Web Stories
Suddimoola News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಕನಕಗಿರಿ ; ಮರಳಿ ಕಾಂಗ್ರೆಸ್‌ ಸೇರಿದ ಬಿಜೆಪಿ ಮುಖಂಡರುಗಳು

ಸುದ್ದಿಮೂಲವಾರ್ತೆ

ಕಾರಟಗಿ,ಏ.೭- ಕನಕಗಿರಿ ವಿಧಾನ ಸಭಾ ಕ್ಷೇತ್ರದ ಸಿದ್ದಾಪುರ ಹೋಬಳಿಯ ವ್ಯಾಪ್ತಿಯ ಬಿಜೆಪಿ ಪಕ್ಷದ ಪ್ರಭಾವಿ ಮುಖಂಡರಾದ ಜಿ.ಪಂ.ಮಾಜಿ ಉಪಾಧ್ಯಕ್ಷ ಬಿ.ಬಸವರಾಜಪ್ಪ, ಕೆ.ಎನ್. ಪಾಟೀಲ್, ಚಂದ್ರುಗೌಡ ಪೊಲೀಸ್ ಪಾಟೀಲ್ ಅವರು ಶುಕ್ರವಾರ ಬೆಂಗಳೂರಿನ ಕೆಪಿಸಿಸಿ ಕಚೇರಿಯಲ್ಲಿ ಮಾಜಿ ಮುಖ್ಯಮಂತ್ರಿ ಸಿದ್ಧರಾಮಯ್ಯರ ಸಮ್ಮುಖದಲ್ಲಿ ಬಿಜೆಪಿ ತೊರೆದು ಕಾಂಗ್ರೆಸ್ ಸೇರ್ಪಡೆಯಾದರು.

ಸಿದ್ಧರಾಮಯ್ಯ ಅವರು ಪಕ್ಷದ ಶಾಲು ಹಾಕಿ, ಧ್ವಜ ನೀಡಿ ಸೇರ್ಪಡೆ ಮಾಡಿಕೊಂಡು ಬಳಿಕ ಮಾತನಾಡಿ ರಾಜ್ಯದಲ್ಲಿ ಮತ್ತೆ ಕಾಂಗ್ರೆಸ್ ಅಧಿಕಾರಕ್ಕೆ ಬರಲಿದೆ .ಕಾರಣ ಕನಕಗಿರಿ ಕ್ಷೇತ್ರದ ಸಮಗ್ರ ಅಭಿವೃದ್ಧಿಗಾಗಿ ನಮ್ಮ ಪಕ್ಷದ ಅಭ್ಯರ್ಥಿಯಾಲಿರುವ ಮಾಜಿ ಸಚಿವ ಶಿವರಾಜ ತಂಗಡಗಿ ಅವರನ್ನು ಗೆಲ್ಲಿಸಿ ತರಬೇಕೆಂದರು.

ಕನಕಗಿರಿ ಕ್ಷೇತ್ರದ ಕಾಂಗ್ರೆಸ್ ಟಿಕೇಟ್ ಘೋಷಿತ ಅಭ್ಯರ್ಥಿ ಶಿವರಾಜ ಎಸ್. ತಂಗಡಗಿ, ಕೊಪ್ಪಳ ಜಿ.ಪಂ ಮಾಜಿ ಅಧ್ಯಕ್ಷ ಎಚ್. ವಿಶ್ವನಾಥರೆಡ್ಡಿ ಹೊಸಮನಿ, ಕೆಪಿಸಿಸಿ ಸದಸ್ಯ ಬಸವರಾಜ ನೀರಗಂಟಿ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಶರಣೇಗೌಡ ಮಾಲಿ ಪಾಟೀಲ್, ಮುಖಂಡರುಗಳಾದ ಕೆ. ಸಿದ್ದನಗೌಡ, ಶಿವರೆಡ್ಡಿ ನಾಯಕ ವಕೀಲ, ರೆಡ್ಡಿ ಶ್ರೀನಿವಾಸ, ಗೋಪಿಕೃಷ್ಣ, ವೇಂಕಟೇಶ್ವರರಾವ್, ಗದ್ದೆಪ್ಪ ನಾಯಕ, ರುದ್ರಗೌಡ ನಂದಿಹಳ್ಳಿ, ಜನಗಂಡೆಪ್ಪ ಪೂಜಾರ ಸೇರಿದಂತೆ ಪಕ್ಷದ ಪ್ರಮೂಖರು ಮತ್ತು ಕಾರ್ಯಕರ್ತರಿದ್ದರು.
Author
Suddi Moola
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಶ್ರೀ ಶಂಕರಭಾರತಿ ಶಾಲೆಯ ವಾರ್ಷಿಕೋತ್ಸವ ಮಾರ್ಕ್‌ಸ್‌ ಕಾರ್ಡ್‌ಗಾಗಿ ಮಕ್ಕಳನ್ನು ತಯಾರು ಮಾಡಬೇಡಿ - ಬೆಳಗಲ್ಸಮಾಜ ಸೇವಾ ಮನೋಭಾವ ರೂಪಿಸಿಕೊಳ್ಳಿ - ಪ್ರೊ. ಶಿವಾನಂದ ಕೆಳಗಿನಮನಿಚನ್ನಪ್ಪ ಅವರಿಗೆ ರಾಜ್ಯಮಟ್ಟದ ಜ್ಯೋತಿಬಾ ಪುಲೆ ಪ್ರಶಸ್ತಿಜಿಲ್ಲಾ ಟಾಸ್‌‌ಕೆರ್ಸ್ ಸಮಿತಿ ಸಭೆ ‘ರೈತರಿಗೆ ಯಾವುದೇ ತೊಂದರೆಯಾಗದಂತೆ ನೋಡಿಕೊಳ್ಳಿ’ರಾಷ್ಟ್ರೀಯ ಹೆದ್ದಾರಿ ಪಕ್ಕದ ಜಮೀನುಗಳಿಗೆ ಹೋಗಲು ದಾರಿ ಮಾಡಿಕೊಡಲು ಆಗ್ರಹಜವಾಹರ ನವೋದಯ ವಿದ್ಯಾರ್ಥಿ ಪ್ರಜ್ವಲ್ ರಾಜ್ಯಕ್ಕೆ ಪ್ರಥಮಮುದಗಲ್ ಪಿಎಸ್‌ಐ ಸೇರಿ ಪೊಲೀಸರ ಅಮಾನತ್ತು ಮಾಡಲು ಒತ್ತಾಯಹುಲಿಕೇರಿ ಒತ್ತುವರಿಯಾಗಿದ್ದರೆ ಕ್ರಮ ಕೈಗೊಳ್ಳಲಿ - ಹಿಟ್ನಾಳಪಟ್ಟಣ ಸಹಕಾರ ಬ್ಯಾಾಂಕ್ ಮಹಾಮಂಡಳದ ನಿರ್ದೇಶಕರಿಗೆ ಡಿ.ಎಚ್.ಓ ಸನ್ಮಾನ ಗೆಳೆಯರ ಬಳಗದ ಬೆಂಬಲ, ನೌಕರರೊಂದಿಗಿನ ಒಳ್ಳೆಯ ಒಡನಾಟದಿಂದ ಉನ್ನತ ಸ್ಥಾನಮಾನಇಂದು ಗ್ರಾಮೀಣ ಭಾಗದ ವಿವಿಧ ಪ್ರದೇಶದಲ್ಲಿ ವಿದ್ಯುತ್ ವ್ಯತ್ಯಯ