Web Stories
Suddimoola News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಹಸಿರು ಬೆಂಗಳೂರಿಗಾಗಿ 90 ಸಾವಿರ ಸಸಿ ನೆಡಲಿದೆ ಬಿಬಿಎಂಪಿ

ಸುದ್ದಿಮೂಲ ವಾರ್ತೆ

ಬೆಂಗಳೂರು, ಅ. 17 : ಬಿಬಿಎಂಪಿ ವ್ಯಾಪ್ತಿಯಲ್ಲಿ ಹಸಿರೀಕರಣ ಪ್ರಮಾಣವನ್ನು ಮತ್ತಷ್ಟು ಹೆಚ್ಚಿಸುವ ನಿಟ್ಟಿನಲ್ಲಿ “ಹಸಿರು ಬೆಂಗಳೂರು” ಕಾರ್ಯಕ್ರಮದಡಿ 90 ಸಾವಿರಕ್ಕೂ ಹೆಚ್ಚು ಗಿಡಗಳನ್ನು ನೆಡಲು ಬಿಬಿಎಂಪಿ ನಿರ್ಧರಿಸಲಿದೆ.

ಬೆಂಗಳೂರು ನಗರವನ್ನು ಹಸಿರುಗೊಳಿಸುವ ಸಂಬಂಧ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಆಶಯದಂತೆ “ಹಸಿರು ಬೆಂಗಳೂರು ಕಾರ್ಯಕ್ರಮದಡಿ ಬೆಂಗಳೂರಿನಾದ್ಯಂತ ಗಿಡಗಳನ್ನು ಬೆಳೆಸಲು ಕ್ರಮ ಕೈಗೊಳ್ಳಲಾಗಿದೆ.

ಗಿಡಗಳನ್ನು ನೆಡುವ ಕಾರ್ಯಕ್ರಮಕ್ಕೆ ಸುಮಾರು 250 ಸರ್ಕಾರಿ,ಸರ್ಕಾರೇತರ ಶಾಲೆಗಳಿಂದ ಒಡಂಬಡಿಕೆ ಮಾಡಿಕೊಂಡು ಸುಮಾರು 50 ಸಾವಿರ ಶಾಲಾ-ಕಾಲೇಜು ಸಹಯೋಗದೊಂದಿಗೆ ಗಿಡ ನೆಡುವ ಕಾರ್ಯಕ್ರಮವನ್ನು ರೂಪಿಸಲಾಗಿದೆ ಎಂದು ಬಿಬಿಎಂಪಿ ತಿಳಿಸಿದೆ.

ಬಿಬಿಎಂಪಿ ಅರಣ್ಯ ಘಟಕದ ವತಿಯಿಂದ ನೆಡಲಾದ ಗಿಡಗಳನ್ನು 3 ವರ್ಷಗಳ ಕಾಲ ಶಾಲಾ ವಿದ್ಯಾರ್ಥಿಗಳ ಹಾಗೂ ಅರಣ್ಯ ಅಧಿಕಾರಿಗಳ ಸಹಯೋಗದೊಂದಿಗೆ ಪೋಷಣೆ ಮಾಡಲಾಗುವುದು. ಈ ಸಂಬಂಧ ಪಾಲಿಕೆ ವತಿಯಿಂದ ಸಾಮಾಜಿಕ ಜಾಲತಾಣವನ್ನು ರೂಪಿಸಿ ನಗರದಾದ್ಯಂತ ನೆಡಲಾಗಿರುವ ಗಿಡಗಳ ಸಂಪೂರ್ಣ ಮಾಹಿತಿಯನ್ನು ಸಾರ್ವಜನಿಕರಿಗೆ ನೀಡಲಾಗುವುದು.

ನಗರದಲ್ಲಿ ಈಗಾಗಲೇ ಶಾಲಾ-ಕಾಲೇಜು ವಿದ್ಯಾರ್ಥಿಗಳು ವಲಯವಾರು ನೆಟ್ಟಿರುವ ಗಿಡಗಳ ಸಂಖ್ಯೆ, ಶಾಲಾ-ಕಾಲೇಜು ವಿದ್ಯಾರ್ಥಿಗಳು ಹಾಗೂ ಸಂಬಂಧಪಟ್ಟ ಅಧಿಕಾರಿಗಳ ಬಗ್ಗೆ ಜಾಲತಾಣದಲ್ಲಿ ಮಾಹಿತಿ ನೀಡಲಾಗುವುದು. ಜೊತೆಗೆ ಸಿಎಂಪಿ ಅರಣ್ಯ ಘಟಕದ ಸಸ್ಯಕ್ಷೇತ್ರಗಳಿಂದ ಸಾರ್ವಜನಿಕರಿಗೆ ಉಚಿತವಾಗಿ ಗಿಡಗಳನ್ನು ಸಹ ವಿತರಿಸಲಾಗಿರುತ್ತದೆ ಎಂದು ಬಿಬಿಎಂಪಿ ಮಾಹಿತಿ ನೀಡಿದೆ.
Author
Suddi Moola
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಶ್ರೀ ಶಂಕರಭಾರತಿ ಶಾಲೆಯ ವಾರ್ಷಿಕೋತ್ಸವ ಮಾರ್ಕ್‌ಸ್‌ ಕಾರ್ಡ್‌ಗಾಗಿ ಮಕ್ಕಳನ್ನು ತಯಾರು ಮಾಡಬೇಡಿ - ಬೆಳಗಲ್ಸಮಾಜ ಸೇವಾ ಮನೋಭಾವ ರೂಪಿಸಿಕೊಳ್ಳಿ - ಪ್ರೊ. ಶಿವಾನಂದ ಕೆಳಗಿನಮನಿಚನ್ನಪ್ಪ ಅವರಿಗೆ ರಾಜ್ಯಮಟ್ಟದ ಜ್ಯೋತಿಬಾ ಪುಲೆ ಪ್ರಶಸ್ತಿಜಿಲ್ಲಾ ಟಾಸ್‌‌ಕೆರ್ಸ್ ಸಮಿತಿ ಸಭೆ ‘ರೈತರಿಗೆ ಯಾವುದೇ ತೊಂದರೆಯಾಗದಂತೆ ನೋಡಿಕೊಳ್ಳಿ’ರಾಷ್ಟ್ರೀಯ ಹೆದ್ದಾರಿ ಪಕ್ಕದ ಜಮೀನುಗಳಿಗೆ ಹೋಗಲು ದಾರಿ ಮಾಡಿಕೊಡಲು ಆಗ್ರಹಜವಾಹರ ನವೋದಯ ವಿದ್ಯಾರ್ಥಿ ಪ್ರಜ್ವಲ್ ರಾಜ್ಯಕ್ಕೆ ಪ್ರಥಮಮುದಗಲ್ ಪಿಎಸ್‌ಐ ಸೇರಿ ಪೊಲೀಸರ ಅಮಾನತ್ತು ಮಾಡಲು ಒತ್ತಾಯಹುಲಿಕೇರಿ ಒತ್ತುವರಿಯಾಗಿದ್ದರೆ ಕ್ರಮ ಕೈಗೊಳ್ಳಲಿ - ಹಿಟ್ನಾಳಪಟ್ಟಣ ಸಹಕಾರ ಬ್ಯಾಾಂಕ್ ಮಹಾಮಂಡಳದ ನಿರ್ದೇಶಕರಿಗೆ ಡಿ.ಎಚ್.ಓ ಸನ್ಮಾನ ಗೆಳೆಯರ ಬಳಗದ ಬೆಂಬಲ, ನೌಕರರೊಂದಿಗಿನ ಒಳ್ಳೆಯ ಒಡನಾಟದಿಂದ ಉನ್ನತ ಸ್ಥಾನಮಾನಇಂದು ಗ್ರಾಮೀಣ ಭಾಗದ ವಿವಿಧ ಪ್ರದೇಶದಲ್ಲಿ ವಿದ್ಯುತ್ ವ್ಯತ್ಯಯ