Web Stories
Suddimoola News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಕೆಟ್ಟು ನಿಂತ ಕುಡಿಯುವ ನೀರಿನ ಘಟಕ

ಸುದ್ದಿಮೂಲ ವಾರ್ತೆ

ಚೇಳೂರು,ಅ.18: ತಾಲೂಕಿನ ಅನೇಕ ಗ್ರಾಮಗಳಲ್ಲಿ ಶುದ್ಧ ಕುಡಿಯುವ ನೀರಿನ ಘಟಕಗಳು ಕೆಟ್ಟು ನಿಂತಿದ್ದರೂ ಸಂಬಂಧಪಟ್ಟ ಇಲಾಖೆ ಅಧಿಕಾರಿಗಳು ರಿಪೇರಿ ಮಾಡಲು ಮುಂದಾಗುತ್ತಿಲ್ಲ.

ಚಾಕವೇಲು ಗ್ರಾಮ ಪಂಚಾಯ್ತಿಯ ಬುದ್ಧಲವಾರಪಲ್ಲಿ ಗ್ರಾಮದಲ್ಲಿ ಮೂರು ವರ್ಷದ ಹಿಂದೆ ಈ ಘಟಕ ನಿರ್ಮಾಣ ಮಾಡಿ, ಬಳಕೆ ಮಾಡಲು ಪ್ರಾರಂಭ ಮಾಡಲಾಗಿತ್ತು. ಆದರೆ, ಇದು ಮೂರೇ ತಿಂಗಳಿಗೆ ಕೆಟ್ಟು ನಿಂತಿದೆ ಎಂದು ಗ್ರಾಮಸ್ಥರು ಹಾಗು ಪಂಚಾಯ್ತಿ ಸದಸ್ಯ ಆರೋಪ ಮಾಡಿದ್ದಾರೆ. ಕೆಟ್ಟು ಮೂರು ನಾಲ್ಕು ವರ್ಷ ಕಳೆಯುತ್ತ ಬಂದರು ಇದುವರೆಗೂ ಯಾರು ಇದನ್ನು ಸರಿಪಡಿಸಲು ಮುಂದಾಗಿಲ್ಲ ಎಂದು ಬೇಸರ ವ್ಯಕ್ತಪಡಿಸಿದ್ದಾರೆ.

ಈ ಯೋಜನೆ ಜನರಿಗೆ ಉಪಯೋಗ ಆಗುವ ಬದಲು ಕೆಲ ಗುತ್ತಿಗೆದಾರರ ಹಾಗೂ ಅಧಿಕಾರಿಗಳ ಜೇಬು ತುಂಬಿಸುವ ಯೋಜನೆ ಎಂದು ಗಂಭೀರ ಆರೋಪಗಳು ಕೇಳಿ ಬಂದಿವೆ. ತಾಲ್ಲೂಕಿನದ್ಯಂತ ಕೋಟಿ ಕೋಟಿ ಅನುದಾನ ಈ ಯೋಜನೆಗೆ ಬಳಕೆ ಮಾಡಲಾಗಿದೆ. ಆದರೆ, ಈ ಕೋಟಿ ಹಣವೆಲ್ಲಾ ಸಮುದ್ರಕ್ಕೆ ಉಪ್ಪು ಸುರಿದಂತೆ ಆಗಿದೆ.

ಸಣ್ಣ ನೀರಾವರಿ ಇಲಾಖೆ, ಹಾಗು ಜಿಲ್ಲಾ ನಿರ್ಮಿತಿ ಕೇಂದ್ರ ಇಲಾಖೆಗಳಿಗೆ ಸರ್ಕಾರ ಈ ಯೋಜನೆಗೆ ಅನುದಾನ ನೀಡುತ್ತದೆ. ಈ ಇಲಾಖೆಗಳು ಟೆಂಟರ್ ಮೂಲಕ ಗುತ್ತಿಗೆದಾರರಿಗೆ ಕಾಮಗಾರಿಗಳನ್ನು ನೀಡಲಾಗುತ್ತದೆ. ಮೂಲಗಳ ಪ್ರಕಾರ ಗುತ್ತಿಗೆ ಪಡೆದ ಗುತ್ತಿಗೆದಾರರು ಘಟಕ ನಿರ್ಮಾಣ ಮಾಡಿ, ಐದು ವರ್ಷ ಘಟಕದ ನಿರ್ವಹಣೆ ಮಾಡಿ ನಂತರ ಸ್ಥಳೀಯ ಗ್ರಾಮ ಪಂಚಾಯ್ತಿಗಳಿಗೆ ಘಟಕ ಒಪ್ಪಿಸಬೇಕಾಗುತ್ತದೆ. ಆದರೆ, ಗುತ್ತಿಗೆ ಪಡೆದ ವ್ಯಕ್ತಿ ಘಟಕ ನಿರ್ಮಾಣ ಮಾಡಿ ಬಿಲ್ ಪಡೆದ ಬಳಿಕ ಘಟಕಗಳತ್ತ ಬರುವುದೇ ಇಲ್ಲ.

ಇದರ ಪರಿಣಾಮ "ಅರಸನಿಲ್ಲದ ರಾಜ್ಯ, ದೀಪವಿಲ್ಲದ ಮನೆ" ಎಂಬಂತೆ ಆಗಿದೆ. ಇವುಗಳ ಪರಿಸ್ಥಿತಿ, ಇದರಿಂದ ಸಂಬಂಧಪಟ್ಟ ಅಧಿಕಾರಿಗಳು ತಾಲ್ಲೂಕಿನದ್ಯಂತ ಕೆಟ್ಟುನಿಂತ ಘಟಕಗಳನ್ನು ಸರಿಪಡಿಸಿ ಗ್ರಾಮಗಳ ಜನರಿಗೆ ಅನುಕೂಲ ಮಾಡಿಕೊಡಬೇಕು ಎಂದು ಒತ್ತಾಯ ಮಾಡಿದ್ದಾರೆ.
Author
Suddi Moola
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಶ್ರೀ ಶಂಕರಭಾರತಿ ಶಾಲೆಯ ವಾರ್ಷಿಕೋತ್ಸವ ಮಾರ್ಕ್‌ಸ್‌ ಕಾರ್ಡ್‌ಗಾಗಿ ಮಕ್ಕಳನ್ನು ತಯಾರು ಮಾಡಬೇಡಿ - ಬೆಳಗಲ್ಸಮಾಜ ಸೇವಾ ಮನೋಭಾವ ರೂಪಿಸಿಕೊಳ್ಳಿ - ಪ್ರೊ. ಶಿವಾನಂದ ಕೆಳಗಿನಮನಿಚನ್ನಪ್ಪ ಅವರಿಗೆ ರಾಜ್ಯಮಟ್ಟದ ಜ್ಯೋತಿಬಾ ಪುಲೆ ಪ್ರಶಸ್ತಿಜಿಲ್ಲಾ ಟಾಸ್‌‌ಕೆರ್ಸ್ ಸಮಿತಿ ಸಭೆ ‘ರೈತರಿಗೆ ಯಾವುದೇ ತೊಂದರೆಯಾಗದಂತೆ ನೋಡಿಕೊಳ್ಳಿ’ರಾಷ್ಟ್ರೀಯ ಹೆದ್ದಾರಿ ಪಕ್ಕದ ಜಮೀನುಗಳಿಗೆ ಹೋಗಲು ದಾರಿ ಮಾಡಿಕೊಡಲು ಆಗ್ರಹಜವಾಹರ ನವೋದಯ ವಿದ್ಯಾರ್ಥಿ ಪ್ರಜ್ವಲ್ ರಾಜ್ಯಕ್ಕೆ ಪ್ರಥಮಮುದಗಲ್ ಪಿಎಸ್‌ಐ ಸೇರಿ ಪೊಲೀಸರ ಅಮಾನತ್ತು ಮಾಡಲು ಒತ್ತಾಯಹುಲಿಕೇರಿ ಒತ್ತುವರಿಯಾಗಿದ್ದರೆ ಕ್ರಮ ಕೈಗೊಳ್ಳಲಿ - ಹಿಟ್ನಾಳಪಟ್ಟಣ ಸಹಕಾರ ಬ್ಯಾಾಂಕ್ ಮಹಾಮಂಡಳದ ನಿರ್ದೇಶಕರಿಗೆ ಡಿ.ಎಚ್.ಓ ಸನ್ಮಾನ ಗೆಳೆಯರ ಬಳಗದ ಬೆಂಬಲ, ನೌಕರರೊಂದಿಗಿನ ಒಳ್ಳೆಯ ಒಡನಾಟದಿಂದ ಉನ್ನತ ಸ್ಥಾನಮಾನಇಂದು ಗ್ರಾಮೀಣ ಭಾಗದ ವಿವಿಧ ಪ್ರದೇಶದಲ್ಲಿ ವಿದ್ಯುತ್ ವ್ಯತ್ಯಯ