Web Stories
Suddimoola News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ತುಳಿತಕ್ಕೊಳಗಾದ ಸಮುದಾಯಗಳ ಆರಾಧ್ಯ ದೈವ ಬ್ರಹ್ಮಶ್ರೀ ನಾರಾಯಣಗುರು

ಸುದ್ದಿಮೂಲ ವಾರ್ತೆ

ತುಮಕೂರು, ಆ.31 : ಬ್ರಹ್ಮಶ್ರೀ ನಾರಾಯಣ ಗುರುಗಳು ನಮ್ಮಂತೆ ಸಾಮಾನ್ಯ ಕುಟುಂಬದಲ್ಲಿ ಜನಿಸಿದರೂ ಸಹ ಸಾಮಾಜಿಕ ಸುಧಾರಣೆಗಾಗಿ ಶ್ರಮಿಸುವ ಮೂಲಕ ತುಳಿತಕ್ಕೊಳಗಾದ ಸಮುದಾಯಗಳ ಆರಾಧ್ಯ ದೈವವಾದರು ಎಂದು ತುಮಕೂರು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ಕೆ.ಎಸ್. ಸಿದ್ದಲಿಂಗಪ್ಪ ಅಭಿಪ್ರಾಯಪಟ್ಟರು.

ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಮಹಾನಗರ ಪಾಲಿಕೆ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ಹಾಗೂ ಜಿಲ್ಲಾ ಆರ್ಯ ಈಡಿಗರ ಸಂಘ, ಶ್ರೀ ನಾರಾಯಣ ಗುರು ಸಮಾಜದ ಸಂಯುಕ್ತಾಶ್ರಯದಲ್ಲಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಕಚೇರಿಯಲ್ಲಿ ಹಮ್ಮಿಕೊಂಡಿದ್ದ ಬ್ರಹ್ಮಶ್ರೀ ನಾರಾಯಣಗುರು ಜಯಂತಿ ಕಾರ್ಯಕ್ರಮದಲ್ಲಿ ನಾರಾಯಣಗುರು ಅವರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಸಲ್ಲಿಸಿದ ನಂತರ ಮಾತನಾಡಿದ ಅವರು, ಇಂತಹ ಮಹನೀಯರ ವಿಚಾರ-ಧಾರೆಗಳನ್ನು ನಾವೆಲ್ಲರೂ ಜೀವನದಲ್ಲಿ ಅಳವಡಿಸಿಕೊಳ್ಳಬೇಕು ಎಂದು ತಿಳಿಸಿದರು.

ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕ ಡಿ.ಎಂ. ರವಿಕುಮಾರ್ ಮಾತನಾಡುತ್ತಾ, ಶ್ರೀ ನಾರಾಯಣ ಗುರುಗಳ ಸಾಮಾಜಿಕ ಕಾರ್ಯಗಳನ್ನು ಗುರುತಿಸಿ, ಮುಂದಿನ ಪೀಳಿಗೆಗೆ ಅವರ ಆದರ್ಶಗಳನ್ನು ಪರಿಚಯಿಸುವ ಸಲುವಾಗಿ ಶ್ರೀ ನಾರಾಯಣ ಗುರುಗಳ ಜಯಂತಿಯನ್ನು ಸರ್ಕಾರಿ ಕಾರ್ಯಕ್ರಮವನ್ನಾಗಿ ಆಚರಿಸಲಾಗುತ್ತಿದೆ. ವಿವಿಧ ಸಂಘ ಸಂಸ್ಥೆಗಳ ಸಹಕಾರದಲ್ಲಿ ಬರುವ ಅಕ್ಟೋಬರ್ 7ರಂದು ಜಿಲ್ಲಾ ಮಟ್ಟದಲ್ಲಿ ಬೃಹತ್ ಪ್ರಮಾಣದ ಜಯಂತ್ಯೋತ್ಸವವನ್ನು ಆಯೋಜಿಸಲಾಗುವುದು ಎಂದು ತಿಳಿಸಿದರು.

ಕಾರ್ಯಕ್ರಮದಲ್ಲಿ ಭಾಗವಹಿಸಿದ ಜಿಲ್ಲಾ ಆರ್ಯ ಈಡಿಗರ ಜಿಲ್ಲಾಧ್ಯಕ್ಷ ಕೆ.ವಿ. ಅಜಯ್ ಕುಮಾರ್ ಮಾತನಾಡುತ್ತಾ, ಬ್ರಹ್ಮಶ್ರೀ ನಾರಾಯಣ ಗುರುಗಳು ಅಸ್ಪೃಶ್ಯತೆಯಂತಹ ಕೆಟ್ಟ ಆಚರಣೆಯನ್ನು ನಿರ್ಮೂಲನೆ ಮಾಡಲು ಶ್ರಮಿಸಿದ ಧೀಮಂತರು ಎಂದು ತಿಳಿಸಿದರು.

ಜಿಲ್ಲಾ ಹಿಂದುಳಿದ ವರ್ಗಗಳ ಅಧ್ಯಕ್ಷ ಟಿ.ಕೆ. ಧನಿಯಾ ಕುಮಾರ್ ಮಾತನಾಡುತ್ತಾ, ಆರ್ಯ ಈಡಿಗರ ಸಮಾಜವು ಸಾಮಾಜಿಕ, ರಾಜಕೀಯ, ಸಾಂಸ್ಕೃತಿಕ ಸೇರಿದಂತೆ ನಾಡಿನ ಹಲವಾರು ಕ್ಷೇತ್ರಗಳಲ್ಲಿ ತನ್ನದೇ ಆದ ಕೊಡುಗೆಯನ್ನು ನೀಡಿದೆ. ಬ್ರಹ್ಮಶ್ರೀ ನಾರಾಯಣ ಗುರುಗಳ

ಜಯಂತಿಯನ್ನು ಸರ್ಕಾರದ ಕಾರ್ಯಕ್ರಮವನ್ನಾಗಿ ಘೋಷಿಸಿ ಆಚರಣೆಗೆ ತಂದಿರುವುದು ಅಭಿನಂದನಾರ್ಹ ಎಂದು ತಿಳಿಸಿದರು.

ಕಾರ್ಯಕ್ರಮದಲ್ಲಿ ತುಮಕೂರು ಜಿಲ್ಲಾ ಆರ್ಯ ಈಡಿಗರ ಸಂಘದ ಉಪಾಧ್ಯಕ್ಷ ವೆಂಕಟಸ್ವಾಮಿ, ಪ್ರಧಾನ ಕಾರ್ಯದರ್ಶಿ ಮಲ್ಲಸಂದ್ರ ಶಿವಣ್ಣ, ಜಂಟಿ ಕಾರ್ಯದರ್ಶಿ ನಾರಾಯಣ್, ಖಜಾಂಚಿ ಲಕ್ಷ್ಮಿನಾರಾಯಣ, ಪದಾಧಿಕಾರಿಗಳಾದ ಪುರುಷೋತ್ತಮ್, ಚಂದ್ರಕಲಾ, ಪ್ರಭಾ ವಸಂತ್, ವಸಂತ್, ರಾಮ ಹನುಮಯ್ಯ, ತೇಜು ವೆಂಕಟಸ್ವಾಮಿ,ಜಿಲ್ಲಾ ನಾರಾಯಣ ಗುರುಗಳ ಸಮಾಜದ ಉಪಾಧ್ಯಕ್ಷ ಮಣಿ, ಕಾರ್ಯದರ್ಶಿ ರಾಜೇಶ್, ಖಜಾಂಚಿ ರಾಜನ್, ರಾಮಚಿನ್ನಯ್ಯ, ವಸಂತರಾಜನ್, ಬೀನಾಬಾಯಿ, ಪ್ರೇಮ ಮಾಧವನ್ ಮೊದಲಾದವರು ಉಪಸ್ಥಿತರಿದ್ದರು.
Author
Suddi Moola
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಶ್ರೀ ಶಂಕರಭಾರತಿ ಶಾಲೆಯ ವಾರ್ಷಿಕೋತ್ಸವ ಮಾರ್ಕ್‌ಸ್‌ ಕಾರ್ಡ್‌ಗಾಗಿ ಮಕ್ಕಳನ್ನು ತಯಾರು ಮಾಡಬೇಡಿ - ಬೆಳಗಲ್ಸಮಾಜ ಸೇವಾ ಮನೋಭಾವ ರೂಪಿಸಿಕೊಳ್ಳಿ - ಪ್ರೊ. ಶಿವಾನಂದ ಕೆಳಗಿನಮನಿಚನ್ನಪ್ಪ ಅವರಿಗೆ ರಾಜ್ಯಮಟ್ಟದ ಜ್ಯೋತಿಬಾ ಪುಲೆ ಪ್ರಶಸ್ತಿಜಿಲ್ಲಾ ಟಾಸ್‌‌ಕೆರ್ಸ್ ಸಮಿತಿ ಸಭೆ ‘ರೈತರಿಗೆ ಯಾವುದೇ ತೊಂದರೆಯಾಗದಂತೆ ನೋಡಿಕೊಳ್ಳಿ’ರಾಷ್ಟ್ರೀಯ ಹೆದ್ದಾರಿ ಪಕ್ಕದ ಜಮೀನುಗಳಿಗೆ ಹೋಗಲು ದಾರಿ ಮಾಡಿಕೊಡಲು ಆಗ್ರಹಜವಾಹರ ನವೋದಯ ವಿದ್ಯಾರ್ಥಿ ಪ್ರಜ್ವಲ್ ರಾಜ್ಯಕ್ಕೆ ಪ್ರಥಮಮುದಗಲ್ ಪಿಎಸ್‌ಐ ಸೇರಿ ಪೊಲೀಸರ ಅಮಾನತ್ತು ಮಾಡಲು ಒತ್ತಾಯಹುಲಿಕೇರಿ ಒತ್ತುವರಿಯಾಗಿದ್ದರೆ ಕ್ರಮ ಕೈಗೊಳ್ಳಲಿ - ಹಿಟ್ನಾಳಪಟ್ಟಣ ಸಹಕಾರ ಬ್ಯಾಾಂಕ್ ಮಹಾಮಂಡಳದ ನಿರ್ದೇಶಕರಿಗೆ ಡಿ.ಎಚ್.ಓ ಸನ್ಮಾನ ಗೆಳೆಯರ ಬಳಗದ ಬೆಂಬಲ, ನೌಕರರೊಂದಿಗಿನ ಒಳ್ಳೆಯ ಒಡನಾಟದಿಂದ ಉನ್ನತ ಸ್ಥಾನಮಾನಇಂದು ಗ್ರಾಮೀಣ ಭಾಗದ ವಿವಿಧ ಪ್ರದೇಶದಲ್ಲಿ ವಿದ್ಯುತ್ ವ್ಯತ್ಯಯ