Web Stories
Suddimoola News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಗ್ರೀನ್ ಅಂಡ್ ಕ್ಲೀನ್ ಅಭಿಯಾನಕ್ಕೆ ಚಿಕ್ಕಬಳ್ಳಾಪುರ ಜಿಲ್ಲಾಧಿಕಾರಿ ಚಾಲನೆ

 

ಸುದ್ದಿಮೂಲ ವಾರ್ತೆ

ಚಿಕ್ಕಬಳ್ಳಾಪುರ, ಜು.11: ಚಿಕ್ಕಬಳ್ಳಾಪುರ ವಿಜನ್ ನ ಗ್ರೀನ್ ಅಂಡ್ ಕ್ಲೀನ್ ಪರಿಕಲ್ಪನೆಯ ಅಡಿ ಜಿಲ್ಲೆಯ ಎಲ್ಲ ನಗರಗಳಲ್ಲಿ ಸ್ವಚ್ಚತಾ ಅಭಿಯಾನ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ ಎಂದು ಜಿಲ್ಲಾಧಿಕಾರಿ ರವೀಂದ್ರ ತಿಳಿಸಿದರು.

ಅವರು ಮಂಗಳವಾರ ಚಿಕ್ಕಬಳ್ಳಾಪುರ ನಗರದ ಬಿ.ಬಿ ರಸ್ತೆಯಲ್ಲಿನ ಇಕ್ಕೆಲಗಳಲ್ಲಿ ತ್ಯಾಜ್ಯವನ್ನು ತೆಗೆದು ಸ್ವಚ್ಚಗೊಳಿಸುವ ಮೂಲಕ ಗ್ರೀನ್ ಅಂಡ್ ಕ್ಲೀನ್ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.

ಈ ವೇಳೆ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸರ್ಕಾರದ ವ್ಯವಸ್ಥೆಯಡಿ ಲಭ್ಯವಿರುವ ಮಾನವ ಸಂಪನ್ಮೂಲ ಹಾಗೂ ಯಾಂತ್ರಿಕ ಸವಲತ್ತನ್ನು ಬಳಸಿಕೊಂಡು ಜಿಲ್ಲೆಯಾದ್ಯಂತ ನಗರಗಳಲ್ಲಿ ಪ್ರಮುಖ ರಸ್ತೆಗಳನ್ನು ಗುರುತಿಸಿ 2 ಕಿಲೋ ಮೀಟರ್ ಉದ್ದದ ರಸ್ತೆಯನ್ನು ಸ್ವಚ್ಚತೆಗೊಳಿಸಲಾಗಿದೆ. ಇದೇ ರೀತಿ ಎಲ್ಲಾ ತಾಲೂಕು ಕೇಂದ್ರಗಳಲ್ಲಿನ ರಸ್ತೆಗಳನ್ನು ಸ್ವಚ್ಚತೆಯನ್ನು ಮಾಡಲಾಗಿದೆ. ಈ ಕಾರ್ಯ ಹೀಗೆ ಮುಂದುವರಿಯಲಿದೆ ಎಂದರು.

ಚರಂಡಿಗಳನ್ನು ಕಸದ ಬುಟ್ಟಿ ಮಾಡಬೇಡಿ

ನಗರ, ಗ್ರಾಮಗಳ ಸ್ಥಳೀಯಾಡಳಿತ ಸಂಸ್ಥೆಗಳ ತ್ಯಾಜ್ಯ ಸಂಗ್ರಹಣೆ ವಾಹನಗಳು ಬಂದಾಗ ತ್ಯಾಜ್ಯವನ್ನು ನೀಡಬೇಕು,ಯಾವುದೇ ಕಾರಣಕ್ಕೂ ನೀರು ಹೋಗಲಿಕ್ಕೆ ನಿರ್ಮಿಸಿರುವ ಚರಂಡಿಗಳಗೆ ಎಸೆದು ಕಸದ ಬುಟ್ಟಿಯಾಗಿಸಬಾರದು. ಇದರಿಂದ ವಾತಾವರಣ ಮಲಿನಗೊಂಡು ರೋಗ ರುಜಿನಗಳಿಗೆ ಕಾರಣವಾಗುತ್ತದೆ. ಜೊತೆಗೆ ಮಳೆನೀರು ಮುಂದೆ ಸಾಗದೆ ರಸ್ತೆಗಳಿಗೆ ನುಗ್ಗಿ ಅಪಘಾತ ಉಂಟಾಗುವ ಸಾಧ್ಯತೆಗಳು ಇರುತ್ತವೆ ಎಂದರು.

ಈ ಸಂಧರ್ಭದಲ್ಲಿ ನಗರಸಭೆಯ ಪೌರಾಯುಕ್ತ ಪಂಪಾಶ್ರೀ, ಇಂಜಿನಿಯರ್ ಉಮಾಕಾಂತ್, ಪೌರ ಕಾರ್ಮಿಕರು, ಸಾರ್ವಜನಿಕರು ಹಾಜರಿದ್ದರು.
Author
Suddi Moola
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಶ್ರೀ ಶಂಕರಭಾರತಿ ಶಾಲೆಯ ವಾರ್ಷಿಕೋತ್ಸವ ಮಾರ್ಕ್‌ಸ್‌ ಕಾರ್ಡ್‌ಗಾಗಿ ಮಕ್ಕಳನ್ನು ತಯಾರು ಮಾಡಬೇಡಿ - ಬೆಳಗಲ್ಸಮಾಜ ಸೇವಾ ಮನೋಭಾವ ರೂಪಿಸಿಕೊಳ್ಳಿ - ಪ್ರೊ. ಶಿವಾನಂದ ಕೆಳಗಿನಮನಿಚನ್ನಪ್ಪ ಅವರಿಗೆ ರಾಜ್ಯಮಟ್ಟದ ಜ್ಯೋತಿಬಾ ಪುಲೆ ಪ್ರಶಸ್ತಿಜಿಲ್ಲಾ ಟಾಸ್‌‌ಕೆರ್ಸ್ ಸಮಿತಿ ಸಭೆ ‘ರೈತರಿಗೆ ಯಾವುದೇ ತೊಂದರೆಯಾಗದಂತೆ ನೋಡಿಕೊಳ್ಳಿ’ರಾಷ್ಟ್ರೀಯ ಹೆದ್ದಾರಿ ಪಕ್ಕದ ಜಮೀನುಗಳಿಗೆ ಹೋಗಲು ದಾರಿ ಮಾಡಿಕೊಡಲು ಆಗ್ರಹಜವಾಹರ ನವೋದಯ ವಿದ್ಯಾರ್ಥಿ ಪ್ರಜ್ವಲ್ ರಾಜ್ಯಕ್ಕೆ ಪ್ರಥಮಮುದಗಲ್ ಪಿಎಸ್‌ಐ ಸೇರಿ ಪೊಲೀಸರ ಅಮಾನತ್ತು ಮಾಡಲು ಒತ್ತಾಯಹುಲಿಕೇರಿ ಒತ್ತುವರಿಯಾಗಿದ್ದರೆ ಕ್ರಮ ಕೈಗೊಳ್ಳಲಿ - ಹಿಟ್ನಾಳಪಟ್ಟಣ ಸಹಕಾರ ಬ್ಯಾಾಂಕ್ ಮಹಾಮಂಡಳದ ನಿರ್ದೇಶಕರಿಗೆ ಡಿ.ಎಚ್.ಓ ಸನ್ಮಾನ ಗೆಳೆಯರ ಬಳಗದ ಬೆಂಬಲ, ನೌಕರರೊಂದಿಗಿನ ಒಳ್ಳೆಯ ಒಡನಾಟದಿಂದ ಉನ್ನತ ಸ್ಥಾನಮಾನಇಂದು ಗ್ರಾಮೀಣ ಭಾಗದ ವಿವಿಧ ಪ್ರದೇಶದಲ್ಲಿ ವಿದ್ಯುತ್ ವ್ಯತ್ಯಯ