Web Stories
Suddimoola News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಬಾಲ್ಯ ವಿವಾಹಕ್ಕೆ ಬಡತನವೇ ಕಾರಣ : ನ್ಯಾ. ಅರುಣ್ ಕುಮಾರ್

ಸುದ್ದಿಮೂಲ ವಾರ್ತೆ

ಹೊಸಕೋಟೆ ನ. 04 : ಗ್ರಾಮೀಣ ಬಾಗದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಬಾಲ್ಯ ವಿವಾಹಗಳು ಹೆಚ್ಚುತಿದ್ದು ಇದನ್ನು ತಡೆಯಲು ಪ್ರತಿಯೊಬ್ಬರೂ ಪಣ ತೊಡಗುವುದರ ಮೂಲಕ ಸಮಾಜದಲ್ಲಿನ ಮೌಡ್ಯತೆ ತೊಳೆದುಹಾಕಬೇಕು ಎಂದು ಹಿರಿಯ ಸಿವಿಲ್ ನ್ಯಾಯಾದೀಶ ಅರುಣ್ ಕುಮಾರ್ ಜಿ. ತಿಳಿಸಿದರು.

ಹೊಸಕೋಟೆ ನಗರದ ಸರ್ಕಾರಿ ಬಾಲಕಿಯರ ಪ್ರಥಮ ದರ್ಜೆ ಕಾಲೇಜಿನಲ್ಲಿ ಬಾಲ್ಯ ವಿವಾಹ ಮುಕ್ತ ಕರ್ನಾಟಕ ನಿರ್ಮಾಣ ಕಾರ್ಯಕ್ರಮದಡಿ ಕಾನೂನು ಅರಿವು ನೆರವು ಕಾರ್ಯಕ್ರಮವನ್ನು ಶುಕ್ರವಾರ ಹಮ್ಮಿಕೊಳ್ಳಲಾಗಿತ್ತು.

ಈ ಸಂದರ್ಭದಲ್ಲಿ ಮಾತನಾಡಿದ ಆವರು ಬಾಲ್ಯ ವಿವಾಹದಿಂದ ಹೆಣ್ಣು ಮಗುಗೆಗೆ ತೀವ್ರ ತರಹದ ಆರೋಗ್ಯ ಸಮಸ್ಯೆಗಳು ಹೆಚ್ಚುತ್ತದೆ. ಹೆಣ್ಣು ಮಕ್ಕಳಲ್ಲಿ ಮದುವೆಯ ವಯಸ್ಸು 18 ವಯಸ್ಸಿಗೂ ಮೊದಲು ಮದುವೆಯಾದಲ್ಲಿ ಸೂಕ್ತ ಬೆಳವಣಿಗೆ ಆಗದೆ ಇರುವುದು, ದೇಶದಲ್ಲಿ ಅಪೌಷ್ಟಿಕತೆ ಸಮಸ್ಯೆ, ಹುಟ್ಟುವ ಮಗುವಿಗೆ ವಿಕಲಾಂಗತೆ ಸಮಸ್ಯೆಗಳು ಹೆಚ್ಚಾಗಿ ಬರುವ ಕಾರಣ ಪುರುಷರಿಗೆ ಕನಿಷ್ಟ 21 ವರ್ಷ ಹಾಗೂ ಮಹಿಳೆಯರಿಗೆ ಕನಿಷ್ಟ 18 ವರ್ಷದ ನಂತರವಷ್ಟೇ ಮದುವೆ ಮಾಡಬೇಕು ಎಂದರು.

ಮಾಲೀಕರ ಸಂಘದ ಅಧ್ಯಕ್ಷ ಎಂ.ವೆಂಕಟಸ್ವಾಮಿ ಮಾತನಾಡಿ, ಹಿರಿಯರ ಒತ್ತಡಕ್ಕೆ ಅಥವ ಬಡತನಕ್ಕೆ ಒಳಗಾಗಿ ಹೆಣ್ಣು ಮಕ್ಕಳು ಬಾಲ್ಯ ವಿವಾಹ ಮಾಡಿಕೊಳ್ಳಬಾರದು, ಇಂತ ವಿಚಾರಗಳನ್ನು ದೈರ್ಯದಿಂದ ಎದುರಿಸುವ ಪ್ರವೃತ್ತಿ ಬೆಳೆಸಿಕೊಳ್ಳಿ ಹಾಗೂ ನಿಮ್ಮ ನೆರೆ ಹೊರೆಗಳಲ್ಲಿ ಇಂತಹ ಪ್ರಕರಣ ನಡೆಯುತಿದ್ದರೆ ಮಕ್ಕಳ ಸಹಾಯವಾಣಿಗೆ ಕರೆ ಮಾಡುವ ಮೂಲಕ ಸಂಭವಿಸಬಹುದಾದ ಅನಾಹುತಗಳನ್ನು ಧೈರ್ಯದಿಂದ ತಡೆಯಬೇಕು ಎಂದರು.

ಈ ಕಾರ್ಯಕ್ರಮದಲ್ಲಿ ಪ್ರಧಾನ ಸಿವಿಲ್ ನ್ಯಾಯಾದೀಶ ಬಸವರಾಜ್ ಜಿ ಸನದಿ, ಹೆಚ್ಚುವರಿ ಸಿವಿಲ್ ನ್ಯಾಯಾದೀಶೆ ಚೈತ್ರ ವಿ ಕುಲಕರ್ಣಿ, ಶಿಶು ಅಭಿವೃದ್ದಿ ಯೋಜನಾಧಿಕಾರಿ ವಿಧ್ಯಾ ವಸ್ತçದ್,ಪ್ರಾಂಶುಪಾಲ ಚಂದ್ರ ಮರ್ಕಲ್, ವಕೀಲರ ಸಂಘದ ಉಪಾಧ್ಯಕ್ಷ ಕೆ ನಾಗರಾಜ್,ಪ್ರಧಾನ ಕಾರ್ಯದರ್ಶಿ ಎಂ.ವಿ ನವೀನ್ ಕುಮಾರ್, ಜಂಟಿ ಕಾರ್ಯದರ್ಶಿ ಟಿಕೆ ಮುನಿರಾಜ್,ಖಜಾಂಚಿ ಕೆ ಎಂ ರವಿಕುಮಾರ್ ಹಾಗೂ ಸಂಪನ್ಮೂಲ ವ್ಯಕ್ತಿಬಿ ಎಂ ಅನಂತ್ ಪ್ರಭಾಕರ್ ಮೊದಲಾದವರು ಹಾಜರಿದ್ದರು.
Author
Suddi Moola
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಶ್ರೀ ಶಂಕರಭಾರತಿ ಶಾಲೆಯ ವಾರ್ಷಿಕೋತ್ಸವ ಮಾರ್ಕ್‌ಸ್‌ ಕಾರ್ಡ್‌ಗಾಗಿ ಮಕ್ಕಳನ್ನು ತಯಾರು ಮಾಡಬೇಡಿ - ಬೆಳಗಲ್ಸಮಾಜ ಸೇವಾ ಮನೋಭಾವ ರೂಪಿಸಿಕೊಳ್ಳಿ - ಪ್ರೊ. ಶಿವಾನಂದ ಕೆಳಗಿನಮನಿಚನ್ನಪ್ಪ ಅವರಿಗೆ ರಾಜ್ಯಮಟ್ಟದ ಜ್ಯೋತಿಬಾ ಪುಲೆ ಪ್ರಶಸ್ತಿಜಿಲ್ಲಾ ಟಾಸ್‌‌ಕೆರ್ಸ್ ಸಮಿತಿ ಸಭೆ ‘ರೈತರಿಗೆ ಯಾವುದೇ ತೊಂದರೆಯಾಗದಂತೆ ನೋಡಿಕೊಳ್ಳಿ’ರಾಷ್ಟ್ರೀಯ ಹೆದ್ದಾರಿ ಪಕ್ಕದ ಜಮೀನುಗಳಿಗೆ ಹೋಗಲು ದಾರಿ ಮಾಡಿಕೊಡಲು ಆಗ್ರಹಜವಾಹರ ನವೋದಯ ವಿದ್ಯಾರ್ಥಿ ಪ್ರಜ್ವಲ್ ರಾಜ್ಯಕ್ಕೆ ಪ್ರಥಮಮುದಗಲ್ ಪಿಎಸ್‌ಐ ಸೇರಿ ಪೊಲೀಸರ ಅಮಾನತ್ತು ಮಾಡಲು ಒತ್ತಾಯಹುಲಿಕೇರಿ ಒತ್ತುವರಿಯಾಗಿದ್ದರೆ ಕ್ರಮ ಕೈಗೊಳ್ಳಲಿ - ಹಿಟ್ನಾಳಪಟ್ಟಣ ಸಹಕಾರ ಬ್ಯಾಾಂಕ್ ಮಹಾಮಂಡಳದ ನಿರ್ದೇಶಕರಿಗೆ ಡಿ.ಎಚ್.ಓ ಸನ್ಮಾನ ಗೆಳೆಯರ ಬಳಗದ ಬೆಂಬಲ, ನೌಕರರೊಂದಿಗಿನ ಒಳ್ಳೆಯ ಒಡನಾಟದಿಂದ ಉನ್ನತ ಸ್ಥಾನಮಾನಇಂದು ಗ್ರಾಮೀಣ ಭಾಗದ ವಿವಿಧ ಪ್ರದೇಶದಲ್ಲಿ ವಿದ್ಯುತ್ ವ್ಯತ್ಯಯ