Web Stories
Suddimoola News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಸುಬ್ರಹ್ಮಣ್ಯ ನಗರದಲ್ಲಿ ಅಶ್ವತ್ಥನಾರಾಯಣ ಪಾದಯಾತ್ರೆ

ಸುದ್ದಿಮೂಲ ವಾರ್ತೆ

ಬೆಂಗಳೂರು,ಏ.22: ದೇಶದ ಬಗ್ಗೆ ಕಾಳಜಿ ಇರುವ ಬಿಜೆಪಿ ಭಾರತೀಯರ ಪಕ್ಷವಾಗಿದೆ. ಅಧಿಕಾರಕ್ಕೆ ಬರುವ ಹಗಲುಗನಸು ಕಾಣುತ್ತಿರುವ ಕಾಂಗ್ರೆಸ್ ಇಂಪೋರ್ಟೆಡ್ ಪಕ್ಷವಾಗಿದೆ ಎಂದು ಮಲ್ಲೇಶ್ವರ ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಆಗಿರುವ ಸಚಿವ ಡಾ.ಸಿ ಎನ್ ಅಶ್ವತ್ಥ ನಾರಾಯಣ ಕುಟುಕಿದ್ದಾರೆ.

ಸುಬ್ರಹ್ಮಣ್ಯ ನಗರದ 'ಇ' ಬ್ಲಾಕ್‌ನ ಹಲವೆಡೆಗಳಲ್ಲಿ ಅವರು ಶನಿವಾರ ಬೆಳಿಗ್ಗೆ ಮನೆಮನೆಗೆ ತೆರಳಿ ಮತ ಯಾಚನೆ ಮಾಡಿ, ಮಾತನಾಡಿದರು.

ಬಿಜೆಪಿ ನಿಜವಾದ ಅರ್ಥದಲ್ಲಿ ಜನರಿಗೆ ಸ್ಪಂದಿಸುತ್ತಿದೆ. ಮಲ್ಲೇಶ್ವರ ಕ್ಷೇತ್ರವನ್ನು ಜಗತ್ತಿನಲ್ಲೇ ಮಾದರಿ ಕ್ಷೇತ್ರವೆನ್ನುವಂತೆ ಅಭಿವೃದ್ಧಿ ಪಡಿಸುವುದು ತಮ್ಮ ಕನಸಾಗಿದೆ ಎಂದು ಅವರು ಭರವಸೆ ನೀಡಿದರು.

ಕೋವಿಡ್ ನಂತರ ತಂತ್ರಜ್ಞಾನದ ಬಳಕೆ ಮುಂಚೂಣಿಗೆ ಬಂದಿದೆ. ನಗರ ನಿರ್ಮಾಣದ ವಿಧಾನವೂ ಈಗ ಬದಲಾಗಿದೆ. ಈ ಹಿನ್ನೆಲೆಯಲ್ಲಿ ಬೆಂಗಳೂರನ್ನು ಎಲ್ಲ ವರ್ಗಗಳ ಜನರ ಕೈಗೂ ಎಟುಕುವಂತಹ ನಗರವನ್ನಾಗಿ ರೂಪಿಸುವುದು ಬಿಜೆಪಿಯ ಹೆಬ್ಬಯಕೆಯಾಗಿದೆ ಎಂದು ಅವರು ನುಡಿದರು.

ಬಿಜೆಪಿಯು ಕೋವಿಡ್ ನಿರ್ವಹಣೆ, ಗಡಿ ಸುರಕ್ಷೆ, ಕುಡಿಯುವ ನೀರು, ಶೌಚಾಲಯ, ಶಿಕ್ಷಣ, ಹೂಡಿಕೆ, ಉದ್ಯಮಶೀಲತೆ ಹೀಗೆ ಎಲ್ಲದರಲ್ಲೂ ಸಮಗ್ರ ಪ್ರಗತಿಯನ್ನು ಸಾಧಿಸುವಂತಹ ಯೋಜನೆಗಳನ್ನು ರೂಪಿಸಿದೆ. ಉಳಿದ ಪಕ್ಷಗಳಿಗೆ ಇಂತಹ ಒಂದು ಸಣ್ಣ ಕಲ್ಪನೆಯೂ ಇಲ್ಲ ಎಂದು ಅವರು ಟೀಕಿಸಿದರು.

ಪಾದಯಾತ್ರೆಯ ಉದ್ದಕ್ಕೂ ಭಾರತ್ ಮಾತಾ ಕೀ ಜೈ, ವೋಟು ಕೊಡಿ ವೋಟು ಕೊಡಿ-ಬಿಜೆಪಿಗೆ ವೋಟು ಕೊಡಿ, ಬರ್ತಾರಣ್ಣ ಬರ್ತಾರೆ-ಅಶ್ವತ್ಥಣ್ಣ ಬರ್ತಾರೆ ಮುಂತಾದ ಘೋಷಣೆಗಳು ಮೊಳಗಿದವು.

ಬಿಜೆಪಿ ಮುಖಂಡರಾದ ಪಾಲಿಕೆ ಮಾಜಿ ಸದಸ್ಯ ಮಂಜುನಾಥ, ವಾರ್ಡ್ ಅಧ್ಯಕ್ಷ ಯೋಗೇಶ ಸೇರಿದಂತೆ ಇತರರು ಇದ್ದರು.
Author
Suddi Moola
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಶ್ರೀ ಶಂಕರಭಾರತಿ ಶಾಲೆಯ ವಾರ್ಷಿಕೋತ್ಸವ ಮಾರ್ಕ್‌ಸ್‌ ಕಾರ್ಡ್‌ಗಾಗಿ ಮಕ್ಕಳನ್ನು ತಯಾರು ಮಾಡಬೇಡಿ - ಬೆಳಗಲ್ಸಮಾಜ ಸೇವಾ ಮನೋಭಾವ ರೂಪಿಸಿಕೊಳ್ಳಿ - ಪ್ರೊ. ಶಿವಾನಂದ ಕೆಳಗಿನಮನಿಚನ್ನಪ್ಪ ಅವರಿಗೆ ರಾಜ್ಯಮಟ್ಟದ ಜ್ಯೋತಿಬಾ ಪುಲೆ ಪ್ರಶಸ್ತಿಜಿಲ್ಲಾ ಟಾಸ್‌‌ಕೆರ್ಸ್ ಸಮಿತಿ ಸಭೆ ‘ರೈತರಿಗೆ ಯಾವುದೇ ತೊಂದರೆಯಾಗದಂತೆ ನೋಡಿಕೊಳ್ಳಿ’ರಾಷ್ಟ್ರೀಯ ಹೆದ್ದಾರಿ ಪಕ್ಕದ ಜಮೀನುಗಳಿಗೆ ಹೋಗಲು ದಾರಿ ಮಾಡಿಕೊಡಲು ಆಗ್ರಹಜವಾಹರ ನವೋದಯ ವಿದ್ಯಾರ್ಥಿ ಪ್ರಜ್ವಲ್ ರಾಜ್ಯಕ್ಕೆ ಪ್ರಥಮಮುದಗಲ್ ಪಿಎಸ್‌ಐ ಸೇರಿ ಪೊಲೀಸರ ಅಮಾನತ್ತು ಮಾಡಲು ಒತ್ತಾಯಹುಲಿಕೇರಿ ಒತ್ತುವರಿಯಾಗಿದ್ದರೆ ಕ್ರಮ ಕೈಗೊಳ್ಳಲಿ - ಹಿಟ್ನಾಳಪಟ್ಟಣ ಸಹಕಾರ ಬ್ಯಾಾಂಕ್ ಮಹಾಮಂಡಳದ ನಿರ್ದೇಶಕರಿಗೆ ಡಿ.ಎಚ್.ಓ ಸನ್ಮಾನ ಗೆಳೆಯರ ಬಳಗದ ಬೆಂಬಲ, ನೌಕರರೊಂದಿಗಿನ ಒಳ್ಳೆಯ ಒಡನಾಟದಿಂದ ಉನ್ನತ ಸ್ಥಾನಮಾನಇಂದು ಗ್ರಾಮೀಣ ಭಾಗದ ವಿವಿಧ ಪ್ರದೇಶದಲ್ಲಿ ವಿದ್ಯುತ್ ವ್ಯತ್ಯಯ