Web Stories
Suddimoola News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ದಸರಾ ಪ್ರಯುಕ್ತ ಆಂಜಿನಪ್ಪ ಮನೆಯಲ್ಲಿ ಬಾಗಿನ ವಿತರಣೆ

ಸುದ್ದಿಮೂಲ ವಾರ್ತೆ

ಶಿಡ್ಲಘಟ್ಟ, ಅ.24: ಶಿಡ್ಲಘಟ್ಟ ವಿಧಾನಸಭಾ ಕ್ಷೇತ್ರದ ಸಮಾಜ ಸೇವಕ ಹಾಗೂ ಎಸ್.ಎನ್ ಕ್ರಿಯಾ ಟ್ರಸ್ಟಿನ ಅಧ್ಯಕ್ಷ ಆಂಜಿನಪ್ಪ (ಪುಟ್ಟು) ಅವರ ಸ್ವಗೃಹದಲ್ಲಿ ಪ್ರತಿ ವರ್ಷದಂತೆ ಈ ವರ್ಷವೂ ಸಹ ದಸರಾ ಹಬ್ಬ ಹಾಗೂ ಆಯುಧ ಪೂಜೆ ಮತ್ತು ವಿಜಯದಶಮಿ ಅಂಗವಾಗಿ ಮೊದಲಿಗೆ ಆಯುಧ ಪೂಜೆ ಮಾಡಿ ನಂತರ ಮಹಿಳೆಯರಿಗೆ ಅರಿಶಿನ ಕುಂಕುಮ ನೀಡಿ ಗೌರವಿಸಿ ಹಾಗು ಪುರುಷರಿಗೆ ಬಾಗಿನ ವಿತರಣೆ ಮಾಡಲಾಯಿತು.



ಈ ಕಾರ್ಯಕ್ರಮಕ್ಕೆ ಸಮಾಜ ಸೇವಕರು ಹಾಗೂ ಎಸ್.ಎನ್ ಕ್ರಿಯಾ ಟ್ರಸ್ಟಿನ ಅಧ್ಯಕ್ಷರಾದ ಆಂಜಿನಪ್ಪ (ಪುಟ್ಟು )ರವರು ಬಾಗಿನ ಕೊಡುವ ಮೂಲಕ ಚಾಲನೆ ನೀಡಲಾಯಿತು.

ಈ ಸಂದರ್ಭದಲ್ಲಿ ಮಾತನಾಡಿದ ಆಂಜಿನಪ್ಪ (ಪುಟ್ಟು )ಅವರು, ಮೊದಲಿಗೆ ನಾಡಿನ ಸಮಸ್ತ ಜನತೆಗೆ ದಸರಾ ಹಬ್ಬದ ಶುಭಾಶಯಗಳು ತಿಳಿಸಿದರು ನಾಡ ದೇವತೆಯಾದ ಚಾಮುಂಡೇಶ್ವರಿ ದೇವಿ ಕರ್ನಾಟಕದ ಸಮಸ್ತ ಜನತೆಗೆ ಆಶೀರ್ವದಿಸಿ ಅವರ ಕಷ್ಟಗಳನ್ನೆಲ್ಲ ಈಡೇರಿಸಲಿ ಜನರು ಪ್ರತಿ ದಿನಾಲು ನಾವು ಬಳಸುವಂತಹ ವಾಹನಗಳು ಹಾಗೂ ವಸ್ತುಗಳನ್ನು ಇಟ್ಟು ಈ ಒಂದು ದಿನ ಪೂಜೆ ಮಾಡುವಂತಹದ್ದು ಮತ್ತೆ ವಿಜಯದ ಸಂಕೇತವಾಗಿ ಈ ಹಬ್ಬವನ್ನು ಆಚರಿಸಲಾಗುತ್ತದೆ ಎಂದು ಹೇಳಿದರು.

ನಮ್ಮ ಪದ್ಧತಿ ಎಂದರೆ ಮನೆಗೆ ಬಂದ ಹೆಣ್ಣು ಮಕ್ಕಳಿಗೆ ಬಾಗಿನ ಕೊಡುವುದು. ಆ ನಿಟ್ಟಿನಲ್ಲಿ ನಮ್ಮ ವ್ಯಾಪ್ತಿಯಲ್ಲಿ ಪ್ರತಿ ವರ್ಷದಂತೆ ಈ ವರ್ಷ ಸಹಾ ಬಡವರನ್ನ ಕರೆದು ಅವರಿಗೆ ಸಹಾಯ ಮಾಡುವಂತದು ಈ ಕಾರ್ಯವನ್ನು ನಾವು ಮುಂದುವರಿಸಿಕೊಂಡು ಹೋಗುತ್ತಿದ್ದೇವೆ ಎಂದು ದಸರಾ ಹಬ್ಬಕ್ಕೆ ಶುಭ ಹಾರೈಸಿದರು .

ಈ ಸಂದರ್ಭದಲ್ಲಿ ಗ್ರಾಮ ಪಂಚಾಯಿತಿ ಸದಸ್ಯರಾದ ರಾಹುಲ್ ಗೌಡ, ಮುಖಂಡರಾದ ಶಾಂತ ಕುಮಾರ್, ಪದ್ಮನಾಭ, ಎಂ.ಪಿ ವಿಶ್ವನಾಥ್, ಆನೂರ ಆನಂದ್, ಮುನಿರಾಜು, ಮುರಳಿ, ನಾಗೇಶ್ ಸುನಿಲ್, ಚರಣ್ ರಾಜ್, ಇನ್ನುಮುಂತಾದವರು ಹಾಜರಿದ್ದರು.
Author
Suddi Moola
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಶ್ರೀ ಶಂಕರಭಾರತಿ ಶಾಲೆಯ ವಾರ್ಷಿಕೋತ್ಸವ ಮಾರ್ಕ್‌ಸ್‌ ಕಾರ್ಡ್‌ಗಾಗಿ ಮಕ್ಕಳನ್ನು ತಯಾರು ಮಾಡಬೇಡಿ - ಬೆಳಗಲ್ಸಮಾಜ ಸೇವಾ ಮನೋಭಾವ ರೂಪಿಸಿಕೊಳ್ಳಿ - ಪ್ರೊ. ಶಿವಾನಂದ ಕೆಳಗಿನಮನಿಚನ್ನಪ್ಪ ಅವರಿಗೆ ರಾಜ್ಯಮಟ್ಟದ ಜ್ಯೋತಿಬಾ ಪುಲೆ ಪ್ರಶಸ್ತಿಜಿಲ್ಲಾ ಟಾಸ್‌‌ಕೆರ್ಸ್ ಸಮಿತಿ ಸಭೆ ‘ರೈತರಿಗೆ ಯಾವುದೇ ತೊಂದರೆಯಾಗದಂತೆ ನೋಡಿಕೊಳ್ಳಿ’ರಾಷ್ಟ್ರೀಯ ಹೆದ್ದಾರಿ ಪಕ್ಕದ ಜಮೀನುಗಳಿಗೆ ಹೋಗಲು ದಾರಿ ಮಾಡಿಕೊಡಲು ಆಗ್ರಹಜವಾಹರ ನವೋದಯ ವಿದ್ಯಾರ್ಥಿ ಪ್ರಜ್ವಲ್ ರಾಜ್ಯಕ್ಕೆ ಪ್ರಥಮಮುದಗಲ್ ಪಿಎಸ್‌ಐ ಸೇರಿ ಪೊಲೀಸರ ಅಮಾನತ್ತು ಮಾಡಲು ಒತ್ತಾಯಹುಲಿಕೇರಿ ಒತ್ತುವರಿಯಾಗಿದ್ದರೆ ಕ್ರಮ ಕೈಗೊಳ್ಳಲಿ - ಹಿಟ್ನಾಳಪಟ್ಟಣ ಸಹಕಾರ ಬ್ಯಾಾಂಕ್ ಮಹಾಮಂಡಳದ ನಿರ್ದೇಶಕರಿಗೆ ಡಿ.ಎಚ್.ಓ ಸನ್ಮಾನ ಗೆಳೆಯರ ಬಳಗದ ಬೆಂಬಲ, ನೌಕರರೊಂದಿಗಿನ ಒಳ್ಳೆಯ ಒಡನಾಟದಿಂದ ಉನ್ನತ ಸ್ಥಾನಮಾನಇಂದು ಗ್ರಾಮೀಣ ಭಾಗದ ವಿವಿಧ ಪ್ರದೇಶದಲ್ಲಿ ವಿದ್ಯುತ್ ವ್ಯತ್ಯಯ