Web Stories
Suddimoola News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಬಿಜೆಪಿ-ಜೆಡಿಎಸ್ ಮೈತ್ರಿ ಖಚಿತ

ಸುದ್ದಿಮೂಲ ವಾರ್ತೆ

ಬೆಂಗಳೂರು, ಸೆ.15: ಬೆಂಗಳೂರು : ಬಿಜೆಪಿ - ಜೆಡಿಎಸ್‌ ಮೈತ್ರಿ ನೂರಕ್ಕೆ ನೂರು ಆಗುತ್ತದೆ. ಇನ್ನು ಕ್ಷೇತ್ರದ ಹಂಚಿಕೆ ಬಗ್ಗೆ ಚರ್ಚೆ ಆಗಿಲ್ಲ ಎಂದು ಮಾಜಿ ಸಚಿವ, ಜೆಡಿಎಸ್ ಕೋರ್ ಕಮಿಟಿ ಅಧ್ಯಕ್ಷ ಜಿ.ಟಿ.ದೇವೇಗೌಡ ಹೇಳಿದ್ದಾರೆ.

ಪಕ್ಷದ ಕಚೇರಿ ಜೆಪಿ ಭವನದಲ್ಲಿ ಇಂದು ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಮಾಜಿ ಪ್ರಧಾನಿ ಹೆಚ್.ಡಿ. ದೇವೆಗೌಡರು ಪ್ರಧಾನಿ ನರೇಂದ್ರ ಮೋದಿ, ಕೇಂದ್ರ ಗೃಹ ಸಚಿವ ಅಮಿತ್ ಶಾ ಮತ್ತು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ ನಡ್ಡಾ ಅವರನ್ನು ಭೇಟಿ ಮಾಡಿ ಚರ್ಚೆ ನಡೆಸಿದ್ದಾರೆ. ಮೈತ್ರಿ ಆಗಲಿದೆ. ಆದರೆ ಕ್ಷೇತ್ರ ಹಂಚಿಕೆ ಬಗ್ಗೆ ಚರ್ಚೆ ಆಗಿಲ್ಲ, ನಾವು ಕೇಳಿಲ್ಲ, ಅವರು ಹೇಳಿಲ್ಲ, ಸದ್ಯಕ್ಕೆ ನಮಗೆ ಕಾಂಗ್ರೆಸ್‌ ದೂರ ಇಡುವುದೇ ಗುರಿ, ಅದಕ್ಕೆ ಬಿಜೆಪಿ ಜೆಡಿಎಸ್‌ ಮೈತ್ರಿ ಆಗಲಿದೆ ಎಂದರು.

ಗ್ಯಾರಂಟಿಯಲ್ಲೇ ಮುಳುಗಿದ ಸರ್ಕಾರ:

ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಬಂದು ನಾಲ್ಕು ತಿಂಗಳು ಆಗಿದೆ. ರಾಜ್ಯದಲ್ಲಿ ಭೀಕರ ಬರಗಾಲ ಬಂದಿದ್ದರೂ, ಸಿಎಂ ಸೇರಿದಂತೆ ಎಲ್ಲರೂ ಗ್ಯಾರಂಟಿಯಲ್ಲೇ ಮುಳುಗಿದ್ದಾರೆ. ಸರ್ಕಾರ ನೂರು ದಿನದ ಕಾರ್ಯಕ್ರಮ ಅದ್ದೂರಿಯಾಗಿ ಆಚರಣೆ ಮಾಡಿದೆ. ಸರ್ಕಾರ ರಚನೆಯಾಗಿ ನಾಲ್ಕು ತಿಂಗಳೂ ಆಗಿದ್ದರೂ, ಇದುವರೆಗೂ ಯಾವುದೇ ಕಾರ್ಯಕ್ರಮ ಕೈಗೊಂಡಿಲ್ಲ ಎಂದು ಕಿಡಿಕಾರಿದರು.

ವರ್ಗಾವಣೆ ದಂಧೆ ಹೆಚ್ಚಾಗಿದೆ. ಯಾವುದೇ ಅಧಿಕಾರಿಗಳನ್ನು ಕಾಂಗ್ರೆಸ್‌ನಿಂದ ಹುಟ್ಟಿರುವ ಅಧಿಕಾರಿ ಎನ್ನಲು ಆಗಲ್ಲ. ಯಾವ ಸರ್ಕಾರ ಬಂದರೂ ಅದೇ ಅಧಿಕಾರಿಗಳೇ. ರೈತರ ಕೃಷಿ ಚಟುವಟಿಕೆಗೆ ಯಾವುದೇ ಉಪಕರಣ ಕೊಟ್ಟಿಲ್ಲ. ರೈತರ ಬೆಳೆ ಒಣಗುತ್ತಿವೆ. ಕರ್ನಾಟಕದ ಹಲವೆಡೆ ಬೆಳೆ ಒಣಗಿ ಹೋಗಿದೆ. 45 ಲಕ್ಷ ರೈತರಿಗೆ ಕೇಂದ್ರ, ರಾಜ್ಯ ಸರ್ಕಾರ ಸೇರಿ ಹಣ ನೀಡುತ್ತಿದ್ದರು. ಆದರೆ ರಾಜ್ಯ ಸರ್ಕಾರ ಈಗ ಅದನ್ನು ನಿಲ್ಲಿಸಿದೆ ಎಂದು ಹೇಳಿದರು.

ಕಾವೇರಿ ನೀರನ್ನ ತಮಿಳುನಾಡಿಗೆ ಇವತ್ತಿಗೂ ಬಿಡುತ್ತಿದ್ದಿರಿ, ಈಗ ನೀರು ಬಿಟ್ಟರೆ ಇರುವ 16 ಟಿಎಂಸಿ ನೀರಿನಲ್ಲಿ 7 ಟಿಎಂಸಿ ನೀರು ಹೋಗಿ ಕೇವಲ 9 ಟಿಎಂಸಿ ನೀರು ಇರುತ್ತದೆ. ಇದರಿಂದ ಬೆಂಗಳೂರಿಗೆ ಕುಡಿಯಲು ನೀರು ಎಲ್ಲಿ ಕೊಡ್ತೀರಿ. ಇಂತಹ ಪರಿಸ್ಥಿತಿಯಲ್ಲಿ ಆಪರೇಷನ್ ಹಸ್ತ ಮಾಡಿಕೊಂಡು ಕುಳಿತಿದ್ದೀರಾ?, ನೀವು ಬನ್ನಿ ಎಂದು ಕರೆಯುತ್ತಿದ್ದೀರಾ? ಎಂದು ಜಿಟಿಡಿ ಪ್ರಶ್ನೆ ಮಾಡಿದರು.

ತಮಿಳುನಾಡಿಗೆ ನೀರು ಬಿಡುವುದನ್ನು ನಿಲ್ಲಿಸಬೇಕಿತ್ತು, ಬಿಡುವುದಿಲ್ಲವೆಂದು ಹೇಳಬೇಕಿತ್ತು. ಏನಾಗುತಿತ್ತು ಸುಪ್ರೀಂ ಕೋರ್ಟ್ ಗೆ ಹೋಗುತ್ತಿದ್ದರು. ಆಗ ನೀವು ಕೋರ್ಟ್‌ಗೆ ಹೇಳಬಹುದಿತ್ತು. ಕೂಡಲೇ ತಮಿಳುನಾಡಿಗೆ ನೀರು ಹರಿಸುವುದನ್ನು ನಿಲ್ಲಿಸಿ ಎಂದು ಒತ್ತಾಯಿಸಿದರು.

ಬರಗಾಲದ ವೇಳೆ ಕೇಂದ್ರಕ್ಕೆ ಮುಖ್ಯಮಂತ್ರಿಗಳ ನಿಯೋಗ ಹೋಗಬೇಕಿತ್ತು. ಆದರೆ ಒಮ್ಮೆಯೂ ಹೋಗಿಲ್ಲ ಎಂದು ಹೇಳಿದ ಅವರು, ಬೆಂಗಳೂರಿನಲ್ಲಿ ಈಗಾಗಲೇ ನೀರಿನ ಅಭಾವ ಕಂಡುಬರುತ್ತಿದೆ. ಬೆಂಗಳೂರಿನಲ್ಲಿ ಕಸ ನಿರ್ವಹಣೆ ಸರಿಯಾಗಿ ಆಗುತ್ತಿಲ್ಲ. ರಸ್ತೆ ಗುಂಡಿ ಬಿದ್ದಿದೆ.

ಬಿಬಿಎಂಪಿಯಲ್ಲಿ ಯಾರು ಇಲ್ಲ, ಬೆಂಗಳೂರು ಅಭಿವೃದ್ಧಿ ಆಗುತ್ತಿಲ್ಲ, ಆ ಕಡೆ ಹಳ್ಳಿಯ ಕಡೆ ಹೊದರೆ ರೈತರಿಗೆ ಸಂಕಷ್ಟ ಎದುರಾಗಿದೆ. ಹೀಗೆ ಆದರೆ ರೈತರ ಆತ್ಮಹತ್ಯೆ ಪ್ರಮಾಣ ಹೆಚ್ಚಾಗುತ್ತದೆ. ನಮ್ಮದು ರೈತರ ಪಕ್ಷ , ಸೆ.26 ರಂದು ಕಲಬುರಗಿಯಿಂದ ನಾವು ಹೋರಾಟ ಮಾಡುತ್ತೇವೆ ಎಂದು ಹೇಳಿದರು.

ಬಿಜೆಪಿ ಜೊತೆ ಜೆಡಿಎಸ್ ಮೈತ್ರಿ ಬಗ್ಗೆ ಹಲವರು ಆರೋಪ ಮಾಡ್ತಿದಾರೆ. 1983 ರಲ್ಲಿ ರಾಮಕೃಷ್ಣ ಹೆಗ್ಗಡೆಯವರ ಸರ್ಕಾರದಲ್ಲಿ ಸಿದ್ದರಾಮಯ್ಯನವರು ಕನ್ನಡ ಕಾವಲು ಸಮಿತಿ ಅಧ್ಯಕ್ಷ ರಾದ್ರು. ಬಿಜೆಪಿಯ ಬೆಂಬಲದಿಂದಲೇ ಅಧ್ಯಕ್ಷರಾಗಿದ್ದು. ನನ್ನ ಹೆಣ ಕೂಡ ಬಿಜೆಪಿ ಕಚೇರಿ ಬಳಿ ಹೋಗಲ್ಲ ಎಂದು ಹೇಳ್ತೀರಿ. ಏಕೆ ಈ ರೀತಿ ಮಾತಾಡ್ತೀರಿ ನೀವು ಸತ್ತರೆ ಎಲ್ಲರೂ ಬರ್ತಾರೆ. ಬಿಜೆಪಿಯವರು , ಜೆಡಿಎಸ್‌ನವರು ಎಲ್ಲರೂ ಬಂದು ಹಾರ ಹಾಕ್ತಾರೆ. ನೀವು ಬೇಡ ಅಂತಿರಾ?. ಏಕೆ ಈ ರೀತಿ ಮಾತನಾಡುತ್ತೀರಿ ಎಂದು ಸಿಎಂ ಸಿದ್ದರಾಮಯ್ಯ ಅವರ ವಿರುದ್ಧ ವಾಗ್ದಾಳಿ ನಡೆಸಿದರು.

ನರೇಂದ್ರ ಮೋದಿಯವರು ಮತ್ತೆ ಪ್ರಧಾನಿಯಾಗುವುದನ್ನ ಯಾರು ತಪ್ಪಿಸಲು ಸಾಧ್ಯವಿಲ್ಲ. ದೇಶದ ಜನ ನರೇಂದ್ರ ಮೋದಿ ಪರವಾಗಿದ್ದಾರೆ. ಮಾಜಿ ಪ್ರಧಾನಿ ಹೆಚ್.ಡಿ. ದೇವೆಗೌಡರೇ ಪ್ರಧಾನಿಯವರಿಗೆ ಬೆಂಬಲ ವ್ಯಕ್ತಪಡಿಸಿದ್ದಾರೆ ಎಂದರು.

ವಿಧಾನ ಪರಿಷತ್ ಸದಸ್ಯ ಬಿ.ಎಂ.ಫಾರೂಕ್, ಪರಿಷತ್ ನ ಮಾಜಿ ಸದಸ್ಯರಾದ ಶ್ರೀಕಂಠೇಗೌಡ, ರಮೇಶ್ ಗೌಡ, ಮಾಜಿ ರಾಜ್ಯಸಭೆ ಸದಸ್ಯ ಕುಪೇಂದ್ರರೆಡ್ಡಿ ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.
Author
Suddi Moola
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಶ್ರೀ ಶಂಕರಭಾರತಿ ಶಾಲೆಯ ವಾರ್ಷಿಕೋತ್ಸವ ಮಾರ್ಕ್‌ಸ್‌ ಕಾರ್ಡ್‌ಗಾಗಿ ಮಕ್ಕಳನ್ನು ತಯಾರು ಮಾಡಬೇಡಿ - ಬೆಳಗಲ್ಸಮಾಜ ಸೇವಾ ಮನೋಭಾವ ರೂಪಿಸಿಕೊಳ್ಳಿ - ಪ್ರೊ. ಶಿವಾನಂದ ಕೆಳಗಿನಮನಿಚನ್ನಪ್ಪ ಅವರಿಗೆ ರಾಜ್ಯಮಟ್ಟದ ಜ್ಯೋತಿಬಾ ಪುಲೆ ಪ್ರಶಸ್ತಿಜಿಲ್ಲಾ ಟಾಸ್‌‌ಕೆರ್ಸ್ ಸಮಿತಿ ಸಭೆ ‘ರೈತರಿಗೆ ಯಾವುದೇ ತೊಂದರೆಯಾಗದಂತೆ ನೋಡಿಕೊಳ್ಳಿ’ರಾಷ್ಟ್ರೀಯ ಹೆದ್ದಾರಿ ಪಕ್ಕದ ಜಮೀನುಗಳಿಗೆ ಹೋಗಲು ದಾರಿ ಮಾಡಿಕೊಡಲು ಆಗ್ರಹಜವಾಹರ ನವೋದಯ ವಿದ್ಯಾರ್ಥಿ ಪ್ರಜ್ವಲ್ ರಾಜ್ಯಕ್ಕೆ ಪ್ರಥಮಮುದಗಲ್ ಪಿಎಸ್‌ಐ ಸೇರಿ ಪೊಲೀಸರ ಅಮಾನತ್ತು ಮಾಡಲು ಒತ್ತಾಯಹುಲಿಕೇರಿ ಒತ್ತುವರಿಯಾಗಿದ್ದರೆ ಕ್ರಮ ಕೈಗೊಳ್ಳಲಿ - ಹಿಟ್ನಾಳಪಟ್ಟಣ ಸಹಕಾರ ಬ್ಯಾಾಂಕ್ ಮಹಾಮಂಡಳದ ನಿರ್ದೇಶಕರಿಗೆ ಡಿ.ಎಚ್.ಓ ಸನ್ಮಾನ ಗೆಳೆಯರ ಬಳಗದ ಬೆಂಬಲ, ನೌಕರರೊಂದಿಗಿನ ಒಳ್ಳೆಯ ಒಡನಾಟದಿಂದ ಉನ್ನತ ಸ್ಥಾನಮಾನಇಂದು ಗ್ರಾಮೀಣ ಭಾಗದ ವಿವಿಧ ಪ್ರದೇಶದಲ್ಲಿ ವಿದ್ಯುತ್ ವ್ಯತ್ಯಯ