Web Stories
Suddimoola News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ದಲಿತಪರ ಸಂಘಟನೆಗಳಿಂದ ನಾಳೆ ಚಿಂತಾಮಣಿ ಬಂದ್

ಸುದ್ದಿಮೂಲ ವಾರ್ತೆ

ಚಿಂತಾಮಣಿ,ಅ.16 : ಆಗ್ರಹಾರ ಮುರಳಿ ರವರ ಮೇಲಿನ ಹಲ್ಲೆ ಖಂಡಿಸಿ ಹಾಗೂ ಚಿಂತಾಮಣಿಯಲ್ಲಿ ಕತ್ತಿ ಮಚ್ಚು ಸಂಸ್ಕೃತಿ ವಿರೋಧಿಸಿ ಬುಧವಾರದಂದು ಚಿಂತಾಮಣಿ ಬಂದ್ ಗೆ ದಲಿತ ಹಿಂದುಳಿದ ಅಲ್ಪಸಂಖ್ಯಾತ ರ ಹಾಗೂ ಪ್ರಗತಿಪರ ಸಂಘಟನೆಗಳ ಒಕ್ಕೂಟ ಕರೆ ನೀಡಿವೆ.

ಪತ್ರಿಕಾಗೋಷ್ಟಿಯಲ್ಲಿ ಮಾತನಾಡಿದ ಜಿ. ನಾರಾಯಣಸ್ವಾಮಿ, ವಾಲ್ಮಿಕಿ ಸಮುದಾಯದ ಮುಖಂಡ ಹಾಗೂ ನಗರಸಭಾ ಸದಸ್ಯ ಆಗ್ರಹಾರ ಮುರಳಿರವರ ಮೇಲೆ ದುಷ್ಕರ್ಮಿಗಳಿಂದ ಕಳೆದ ಶುಕ್ರವಾರ ಮಾರಾಕಾಸ್ತ್ರಗಳಿಂದ ನಡೆದಿರುವ ಮಾರಣಾಂತಿಕ ಹಲ್ಲೆಯನ್ನು ಖಂಡಿಸಿ ಹಾಗೂ ಈ ಕೃತ್ಯದಲ್ಲಿ ಪಾಲ್ಗೊಂಡಿರುವವರನ್ನು ಬಂಧಿಸುವಲ್ಲಿ ವಿಫಲವಾಗಿರುವ ಪೋಲಿಸ್ ಇಲಾಖೆಯ ವೈಪಲ್ಯವನ್ನು ಖಂಡಿಸಿ ದಲಿತ ಹಿಂದುಳಿದ ಅಲ್ಪಸಂಖ್ಯಾತ ರ ಹಾಗೂ ಪ್ರಗತಿಪರ ಸಂಘಟನೆಗಳ ಒಕ್ಕೂಟ ಬಂದ್ ನಡೆಸಲು ನಿರ್ಧರಿಸಿವೆ ಎಂದರು.

ಮಾರಣಾಂತಿಕವಾಗಿ ಹಲ್ಲೆಗೊಳಗಾದ ಅಗ್ರಹಾರ ಮುರಳಿಯವರು ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.ಆದರೆ, ಈ ಕೊಲೆ ಯತ್ನ ನಡೆದು ನಾಲ್ಕು ದಿನಗಳು ಕಳೆದರು ಇನ್ನೂ ದುಷ್ಕರ್ಮಿಗಳನ್ನು ಬಂಧಿಸಿಲ್ಲ. ಅಲ್ಲದೆ, ಈಗಾಗಲೇ ಕೆಲವು ಅಕ್ರಮ ಹಾಗೂ ಕಾನೂನು ಬಾಹಿರ ಚಟುವಟಿಕೆಗಳಲ್ಲಿ ತೊಡಗಿರುವ ವ್ಯಕ್ತಿಗಳು ಅಗ್ರಹಾರ ಮುರಳಿಯವರಿಗೆ ಹಲ್ಲೆ ನಡೆಸಿದ್ದಾರೆ.

ಆದರೂ, ಈ ಪ್ರಕರಣದಲ್ಲಿ ಇದುವರೆಗೂ ಯಾರ ಬಂಧನವೂ ಆಗಿರುವುದಿಲ್ಲ ಎಂದು ಆರೋಪಿಸಿದರು.

ಕೊಲೆಗೆ ಯತ್ನಿಸಿರುವ ಆರೋಪಿಗಳನ್ನು ಹಾಗೂ ಕೃತ್ಯ ನಡೆಸಲು ಪ್ರಚೋದನೆ ಹಾಗೂ ಕುಮ್ಮಕ್ಕು ನೀಡುವವರನ್ನು ಕೂಡಲೇ ಬಂಧಿಸಿ ಕಠಿಣ ಶಿಕ್ಷೆ ವಿಧಿಸಬೇಕು ಹಾಗೂ ಗಡಿಪಾರು ಮಾಡಬೇಕೆಂದು ಒತ್ತಾಯಿಸಿದರು.

ಈ ಸಂದರ್ಭದಲ್ಲಿ ಕಾವಲಗಾನಹಳ್ಳಿ ವೆಂಕಟೇಶ್, ಪೋಟೋ ನಾರಾಯಣಪ್ಪ, ಜನಾರ್ದನ್, ಆನಂದ್, ಪಿವಿ ಮಂಜುನಾಥ್, ಎಂ,ವಿ ರಾಮಪ್ಪ, ಆಲಪಲ್ಲಿ ರಾಮಚಂದ್ರ, ಕಟಮಾಚನಹಳ್ಳಿ ಮಂಜು ಸೇರಿದಂತೆ ವಾಲ್ಮೀಕಿ ಸಮುದಾಯದ ಮುಖಂಡರು ಮತಿತ್ತರರು ಉಪಸ್ಥಿತಿರಿದ್ದರು.
Author
Suddi Moola
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಶ್ರೀ ಶಂಕರಭಾರತಿ ಶಾಲೆಯ ವಾರ್ಷಿಕೋತ್ಸವ ಮಾರ್ಕ್‌ಸ್‌ ಕಾರ್ಡ್‌ಗಾಗಿ ಮಕ್ಕಳನ್ನು ತಯಾರು ಮಾಡಬೇಡಿ - ಬೆಳಗಲ್ಸಮಾಜ ಸೇವಾ ಮನೋಭಾವ ರೂಪಿಸಿಕೊಳ್ಳಿ - ಪ್ರೊ. ಶಿವಾನಂದ ಕೆಳಗಿನಮನಿಚನ್ನಪ್ಪ ಅವರಿಗೆ ರಾಜ್ಯಮಟ್ಟದ ಜ್ಯೋತಿಬಾ ಪುಲೆ ಪ್ರಶಸ್ತಿಜಿಲ್ಲಾ ಟಾಸ್‌‌ಕೆರ್ಸ್ ಸಮಿತಿ ಸಭೆ ‘ರೈತರಿಗೆ ಯಾವುದೇ ತೊಂದರೆಯಾಗದಂತೆ ನೋಡಿಕೊಳ್ಳಿ’ರಾಷ್ಟ್ರೀಯ ಹೆದ್ದಾರಿ ಪಕ್ಕದ ಜಮೀನುಗಳಿಗೆ ಹೋಗಲು ದಾರಿ ಮಾಡಿಕೊಡಲು ಆಗ್ರಹಜವಾಹರ ನವೋದಯ ವಿದ್ಯಾರ್ಥಿ ಪ್ರಜ್ವಲ್ ರಾಜ್ಯಕ್ಕೆ ಪ್ರಥಮಮುದಗಲ್ ಪಿಎಸ್‌ಐ ಸೇರಿ ಪೊಲೀಸರ ಅಮಾನತ್ತು ಮಾಡಲು ಒತ್ತಾಯಹುಲಿಕೇರಿ ಒತ್ತುವರಿಯಾಗಿದ್ದರೆ ಕ್ರಮ ಕೈಗೊಳ್ಳಲಿ - ಹಿಟ್ನಾಳಪಟ್ಟಣ ಸಹಕಾರ ಬ್ಯಾಾಂಕ್ ಮಹಾಮಂಡಳದ ನಿರ್ದೇಶಕರಿಗೆ ಡಿ.ಎಚ್.ಓ ಸನ್ಮಾನ ಗೆಳೆಯರ ಬಳಗದ ಬೆಂಬಲ, ನೌಕರರೊಂದಿಗಿನ ಒಳ್ಳೆಯ ಒಡನಾಟದಿಂದ ಉನ್ನತ ಸ್ಥಾನಮಾನಇಂದು ಗ್ರಾಮೀಣ ಭಾಗದ ವಿವಿಧ ಪ್ರದೇಶದಲ್ಲಿ ವಿದ್ಯುತ್ ವ್ಯತ್ಯಯ