಾಡಿದರು.
ಶಾಸಕ ಡಾ.ಶಿವರಾಜ ಪಾಟೀಲ ಮಾತನಾಡಿ, ಕೊಳಚೆ ಪ್ರದೇಶದಲ್ಲಿರುವ ಜನರಿಗೆ ಹಕ್ಕು ಪತ್ರ ದೊರೆತು ಅವರ ಆಸ್ತಿ ಹೆಸರಿಗೆ ಉಳಿಯಬೇಕು ಎಂಬ ಆಶಯದೊಂದಿಗೆ ಸರ್ಕಾರದ ಮೇಲೆ ಒತ್ತಡ ತಂದು ಈಗ ಹಕ್ಕು ಪತ್ರ ವಿತರಿಸಲಾಗುತ್ತಿದೆ ಎಂದರು.
ಕಳೆದ ಬಾರಿ 4 ಕಾಲಂ ಮನೆ ನಿರ್ಮಾಣಕ್ಕೆ ಅವಕಾಶ ಇತ್ತು ಈಗ 6 ಕಾಲಂ ಮನೆ ನಿರ್ಮಿಸಲು ಅವಕಾಶ ಕೊಟ್ಟಿದ್ದು ಕೊಂಚ ವೆಚ್ಚ ಭರಿಸಿದರೆ ನಿಮಗೊಂದು ವಿಶಾಲವಾದ ಸ್ಥಳಲ್ಲಿ ಮನೆ ದೊರೆಯಲು ಸರ್ಕಾರ ನೆರವು ನೀಡಿದೆ. ಮುಂದಿನ ಚುನಾವಣೆಯಲ್ಲಿ ಆಶೀರ್ವಾದ ಮಾಡಿದರೆ ಮತ್ತಷ್ಟು ಅನುಕೂಲ ಆಗಲಿದೆ ಎಂದು ಮನವಿ ಮಾಡಿದರು.
ಈ ಸಂದರ್ಭದಲ್ಲಿ ನಗರಸಭೆ ಅಧ್ಯಕ್ಷೆ ಲಲಿತಾ ಕಡಗೋಲು,ಸದಸ್ಯ ಪಿ.ಶ್ರೀನಿವಾಸರೆಡ್ಡಿ, ಆರ್‌ಡಿಎ ಮಾಜಿ ಅಧ್ಯಕ್ಷ ಗೋಪಾಲರೆಡ್ಡಿ, ಆಂಜನೇಯ್ಯ ಕಡಗೋಲು, ಎನ್.ಶ್ರೀನಿವಾಸರೆಡ್ಡಿ ಸೇರಿ ಅನೇಕ ಮುಖಂಡರು, ಬಡಾವಣೆ ನಿವಾಸಿಗಳಿದ್ದರು.
Author
Suddi Moola
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಶ್ರೀ ಶಂಕರಭಾರತಿ ಶಾಲೆಯ ವಾರ್ಷಿಕೋತ್ಸವ ಮಾರ್ಕ್‌ಸ್‌ ಕಾರ್ಡ್‌ಗಾಗಿ ಮಕ್ಕಳನ್ನು ತಯಾರು ಮಾಡಬೇಡಿ - ಬೆಳಗಲ್ಸಮಾಜ ಸೇವಾ ಮನೋಭಾವ ರೂಪಿಸಿಕೊಳ್ಳಿ - ಪ್ರೊ. ಶಿವಾನಂದ ಕೆಳಗಿನಮನಿಚನ್ನಪ್ಪ ಅವರಿಗೆ ರಾಜ್ಯಮಟ್ಟದ ಜ್ಯೋತಿಬಾ ಪುಲೆ ಪ್ರಶಸ್ತಿಜಿಲ್ಲಾ ಟಾಸ್‌‌ಕೆರ್ಸ್ ಸಮಿತಿ ಸಭೆ ‘ರೈತರಿಗೆ ಯಾವುದೇ ತೊಂದರೆಯಾಗದಂತೆ ನೋಡಿಕೊಳ್ಳಿ’ರಾಷ್ಟ್ರೀಯ ಹೆದ್ದಾರಿ ಪಕ್ಕದ ಜಮೀನುಗಳಿಗೆ ಹೋಗಲು ದಾರಿ ಮಾಡಿಕೊಡಲು ಆಗ್ರಹಜವಾಹರ ನವೋದಯ ವಿದ್ಯಾರ್ಥಿ ಪ್ರಜ್ವಲ್ ರಾಜ್ಯಕ್ಕೆ ಪ್ರಥಮಮುದಗಲ್ ಪಿಎಸ್‌ಐ ಸೇರಿ ಪೊಲೀಸರ ಅಮಾನತ್ತು ಮಾಡಲು ಒತ್ತಾಯಹುಲಿಕೇರಿ ಒತ್ತುವರಿಯಾಗಿದ್ದರೆ ಕ್ರಮ ಕೈಗೊಳ್ಳಲಿ - ಹಿಟ್ನಾಳಪಟ್ಟಣ ಸಹಕಾರ ಬ್ಯಾಾಂಕ್ ಮಹಾಮಂಡಳದ ನಿರ್ದೇಶಕರಿಗೆ ಡಿ.ಎಚ್.ಓ ಸನ್ಮಾನ ಗೆಳೆಯರ ಬಳಗದ ಬೆಂಬಲ, ನೌಕರರೊಂದಿಗಿನ ಒಳ್ಳೆಯ ಒಡನಾಟದಿಂದ ಉನ್ನತ ಸ್ಥಾನಮಾನಇಂದು ಗ್ರಾಮೀಣ ಭಾಗದ ವಿವಿಧ ಪ್ರದೇಶದಲ್ಲಿ ವಿದ್ಯುತ್ ವ್ಯತ್ಯಯ