Web Stories
Suddimoola News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ರಂಗಭೂಮಿ ಕಲೆ ಉಳಿಸಿ-ಬೆಳಸಿ: ಬಸವರಾಜ್ ಉಳ್ಳಾಗಡ್ಡಿ

ಯಲಬುರ್ಗಾ,ಮೇ.19: ರಂಗಭೂಮಿಯಲ್ಲೇ ನಿಜವಾದ ಮತ್ತು ಜೀವಂತ ಕಲೆ ಅಡಗಿದ್ದು, ಅದನ್ನು ಉಳಿಸಿ-ಬೆಳೆಸುವ ಕೆಲಸ ಎಲ್ಲೆಡೆ ನಡೆಯಬೇಕಿದೆ ಎಂದು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಬಸವರಾಜ್ ಉಳ್ಳಾಗಡ್ಡಿ ಹೇಳಿದರು.

ಯಲಬುರ್ಗಾ ಪಟ್ಟಣದ ಮಂಡಲಗಿರಿ ನಾಟಕ ಕಂಪನಿಯವರು ಹಮ್ಮಿಕೊಂಡ ಎಲ್ಲಿ ಅದೀ ಮಲ್ಯ ಎಂಬ ನಾಟಕ ಉದ್ಘಾಟಿಸಿ ಅವರು ಮಾತನಾಡಿದರು.ಚಲನಚಿತ್ರದಲ್ಲಿ ದೃಶ್ಯ ಮತ್ತು ನಟನೆಯಲ್ಲಿ ಏನಾದರೂ ಲೋಪದೋಷಗಳಾದರೆ ಅದನ್ನು ಸರಿಪಡಿಸಿಕೊಳ್ಳುವ ಅವಕಾಶ ಇರುತ್ತದೆ. ಆದರೆ ರಂಗಭೂಮಿ ಪ್ರದರ್ಶನದಲ್ಲಿ ತಿದ್ದುಪಡಿಗೆ ಹಾಗೂ ತಿರುಚಲು ಯಾವುದೇ ಅವಕಾಶ ಇರುವುದಿಲ್ಲ ಎಂದರು.ರಂಗಭೂಮಿಯಲ್ಲಿ ನಟನೆ ಮಾಡುವುದು ಒಂದು ಸವಾಲಿನ ಕೆಲಸವಾಗಿದೆ.

ರಂಗಕಲೆಯನ್ನು ಕರಗತ ಮಾಡಿಕೊಂಡರೆ ಉತ್ತಮ ನಾಟಕಗಳನ್ನು ಹೊರತರಬಹುದು ಎಂಬುದಕ್ಕೆ ಇಡೀ ರಾಜ್ಯದಲ್ಲೇ ಅತ್ಯುತ್ತಮ ನಾಟಕ ಕಂಪನಿ ಅದು ನಮ್ಮ ತಾಲೂಕಿನ ಮಂಡಲಗಿರಿ ಕಂಪನಿ ಕಲಾವಿದರೆ ಪ್ರಮುಖ ಉದಾಹರಣೆಯಾಗಿದ್ದಾರೆ. ಒಂದು ಕಾಲದಲ್ಲಿ ರಂಗಭೂಮಿಯೂ ಕೆಲವರ ಸ್ವತ್ತಾಗಿತ್ತು.

ವಿವಿಧ ಕ್ಷೇತ್ರದ ರಂಗಾಸಕ್ತರಿಂದ ರಂಗಭೂಮಿ ಪ್ರಯೋಗಗಳು ನಡೆಯುತ್ತಿರುವುದು ಹೆಮ್ಮೆಯ ಸಂಗತಿ. ಈ ವಿನೂತನ ಪರಂಪರೆ ಮುಂದುವರಿಯಬೇಕಿದೆ ಎಂದರು.ಭಾವನಾತ್ಮಕ ಸಂಬಂಧವನ್ನು ಗಟ್ಟಿಗೊಳಿಸುವಲ್ಲಿ ಹಾಗೂ ಮಾನವೀಯತೆಯನ್ನು ಬೆಳೆಸುವಲ್ಲಿ ರಂಗಭೂಮಿ ಕಲೆ ಸಹಕಾರಿಯಾಗಿದೆ.

ರಂಗಭೂಮಿ ಕಲೆಯನ್ನು ಕಲಾವಿದರು ಮತ್ತು ಕಲಾಸಕ್ತರು ಹೆಚ್ಚೆಚ್ಚು ಪ್ರೋತ್ಸಾಹಿಸುವ ಮೂಲಕ ಅದನ್ನು ಉಳಿಸಿ, ಬೆಳೆಸಬೇಕು ಎಂದರು. ರಾಜ್ಯ ಸರ್ಕಾರ ನಾಟಕ ಕಂಪನಿ ಅವರಿಗೆ. ಪ್ರೋತ್ಸಾಹ ನೀಡುವುದು ಅಗತ್ಯವಾಗಿದೆ. ಇಂಥವರನ್ನು ಗುರುತಿಸುವ ಕೆಲಸ ಸರ್ಕಾರ ಮಾಡಬೇಕಾಗಿದೆ ಎಂದರು. ಈ ಸಂದರ್ಭದಲ್ಲಿ ಹಿರಿಯ ಮುಖಂಡ ಈರಣ್ಣ ಹುಬ್ಬಳ್ಳಿ ಪ್ರಸ್ತಾಪವಾಗಿ ಮಾತನಾಡಿದರು. ಅಧ್ಯಕ್ಷತೆಯನ್ನು ಪಟ್ಟಣ ಪಂಚಾಯತಿ ಅಧ್ಯಕ್ಷ ಅಂಬರೀಶ್ ಹುಬ್ಬಳ್ಳಿ. ಕಳಕಪ್ಪ ತಳವಾರ್. ನಟರಾಜ್ ಬಿದರಿ. ಸಂಗಣ್ಣ ತೆಂಗಿನಕಾಯಿ. ಪಟ್ಟಣದ ಗಣ್ಯ ವ್ಯಕ್ತಿಗಳು ಇದ್ದರು
Author
Suddi Moola
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಶ್ರೀ ಶಂಕರಭಾರತಿ ಶಾಲೆಯ ವಾರ್ಷಿಕೋತ್ಸವ ಮಾರ್ಕ್‌ಸ್‌ ಕಾರ್ಡ್‌ಗಾಗಿ ಮಕ್ಕಳನ್ನು ತಯಾರು ಮಾಡಬೇಡಿ - ಬೆಳಗಲ್ಸಮಾಜ ಸೇವಾ ಮನೋಭಾವ ರೂಪಿಸಿಕೊಳ್ಳಿ - ಪ್ರೊ. ಶಿವಾನಂದ ಕೆಳಗಿನಮನಿಚನ್ನಪ್ಪ ಅವರಿಗೆ ರಾಜ್ಯಮಟ್ಟದ ಜ್ಯೋತಿಬಾ ಪುಲೆ ಪ್ರಶಸ್ತಿಜಿಲ್ಲಾ ಟಾಸ್‌‌ಕೆರ್ಸ್ ಸಮಿತಿ ಸಭೆ ‘ರೈತರಿಗೆ ಯಾವುದೇ ತೊಂದರೆಯಾಗದಂತೆ ನೋಡಿಕೊಳ್ಳಿ’ರಾಷ್ಟ್ರೀಯ ಹೆದ್ದಾರಿ ಪಕ್ಕದ ಜಮೀನುಗಳಿಗೆ ಹೋಗಲು ದಾರಿ ಮಾಡಿಕೊಡಲು ಆಗ್ರಹಜವಾಹರ ನವೋದಯ ವಿದ್ಯಾರ್ಥಿ ಪ್ರಜ್ವಲ್ ರಾಜ್ಯಕ್ಕೆ ಪ್ರಥಮಮುದಗಲ್ ಪಿಎಸ್‌ಐ ಸೇರಿ ಪೊಲೀಸರ ಅಮಾನತ್ತು ಮಾಡಲು ಒತ್ತಾಯಹುಲಿಕೇರಿ ಒತ್ತುವರಿಯಾಗಿದ್ದರೆ ಕ್ರಮ ಕೈಗೊಳ್ಳಲಿ - ಹಿಟ್ನಾಳಪಟ್ಟಣ ಸಹಕಾರ ಬ್ಯಾಾಂಕ್ ಮಹಾಮಂಡಳದ ನಿರ್ದೇಶಕರಿಗೆ ಡಿ.ಎಚ್.ಓ ಸನ್ಮಾನ ಗೆಳೆಯರ ಬಳಗದ ಬೆಂಬಲ, ನೌಕರರೊಂದಿಗಿನ ಒಳ್ಳೆಯ ಒಡನಾಟದಿಂದ ಉನ್ನತ ಸ್ಥಾನಮಾನಇಂದು ಗ್ರಾಮೀಣ ಭಾಗದ ವಿವಿಧ ಪ್ರದೇಶದಲ್ಲಿ ವಿದ್ಯುತ್ ವ್ಯತ್ಯಯ