Web Stories
Suddimoola News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಎಸ್‌ಐಟಿ ಕಾಲೇಜಿನಲ್ಲಿ ಮಕ್ಕಳ ರಂಗಪ್ರಯೋಗ 

ಸುದ್ದಿಮೂಲ ವಾರ್ತೆ

ತುಮಕೂರು, ಸೆ. 19 : ಗಣೇಶ ಚತುರ್ಥಿಯ ಪ್ರಯುಕ್ತ ನಗರದ ಆರ್ಟ್ ಯೂನಿವರ್ಸ್ ವತಿಯಿಂದ ಆಯೋಜಿಸಿದ್ದ ಮಕ್ಕಳ ಕಿರು ರಂಗ ಪ್ರಯೋಗ 'ದೇವರ ನ್ಯಾಯ'ವನ್ನು ಕನ್ನಡ ಚಿತ್ರ ರಂಗ ನಿರ್ದೇಶಕ ಅವಿನಾಶ್ ಶಠಮರ್ಷಣ ನಿರ್ದೇಶಿಸಿ ಪ್ರದರ್ಶಿಸಿದರು.

ಒಂದು ವಾರದ ಈ ರಂಗ ತರಬೇತಿಯಲ್ಲಿ ನಟನೆ, ರಂಗ ಗೀತೆ, ಬರವಣಿಗೆ ನಾಟಕದ ಕುರಿತಾಗಿ ಮಕ್ಕಳಲ್ಲಿ ಒಲವು ಮೂಡಿಸುವಲ್ಲಿ ಸಫಲರಾದರು.ಸುಮಾರು 40ಕ್ಕೂ ಹೆಚ್ಚು ಮಕ್ಕಳನ್ನೊಳಗೊಂಡ ಈ ನಾಟಕ ಪ್ರಯೋಗವು ಪ್ರೇಕ್ಷಕರು ಹಾಗೂ ಪೋಷಕರ ಮನಸೂರೆಗೊಂಡಿತು.

ಆರ್ಟ್ ಯೂನಿವರ್ಸ್ ಈಗಾಗಲೇ ಈ ರೀತಿಯ ಹಲವಾರು ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುವುದರ ಮೂಲಕ ಮಕ್ಕಳಲ್ಲಿ ಕಲೆ ಹಾಗೂ ಕರ್ತವ್ಯಗಳ ಕುರಿತಾಗಿ ಜಾಗೃತಿ ಮೂಡಿಸುತ್ತಿದೆ.

ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ರಂಗನಿರ್ದೇಶಕ ದೇವರಾಜ್ ಮೆಳೇಹಳ್ಳಿ, ಕಲೆ ಹಾಗೂ ಕಲಾವಿದರ ಕೊಡುಗೆ ಕುರಿತು ಹಾಗೂ ಅವರ ಸಹೋದರ ಉಮೇಶ್ ಡಮರುಗ ಅವರು ಪೋಷಕರು ಶಿಕ್ಷಕರ ಕರ್ತವ್ಯದ ಬಗ್ಗೆ ಚುಟುಕಾಗಿ ತಿಳಿಸಿದರು.

ಇನ್ನು ಲಕ್ಷಣ ಧಾರಾವಾಹಿಯ ಡೆವಿಲ್ ಎಂದೇ ಖ್ಯಾತರಾಗಿರುವ ಪ್ರಿಯಾ ಶಠಮರ್ಷಣ ಅವರ ರಂಗ ಸಂಗೀತವೂ ಪ್ರೇಕ್ಷಕರನ್ನು ವಿಸ್ಮಯಗೊಳಿಸಿತು.

ಆರ್ಟ್ ಯೂನಿವರ್ಸ್ ಸಂಸ್ಥಾಪಕರಾದ ಚಿದಾನಂದ ಅವರು ಮಾತನಾಡಿ, ಮಕ್ಕಳ ವಿದ್ಯಾಭ್ಯಾಸದಲ್ಲಿ ಕಲೆಯ ಪಾತ್ರ ಮಹತ್ವದ್ದು ಎಂದು ಹೇಳಿದರು.

ಕಾರ್ಯಕ್ರಮದಲ್ಲಿ ಹೈಕೋರ್ಟ್ ವಕೀಲರಾದ ಸತ್ಯನಾರಾಯಣ ಮತ್ತಿತರರು ಉಪಸ್ಥಿತರಿದ್ದರು.
Author
Suddi Moola
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಶ್ರೀ ಶಂಕರಭಾರತಿ ಶಾಲೆಯ ವಾರ್ಷಿಕೋತ್ಸವ ಮಾರ್ಕ್‌ಸ್‌ ಕಾರ್ಡ್‌ಗಾಗಿ ಮಕ್ಕಳನ್ನು ತಯಾರು ಮಾಡಬೇಡಿ - ಬೆಳಗಲ್ಸಮಾಜ ಸೇವಾ ಮನೋಭಾವ ರೂಪಿಸಿಕೊಳ್ಳಿ - ಪ್ರೊ. ಶಿವಾನಂದ ಕೆಳಗಿನಮನಿಚನ್ನಪ್ಪ ಅವರಿಗೆ ರಾಜ್ಯಮಟ್ಟದ ಜ್ಯೋತಿಬಾ ಪುಲೆ ಪ್ರಶಸ್ತಿಜಿಲ್ಲಾ ಟಾಸ್‌‌ಕೆರ್ಸ್ ಸಮಿತಿ ಸಭೆ ‘ರೈತರಿಗೆ ಯಾವುದೇ ತೊಂದರೆಯಾಗದಂತೆ ನೋಡಿಕೊಳ್ಳಿ’ರಾಷ್ಟ್ರೀಯ ಹೆದ್ದಾರಿ ಪಕ್ಕದ ಜಮೀನುಗಳಿಗೆ ಹೋಗಲು ದಾರಿ ಮಾಡಿಕೊಡಲು ಆಗ್ರಹಜವಾಹರ ನವೋದಯ ವಿದ್ಯಾರ್ಥಿ ಪ್ರಜ್ವಲ್ ರಾಜ್ಯಕ್ಕೆ ಪ್ರಥಮಮುದಗಲ್ ಪಿಎಸ್‌ಐ ಸೇರಿ ಪೊಲೀಸರ ಅಮಾನತ್ತು ಮಾಡಲು ಒತ್ತಾಯಹುಲಿಕೇರಿ ಒತ್ತುವರಿಯಾಗಿದ್ದರೆ ಕ್ರಮ ಕೈಗೊಳ್ಳಲಿ - ಹಿಟ್ನಾಳಪಟ್ಟಣ ಸಹಕಾರ ಬ್ಯಾಾಂಕ್ ಮಹಾಮಂಡಳದ ನಿರ್ದೇಶಕರಿಗೆ ಡಿ.ಎಚ್.ಓ ಸನ್ಮಾನ ಗೆಳೆಯರ ಬಳಗದ ಬೆಂಬಲ, ನೌಕರರೊಂದಿಗಿನ ಒಳ್ಳೆಯ ಒಡನಾಟದಿಂದ ಉನ್ನತ ಸ್ಥಾನಮಾನಇಂದು ಗ್ರಾಮೀಣ ಭಾಗದ ವಿವಿಧ ಪ್ರದೇಶದಲ್ಲಿ ವಿದ್ಯುತ್ ವ್ಯತ್ಯಯ