Web Stories
Suddimoola News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಬಸವಣ್ಣನವರ ತತ್ವಾದರ್ಶಗಳ ಬಗ್ಗೆ ಚಿಂತನೆ ಅತ್ಯಗತ್ಯ - ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ

ತುಮಕೂರು, ಜನವರಿ 21 :ಬಸವಣ್ಣನವರ ತತ್ವಾದರ್ಶಗಳ ಬಗ್ಗೆ ಚಿಂತನೆ ಅತ್ಯಗತ್ಯವಾಗಿದ್ದು, ಅಸಮಾನತೆ, ಲಿಂಗಭೇದ, ಮೇಲುಕೀಳುಗಳನ್ನು ಹೋಗಲಾಡಿಸಲು ನಾವೇನು ಮಾಡಬೇಕು ಎಂಬ ಬಗ್ಗೆ ಚಿಂತಿಸಬೇಕು. ಸಾಮಾಜಿಕ ಕ್ರಾಂತಿಯನ್ನುಂಟು ಮಾಡುವ ಕಾಯಕದಲ್ಲಿ ಮಠಗಳು ಮುಂಚೂಣಿಯಲ್ಲಿರಬೇಕು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.

ಅವರು ಇಂದು ಪರಮಪೂಜ್ಯ ಡಾ: ಶ್ರೀ ಶಿವಕುಮಾರ ಸ್ವಾಮೀಜಿಗಳ 4 ನೇ ಪುಣ್ಯಸ್ಮರಣೋತ್ಸವ ಸಮಾರಂಭದಲ್ಲಿ ಪಾಲ್ಗೊಂಡು ಮಾತನಾಡಿದರು.

ಮುಗ್ಧತೆ ಹಾಗೂ ಆತ್ಮಸಾಕ್ಷಿಯಿಂದ ಆತ್ಮಬಲ :
ಬದುಕಿನಲ್ಲಿ ಮುಗ್ಧತೆಯನ್ನು ಸದಾ ಕಾಯ್ದುಕೊಂಡು ಆತ್ಮಸಾಕ್ಷಿಯಿಂದ ನಡೆದುಕೊಳ್ಳುವುದು ಬಹಳ ಕಷ್ಟ. ಸತ್ಯವೆಂಬ ಸಾತ್ವಿಕ ವಿಚಾರವನ್ನಿಟ್ಟುಕೊಂಡು, ಲೌಕಿಕ ಲಾಭನಷ್ಟಗಳಿಂದ ದೂರವಿರುವವರು ಮಾತ್ರ ಆತ್ಮಸಾಕ್ಷಿಯಿಂದ ನಡೆದುಕೊಳ್ಳಲು ಸಾಧ್ಯ. ತಮ್ಮ ಬದುಕಿನುದ್ದಕ್ಕೂ ಮುಗ್ಧತೆ ಹಾಗೂ ಆತ್ಮಸಾಕ್ಷಿಯಂತೆ ನಡೆದುಕೊಂಡವರೇ ನಮ್ಮ ನಡೆದಾಡುವ ದೇವರಾದ ಶಿವಕುಮಾರ ಸ್ವಾಮೀಜಿಗಳು. ಪ್ರತಿನಿತ್ಯ ಪರೀಕ್ಷೆಗೆ ಒಳಪಟ್ಟು ಆತ್ಮಬಲ ಹೆಚ್ಚುವುದರಿಂದ ಪ್ರಕಾಶಮಯವಾದ ಆತ್ಮಬಲ ದೊರೆಯುತ್ತದೆ ಎಂದರು.

ಜ್ಞಾನವನ್ನು ಲೋಕಕಲ್ಯಾಣಕ್ಕಾಗಿ ಸಮರ್ಪಿಸುವುದೇ ಕಾಯಕ :
ಸ್ವಾಮಿ ವಿವೇಕಾನಂದರು ಅತಿ ಸಣ್ಣ ವಯಸ್ಸಿನಲ್ಲಿ ಮುಕ್ತಿಮಾರ್ಗವನ್ನು ಕಂಡುಕೊಂಡವರು.ಅವರ ಗುರು ಪರಮಹಂಸರು ಸಾಧನೆ ಒಬ್ಬರ ಸ್ವತ್ತಲ್ಲ. ನಿನ್ನ ಸಾಧನೆಯಿಂದ ಸಾವಿರಾರು ಜನ ಬೆಳಕು ಕಾಣುವಂತಾಗಬೇಕೆಂದು ಬೋಧಿಸಿದ್ದರ ಪರಿಣಾಮ ಸ್ವಾಮಿವಿವೇಕಾನಂದರು ವಿಶ್ವಗುರುವಾದರು. ಅದೇ ರೀತಿಯಲ್ಲಿ ಶಿವಕುಮಾರ ಸ್ವಾಮೀಜಿ ತಮ್ಮ ಜ್ಞಾನವನ್ನು ಲೋಕಕಲ್ಯಾಣಕ್ಕಾಗಿ ಅರ್ಪಿಸಿದ್ದಾರೆ. ನನಗಾಗಿ ದುಡಿಯುವುದು ಕರ್ತವ್ಯ ಆದರೆ ಲೋಕಕಲ್ಯಾಣಕ್ಕಾಗಿ ಸಮರ್ಪಿಸುವುದು ಕಾಯಕ ಎಂದರು.

ಉದಾತ್ತ ಚಿಂತನೆಯುಳ್ಳ ತ್ರಿವಿಧ ದಾಸೋಹ :
ಶಿವಕುಮಾರ ಸ್ವಾಮೀಜಿಗಳು ತ್ರಿವಿಧ ದಾಸೋಹಿಗಳು, ಕಾಯಕ ಯೋಗಿಗಳಾಗಿದ್ದಾರೆ. ಬಡಮಕ್ಕಳು ಶ್ರೀ ಕ್ಷೇತ್ರಕ್ಕೆ ಬಂದು ಅನ್ನ, ಆರೋಗ್ಯ, ವಿದ್ಯೆ, ಆಶ್ರಯ ಎಲ್ಲವನ್ನೂ ಪಡೆಯುತ್ತಿದ್ದಾರೆ. ಇದರೊಂದಿಗೆ ಸಂಸ್ಕಾರ, ಸಂಸ್ಕೃತಿಯನ್ನು ನೀಡುತ್ತಿದೆ. ಭಕ್ತರೇ ಮಠದ ಆಸ್ತಿ ಹಾಗೂ ಪರಮಾತ್ಮನೇ ಅಕ್ಷಯಪಾತ್ರೆ, ಎಲ್ಲ ಸೇವಾ ಕಾರ್ಯಗಳಿಗೆ ಶರಣರು, ದೀನದಲಿತರೇ ಒಡೆಯರು ಎಂದು ಶಿವಕುಮಾರ ಸ್ವಾಮೀಜಿಗಳು ಎಂದು ನಂಬಿದವರು. ಉದಾತ್ತ ಚಿಂತನೆಯ ಫಲವಾಗಿ ತ್ರಿವಿಧ ದಾಸೋಹ ಕ್ಷೇತ್ರದಲ್ಲಿ ನಡೆಯುತ್ತಿದೆ ಎಂದರು.

ರಾಜ್ಯ ಸರ್ಕಾರದ ವತಿಯಿಮದ ದಾಸೋಹ ದಿನ ಆಚರಣೆ :
ಸ್ವಾಮಿ ವಿವೇಕಾನಂದರು ನುಡಿದಂತೆ ಸಾಧಕನಿಗೆ ಸಾವು ಆಂತ್ಯವಲ್ಲ, ಸಾವಿನ ನಂತರವೂ ಬದುಕುವವನು ಸಾಧಕ. ಅಂತಹ ಸಾಧಕರಲ್ಲಿ ಶಿವಕುಮಾರ ಸ್ವಾಮಿಗಳು ಪ್ರಮುಖರಾಗಿದ್ದಾರೆ. ಭಕ್ತರಲ್ಲಿ ಅವರು ಜೀವಂತವಾಗಿದ್ದಾರೆ. ಶ್ರೀಮಠದ ಈಗಿನ ಗುರುಗಳು ಶಿವಕುಮಾರ ಸ್ವಾಮೀಜಿಗಳ ದಾಸೋಹ ಕಾಯಕವನ್ನು ಹತ್ತು ಸಾವಿರಕ್ಕೂ ಹೆಚ್ಚು ಮಕ್ಕಳಿಗೆ ಆಶ್ರಯವನ್ನು ನೀಡುವ ಮೂಲಕ ದಾಸೋಹ ಪರಂಪರೆಯನ್ನು ಮುಂದುವರೆಸಿದ್ದಾರೆ. ರಾಜ್ಯ ಸರ್ಕಾರದ ವತಿಯಿಂದಲೂ ಡಾ. ಶ್ರೀ ಶಿವಕುಮಾರ ಮಹಾಸ್ವಾಮೀಜಿಗಳ ಜನ್ಮದಿನದಂದು ದಾಸೋಹ ದಿನವೆಂದು ಆಚರಿಸಲಾಗುತ್ತದೆ. ಮಠಮಾನ್ಯಗಳಲ್ಲಿ ದಾಸೋಹಗಳನ್ನು ಮಾಡಲಾಗುತ್ತಿದೆ. ಈ ಕ್ಷೇತ್ರಕ್ಕೆ ದಾಸೋಹಕ್ಕೆ ವ್ಯವಸ್ಥೆಗಳನ್ನು ಮಾಡುವ ಮೂಲಕ ದಾಸೋಹ ದಿನವನವನ್ನು ಆಚರಿಸಲಾಗುವುದು. ವಿಶ್ವಮಟ್ಟದಲ್ಲಿಯೂ ದಾಸೋಹ ದಿನವನ್ನು ಆಚರಿಸುವ ಮೂಲಕ ವಿಶ್ವದಾಖಲೆಯನ್ನು ಮಾಡಲಾಗುವುದು. ಬಸವಣ್ಣನವರ ವಿಚಾರಧಾರೆಗಳನ್ನು ಪಾಲಿಸುವ ನಿಜವಾದ ಭಕ್ತರಾಗುತ್ತೇವೆ. ಭಕ್ತಿಯೆಂದರೆ ಕರಾರುರಹಿತ ಪ್ರೀತಿ. ಬಸವಣ್ಣನವರ ತತ್ವಾದರ್ಶಗಳ ಹಾದಿಯಲ್ಲಿ ನಡೆದು ಕನ್ನಡ ನಾಡನ್ನು ಸುಭಿಕ್ಷವಾಗಿಸೋಣ ಎಂದು ತಿಳಿಸಿದರು.

ಸಿದ್ದಗಂಗಾ ಮಠದ ಶ್ರೀ ಸಿದ್ದಲಿಂಗಸ್ವಾಮೀಜಿ, ಸಚಿವರಾದ ವಿ.ಸೋಮಣ್ಣ, ಆರಗ ಜ್ಞಾನೇಂದ್ರ, ಜೆ.ಸಿ.ಮಾಧುಸ್ವಾಮಿ, ಎಸ್.ಟಿ. ಸೋಮಶೇಖರ್, ಸಂಸದ ಭಗವಂತ ಖೂಬಾ, ಭಾಜಪ ರಾಜ್ಯ ಉಪಾಧ್ಯಕ್ಷ ವಿಜಯೇಂದ್ರ ಸೇರಿದಂತೆ ತುಮಕೂರಿನ ಜನಪ್ರತಿನಿಧಿಗಳು ಹಾಗೂ ಗಣ್ಯರು ಪಾಲ್ಗೊಂಡಿದ್ದರು.
Author
Suddi Moola
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಶ್ರೀ ಶಂಕರಭಾರತಿ ಶಾಲೆಯ ವಾರ್ಷಿಕೋತ್ಸವ ಮಾರ್ಕ್‌ಸ್‌ ಕಾರ್ಡ್‌ಗಾಗಿ ಮಕ್ಕಳನ್ನು ತಯಾರು ಮಾಡಬೇಡಿ - ಬೆಳಗಲ್ಸಮಾಜ ಸೇವಾ ಮನೋಭಾವ ರೂಪಿಸಿಕೊಳ್ಳಿ - ಪ್ರೊ. ಶಿವಾನಂದ ಕೆಳಗಿನಮನಿಚನ್ನಪ್ಪ ಅವರಿಗೆ ರಾಜ್ಯಮಟ್ಟದ ಜ್ಯೋತಿಬಾ ಪುಲೆ ಪ್ರಶಸ್ತಿಜಿಲ್ಲಾ ಟಾಸ್‌‌ಕೆರ್ಸ್ ಸಮಿತಿ ಸಭೆ ‘ರೈತರಿಗೆ ಯಾವುದೇ ತೊಂದರೆಯಾಗದಂತೆ ನೋಡಿಕೊಳ್ಳಿ’ರಾಷ್ಟ್ರೀಯ ಹೆದ್ದಾರಿ ಪಕ್ಕದ ಜಮೀನುಗಳಿಗೆ ಹೋಗಲು ದಾರಿ ಮಾಡಿಕೊಡಲು ಆಗ್ರಹಜವಾಹರ ನವೋದಯ ವಿದ್ಯಾರ್ಥಿ ಪ್ರಜ್ವಲ್ ರಾಜ್ಯಕ್ಕೆ ಪ್ರಥಮಮುದಗಲ್ ಪಿಎಸ್‌ಐ ಸೇರಿ ಪೊಲೀಸರ ಅಮಾನತ್ತು ಮಾಡಲು ಒತ್ತಾಯಹುಲಿಕೇರಿ ಒತ್ತುವರಿಯಾಗಿದ್ದರೆ ಕ್ರಮ ಕೈಗೊಳ್ಳಲಿ - ಹಿಟ್ನಾಳಪಟ್ಟಣ ಸಹಕಾರ ಬ್ಯಾಾಂಕ್ ಮಹಾಮಂಡಳದ ನಿರ್ದೇಶಕರಿಗೆ ಡಿ.ಎಚ್.ಓ ಸನ್ಮಾನ ಗೆಳೆಯರ ಬಳಗದ ಬೆಂಬಲ, ನೌಕರರೊಂದಿಗಿನ ಒಳ್ಳೆಯ ಒಡನಾಟದಿಂದ ಉನ್ನತ ಸ್ಥಾನಮಾನಇಂದು ಗ್ರಾಮೀಣ ಭಾಗದ ವಿವಿಧ ಪ್ರದೇಶದಲ್ಲಿ ವಿದ್ಯುತ್ ವ್ಯತ್ಯಯ