Web Stories
Suddimoola News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಅ 10 ರಂದು ಬೆಂಗಳೂರಿನಲ್ಲಿ ಬಿಸಿಯೂಟ ನೌಕರರ ಪ್ರತಿಭಟನೆ

ಸುದ್ದಿಮೂಲವಾರ್ತೆ

ಕೊಪ್ಪಳ,ಅ.4:ಖಾಯಾಂಯಾತಿ ಸೇರಿದಂತೆ ವಿವಿಧ ಬೇಡಿಕೆ ಈಡೇರಿಕೆ ಆಗ್ರಹಿಸಿ ಅ10 ರಂದು ಬಿಸಿಯೂಟ ನೌಕರರಿಂದ ಬೆಂಗಳೂರ ಚಲೋ ಕಾರ್ಯಕ್ರಮ ನಡೆಯಲಿದೆ.

ಅಕ್ಷರ ದಾಸೋಹ ಬಿಸಿಯೂಟ ತಯಾರಕರ ಒಕ್ಕೂಟ ರಾಜ್ಯ ಮಂಡಳಿಯು, ಬಿಸಿಯೂಟ ತಯಾರಕರನ್ನು ಖಾಯಂ ಗೊಳಿಸುವಂತೆ ಒತ್ತಾಯಿಸಿ, ಬೆಂಗಳೂರಿನ ಫ್ರೀಡಂ ಪಾರ್ಕಿನಲ್ಲಿ ಅನೀರ್ಧಾಷ್ಟವಧಿ ಧರಣಿ ಹೋರಾಟ ನಡೆಸಲು ನಿರ್ಧರಿಸಿದ್ದು, ಈ ಹೋರಾಟವನ್ನು ಬೆಂಬಲಿಸಿ ಪ್ರತಿಭಟನೆಯಲ್ಲಿ ಪಾಲ್ಗೊಳ್ಳಲು ಕೊಪ್ಪಳದ ಬಿಸಿಯೂಟ ತಯಾರಕರು ಅ 9 ರಂದು ಬೆಂಗಳೂರಿಗೆ ಹೊರಟು ಧರಣಿಯಲ್ಲಿ ಪಾಲ್ಗೊಳ್ಳಲಿದ್ದಾರೆ.

ಹಿಂದಿನ ಸರಕಾರವು ಹೊಸದಾಗಿ ಜಾರಿ ಮಾಡಿರುವ ಶಾಲಾ ಮುಖ್ಯೋಪಾಧ್ಯಾಯರ ಮತ್ತು ಎಸ್ ಡಿ ಎಂ ಸಿ ಅಧ್ಯಕ್ಷರ ಹೆಸರಲ್ಲಿ ಜಂಟಿ ಖಾತೆಯನ್ನು ತೆರೆಯಬೇಕೆಂಬ ಅವೈಜ್ಞಾನಿಕ ಆದೇಶವನ್ನು ರದ್ದುಗೊಳಿಸಿ, ಈ ಮುಂಚೆ ಜಾರಿಯಿದ್ದ ಶಾಲಾ ಮುಖ್ಯೋಪಾಧ್ಯಾಯರ ಮತ್ತು ಮುಖ್ಯ ಅಡುಗೆಯವರ ಹೆಸರಿನಲ್ಲಿ ತೆರೆಯಲಾಗಿರುವ ಜಂಟಿ ಬ್ಯಾಂಕ್ ಖಾತೆಯನ್ನೆ ಮುಂದುವರಿಸಬೇಕು. ಬಿಸಿಯೂಟ ನೌಕರರನ್ನು ಅರೆಕಾಲಿಕ ಖಾಯಂ ನೌಕರರೆಂದು ಪರಿಗಣಿಸಬೇಕು. ಕೆಲಸವನ್ನು ನಿರ್ವಹಿಸುವ ವೇಳೆ ಅನಾಹುತಕ್ಕೆ ಈಡಾಗಿ ಮೃತಪಟ್ಟಿರುವ ಹಾನಗಲ್ಲ ತಾಲೂಕಿನ ಕಾಡಶೆಟ್ಟಿಹಳ್ಳಿ ಗ್ರಾಮದ ಶ್ರೀಮತಿ ನಿರ್ಮಲಾ ದೊಡ್ಡಮನಿ, ಕೊಪ್ಪಳ ತಾಲೂಕಿನ ಬೊಚನಳ್ಳಿ ಗ್ರಾಮದ ದೇವಮ್ಮ, ಮುಂಡಗೋಡ ಸರಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಕೆಲಸ ನಿರ್ವಹಿಸುತ್ತಿದ್ದ ಶ್ರೀಮತಿ ಅನ್ನಪೂರ್ಣಮ್ಮ ಈ ನೊಂದ ಕುಟುಂಬದವರಿಗೆ ಸೂಕ್ತ ಪರಿಹಾರವನ್ನು ಮತ್ತು ಆ ಕುಟುಂಬದ ಒಬ್ಬ ಸದಸ್ಯರಿಗೆ ನೌಕರಿಯನ್ನು ಕೊಡಬೇಕು ಹಾಗೂ ಕೆಲಸವನ್ನು ನಿರ್ವಹಿಸುವ ವೇಳೆ ತೊಂದರೆಗೀಡಾಗಿ ಸ್ವಂತ ಹಣದಲ್ಲಿ ಚಿಕಿತ್ಸೆ ಪಡೆದ ಬಿಸಿಯೂಟ ಮಹಿಳೆಯರಿಗೆ ಚಿಕಿತ್ಸೆಯ ಹಣವನ್ನು ಪರಿಹಾರ ರೂಪದಲ್ಲಿ ನೀಡಬೇಕು.

ಚುನಾವಣಾ ಸಂದರ್ಭದಲ್ಲಿ ಗೌರವಧನ ಹೆಚ್ಚಿಸುವ ಉದ್ದೇಶದಿಂದ ಪ್ರಿಯಾಂಕ ಗಾಂಧಿಯವರು ಘೋಷಿಸಿದ್ದ 6 ನೇ ಗ್ಯಾರಂಟಿಯನ್ನು ಜಾರಿ ಮಾಡಬೇಕು. ಪಿಂಚಣಿ ಯೋಜನೆಯನ್ನು ಜಾರಿಗೊಳಿಸಬೇಕು. ಹೀಗೆ ಹಲವಾರು ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಪ್ರತಿಭಟನೆ ನಡೆಯಲಿದೆ.

ಈ ಹೋರಾಟದಲ್ಲಿ ಕೊಪ್ಪಳ‌ ಜಿಲ್ಲೆಯ ಬಿಸಿಯೂಟ ತಯಾರಕರು ಭಗವಹಿಸಬೇಕೆಂದಿ ಮುಖಂಡರಾದ ಬಸವರಾಜ ಶೀಲವಂತರ , ಗಾಳೆಪ್ಪ ಮುಂಗೋಲಿ, ಪುಷ್ಪಾ ಮೇಸ್ತ್ರಿ, ಸುಮಂಗಲಾ ಕೊತಬಾಳ, ವಿಮಲಾ ಮತ್ತೂರ, ನಿರ್ಮಲ, ಶರಣಮ್ಮ ಮನವಿ ಮಾಡಿಕೊಂಡಿದ್ದಾರೆ.
Author
Suddi Moola
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಶ್ರೀ ಶಂಕರಭಾರತಿ ಶಾಲೆಯ ವಾರ್ಷಿಕೋತ್ಸವ ಮಾರ್ಕ್‌ಸ್‌ ಕಾರ್ಡ್‌ಗಾಗಿ ಮಕ್ಕಳನ್ನು ತಯಾರು ಮಾಡಬೇಡಿ - ಬೆಳಗಲ್ಸಮಾಜ ಸೇವಾ ಮನೋಭಾವ ರೂಪಿಸಿಕೊಳ್ಳಿ - ಪ್ರೊ. ಶಿವಾನಂದ ಕೆಳಗಿನಮನಿಚನ್ನಪ್ಪ ಅವರಿಗೆ ರಾಜ್ಯಮಟ್ಟದ ಜ್ಯೋತಿಬಾ ಪುಲೆ ಪ್ರಶಸ್ತಿಜಿಲ್ಲಾ ಟಾಸ್‌‌ಕೆರ್ಸ್ ಸಮಿತಿ ಸಭೆ ‘ರೈತರಿಗೆ ಯಾವುದೇ ತೊಂದರೆಯಾಗದಂತೆ ನೋಡಿಕೊಳ್ಳಿ’ರಾಷ್ಟ್ರೀಯ ಹೆದ್ದಾರಿ ಪಕ್ಕದ ಜಮೀನುಗಳಿಗೆ ಹೋಗಲು ದಾರಿ ಮಾಡಿಕೊಡಲು ಆಗ್ರಹಜವಾಹರ ನವೋದಯ ವಿದ್ಯಾರ್ಥಿ ಪ್ರಜ್ವಲ್ ರಾಜ್ಯಕ್ಕೆ ಪ್ರಥಮಮುದಗಲ್ ಪಿಎಸ್‌ಐ ಸೇರಿ ಪೊಲೀಸರ ಅಮಾನತ್ತು ಮಾಡಲು ಒತ್ತಾಯಹುಲಿಕೇರಿ ಒತ್ತುವರಿಯಾಗಿದ್ದರೆ ಕ್ರಮ ಕೈಗೊಳ್ಳಲಿ - ಹಿಟ್ನಾಳಪಟ್ಟಣ ಸಹಕಾರ ಬ್ಯಾಾಂಕ್ ಮಹಾಮಂಡಳದ ನಿರ್ದೇಶಕರಿಗೆ ಡಿ.ಎಚ್.ಓ ಸನ್ಮಾನ ಗೆಳೆಯರ ಬಳಗದ ಬೆಂಬಲ, ನೌಕರರೊಂದಿಗಿನ ಒಳ್ಳೆಯ ಒಡನಾಟದಿಂದ ಉನ್ನತ ಸ್ಥಾನಮಾನಇಂದು ಗ್ರಾಮೀಣ ಭಾಗದ ವಿವಿಧ ಪ್ರದೇಶದಲ್ಲಿ ವಿದ್ಯುತ್ ವ್ಯತ್ಯಯ