Web Stories
Suddimoola News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಸ್ವಾತಂತ್ರ್ಯದಷ್ಟೇ ಸ್ವಚ್ಚತೆ ಶ್ರೇಷ್ಠ : ಜಿ. ಪ್ರಭು

ಸುದ್ದಿಮೂಲ ವಾರ್ತೆ

ತುಮಕೂರು, ಅ. 07 : ಕಳೆದ ಸೆ. 15 ರಿಂದ ಅ. 2 ರವರೆಗೆ ಜಿಲ್ಲೆಯ 330 ಗ್ರಾಮ ಪಂಚಾಯತಿಗಳಲ್ಲಿ ಸ್ವಚ್ಛತೆಯೇ ಸೇವೆ ವಿಶೇಷ ಆಂದೋಲನ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು ಎಂದು ಜಿಲ್ಲಾ ಪಂಚಾಯತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಜಿ. ಪ್ರಭು ತಿಳಿಸಿದ್ದಾರೆ.



ಮಹಾತ್ಮ ಗಾಂಧೀಜಿಯವರ ಜನ್ಮದಿನದ ಸ್ಮರಣಾರ್ಥ ಕೇಂದ್ರ ಸರ್ಕಾರದ ನಿರ್ದೇಶನದಂತೆ ಸ್ವಚ್ಛತೆಯೇ ಸೇವೆ ವಿಶೇಷ ಆಂದೋಲನ ಕಾರ್ಯಕ್ರಮದಡಿ ಜಿಲ್ಲೆಯ ಗ್ರಾಮೀಣ ಪ್ರದೇಶಗಳಲ್ಲಿ 4000ಕ್ಕೂ ಹೆಚ್ಚು ವಿವಿಧ ಸ್ವಚ್ಛತಾ ಚಟುವಟಿಕೆಗಳನ್ನು ಹಮ್ಮಿಕೊಂಡು ಜನರಲ್ಲಿ ಅರಿವು ಮೂಡಿಸಲಾಗಿದೆ.

“ಸ್ವಚ್ಛತೆಯೇ ದೈವತ್ವ” ಎಂಬ ಮಹಾತ್ಮ ಗಾಂಧೀಜಿಯವರ ಪರಿಕಲ್ಪನೆಯನ್ನು ಸಾಕಾರಗೊಳಿಸಿ ‘ಸ್ವಚ್ಛ ಭಾರತ’ವನ್ನಾಗಿ ನಿರ್ಮಿಸಬೇಕೆಂಬ ಮಹದಾಸೆಯಿಂದ ಗ್ರಾಮೀಣ ಪ್ರದೇಶಗಳಲ್ಲಿ ಹಮ್ಮಿಕೊಂಡಿದ್ದ ಸ್ವಚ್ಛತೆಯೇ ಸೇವೆ ವಿಶೇಷ ಆಂದೋಲನ ಕಾರ್ಯಕ್ರಮ ಯಶಸ್ವಿಯಾಗಿದೆ.

ಜಿಲ್ಲೆಯ 330 ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ 227 ಕಲ್ಯಾಣಿ, ಬಾವಿ, 624 ದೇವಾಲಯ, 193 ಬಸ್ ನಿಲ್ದಾಣ, 786 ಶಾಲೆ ಮತ್ತು ಅಂಗನವಾಡಿ, 274 ಮಾರುಕಟ್ಟೆ, 1803 ಗ್ರಾಮ ಪಂಚಾಯತಿ ಕಚೇರಿ,

ಪ್ರಾಥಮಿಕ ಆರೋಗ್ಯ ಕೇಂದ್ರ ಮುಖ್ಯ ರಸ್ತೆಗಳನ್ನು ಸ್ವಚ್ಛಗೊಳಿಸಲಾಗಿದೆ. ಅಲ್ಲದೆ 367 ಸ್ವಚ್ಛತೆ ಕುರಿತು ಶಾಲಾ ಮಕ್ಕಳಿಂದ ಜಾಗೃತಿ ಜಾಥಾ, 1123 ಸಸಿ ನೆಡುವುದು ಸೇರಿದಂತೆ 4237 ಸ್ವಚ್ಛತಾ ಚಟುವಟಿಕೆಗಳನ್ನು ಹಮ್ಮಿಕೊಳ್ಳಲಾಗಿತ್ತು ಎಂದು ತಿಳಿಸಿದ್ದಾರೆ.

ಸ್ವಚ್ಛತೆಯಿದ್ದಲ್ಲಿ ಮಾತ್ರ ಆರೋಗ್ಯ ಸಾಧ್ಯ. ಮಕ್ಕಳಲ್ಲಿ ಸ್ವಚ್ಛತೆ ಪ್ರಜ್ಞೆ ಮೂಡಿಸುವ ಸಲುವಾಗಿ 1000ಕ್ಕೂ ಹೆಚ್ಚು ವಿದ್ಯಾರ್ಥಿಗಳನ್ನು ತೊಡಗಿಸಿಕೊಂಡು ಗೋಡೆ ಬರಹ ಮತ್ತು ರಸ್ತೆ ಸ್ವಚ್ಛತೆ ಮಾಡುವುದರೊಂದಿಗೆ ಸ್ವಚ್ಛ ತುಮಕೂರು ಸಂದೇಶವನ್ನು ಸಾರುವ ಮಾನವ ಸರಪಳಿಯನ್ನು

ನಿರ್ಮಿಸಲಾಗಿತ್ತು. ಹಾಗೆಯೇ, ವಿವಿಧೆಡೆ ನಡೆದ ಸ್ವಚ್ಚತಾ ಕಾರ್ಯಕ್ರಮಗಳ ಕುರಿತು ಮಾಹಿತಿ ನೀಡಿದರು.

ಗಾಂಧಿ ಜಯಂತಿ ಪ್ರಯುಕ್ತ ಅ.2ರಂದು ನಗರದ ಸರ್ಕಾರಿ ಜೂನಿಯರ್ ಕಾಲೇಜು ಮೈದಾನದಲ್ಲಿರುವ ಗಾಂಧಿಭವನದ ಮುಂದೆ ಬಾಪೂಜಿಯವರ ಪ್ರತಿಮೆ ಅನಾವರಣ ಸೇರಿ ಶೇಷಾದ್ರಿಪುರಂ ಕಾಲೇಜಿನ ವಿದ್ಯಾರ್ಥಿಗಳು ಘನ ತ್ಯಾಜ್ಯ ವಸ್ತುಗಳಿಂದ ವಿನ್ಯಾಸ ಮಾಡಿದ

ಉಡುಗೆ ತೊಟ್ಟು ಪ್ರದರ್ಶಿಸಿದ ರ‍್ಯಾಂಪ್ ವಾಕ್ ವಿಶೇಷವಾಗಿತ್ತು ಎಂದು ಅಶ್ವಿಜಾ ತಿಳಿಸಿದ್ದಾರೆ.
Author
Suddi Moola
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಶ್ರೀ ಶಂಕರಭಾರತಿ ಶಾಲೆಯ ವಾರ್ಷಿಕೋತ್ಸವ ಮಾರ್ಕ್‌ಸ್‌ ಕಾರ್ಡ್‌ಗಾಗಿ ಮಕ್ಕಳನ್ನು ತಯಾರು ಮಾಡಬೇಡಿ - ಬೆಳಗಲ್ಸಮಾಜ ಸೇವಾ ಮನೋಭಾವ ರೂಪಿಸಿಕೊಳ್ಳಿ - ಪ್ರೊ. ಶಿವಾನಂದ ಕೆಳಗಿನಮನಿಚನ್ನಪ್ಪ ಅವರಿಗೆ ರಾಜ್ಯಮಟ್ಟದ ಜ್ಯೋತಿಬಾ ಪುಲೆ ಪ್ರಶಸ್ತಿಜಿಲ್ಲಾ ಟಾಸ್‌‌ಕೆರ್ಸ್ ಸಮಿತಿ ಸಭೆ ‘ರೈತರಿಗೆ ಯಾವುದೇ ತೊಂದರೆಯಾಗದಂತೆ ನೋಡಿಕೊಳ್ಳಿ’ರಾಷ್ಟ್ರೀಯ ಹೆದ್ದಾರಿ ಪಕ್ಕದ ಜಮೀನುಗಳಿಗೆ ಹೋಗಲು ದಾರಿ ಮಾಡಿಕೊಡಲು ಆಗ್ರಹಜವಾಹರ ನವೋದಯ ವಿದ್ಯಾರ್ಥಿ ಪ್ರಜ್ವಲ್ ರಾಜ್ಯಕ್ಕೆ ಪ್ರಥಮಮುದಗಲ್ ಪಿಎಸ್‌ಐ ಸೇರಿ ಪೊಲೀಸರ ಅಮಾನತ್ತು ಮಾಡಲು ಒತ್ತಾಯಹುಲಿಕೇರಿ ಒತ್ತುವರಿಯಾಗಿದ್ದರೆ ಕ್ರಮ ಕೈಗೊಳ್ಳಲಿ - ಹಿಟ್ನಾಳಪಟ್ಟಣ ಸಹಕಾರ ಬ್ಯಾಾಂಕ್ ಮಹಾಮಂಡಳದ ನಿರ್ದೇಶಕರಿಗೆ ಡಿ.ಎಚ್.ಓ ಸನ್ಮಾನ ಗೆಳೆಯರ ಬಳಗದ ಬೆಂಬಲ, ನೌಕರರೊಂದಿಗಿನ ಒಳ್ಳೆಯ ಒಡನಾಟದಿಂದ ಉನ್ನತ ಸ್ಥಾನಮಾನಇಂದು ಗ್ರಾಮೀಣ ಭಾಗದ ವಿವಿಧ ಪ್ರದೇಶದಲ್ಲಿ ವಿದ್ಯುತ್ ವ್ಯತ್ಯಯ