Web Stories
Suddimoola News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

‘ಇಂಡಿಯ ಒಕ್ಕೂಟ’ವನ್ನು ಬಲಪಡಿಸಲು ಕಾವೇರಿ  ನದಿ ನೀರು ಬಿಡುಗಡೆ: ಬಿ.ಎಸ್.ಯಡಿಯೂರಪ್ಪ

ಸುದ್ದಿಮೂಲ ವಾರ್ತೆ

ಬೆಂಗಳೂರು,ಸೆ.15:ತಮಿಳುನಾಡಿನಲ್ಲಿ ಡಿಎಂಕೆ ಸರಕಾರ ಇರುವುದರಿಂದ ‘ಇಂಡಿಯ ಒಕ್ಕೂಟ’ವನ್ನು ಬಲಪಡಿಸಲು ನಿತ್ಯ 5 ಸಾವಿರ ಕ್ಯೂಸೆಕ್ಸ್ ಕಾವೇರಿ ನೀರನ್ನು ಕರ್ನಾಟಕದಿಂದ ಬಿಡಲಾಗುತ್ತಿದೆ. ಸಿದ್ದರಾಮಯ್ಯ ಮತ್ತು ಡಿ.ಕೆ.ಶಿವಕುಮಾರ್ ಅವರು ಮುಂಚೆಯೇ ಸುಪ್ರೀಂ ಕೋರ್ಟಿನಲ್ಲಿ ದಾವೆ ಹೂಡಬೇಕಿತ್ತು ಎಂದು ಬಿಜೆಪಿ ಕೇಂದ್ರೀಯ ಸಂಸದೀಯ ಮಂಡಳಿ ಸದಸ್ಯ ಮತ್ತು ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ತಿಳಿಸಿದರು.

ಮಲ್ಲೇಶ್ವರದ ಬಿಜೆಪಿ ರಾಜ್ಯ ಕಾರ್ಯಾಲಯ “ಜಗನ್ನಾಥ ಭವನ”ದಲ್ಲಿ ಇಂದು ಮಾಧ್ಯಮ ಪ್ರತಿನಿಧಿಗಳ ಜೊತೆ ಮಾತನಾಡಿದ ಅವರು, ಸುಪ್ರೀಂ ಕೋರ್ಟನ್ನು ಅಪ್ರೋಚ್ ಮಾಡದೆ ತಮಿಳುನಾಡನ್ನು ತೃಪ್ತಿಪಡಿಸಲು ನೀರು ಹರಿಸಿರುವುದು ಅಕ್ಷಮ್ಯ ಅಪರಾಧ. ಸುಪ್ರೀಂ ಕೋರ್ಟಿಗೆ ಈ ವಿಚಾರವನ್ನು ಮನವರಿಕೆ ಮಾಡುವಲ್ಲಿ ಈ ಸರಕಾರ ಸಂಪೂರ್ಣ ವಿಫಲವಾಗಿದೆ ಎಂದು ಆಕ್ಷೇಪಿಸಿದರು.

ಕಾವೇರಿ ಸಂಕಷ್ಟವನ್ನು ಸುಪ್ರೀಂ ಕೋರ್ಟಿಗೆ ಮನವರಿಕೆ ಮಾಡಬೇಕಾದುದು ಅತ್ಯಂತ ಅವಶ್ಯಕ. ಇದನ್ನು ಸರಕಾರ ಮಾಡುತ್ತಿಲ್ಲ. ತಮಿಳುನಾಡಿನಲ್ಲಿ ಕಾವೇರಿ ನೀರನ್ನು ನಂಬಿ ಹೆಚ್ಚು ಪ್ರದೇಶದಲ್ಲಿ ಬೆಳೆ ಬೆಳೆಯಲಾಗುತ್ತಿದೆ. ಕಾಯ್ದೆ ಪ್ರಕಾರ 1.08 ಲಕ್ಷ ಹೆಕ್ಟೇರ್ ಬೆಳೆ ಬೆಳೆಯಬಹುದು. ಆದರೆ, 3.50 ಲಕ್ಷ ಹೆಕ್ಟೇರ್ ಪ್ರದೇಶದಲ್ಲಿ ಬೆಳೆ ಬೆಳೆಯುತ್ತಿದ್ದಾರೆ. ಇಷ್ಟು ಪ್ರದೇಶಕ್ಕೆ ನೀರು ಕೊಡಲು ಅಸಾಧ್ಯ ಎಂದು ರಾಜ್ಯ ಸರಕಾರವು ಸುಪ್ರೀಂ ಕೋರ್ಟಿಗೆ ಅರ್ಥ ಮಾಡಿಸಬೇಕಿದೆ. ಆದರೆ, ಅದರಲ್ಲಿ ವಿಫಲವಾಗಿದೆ ಎಂದು ನುಡಿದರು.

ತಮಿಳುನಾಡಿನಲ್ಲಿ ಕುರುವೈ ಬೆಳೆಯನ್ನು ಹಿಂದೆಂದಿಗಿಂತ ಹೆಚ್ಚು ಬೆಳೆಯಲಾಗುತ್ತಿದೆ. ರಾಜ್ಯದ ರೈತರ ಪರಿಸ್ಥಿತಿ ದಿನೇದಿನೇ ಹದಗೆಡುತ್ತಿದೆ ಎಂದರಲ್ಲದೆ, ಸುಪ್ರೀಂ ಕೋರ್ಟಿನ ಮುಂದೆ ಸಮರ್ಪಕ ವಾದ ಮಂಡಿಸಿ ರಾಜ್ಯದ ಹಿತವನ್ನು ಕಾಪಾಡಲು ಆಗ್ರಹಿಸಿದರು. ಸಿದ್ದರಾಮಯ್ಯ ಮತ್ತು ಡಿ.ಕೆ.ಶಿವಕುಮಾರ್ ಅವರ ವೈಫಲ್ಯವನ್ನು ಖಂಡಿಸುವುದಾಗಿ ತಿಳಿಸಿದರು.
Author
Suddi Moola
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಶ್ರೀ ಶಂಕರಭಾರತಿ ಶಾಲೆಯ ವಾರ್ಷಿಕೋತ್ಸವ ಮಾರ್ಕ್‌ಸ್‌ ಕಾರ್ಡ್‌ಗಾಗಿ ಮಕ್ಕಳನ್ನು ತಯಾರು ಮಾಡಬೇಡಿ - ಬೆಳಗಲ್ಸಮಾಜ ಸೇವಾ ಮನೋಭಾವ ರೂಪಿಸಿಕೊಳ್ಳಿ - ಪ್ರೊ. ಶಿವಾನಂದ ಕೆಳಗಿನಮನಿಚನ್ನಪ್ಪ ಅವರಿಗೆ ರಾಜ್ಯಮಟ್ಟದ ಜ್ಯೋತಿಬಾ ಪುಲೆ ಪ್ರಶಸ್ತಿಜಿಲ್ಲಾ ಟಾಸ್‌‌ಕೆರ್ಸ್ ಸಮಿತಿ ಸಭೆ ‘ರೈತರಿಗೆ ಯಾವುದೇ ತೊಂದರೆಯಾಗದಂತೆ ನೋಡಿಕೊಳ್ಳಿ’ರಾಷ್ಟ್ರೀಯ ಹೆದ್ದಾರಿ ಪಕ್ಕದ ಜಮೀನುಗಳಿಗೆ ಹೋಗಲು ದಾರಿ ಮಾಡಿಕೊಡಲು ಆಗ್ರಹಜವಾಹರ ನವೋದಯ ವಿದ್ಯಾರ್ಥಿ ಪ್ರಜ್ವಲ್ ರಾಜ್ಯಕ್ಕೆ ಪ್ರಥಮಮುದಗಲ್ ಪಿಎಸ್‌ಐ ಸೇರಿ ಪೊಲೀಸರ ಅಮಾನತ್ತು ಮಾಡಲು ಒತ್ತಾಯಹುಲಿಕೇರಿ ಒತ್ತುವರಿಯಾಗಿದ್ದರೆ ಕ್ರಮ ಕೈಗೊಳ್ಳಲಿ - ಹಿಟ್ನಾಳಪಟ್ಟಣ ಸಹಕಾರ ಬ್ಯಾಾಂಕ್ ಮಹಾಮಂಡಳದ ನಿರ್ದೇಶಕರಿಗೆ ಡಿ.ಎಚ್.ಓ ಸನ್ಮಾನ ಗೆಳೆಯರ ಬಳಗದ ಬೆಂಬಲ, ನೌಕರರೊಂದಿಗಿನ ಒಳ್ಳೆಯ ಒಡನಾಟದಿಂದ ಉನ್ನತ ಸ್ಥಾನಮಾನಇಂದು ಗ್ರಾಮೀಣ ಭಾಗದ ವಿವಿಧ ಪ್ರದೇಶದಲ್ಲಿ ವಿದ್ಯುತ್ ವ್ಯತ್ಯಯ