Web Stories
Suddimoola News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಕೆಂಚನಕುಪ್ಪೆ ಡೇರಿಗೆ ಚಂದ್ರು .ಸಿ ನೂತನ ಅಧ್ಯಕ್ಷ

ಸುದ್ದಿಮೂಲ ವಾರ್ತೆ

ರಾಮನಗರ,ಜೂ.12 : ತಾಲೂಕಿನ ಬಿಡದಿ ಪುರಸಭಾ ವ್ಯಾಪ್ತಿಯ ಕೆಂಚನಕುಪ್ಪೆ ಹಾಲು ಉತ್ಪಾದಕರ ಸಹಕಾರ ಸಂಘದ ನೂತನ ಅಧ್ಯಕ್ಷರಾಗಿ ಚಂದ್ರು.ಸಿ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.

ಸಂಘದಲ್ಲಿ ಅಧ್ಯಕ್ಷರಾಗಿದ್ದ ಮಲ್ಲೇದೇವರು ಅವರ ರಾಜೀನಾಮೆಯಿಂದ ತೆರವಾಗಿದ್ದ ಸ್ಥಾನಕ್ಕೆ ಸೋಮವಾರ ಸಂಘದಲ್ಲಿ ಚುನಾವಣೆ ನಡೆಯಿತು. ಚುನಾವಣಾ ವೇಳಾ ಪಟ್ಟಿಯಂತೆ ಅಧ್ಯಕ್ಷ ಸ್ಥಾನಕ್ಕೆ ಚಂದ್ರು.ಸಿ ಅವರು ಮಾತ್ರ ನಾಮಪತ್ರ ಸಲ್ಲಿಸಿದ್ದರು. ಅವರನ್ನು ಹೊರತುಪಡಿಸಿ ಮತ್ಯಾರು ನಾಮಪತ್ರ ಸಲ್ಲಿಸದ ಕಾರಣ ಚಂದ್ರು ಅವರು ಸಂಘದ ಅಧ್ಯಕ್ಷರಾಗಿ ಅವಿರೋಧವಾಗಿ ಆಯ್ಕೆಯಾಗಿದ್ದಾರೆ ಎಂದು ರಿಟರ್ನಿಂಗ್ ಅಧಿಕಾರಿ ಕೆ.ಟಿ.ಉಮೇಶ್ ಘೋಷಿಸಿದರು.

ಸಂಘದಲ್ಲಿ ಒಟ್ಟು 12 ನಿರ್ದೇಶಕರಿದ್ದು, ಅಧ್ಯಕ್ಷರ ಆಯ್ಕೆ ಚುನಾವಣೆಯಲ್ಲಿ 11 ನಿರ್ದೇಶಕರುಗಳಾದ ಉಪಾಧ್ಯಕ್ಷ ಸೋಮ, ನಿರ್ದೇಶಕರಾದ ಮಲ್ಲಪ್ಪ, ಕೆ.ಆರ್, ರಮೇಶ್.ಕೆ.ಎನ್, ಮಲ್ಲೇದೇವರು, ಗುರುಮಲ್ಲೇಶ್, ರಾಜಣ್ಣ.ಎಂ, ಮಲ್ಲೇಶಯ್ಯ, ಲತಾ, ನೀಲಮ್ಮ, ಬಸವರಾಜು ಚುನಾವಣಾ ಪ್ರಕ್ರಿಯೆಯಲ್ಲಿ ಭಾಗವಹಿಸಿದ್ದರು. ಶಕುಂತಲಾ ಅವರು ಚುನಾವಣಾ ಪ್ರಕ್ರಿಯೆಲ್ಲಿ ಗೈರಾಗಿದ್ದರು.

ನೂತನ ಅಧ್ಯಕ್ಷ ಚಂದ್ರು.ಸಿ ಅಭಿನಂದನೆ ಸ್ವೀಕರಿಸಿ ಮಾತನಾಡಿ ಸಹಕಾರಿ ಕ್ಷೇತ್ರದ ಮೂಲಕ ಸಂಘದ ಸದಸ್ಯರಿಗೆ ನೆರವಾಗುವ ಕೆಲಸವನ್ನು ಎಲ್ಲ ನಿರ್ದೇಶಕರ ಸಹಕಾರದಲ್ಲಿ ಮಾಡುತ್ತೇನೆ. ನನ್ನನ್ನು ಸಂಘದ ಅಧ್ಯಕ್ಷನಾಗಿ ಅವಿರೋಧ ಆಯ್ಕೆ ಮಾಡಿದ ಎಲ್ಲರಿಗೂ ಅಭಿನಂದಿಸುತ್ತೇನೆ ಎಂದರು.

ಕೆಂಚನಕುಪ್ಪೆ ವಾರ್ಡಿನ ಪುರಸಭೆ ಸದಸ್ಯ ಕೆ.ಎನ್.ರಮೇಶ್, ಸಂಘದ ಸಿಇಓ ಶಶಿಧರ್.ಎಂ ಸಿಬ್ಬಂದಿಗಳಾದ ಬಸವರಾಜು, ದಕ್ಷಿಣಮೂರ್ತಿ ಹಾಗೂ ಹಾಜರಿದ್ದ ಎಲ್ಲ ನಿರ್ದೇಶಕರುಗಳು ನೂತನ ಅದ್ಯಕ್ಷ-ಉಪಾಧ್ಯಕ್ಷರನ್ನು ಅಭಿನಂದಿಸಿದರು.
Author
Suddi Moola
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಶ್ರೀ ಶಂಕರಭಾರತಿ ಶಾಲೆಯ ವಾರ್ಷಿಕೋತ್ಸವ ಮಾರ್ಕ್‌ಸ್‌ ಕಾರ್ಡ್‌ಗಾಗಿ ಮಕ್ಕಳನ್ನು ತಯಾರು ಮಾಡಬೇಡಿ - ಬೆಳಗಲ್ಸಮಾಜ ಸೇವಾ ಮನೋಭಾವ ರೂಪಿಸಿಕೊಳ್ಳಿ - ಪ್ರೊ. ಶಿವಾನಂದ ಕೆಳಗಿನಮನಿಚನ್ನಪ್ಪ ಅವರಿಗೆ ರಾಜ್ಯಮಟ್ಟದ ಜ್ಯೋತಿಬಾ ಪುಲೆ ಪ್ರಶಸ್ತಿಜಿಲ್ಲಾ ಟಾಸ್‌‌ಕೆರ್ಸ್ ಸಮಿತಿ ಸಭೆ ‘ರೈತರಿಗೆ ಯಾವುದೇ ತೊಂದರೆಯಾಗದಂತೆ ನೋಡಿಕೊಳ್ಳಿ’ರಾಷ್ಟ್ರೀಯ ಹೆದ್ದಾರಿ ಪಕ್ಕದ ಜಮೀನುಗಳಿಗೆ ಹೋಗಲು ದಾರಿ ಮಾಡಿಕೊಡಲು ಆಗ್ರಹಜವಾಹರ ನವೋದಯ ವಿದ್ಯಾರ್ಥಿ ಪ್ರಜ್ವಲ್ ರಾಜ್ಯಕ್ಕೆ ಪ್ರಥಮಮುದಗಲ್ ಪಿಎಸ್‌ಐ ಸೇರಿ ಪೊಲೀಸರ ಅಮಾನತ್ತು ಮಾಡಲು ಒತ್ತಾಯಹುಲಿಕೇರಿ ಒತ್ತುವರಿಯಾಗಿದ್ದರೆ ಕ್ರಮ ಕೈಗೊಳ್ಳಲಿ - ಹಿಟ್ನಾಳಪಟ್ಟಣ ಸಹಕಾರ ಬ್ಯಾಾಂಕ್ ಮಹಾಮಂಡಳದ ನಿರ್ದೇಶಕರಿಗೆ ಡಿ.ಎಚ್.ಓ ಸನ್ಮಾನ ಗೆಳೆಯರ ಬಳಗದ ಬೆಂಬಲ, ನೌಕರರೊಂದಿಗಿನ ಒಳ್ಳೆಯ ಒಡನಾಟದಿಂದ ಉನ್ನತ ಸ್ಥಾನಮಾನಇಂದು ಗ್ರಾಮೀಣ ಭಾಗದ ವಿವಿಧ ಪ್ರದೇಶದಲ್ಲಿ ವಿದ್ಯುತ್ ವ್ಯತ್ಯಯ