Web Stories
Suddimoola News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಶಿಡ್ಲಘಟ್ಟದಲ್ಲಿ ಸ್ವಚ್ಚತಾ ಅಭಿಯಾನ : ಸ್ವಚ್ಚಗೊಂಡ ಕಲ್ಯಾಣಿ

ಸುದ್ದಿಮೂಲ ವಾರ್ತೆ

ಶಿಡ್ಲಘಟ್ಟ,ಅ.9: ಕಲ್ಯಾಣಿ, ಕೆರೆಕಟ್ಟೆಗಳನ್ನು ನಿರ್ಲಕ್ಷಿಸಿರುವ ಕಾರಣ ಅಂತರ್ಜಲಮಟ್ಟ ಕುಸಿಯುತ್ತಿದೆ. ಕೆರೆ, ಬಾವಿ, ಕಲ್ಯಾಣಿಗಳನ್ನು ರಕ್ಷಿಸುವ ಕಾರ್ಯವನ್ನು ಮಾಡಬೇಕಾಗಿದೆ ಎಂದು ಬೆಂಗಳೂರು ನಗರ ವಿಶ್ವವಿದ್ಯಾಲಯದ ಎನ್ ಎಸ್ ಎಸ್ ಸಂಯೋಜನಾಧಿಕಾರಿ ಡಾ. ಹೆಚ್. ಜಿ. ಗೋವಿಂದ ಗೌಡ ತಿಳಿಸಿದರು.

ಎನ್ ಎಸ್ ಎಸ್ ಪ್ರಾದೇಶಿಕ ಕೇಂದ್ರ, ಬೆಂಗಳೂರು ನಗರ ವಿಶ್ವವಿದ್ಯಾಲಯ, ಯಲಹಂಕ ಉಪನಗರದ ಶೇಷಾದ್ರಿಪುರಂ ಪ್ರಥಮ ದರ್ಜೆ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆ ಘಟಕದ ಸಂಯುಕ್ತಾಶ್ರಯದಲ್ಲಿ ನಗರದ ಪುರತಾನ ಕಾಲದ ಶಾಮಣ್ಣ ಭಾವಿ ಕಲ್ಯಾಣಿಯಲ್ಲಿ ಗಿಡ, ಹೂಳು ಹಾಗೂ ಕಲ್ಲು ಮಣ್ಣುಗಳಿಂದ ತುಂಬಿ ಹೋಗಿ ನಿರ್ಲಕ್ಷಿತವಾಗಿತ್ತು. ಕಲ್ಯಾಣಿಯನ್ನು ಸ್ವಚ್ಛ ಮತ್ತು ಪುನಶ್ಚೇತನ ಅಭಿಯಾನಕ್ಕೆ ಕಳೆದ ವಾರ ಚಾಲನೆ ನೀಡಲಾಯಿತು. ಸಮಯದ ಭಾವದಿಂದ ಅರ್ಧಕ್ಕೆ ನಿಂತಿದ್ದ ಸ್ವಚ್ಛತಾ ಅಭಿಯಾನಕ್ಕೆ ಇಂದು ಪುನಃ ಪ್ರಾರಂಭಿಸಲಾಯಿತು.

ಡಾ. ಹೆಚ್. ಜಿ. ಗೋವಿಂದ ಗೌಡ ಪುರಾತನ ಕಾಲದಲ್ಲಿ ನಿರ್ಮಿಸುತ್ತಿದ್ದ ಕಲ್ಯಾಣಿ, ಕೆರೆಕಟ್ಟೆಗಳು, ಕುಡಿಯುವ ನೀರಿನ ಸಾಮೂಹಿಕ ಮೂಲವಾಗುವ ಜತೆಗೆ ಮಳೆ ನೀರು ಸಂಗ್ರಹ ಮಾಡಿ, ಅಂತರ್ಜಲ ಹೆಚ್ಚಿಸಲು ವೈಜ್ಞಾನಿಕವಾಗಿ ನಿರ್ಮಾಣವಾಗಿದ್ದವು. ಆದರೆ ನಾವು ಇವುಗಳನ್ನು ನಿರ್ಲಕ್ಷಿಸಿರುವ ಕಾರಣ ಅಂತರ್ಜಲಮಟ್ಟ ಕುಸಿಯುತ್ತಿದೆ ಎಂದರು.

ಯಲಹಂಕ ಉಪನಗರದ ಶೇಷಾದ್ರಿಪುರಂ ಪ್ರಥಮ ದರ್ಜೆ ಕಾಲೇಜಿನ ಎನ್ ಎಸ್ ಎಸ್ ಅಧಿಕಾರಿ ನವೀನ್ ಕುಮಾರ್, ಭವಿಷ್ಯದ ದಿನಗಳಲ್ಲಿ ಎದುರಾಗಲಿರುವ ಸಮಸ್ಯೆಯನ್ನು ಅರಿತ ನಮ್ಮ ಎನ್ ಎಸ್ ಎಸ್ ತಂಡ, ಕಲ್ಯಾಣಿಗಳನ್ನು ಶ್ರಮದಾನಗಳ ಮೂಲಕ ಸ್ವಚ್ಛಗೊಳಿಸಿ ಪುನಶ್ಚೇತನ ನೀಡುವ ಕಾರ್ಯಕ್ಕೆ ಮುಂದಾಗಿದ್ದೇವೆ, ಇದೇ ರೀತಿ ತಿಂಗಳಿಗೆ ಒಂದು ಪುರಾತನ ಕಾಲದ ದೇವಾಲಯಗಳು ಮತ್ತು ಕಲ್ಯಾಣಿಗಳನ್ನು ಸ್ವಚ್ಛಗೊಳಿಸಿ ಪುನಶ್ಚೇತನ ಗೊಳಿಸುವ ಯೋಜನೆಯನ್ನು ಹೊಂದಿದ್ದೇವೆ ಎಂದು ತಿಳಿಸಿದರು.

ಈ ಸಂದರ್ಭದಲ್ಲಿ ಶಿಡ್ಲಘಟ್ಟ ತಾಲೂಕು ಕರ್ನಾಟಕ ರಕ್ಷಣಾ ವೇದಿಕೆ ಅಧ್ಯಕ್ಷ ಸುನಿಲ್, ಮೋಹನ್ ಶಶಾಂಕ್ ಪ್ರಭಾಕರ್, ಜನಾರ್ಧನ್ ಮುಂತಾದವರ ಹಾಜರಿದ್ದರು.
Author
Suddi Moola
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಶ್ರೀ ಶಂಕರಭಾರತಿ ಶಾಲೆಯ ವಾರ್ಷಿಕೋತ್ಸವ ಮಾರ್ಕ್‌ಸ್‌ ಕಾರ್ಡ್‌ಗಾಗಿ ಮಕ್ಕಳನ್ನು ತಯಾರು ಮಾಡಬೇಡಿ - ಬೆಳಗಲ್ಸಮಾಜ ಸೇವಾ ಮನೋಭಾವ ರೂಪಿಸಿಕೊಳ್ಳಿ - ಪ್ರೊ. ಶಿವಾನಂದ ಕೆಳಗಿನಮನಿಚನ್ನಪ್ಪ ಅವರಿಗೆ ರಾಜ್ಯಮಟ್ಟದ ಜ್ಯೋತಿಬಾ ಪುಲೆ ಪ್ರಶಸ್ತಿಜಿಲ್ಲಾ ಟಾಸ್‌‌ಕೆರ್ಸ್ ಸಮಿತಿ ಸಭೆ ‘ರೈತರಿಗೆ ಯಾವುದೇ ತೊಂದರೆಯಾಗದಂತೆ ನೋಡಿಕೊಳ್ಳಿ’ರಾಷ್ಟ್ರೀಯ ಹೆದ್ದಾರಿ ಪಕ್ಕದ ಜಮೀನುಗಳಿಗೆ ಹೋಗಲು ದಾರಿ ಮಾಡಿಕೊಡಲು ಆಗ್ರಹಜವಾಹರ ನವೋದಯ ವಿದ್ಯಾರ್ಥಿ ಪ್ರಜ್ವಲ್ ರಾಜ್ಯಕ್ಕೆ ಪ್ರಥಮಮುದಗಲ್ ಪಿಎಸ್‌ಐ ಸೇರಿ ಪೊಲೀಸರ ಅಮಾನತ್ತು ಮಾಡಲು ಒತ್ತಾಯಹುಲಿಕೇರಿ ಒತ್ತುವರಿಯಾಗಿದ್ದರೆ ಕ್ರಮ ಕೈಗೊಳ್ಳಲಿ - ಹಿಟ್ನಾಳಪಟ್ಟಣ ಸಹಕಾರ ಬ್ಯಾಾಂಕ್ ಮಹಾಮಂಡಳದ ನಿರ್ದೇಶಕರಿಗೆ ಡಿ.ಎಚ್.ಓ ಸನ್ಮಾನ ಗೆಳೆಯರ ಬಳಗದ ಬೆಂಬಲ, ನೌಕರರೊಂದಿಗಿನ ಒಳ್ಳೆಯ ಒಡನಾಟದಿಂದ ಉನ್ನತ ಸ್ಥಾನಮಾನಇಂದು ಗ್ರಾಮೀಣ ಭಾಗದ ವಿವಿಧ ಪ್ರದೇಶದಲ್ಲಿ ವಿದ್ಯುತ್ ವ್ಯತ್ಯಯ