Web Stories
Suddimoola News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ದಕ್ಷಿಣ ವಲಯದ ಅನಧಿಕೃತ ಕಟ್ಟಡ ತೆರವಿಗೆ ಪರಿಶೀಲನೆ

ಸುದ್ದಿಮೂಲ ವಾರ್ತೆ


ಬೆಂಗಳೂರು, ಜು.20: ಬಿಬಿಎಂಪಿ ದಕ್ಷಿಣ ವಲಯದಲ್ಲಿ ನಕ್ಷೆಗೆ ವ್ಯತಿರಿಕ್ತವಾಗಿ ನಿರ್ಮಿಸಲಾಗುತ್ತಿರುವ ಅನಧಿಕೃತ ಕಟ್ಟಡಗಳ ತೆರವು ಕಾರ್ಯಾಚರಣೆ ಆರಂಭಿಸಲಾಗಿದ್ದು, ಹಂತ-ಹಂತವಾಗಿ ಅನಧಿಕೃತ ಕಟ್ಟಗಳ ತೆರವುಕಾರ್ಯಾಚರಣೆ ನಡೆಸಲಾಗುವುದೆಂದು ದಕ್ಷಿಣ ವಲಯ ಆಯುಕ್ತ ಜಯರಾಮ್ ರಾಯಪುರ ರವರು ತಿಳಿಸಿದರು.


ದಕ್ಷಿಣ ವಲಯ ಬಸವನಗುಡಿ ಈಜುಕೊಳದ ಎದುರು ಇಂದು ಅನಧಿಕೃತ ಕಟ್ಟಡ ತೆರವು ಕಾರ್ಯಾಚರಣೆಯ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ ವೇಳೆ ಮಾತನಾಡಿದ ಅವರು, ಪಾಲಿಕೆ ವ್ಯಾಪ್ತಿಯ ದಕ್ಷಿಣ ವಲಯದಲ್ಲಿ ನಕ್ಷೆಗೆ ವ್ಯತಿರಿಕ್ತವಾಗಿ ನಿರ್ಮಿಸಲಾಗುತ್ತಿರುವ ಅನಧಿಕೃತವಾಗಿ ಕಟ್ಟಲಾಗುತ್ತಿರುವ 80 ಕಟ್ಟಡಗಳಿಗೆ ನಗರ ಯೋಜನೆ- ದಕ್ಷಿಣ ರವರಿಂದ ಬಿಬಿಎಂಪಿ ಕಾಯ್ದೆ 356(2) ನಲ್ಲಿ ಅಂತಿಮ ಆದೇಶ ಜಾರಿಗೊಳಿಸಿದ್ದು, ಕಟ್ಟಡ ತೆರವುಗೊಳಿಸುವ ಕಾರ್ಯಚರಣೆ ಹಮ್ಮಿಕೊಳ್ಳಲಾಗಿದೆ ಎಂದು ಹೇಳಿದರು.


ನಗರ ಯೋಜನೆ ಅಧಿಕಾರಿಗಳು ಹಾಗೂ ವಾರ್ಡ್ ಮಟ್ಟದ ಅಭಿಯಂತರರೊಡನೆ ಬುಧವಾರ ದಿನಾಂಕ: 19-07-2023 ರಂದು ಬಸವನಗುಡಿಯ ಗಿರಿನಗರದಲ್ಲಿ ಒಂದು ಅಂತಸ್ತು ಹೆಚ್ಚುವರಿಯಾಗಿ ನಿರ್ಮಾಣ ಮಾಡಲಾಗುತ್ತಿದ್ದ ಕಟ್ಟಡವನ್ನು ತೆರವುಗೊಳಿಸಲಾಗಿದೆ. ಇಂದು ಚಿಕ್ಕಪೇಟೆ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿರುವ ನಂ. 19 ಪಂಪ ಮಹಾಕವಿ ರಸ್ತೆ, ಬಸವನಗುಡಿ ಈಜುಕೊಳದ ಎದುರು ನಕ್ಷೆಗೆ ವ್ಯತಿರಿಕ್ತವಾಗಿ ಹೆಚ್ಚುವರಿಯಾಗಿ ನಿರ್ಮಿಸಲಾಗುತ್ತಿರುವ ಎರಡು ಅಂತಸ್ತುಗಳನ್ನು ತೆರವು ಮಾಡುವ ಕಾರ್ಯವದ ಸ್ಥಳಕ್ಕೆ ಭೇಟಿ ತ್ವರಿತಗತಿಯಲ್ಲಿ ತೆರವುಗೊಳಿಸಲು ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ.


ದಕ್ಷಿಣ ವಲಯ ವ್ಯಾಪ್ತಿಯಲ್ಲಿ ಸಾಕಷ್ಟು ಕಡೆ ನಕ್ಷೆಗೆ ವ್ಯತಿರಿಕ್ತವಾಗಿ ಕಟ್ಟಗಳನ್ನು ನಿರ್ಮಿಸಿಕೊಳ್ಳುತ್ತಿದ್ದಾರೆ ಎಂಬ ದೂರುಗಳನ್ನು ಆಧರಿಸಿ ನಗರ ಯೋಜನಾ ಅಧಿಕಾರಿಗಳು, ಹೆಚ್ಚುವರಿಯಾಗಿ ಕಟ್ಟಿರುವಂತಹ ಅಂತಸ್ತುಗಳನ್ನು ದಾಖಲೆ ಸಹಿತ ಸಾಬೀತುಪಡಿಸಿದ್ದು, ಸಂಬಂಧಪಟ್ಟ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿ ನಕ್ಷೆ ಉಲ್ಲಂಘಿಸಿ ನಿರ್ಮಾಣ ಮಾಡಿರುವ ಕಟ್ಟಗಳ ತೆರವಿಗೆ ಆದೇಶ ಹೊರಡಿಸಲಾಗಿದೆ.


ಮುಂದಿನ ದಿನಗಳಲ್ಲಿ ಉಳಿದ ಕಟ್ಟಡಗಳು ನಕ್ಷೆಗೆ ವ್ಯತಿರಿಕ್ತವಾಗಿ ನಿರ್ಮಿಸಲಾಗುತ್ತಿರುವ ಹೆಚ್ಚುವರಿ ಅಂತಸ್ತುಗಳನ್ನು ತೆರವುಗೊಳಿಸಲು ಯೋಜನೆಯನ್ನು ತಯಾರಿಸಲಾಗಿದ್ದು, ತೆರವು ಮಾಡುವ ಕಾರ್ಯವನ್ನು ಮುಂದುವರಿಸಲಾಗುವುದು ಮತ್ತು ನ್ಯಾಯಾಲಯದಲ್ಲಿ ಇದ್ದ ತಡೆಯಾಜ್ಞೆಗಳು ತೆರವಾಗಿದ್ದು, ಅಕ್ರಮವಾಗಿ ಹೆಚ್ಚುವರಿ ನಿರ್ಮಿಸಲಾಗುತ್ತಿರುವ ಅಂತಸ್ತುಗಳನ್ನು ತೆರವುಗೊಳಿಸಲಾಗುತ್ತಿದೆ ಎಂದು ಮಾನ್ಯ ವಲಯ ಆಯುಕ್ತರಾದ ಶ್ರೀ ಜಯರಾಮ್ ರಾಯ್ಪುರ ರವರು ತಿಳಿಸಿದ್ದಾರೆ.


ಉಲ್ಲಂಘನೆಯಾಗಿರುವ ಕಟ್ಟಡಗಳ ವಿವರ:


ದಕ್ಷಿಣ ವಲಯ ವ್ಯಾಪ್ತಿಯ ವಿಧಾನಸಭಾ ಕ್ಷೇತ್ರಗಳ ಪೈಕಿ ಚಿಕ್ಕಪೇಟೆಯಲ್ಲಿ 31 ಕಟ್ಟಗಳು, ಜಯನಗರದಲ್ಲಿ 18 ಕಟ್ಟಗಳು, ಬಸವನಗುಡಿಯಲ್ಲಿ 16 ಕಟ್ಟಗಳು, ಪದ್ಮನಾಭನಗರದಲ್ಲಿ 9 ಕಟ್ಟಡಗಳು, ಬಿಟಿಎಂ ಬಡಾವಣೆಯಲ್ಲಿ 5 ಕಟ್ಟಡಗಳು ಹಾಗೂ ವಿಜಯನಗರದಲ್ಲಿ 1 ಕಟ್ಟಡ ಸೇರಿದಂತೆ ಒಟ್ಟು 80 ಕಟ್ಟಡಗಳಲ್ಲಿ ಉಲ್ಲಂಘನೆ ಮಾಡಿ ನಕ್ಷೆಗೆ ವ್ಯತಿರಿಕ್ತವಾಗಿ ಕಟ್ಟಡಗಳನ್ನು ನಿರ್ಮಾಣ ಮಾಡಿದ್ದು, ಉಲ್ಲಂಘಿಸಿರುವ ಕಟ್ಟಡಗಳನ್ನು ಹಂತ-ಹಂತವಾಗಿ ಎಲ್ಲಾ ತೆರವುಗೊಳಿಸಲಾಗುತ್ತದೆ.

Author
Suddi Moola
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಶ್ರೀ ಶಂಕರಭಾರತಿ ಶಾಲೆಯ ವಾರ್ಷಿಕೋತ್ಸವ ಮಾರ್ಕ್‌ಸ್‌ ಕಾರ್ಡ್‌ಗಾಗಿ ಮಕ್ಕಳನ್ನು ತಯಾರು ಮಾಡಬೇಡಿ - ಬೆಳಗಲ್ಸಮಾಜ ಸೇವಾ ಮನೋಭಾವ ರೂಪಿಸಿಕೊಳ್ಳಿ - ಪ್ರೊ. ಶಿವಾನಂದ ಕೆಳಗಿನಮನಿಚನ್ನಪ್ಪ ಅವರಿಗೆ ರಾಜ್ಯಮಟ್ಟದ ಜ್ಯೋತಿಬಾ ಪುಲೆ ಪ್ರಶಸ್ತಿಜಿಲ್ಲಾ ಟಾಸ್‌‌ಕೆರ್ಸ್ ಸಮಿತಿ ಸಭೆ ‘ರೈತರಿಗೆ ಯಾವುದೇ ತೊಂದರೆಯಾಗದಂತೆ ನೋಡಿಕೊಳ್ಳಿ’ರಾಷ್ಟ್ರೀಯ ಹೆದ್ದಾರಿ ಪಕ್ಕದ ಜಮೀನುಗಳಿಗೆ ಹೋಗಲು ದಾರಿ ಮಾಡಿಕೊಡಲು ಆಗ್ರಹಜವಾಹರ ನವೋದಯ ವಿದ್ಯಾರ್ಥಿ ಪ್ರಜ್ವಲ್ ರಾಜ್ಯಕ್ಕೆ ಪ್ರಥಮಮುದಗಲ್ ಪಿಎಸ್‌ಐ ಸೇರಿ ಪೊಲೀಸರ ಅಮಾನತ್ತು ಮಾಡಲು ಒತ್ತಾಯಹುಲಿಕೇರಿ ಒತ್ತುವರಿಯಾಗಿದ್ದರೆ ಕ್ರಮ ಕೈಗೊಳ್ಳಲಿ - ಹಿಟ್ನಾಳಪಟ್ಟಣ ಸಹಕಾರ ಬ್ಯಾಾಂಕ್ ಮಹಾಮಂಡಳದ ನಿರ್ದೇಶಕರಿಗೆ ಡಿ.ಎಚ್.ಓ ಸನ್ಮಾನ ಗೆಳೆಯರ ಬಳಗದ ಬೆಂಬಲ, ನೌಕರರೊಂದಿಗಿನ ಒಳ್ಳೆಯ ಒಡನಾಟದಿಂದ ಉನ್ನತ ಸ್ಥಾನಮಾನಇಂದು ಗ್ರಾಮೀಣ ಭಾಗದ ವಿವಿಧ ಪ್ರದೇಶದಲ್ಲಿ ವಿದ್ಯುತ್ ವ್ಯತ್ಯಯ