Web Stories
Suddimoola News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಚುನಾವಣೆಗೂ ಮೊದಲೇ ಸೋಲೊಪ್ಪಿಕೊಂಡ ಕಾಂಗ್ರೆಸ್: ಅಶ್ವತ್ಥನಾರಾಯಣ್

ಸುದ್ದಿಮೂಲ ವಾರ್ತೆ

ಬೆಂಗಳೂರು, ಏ.6: ಕರ್ನಾಟಕದ ಅಸೆಂಬ್ಲಿ ಚುನಾವಣೆಯ ಕಾವು ದಿನೇದಿನೇ ಏರುತ್ತಿರುವ ಸಂದರ್ಭದಲ್ಲಿ ಕಾಂಗ್ರೆಸ್ ಪಕ್ಷವು ತನ್ನ ಸೋಲನ್ನು ಚುನಾವಣೆ ಎದುರಿಸುವ ಮೊದಲೇ ಒಪ್ಪಿಕೊಂಡತ್ತದೆ ಎಂದು ಬಿಜಿಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ಅಶ್ವತ್ಥನಾರಾಯಣ್ ರವರು ತಿಳಿಸಿದ್ದಾರೆ.

ಕಾಂಗ್ರೆಸ್ ರಾಜ್ಯ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲ ಅವರ ಹೇಳಿಕೆಯನ್ನು ಗಮನಿಸಿದಾಗ ಇದು ಸ್ಪಷ್ಟವಾಗುತ್ತಿದೆ ಎಂದಿರುವ ಅವರು ಕಾಂಗ್ರೆಸ್ ಮುಖಂಡರ ಮೇಲೆ ಐಟಿ, ಇಡಿ ದಾಳಿ ನಡೆಯಲಿದೆ ಎಂಬ ಸುರ್ಜೇವಾಲ ಹೇಳಿಕೆ ಅವರ ಹತಾಶ ಮನೋಭಾವದ ಸ್ಪಷ್ಟ ಪ್ರತೀಕ ಎಂದು ತಿಳಿಸಿದ್ದಾರೆ.

ದೇಶದ ವಿವಿಧ ಕಡೆ ಪ್ರತಿ ಚುನಾವಣೆ ನಡೆದ ಸಂದರ್ಭದಲ್ಲಿ ಕಾಂಗ್ರೆಸ್ ತನ್ನ ಸೋಲಿಗೆ ಒಂದಲ್ಲ ಒಂದು ಕಾರಣ ಹುಡುಕುತ್ತದೆ. ಒಮ್ಮೆ ಇವಿಎಂ ಸರಿ ಇಲ್ಲ ಎನ್ನುವುದು, ಚುನಾವಣೆ ಆಯೋಗ ಸರಿ ಇಲ್ಲ ಎನ್ನುವುದು, ಭಾರತದ ಅನೇಕ ಸ್ವಾಯತ್ತ ಸಂಸ್ಥೆಗಳು ಸರಿ ಇಲ್ಲ ಎನ್ನುವ ಕುಂಟು ನೆಪ ಹುಡುಕುವ ಕೆಲಸ ಮಾಡುತ್ತಿದೆ ಎಂದು ಟೀಕಿಸಿದ್ದಾರೆ.

ಸುರ್ಜೇವಾಲಾ ಮತ್ತು ಮುಖಂಡ ಸಿದ್ದರಾಮಯ್ಯನವರ ಹೇಳಿಕೆ ಪ್ರಸ್ತುತ ಚರ್ಚೆಯ ವಿಷಯ. ಅವರ ಹೇಳಿಕೆ ಗಮನಿಸಿದಾಗ ಅವರ ಸೋಲಿನ ಮನಸ್ಥಿತಿ, ದಿಗಿಲು, ಭಯ ಅರ್ಥವಾಗುತ್ತದೆ. ಕೇಂದ್ರವು ವಿವಿಧ ಏಜೆನ್ಸಿಗಳನ್ನು ಬಳಸಿಕೊಳ್ಳುತ್ತಿದೆ ಎಂಬ ಅವರ ಟೀಕೆಯು ಕಾಂಗ್ರೆಸ್ ಈ ಹಿಂದಿನ ದಿನಗಳಲ್ಲಿ ದೇಶವನ್ನು ಆಳುತ್ತದ್ದ ಸಂದರ್ಭದಲ್ಲಿ ಮಾಡುತ್ತಿದ್ದ ಕುತಂತ್ರವನ್ನು ಅನಾವರಣಗೊಳಿಸಿದೆ ಎಂದು ಅವರು ತಿಳಿಸಿದ್ದಾರೆ.

ಕಾಂಗ್ರೆಸ್ಸಿಗೆ ಅದರ ಸ್ಥಾನ ಅರಿವಾಗಿದೆ. ರಾಜ್ಯದ ಜನರ ಅತ್ಯಂತ ದೊಡ್ಡ ಪ್ರಮಾಣದ ಜನಬೆಂಬಲ ಬಿಜೆಪಿಗೆ ವ್ಯಕ್ತವಾಗುತ್ತಿದೆ. ಆದರಣೀಯ ನರೇಂದ್ರ ಮೋದಿ, ಅಮೀತ್‍ಶಾ, ಜೆ.ಪಿ ನಡ್ಡಾ ಅವರ ಪ್ರವಾಸದ ನಂತರವಂತೂ ಕರ್ನಾಟಕದ ಜನರು ದೊಡ್ಡ ಪ್ರಮಾಣದಲ್ಲಿ ಬಿಜೆಪಿಗೆ ಬೆಂಬಲ ಕೊಡುವುದು ಕಾಣುತ್ತಿದೆ. ವಿಜಯ ಸಂಕಲ್ಪ ಯಾತ್ರೆಯ ಮೂಲಕ ರಾಜ್ಯದೆಲ್ಲೆಡೆ ಪ್ರವಾಸ ಮಾಡಿದಾಗ ಲಕ್ಷಾಂತರ ಜನರು ಬೆಂಬಲ ಸೂಚಿಸಿ ಪಾಲ್ಗೊಂಡಿದ್ದಾರೆ. ಹೊಸದಾಗಿ ಸೇರ್ಪಡೆಯಾದ 12 ಲಕ್ಷಕ್ಕೂ ಹೆಚ್ಚು ಯುವ ಮತದಾರರು ಬಿಜೆಪಿಯನ್ನು ಅಭಿವೃದ್ಧಿಗಾಗಿ ಬೆಂಬಲಿಸುವ ಸ್ಪಷ್ಟ ಸೂಚನೆ ಇದೆ ಎಂದು ಅವರು ತಮ್ಮ ಹೇಳಿಕೆಯಲ್ಲಿ ವಿಶ್ವಾಸ ವ್ಯಕ್ತಪಡಿಸಿದ್ದಾರೆ.

ಅಧಿಕಾರ ದಾಹಕ್ಕಾಗಿ ಡಿಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯನವರ ನಡುವೆ ನಡೆಯುತ್ತಿರುವ ನಿಲ್ಲದ ಕದನವು ಸೋಲಿಗೆ ಕಾರಣವಾಗಲಿದೆ. ಕಾಂಗ್ರೆಸ್ ಪಕ್ಷವು ಕುತಂತ್ರ, ಹತಾಶ ಮತ್ತು ಅನೈತಿಕ ರಾಜಕಾರಣವನ್ನು ಕಾಣುತ್ತಿದೆ. ಬೇರೆಲ್ಲ ರಾಜ್ಯಗಳಲ್ಲಿ ಕಾಂಗ್ರೆಸ್ ಮುಕ್ತ ರಾಜಕೀಯವನ್ನು ಜನತೆ ಮಾಡಿದ ಹಾಗೆಯೇ ಕರ್ನಾಟಕದ ಜನತೆಯೂ ಬಹಳ ಪ್ರಬುದ್ಧರಿದ್ದಾರೆ. ಮಹಾತ್ಮ ಗಾಂಧಿಯವರು ಹೇಳಿದ ಹಾಗೆ ಕಾಂಗ್ರೆಸ್ ವಿಸರ್ಜಿಸುವ ಕಾರ್ಯ ಕರ್ನಾಟಕದಿಂದ ಆಗುವ ಸಾಧ್ಯತೆ ಹೆಚ್ಚಾಗಿದೆ ಎಂದು ಅಶ್ವತ್ಥನಾರಾಯಣ್ ಅವರು ತಿಳಿಸಿದ್ದಾರೆ.

 
Author
Suddi Moola
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಶ್ರೀ ಶಂಕರಭಾರತಿ ಶಾಲೆಯ ವಾರ್ಷಿಕೋತ್ಸವ ಮಾರ್ಕ್‌ಸ್‌ ಕಾರ್ಡ್‌ಗಾಗಿ ಮಕ್ಕಳನ್ನು ತಯಾರು ಮಾಡಬೇಡಿ - ಬೆಳಗಲ್ಸಮಾಜ ಸೇವಾ ಮನೋಭಾವ ರೂಪಿಸಿಕೊಳ್ಳಿ - ಪ್ರೊ. ಶಿವಾನಂದ ಕೆಳಗಿನಮನಿಚನ್ನಪ್ಪ ಅವರಿಗೆ ರಾಜ್ಯಮಟ್ಟದ ಜ್ಯೋತಿಬಾ ಪುಲೆ ಪ್ರಶಸ್ತಿಜಿಲ್ಲಾ ಟಾಸ್‌‌ಕೆರ್ಸ್ ಸಮಿತಿ ಸಭೆ ‘ರೈತರಿಗೆ ಯಾವುದೇ ತೊಂದರೆಯಾಗದಂತೆ ನೋಡಿಕೊಳ್ಳಿ’ರಾಷ್ಟ್ರೀಯ ಹೆದ್ದಾರಿ ಪಕ್ಕದ ಜಮೀನುಗಳಿಗೆ ಹೋಗಲು ದಾರಿ ಮಾಡಿಕೊಡಲು ಆಗ್ರಹಜವಾಹರ ನವೋದಯ ವಿದ್ಯಾರ್ಥಿ ಪ್ರಜ್ವಲ್ ರಾಜ್ಯಕ್ಕೆ ಪ್ರಥಮಮುದಗಲ್ ಪಿಎಸ್‌ಐ ಸೇರಿ ಪೊಲೀಸರ ಅಮಾನತ್ತು ಮಾಡಲು ಒತ್ತಾಯಹುಲಿಕೇರಿ ಒತ್ತುವರಿಯಾಗಿದ್ದರೆ ಕ್ರಮ ಕೈಗೊಳ್ಳಲಿ - ಹಿಟ್ನಾಳಪಟ್ಟಣ ಸಹಕಾರ ಬ್ಯಾಾಂಕ್ ಮಹಾಮಂಡಳದ ನಿರ್ದೇಶಕರಿಗೆ ಡಿ.ಎಚ್.ಓ ಸನ್ಮಾನ ಗೆಳೆಯರ ಬಳಗದ ಬೆಂಬಲ, ನೌಕರರೊಂದಿಗಿನ ಒಳ್ಳೆಯ ಒಡನಾಟದಿಂದ ಉನ್ನತ ಸ್ಥಾನಮಾನಇಂದು ಗ್ರಾಮೀಣ ಭಾಗದ ವಿವಿಧ ಪ್ರದೇಶದಲ್ಲಿ ವಿದ್ಯುತ್ ವ್ಯತ್ಯಯ