Web Stories
Suddimoola News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಬಸವರಾಜ ಬೊಮ್ಮಾಯಿ ಆರೋಗ್ಯದಲ್ಲಿ ಚೇತರಿಕೆ

ಸುದ್ದಿಮೂಲ ವಾರ್ತೆ

ಬೆಂಗಳೂರು, ಅ.21: ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೆ ಬನ್ನೇರುಘಟ್ಟ ಫೋರ್ಟಿಸ್‌ ಆಸ್ಪತ್ರೆಯಲ್ಲಿ ಯಶಸ್ವಿಯಾಗಿ ಪರಿಧಮನಿಯ ಬೈಪಾಸ್ ಗ್ರಾಫ್ಟಿಂಗ್ (ಸಿಎಬಿಜಿ) ಶಸ್ತ್ರಚಿಕಿತ್ಸೆ ನಡೆಸಿದ್ದು, ಅವರು ಚೇತರಿಸಿಕೊಳ್ಳುತ್ತಿದ್ದಾರೆ.

ಬಸವರಾಜ ಬೊಮ್ಮಾಯಿ ಅವರು ಆಸ್ಪತ್ರೆಗೆ ದಾಖಲಾದ ಬಳಿಕ ಅವರಿಗೆ ಕೆಲ ಪ್ರಾಥಮಿಕ ಪರೀಕ್ಷೆ ನಡೆಸಲಾಯಿತು. ಈ ವೇಳೆ ಅವರಿಗೆ ಹೃದಯ ಸಂಬಂಧಿ ಕೆಲ ಸಮಸ್ಯೆ ಇರುವ ಅನುಮಾನ ಮೂಡಿತು. ಹೀಗಾಗಿ, ಅವರ ಸಮಗ್ರ ಮತ್ತು ಪರಿಣಿತ ವೈದ್ಯಕೀಯ ಆರೈಕೆಗಾಗಿ, ಫೋರ್ಟಿಸ್‌ ಆಸ್ಪತ್ರೆಯ ಕಾರ್ಡಿಯೋಥೊರಾಸಿಕ್ ಮತ್ತು ವ್ಯಾಸ್ಕಲರ್‌ ಸೈನ್ಸ್‌ ಅಧ್ಯಕ್ಷರಾದ ಡಾ. ವಿವೇಕ್‌ ಜವಳಿ ಅವರ ಮೇಲ್ವಿಚಾರಣೆಯಲ್ಲಿ ಅ.15 ರಂದು ಅವರನ್ನು ಸಂಪೂರ್ಣ ವೈದ್ಯಕೀಯ ಪರೀಕ್ಷೆಗೆ ಒಳಪಡಿಸಲಾಯಿತು.

ಆಂಜಿಯೋಗ್ರಾಮ್ ನಂತರ, ಎಲ್ಲಾ ಮೂರು ಪರಿಧಮನಿಯ ಅಪಧಮನಿಗಳಲ್ಲಿ ತೀವ್ರ ಮತ್ತು ಪ್ರಸರಣ ತಡೆ ಇರುವುದು ಕಂಡು ಬಂತು. ಈ ಲಕ್ಷಣಗಳು ಇದ್ದರೆ ಭವಿಷ್ಯದಲ್ಲಿ ಹೃದಯಾಘಾತ ಸಂಭವನೀಯ ಅಪಾಯವನ್ನು ಉಂಟುಮಾಡುತ್ತವೆ, ಹೀಗಾಗಿ ಅವರಿಗೆ ಕರೋನರಿ ಆರ್ಟರಿ ಬೈಪಾಸ್ ಗ್ರಾಫ್ಟಿಂಗ್ (ಸಿಎಬಿಜಿ) ಶಸ್ತ್ರಕ್ರಿಯೆಯನ್ನು ನಡೆಸಿ, ಫೈವ್‌ ಗ್ರಾಫ್ಸ್‌ನನ್ನು ಸಮಸ್ಯೆ ಉಂಟಾಗಿದ್ದ ಪರಿಧಮನಿಯ ಅಪಧಮನಿ ಹೃದಯದ ಬಡಿತದ ಮೇಲೆ ಇರಿಸಲಾಯಿತು. ಶಸ್ತ್ರಚಿಕಿತ್ಸೆಯ ಬಳಿಕ ಬೊಮ್ಮಾಯಿ ಅವರು ವೇಗವಾಗಿ ಚೇತರಿಕೆ ಕಾಣುತ್ತಿದ್ದು, ಒಂದೆರಡು ವಾರದಲ್ಲಿ ಎಂದಿನಂತೆ ತಮ್ಮ ದಿನಚರಿಯಲ್ಲಿ ತೊಡಗಿಕೊಳ್ಳಲಿದ್ದಾರೆ.

ಬಸವರಾಜ ಬೊಮ್ಮಾಯಿ ಮಾತನಾಡಿ, ಬನ್ನೇರುಘಟ್ಟ ಫೋರ್ಟಿಸ್‌ ಆಸ್ಪತ್ರೆಯ ವೈದ್ಯರ ತಂಡ ಅದರಲ್ಲೂ ಡಾ. ವಿವೇಕ್‌ ಜವಳಿ ಅವರ ತಂಡ ನನ್ನನ್ನು ಉತ್ತಮವಾಗಿ ಆರೈಕೆ ಮಾಡಿದ್ದಾರೆ, ಅವರ ಪರಿಣತಿಯಿಂದ ಭವಿಷ್ಯದಲ್ಲಿ ಸಂಭವಿಸಬೇಕಾದ ಅಪಾಯವನ್ನು ತಡೆದಿದ್ದಾರೆ ಅವರಿಗೆ ನನ್ನ ಅಭಿನಂದನೆಗಳು. ನನ್ನ ಯೋಗಕ್ಷೇಮಕ್ಕೆ ಇಡೀ ತಂಡದ ಬದ್ಧತೆಯನ್ನು ಪ್ರಶಂಸಿಸುವೆ, ನಾನು ಈಗ ಚೇತರಿಸಿಕೊಳ್ಳುತ್ತಿದ್ದೇನೆ ಎಂದು ತಮ್ಮ ಆರೋಗ್ಯದ ಬಗ್ಗೆ ತಿಳಿಸಿದರು.

ಫೋರ್ಟಿಸ್‌ ಆಸ್ಪತ್ರೆಯ ಕಾರ್ಡಿಯೋಥೊರಾಸಿಕ್ ಮತ್ತು ವ್ಯಾಸ್ಕಲರ್‌ ಸೈನ್ಸ್‌ ಅಧ್ಯಕ್ಷರಾದ ಡಾ. ವಿವೇಕ್‌ ಜವಳಿ, 5-ಗ್ರಾಫ್ಟ್ಸ್‌ ಹೃದಯ ಬೈಪಾಸ್ ಅನ್ನು ನಿರ್ವಹಿಸುವುದು ನಮಗೆ ವಾಡಿಕೆಯಾಗಿದೆ. ಆದರೆ ಬೊಮ್ಮಾಯಿ ಅವರ ಅಚಲವಾದ ನಂಬಿಕೆ, ಅವರ ಧೈರ್ಯದ ಮನೋಭಾವಕ್ಕೆ ನಾನು ನಿಜವಾಗಿಯೂ ಪ್ರಭಾವಿತನಾಗಿದ್ದೇನೆ. ಅವರ ಬೆಂಬಲಕ್ಕೆ ಅವರ ಕುಟುಂಬ ವರ್ಗ ಅಚಲವಾಗಿ ನಿಂತಿತ್ತು ಎಂದು ವಿವರಿಸಿದರು.‌

ಬೊಮ್ಮಾಯಿ ಆರೋಗ್ಯ ವಿಚಾರಿಸಿದ ಸಿದ್ದರಾಮಯ್ಯ

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಶನಿವಾರ ಬನ್ನೇರುಘಟ್ಟ ರಸ್ತೆಯ ಫೋರ್ಟಿಸ್ ಆಸ್ಪತ್ರೆಗೆ ಭೇಟಿ ನೀಡಿ ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಆರೋಗ್ಯ ವಿಚಾರಿಸಿದರು. ಬೇಗ ಗುಣಮುಖರಾಗುವಂತೆ ಹಾರೈಸಿದರು.

ಈ ಸಂದರ್ಭದಲ್ಲಿ ಗೃಹ ಸಚಿವ ಜಿ.ಪರಮೇಶ್ವರ್, ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ನಸೀರ್ ಅಹಮದ್ ಅವರು ಜತೆಗಿದ್ದರು.
Author
Suddi Moola
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಶ್ರೀ ಶಂಕರಭಾರತಿ ಶಾಲೆಯ ವಾರ್ಷಿಕೋತ್ಸವ ಮಾರ್ಕ್‌ಸ್‌ ಕಾರ್ಡ್‌ಗಾಗಿ ಮಕ್ಕಳನ್ನು ತಯಾರು ಮಾಡಬೇಡಿ - ಬೆಳಗಲ್ಸಮಾಜ ಸೇವಾ ಮನೋಭಾವ ರೂಪಿಸಿಕೊಳ್ಳಿ - ಪ್ರೊ. ಶಿವಾನಂದ ಕೆಳಗಿನಮನಿಚನ್ನಪ್ಪ ಅವರಿಗೆ ರಾಜ್ಯಮಟ್ಟದ ಜ್ಯೋತಿಬಾ ಪುಲೆ ಪ್ರಶಸ್ತಿಜಿಲ್ಲಾ ಟಾಸ್‌‌ಕೆರ್ಸ್ ಸಮಿತಿ ಸಭೆ ‘ರೈತರಿಗೆ ಯಾವುದೇ ತೊಂದರೆಯಾಗದಂತೆ ನೋಡಿಕೊಳ್ಳಿ’ರಾಷ್ಟ್ರೀಯ ಹೆದ್ದಾರಿ ಪಕ್ಕದ ಜಮೀನುಗಳಿಗೆ ಹೋಗಲು ದಾರಿ ಮಾಡಿಕೊಡಲು ಆಗ್ರಹಜವಾಹರ ನವೋದಯ ವಿದ್ಯಾರ್ಥಿ ಪ್ರಜ್ವಲ್ ರಾಜ್ಯಕ್ಕೆ ಪ್ರಥಮಮುದಗಲ್ ಪಿಎಸ್‌ಐ ಸೇರಿ ಪೊಲೀಸರ ಅಮಾನತ್ತು ಮಾಡಲು ಒತ್ತಾಯಹುಲಿಕೇರಿ ಒತ್ತುವರಿಯಾಗಿದ್ದರೆ ಕ್ರಮ ಕೈಗೊಳ್ಳಲಿ - ಹಿಟ್ನಾಳಪಟ್ಟಣ ಸಹಕಾರ ಬ್ಯಾಾಂಕ್ ಮಹಾಮಂಡಳದ ನಿರ್ದೇಶಕರಿಗೆ ಡಿ.ಎಚ್.ಓ ಸನ್ಮಾನ ಗೆಳೆಯರ ಬಳಗದ ಬೆಂಬಲ, ನೌಕರರೊಂದಿಗಿನ ಒಳ್ಳೆಯ ಒಡನಾಟದಿಂದ ಉನ್ನತ ಸ್ಥಾನಮಾನಇಂದು ಗ್ರಾಮೀಣ ಭಾಗದ ವಿವಿಧ ಪ್ರದೇಶದಲ್ಲಿ ವಿದ್ಯುತ್ ವ್ಯತ್ಯಯ