Web Stories
Suddimoola News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಕಾಂತರಾಜು, ಸದಾಶಿವ ಆಯೋಗ ವರದಿ ಜಾರಿಗೆ ಬಿಎಸ್‌ಪಿ ಆಗ್ರಹ

ಸುದ್ದಿಮೂಲ ವಾರ್ತೆ

ದೇವನಹಳ್ಳಿ, ನ.20: ಕಾಂತರಾಜು ಆಯೋಗ ಮತ್ತು ಸದಾಶಿವ ಆಯೋಗದ ವರದಿಯನ್ನು ಕೂಡಲೇ ಸರಕಾರ ಜಾರಿಗೊಳಿಸಿ, ಇಲ್ಲವಾದರೆ ಖುರ್ಚಿ ಖಾಲಿ ಮಾಡಿ ಎಂದು ಬಹುಜನ ಸಮಾಜ ಪಾರ್ಟಿ ರಾಜ್ಯ ಕಾರ್ಯದರ್ಶಿ ನಂದಿಗುಂದ ಪಿ.ವೆಂಕಟೇಶ್ ಆಗ್ರಹಿಸಿದರು.

ದೇವನಹಳ್ಳಿ ಪಟ್ಟಣದ ಪ್ರವಾಸಿ ಮಂದಿರದಲ್ಲಿ ಬಹುಜನ ಸಮಾಜ ಪಾರ್ಟಿ ವತಿಯಿಂದ ಹಮ್ಮಿಕೊಂಡಿದ್ದ ಸಭೆಯಲ್ಲಿ ಮಾತನಾಡಿ, ಸದಾಶಿವ ಆಯೋಗದ ವರದಿ ಜಾರಿ ಮಾಡಿ ಒಳಮೀಸಲಾತಿ ಕಲ್ಪಿಸಬೇಕೆಂದು ಒತ್ತಾಯ ಮಾಡಲಾಗುತ್ತಿದೆ ಎಂದು ಹೇಳಿದರು.

ರಾಜ್ಯದಲ್ಲಿ ಪರಿಶಿಷ್ಟ ಜಾತಿಯ 101 ಜಾತಿಗಳ ಪೈಕಿ ಮಾದಿಗ ಮತ್ತು ಮಾದಿಗ ಸಂಬಂಧಿತ 49 ಜಾತಿಗಳಿದ್ದು, ಇದೇ ಅಧಿಕವಾಗಿದೆ. ಕೆಲವು ಐತಿಹಾಸಿಕ ಕಾರಣಗಳಿಂದ ಈ ಸಮಾಜಕ್ಕೆ ಶಿಕ್ಷಣ, ಸರಕಾರಿ ಸೇವೆ ಮತ್ತು ರಾಜಕೀಯ ಮತ್ತಿತರ ರಂಗಗಳಲ್ಲಿ ಪ್ರಾತಿನಿಧ್ಯ ಇಲ್ಲದೆ ಹಿಂದುಳಿಯವಂತೆ ಆಗಿದೆ. ಈ ಅನ್ಯಾಯವನ್ನು ಇನ್ನೂ ಸಹಿಸಲಾಗುವುದಿಲ್ಲ. ಈಗಾಗಲೇ ರಾಜ್ಯದಲ್ಲಿ ಕಳೆದ 30 ವರ್ಷಗಳಿಂದ ವಿವಿಧ ಚಳುವಳಿ, ಪಾದಯಾತ್ರೆ ಮಾಡಲಾಗಿದೆ ಎಂದು ಹೇಳಿದರು.

ಸಾಮಾಜಿಕ ನ್ಯಾಯ ಎತ್ತಿಹಿಡಿಯುವ ಕಾಂತರಾಜು ಆಯೋಗ ಮತ್ತು ಸದಾಶಿವ ಆಯೋಗದ ವರದಿಯನ್ನು ವಿಧಾನಸಭೆಯಲ್ಲಿ ಮಂಡಿಸಿ, ಚರ್ಚಿಸಿ ಕೇಂದ್ರ ಸರಕಾರಕ್ಕೆ ಶಿಫಾರಸ್ಸು ಮಾಡಬೇಕು. ಇಲ್ಲವಾದರೆ ಸರಕಾರದ ವಿರುದ್ಧ ಇದೇ ನ.21ರಂದು ರಾಜ್ಯದಾದ್ಯಂತ ಎಲ್ಲಾ ಜಿಲ್ಲಧಿಕಾರಿಗಳ ಕಛೇರಿ ಮುಂದೆ ಧರಣಿ ಸತ್ಯಾಗ್ರಹವನ್ನು ಹಮ್ಮಿಕೊಳ್ಳಲಾಗುತ್ತದೆ ಎಂದು ಎಚ್ಚರಿಸಿದರು.

ಈ ವೇಳೆ ಬಹುಜನ ಸಮಾಜ ಪಾರ್ಟಿಯ ಜಿಲ್ಲಾ ಉಪಾಧ್ಯಕ್ಷ ನಾಗರಾಜ್, ದೇವಪ್ಪ, ಗೋವಿಂದರಾಜ್, ತಾಲೂಕು ಅಧ್ಯಕ್ಷ ನಾಗರಾಜ್, ಉಪಾಧ್ಯಕ್ಷ ದೇವರಾಜ್, ಕಾರ್ಯದರ್ಶಿ ನರಸಿಂಹಮೂರ್ತಿ, ಗಂಗಪ್ಪ, ಮಲ್ಲೇಪುರ ರಾಮಾಂಜಿನಪ್ಪ, ವಿಜಯಪುರ ಜಗದೀಶ್, ತೂಬಗೆರೆ ನಾರಾಯಣಪ್ಪ, ಮಂಜುನಾಥ್, ವಿಜಯಪುರ ನಾಗರಾಜ್, ಉಪಾಧ್ಯಕ್ಷೆ ರಾಧಮ್ಮ, ತುಬುಗೆರೆ ನರಸಮ್ಮ, ದೇವರಾಜ್ ಮುನಿರಾಜು, ಚನ್ನರಾಯಪಟ್ಟಣ ಮಂಜುನಾಥ್ ಮತ್ತಿತರರು ಇದ್ದರು.
Author
Suddi Moola
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಶ್ರೀ ಶಂಕರಭಾರತಿ ಶಾಲೆಯ ವಾರ್ಷಿಕೋತ್ಸವ ಮಾರ್ಕ್‌ಸ್‌ ಕಾರ್ಡ್‌ಗಾಗಿ ಮಕ್ಕಳನ್ನು ತಯಾರು ಮಾಡಬೇಡಿ - ಬೆಳಗಲ್ಸಮಾಜ ಸೇವಾ ಮನೋಭಾವ ರೂಪಿಸಿಕೊಳ್ಳಿ - ಪ್ರೊ. ಶಿವಾನಂದ ಕೆಳಗಿನಮನಿಚನ್ನಪ್ಪ ಅವರಿಗೆ ರಾಜ್ಯಮಟ್ಟದ ಜ್ಯೋತಿಬಾ ಪುಲೆ ಪ್ರಶಸ್ತಿಜಿಲ್ಲಾ ಟಾಸ್‌‌ಕೆರ್ಸ್ ಸಮಿತಿ ಸಭೆ ‘ರೈತರಿಗೆ ಯಾವುದೇ ತೊಂದರೆಯಾಗದಂತೆ ನೋಡಿಕೊಳ್ಳಿ’ರಾಷ್ಟ್ರೀಯ ಹೆದ್ದಾರಿ ಪಕ್ಕದ ಜಮೀನುಗಳಿಗೆ ಹೋಗಲು ದಾರಿ ಮಾಡಿಕೊಡಲು ಆಗ್ರಹಜವಾಹರ ನವೋದಯ ವಿದ್ಯಾರ್ಥಿ ಪ್ರಜ್ವಲ್ ರಾಜ್ಯಕ್ಕೆ ಪ್ರಥಮಮುದಗಲ್ ಪಿಎಸ್‌ಐ ಸೇರಿ ಪೊಲೀಸರ ಅಮಾನತ್ತು ಮಾಡಲು ಒತ್ತಾಯಹುಲಿಕೇರಿ ಒತ್ತುವರಿಯಾಗಿದ್ದರೆ ಕ್ರಮ ಕೈಗೊಳ್ಳಲಿ - ಹಿಟ್ನಾಳಪಟ್ಟಣ ಸಹಕಾರ ಬ್ಯಾಾಂಕ್ ಮಹಾಮಂಡಳದ ನಿರ್ದೇಶಕರಿಗೆ ಡಿ.ಎಚ್.ಓ ಸನ್ಮಾನ ಗೆಳೆಯರ ಬಳಗದ ಬೆಂಬಲ, ನೌಕರರೊಂದಿಗಿನ ಒಳ್ಳೆಯ ಒಡನಾಟದಿಂದ ಉನ್ನತ ಸ್ಥಾನಮಾನಇಂದು ಗ್ರಾಮೀಣ ಭಾಗದ ವಿವಿಧ ಪ್ರದೇಶದಲ್ಲಿ ವಿದ್ಯುತ್ ವ್ಯತ್ಯಯ