Web Stories
Suddimoola News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಜಿ.ಡಿ.ಪಾರ್ಕ್ ಬಡಾವಣೆಯಲ್ಲಿ ಅಶ್ವತ್ಥ ನಾರಾಯಣ ಪಾದಯಾತ್ರೆ

ಸುದ್ದಿಮೂಲ ವಾರ್ತೆ

ಬೆಂಗಳೂರು,ಏ.21: ಮಲ್ಲೇಶ್ವರ ವಿಧಾನಸಭಾ ಕ್ಷೇತ್ರದ ಗಾಯತ್ರೀದೇವಿ ಪಾರ್ಕ್ ಬಡಾವಣೆಯಲ್ಲಿ ಬಿಜೆಪಿ ಅಭ್ಯರ್ಥಿ ಮತ್ತು ಹಾಲಿ ಶಾಸಕ ಡಾ.ಸಿ ಎನ್ ಅಶ್ವತ್ಥ ನಾರಾಯಣ ಅವರು ಶುಕ್ರವಾರ ಲವಲವಿಕೆಯಿಂದ ಪಾದಯಾತ್ರೆ ಮಾಡಿ, ಚುನಾವಣೆ ಅಖಾಡದಲ್ಲಿ ರಂಗೇರಿಸಿದರು.

[video width="640" height="352" mp4="https://suddimoola.in/wp-content/uploads/2023/04/WhatsApp-Video-2023-04-21-at-12.57.26-PM.mp4"][/video]

 

ಬೆಳಿಗ್ಗೆ ಜನರು ವಾಯುವಿಹಾರದ ಲಹರಿಯಲ್ಲಿ ಇದ್ದಾಗಲೇ ಬಡಾವಣೆಯಲ್ಲಿ ಪ್ರತ್ಯಕ್ಷರಾದ ಅವರು, ಪ್ರದೇಶದ ಎಲ್ಲ ರಸ್ತೆಗಳ ಮನೆಮನೆಗೂ ಖುದ್ದಾಗಿ ತೆರಳಿ, ನಾಲ್ಕನೇ ಬಾರಿಗೆ ತಮಗೆ ಆಶೀರ್ವದಿಸುವಂತೆ ಪ್ರಾರ್ಥಿಸಿದರು.

ಬಡಾವಣೆಯ ಇಕ್ಕೆಲಗಳಲ್ಲೂ ಆಬಾಲವೃದ್ಧರಾದಿಯಾಗಿ ಜನರು ತಮ್ಮ ಮನೆಗಳ ಮುಂದೆ ಸಾಲುಗಟ್ಟಿ ನಿಂತು, ಅವರನ್ನು ಸ್ವಾಗತಿಸಿದರು. ಹಲವೆಡೆಗಳಲ್ಲಿ ಶಾಸಕರ ಕೈ ಕುಲುಕಿದ ಮಕ್ಕಳು, ಅವರೊಂದಿಗೆ ಸೆಲ್ಫಿ ಕ್ಲಿಕ್ಕಿಸಿಕೊಂಡು ಸಂಭ್ರಮಿಸಿದವು. ಹಾಗೆಯೇ ಹಲವು ಸ್ಥಳಗಳಲ್ಲಿ ಅವರಿಗೆ ಪುಷ್ಪಮಾಲೆ ಹಾಕಿ, ಹರಸಿದರು.

ಸಾರ್ವಜನಿಕರು ಈಗಾಗಲೇ ಮಲ್ಲೇಶ್ವರದಲ್ಲಿ ಆಗಿರುವ ಅಭಿವೃದ್ಧಿ ಕಾಮಗಾರಿಗಳ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದರು. ಹಾಗೆಯೇ , ಬಡಾವಣೆ ಯಲ್ಲಿ ಇನ್ನೂ ಆಗಬೇಕಿರುವ ಕೆಲಸಗಳ ಬಗ್ಗೆ ಕೇಳಿ ತಿಳಿದುಕೊಂಡರು.

ಜತೆಯಲ್ಲಿದ್ದ ಬಿಜೆಪಿ ಕಾರ್ಯಕರ್ತರು ಮತ್ತು ಅಭಿಮಾನಿಗಳು, ಪಾದಯಾತ್ರೆಯ ಉದ್ದಕ್ಕೂ ಬಿಜೆಪಿ ಪರವಾಗಿ ತಾರಕ ಸ್ವರದಿಂದ ಜಯಘೋಷಗಳನ್ನು ಹಾಕುತ್ತಿದ್ದರು.

 
Author
Suddi Moola
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಶ್ರೀ ಶಂಕರಭಾರತಿ ಶಾಲೆಯ ವಾರ್ಷಿಕೋತ್ಸವ ಮಾರ್ಕ್‌ಸ್‌ ಕಾರ್ಡ್‌ಗಾಗಿ ಮಕ್ಕಳನ್ನು ತಯಾರು ಮಾಡಬೇಡಿ - ಬೆಳಗಲ್ಸಮಾಜ ಸೇವಾ ಮನೋಭಾವ ರೂಪಿಸಿಕೊಳ್ಳಿ - ಪ್ರೊ. ಶಿವಾನಂದ ಕೆಳಗಿನಮನಿಚನ್ನಪ್ಪ ಅವರಿಗೆ ರಾಜ್ಯಮಟ್ಟದ ಜ್ಯೋತಿಬಾ ಪುಲೆ ಪ್ರಶಸ್ತಿಜಿಲ್ಲಾ ಟಾಸ್‌‌ಕೆರ್ಸ್ ಸಮಿತಿ ಸಭೆ ‘ರೈತರಿಗೆ ಯಾವುದೇ ತೊಂದರೆಯಾಗದಂತೆ ನೋಡಿಕೊಳ್ಳಿ’ರಾಷ್ಟ್ರೀಯ ಹೆದ್ದಾರಿ ಪಕ್ಕದ ಜಮೀನುಗಳಿಗೆ ಹೋಗಲು ದಾರಿ ಮಾಡಿಕೊಡಲು ಆಗ್ರಹಜವಾಹರ ನವೋದಯ ವಿದ್ಯಾರ್ಥಿ ಪ್ರಜ್ವಲ್ ರಾಜ್ಯಕ್ಕೆ ಪ್ರಥಮಮುದಗಲ್ ಪಿಎಸ್‌ಐ ಸೇರಿ ಪೊಲೀಸರ ಅಮಾನತ್ತು ಮಾಡಲು ಒತ್ತಾಯಹುಲಿಕೇರಿ ಒತ್ತುವರಿಯಾಗಿದ್ದರೆ ಕ್ರಮ ಕೈಗೊಳ್ಳಲಿ - ಹಿಟ್ನಾಳಪಟ್ಟಣ ಸಹಕಾರ ಬ್ಯಾಾಂಕ್ ಮಹಾಮಂಡಳದ ನಿರ್ದೇಶಕರಿಗೆ ಡಿ.ಎಚ್.ಓ ಸನ್ಮಾನ ಗೆಳೆಯರ ಬಳಗದ ಬೆಂಬಲ, ನೌಕರರೊಂದಿಗಿನ ಒಳ್ಳೆಯ ಒಡನಾಟದಿಂದ ಉನ್ನತ ಸ್ಥಾನಮಾನಇಂದು ಗ್ರಾಮೀಣ ಭಾಗದ ವಿವಿಧ ಪ್ರದೇಶದಲ್ಲಿ ವಿದ್ಯುತ್ ವ್ಯತ್ಯಯ