Web Stories
Suddimoola News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಹಂಪಿ ಉತ್ಸವಕ್ಕೆ ಸಿಎಂ ಚಾಲನೆ : ಡಿಸಿ ಕವಿತಾ

ಸುದ್ದಿಮೂಲ ವಾರ್ತೆ ಹೊಸಪೇಟೆ, ೆ.09:
ಹಂಪಿ ಉತ್ಸವಕ್ಕೆೆ ಕ್ಷಣಗಣನೆ ಪ್ರಾಾರಂಭವಾಗಿದ್ದು 13 ರಿಂದ 15 ರವರೆಗೆ ವಿಜೃಂಭಣೆಯಿಂದ ಉತ್ಸವ ನಡೆಯಲಿದೆ. ಜಿಲ್ಲಾಡಳಿತ ಸಕಲ ರೀತಿಯಲ್ಲೂ ಸನ್ನದ್ದವಾಗಿದೆ ಎಂದು ಜಿಲ್ಲಾಧಿಕಾರಿ ಕವಿತಾ ಎಸ್.ಮನ್ನಿಿಕೇರಿ ತಿಳಿಸಿದರು.
ನಗರದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಪತ್ರಿಿಕಾಗೋಷ್ಠಿಿಯಲ್ಲಿ ಮಾತ ನಾಡಿದ ವಿವಿಧ ಕಾರ್ಯಕ್ರ ಮ ನಡೆಯಲಿವೆ ಎಂದು ಮಾಹಿತಿ ನೀಡಿದರು.
ಕಲಾವಿದರ ಕಲರವ: ೆ.13 ರಂದು ಮುಖ್ಯಮಂತ್ರಿಿ ಸಿದ್ದರಾಮಯ್ಯನವರು ಅಧಿಕೃತವಾಗಿ ಉತ್ಸವಕ್ಕೆೆ ಚಾಲನೆ ನೀಡುವರು. ಮುಖ್ಯ ವೇದಿಕೆಯಾದ ಎಂ.ಪಿ.ಪ್ರ ಕಾಶ್ ವೇದಿಕೆಯಲ್ಲಿ ಗಣ್ಯರೊಂದಿಗೆ ನಟ ಶಿವರಾಜಕುಮಾರ್, ಅಶ್ವಿಿನಿ ಪುನೀತ್ ರಾಜಕುಮಾರ್, ರುಕ್ಮಿಿಣಿ ವಸಂತ್ ವೇದಿಕೆ ಹಂಚಿಕೊಳ್ಳಲಿದ್ದಾರೆ.ವೇದಿಕೆ ಕಾರ್ಯ ಕ್ರಮದ ನಂತರ ಗಾಯಕ ವಿಜಯ್ ಪ್ರಕಾಶ್ ಮತ್ತು ಹರಿಹರನ್ ತಂಡದಿಂದ ಶ್ರೀ ಕೃಷ್ಣ ದೇವರಾಯ (ಎದುರು ಬಸವಣ್ಣ) ವೇದಿಕೆಯಲ್ಲಿ ಶಮಿತಾ ಮಲ್ನಾಾಡ್ ತಂಡ ಹಾಗೂ ವಿರೂಪಾಕ್ಷೇಶ್ವರ ವೇದಿಕೆಯಲ್ಲಿ ಕಲಾವತಿ ದಯಾನಂದ್ ತಂಡದಿಂದ ಸು ಮಧುರ ಗೀತಗಾಯನ ನಡೆಸಿಕೊಡಲಿದ್ದಾರೆ.
ೆ.14 ಉತ್ಸವದ 2ನೇ ದಿನದಂದು ಮುಖ್ಯ ವೇದಿಕೆಯಾದ ಎಂ.ಪಿ.ಪ್ರಕಾಶ್ ವೇದಿಕೆಯಲ್ಲಿ ಗೋಲ್ಡನ್ ಸ್ಟಾಾರ್ ಗಣೇಶ್, ರಾಜ್ ಬಿ ಶೆಟ್ಟಿಿ, ಸಪ್ತಮಿ ಗೌಡ, ಝೈದ್ ಖಾನ್, ಗಿಲ್ಲಿ ಮತ್ತು ಕಾವ್ಯ ಇವರ ವೇದಿಕೆ ಕಾರ್ಯಕ್ರಮ ನಡೆಯಲಿದೆ. ನವೀನ್ ಸಜ್ಜು ಮತ್ತು ಅರ್ಜುನ್ ಜನ್ಯ ತಂಡದಿಂದ ಗೀತಗಾಯನ ಪ್ರಸ್ತುತಿ. ಶ್ರೀಕೃಷ್ಣ ದೇವ ರಾಯ (ಎದುರು ಬಸವಣ್ಣ) ವೇದಿಕೆಯಲ್ಲಿ ಎಂಡಿ ಪಲ್ಲವಿ ಮತ್ತು ತಂಡದಿಂದ ವಿ ರೂಪಾಕ್ಷೇಶ್ವರ ವೇದಿಕೆಯ ಬಳಿ ಹೊಸಪೇಟೆಯ ಸ್ವರಾರ್ಥ ಬ್ಯಾಾಂಡ್ ವತಿಯಿಂದ ಸುಮಧುರ ಗೀತೆ ಗಾಯನ ಪ್ರಸ್ತುತಪಡಿಸಲಿದ್ದಾರೆ.
ೆ. 15 ರಂದು ಮುಖ್ಯ ವೇದಿಕೆಯಲ್ಲಿ ನಟರಾದ ಡಾಲಿ ಧನುಂಜಯ್, ಧ್ರುವಸ ರ್ಜಾ ಹಾಗೂ ರಚಿತಾರಾಮ್ ವೇದಿಕೆ ಹಂಚಿಕೊಳ್ಳಲಿದ್ದಾರೆ. ತದನಂತರದಲ್ಲಿ ರ ಘು ದೀಕ್ಷಿತ್, ಮಂಗಲಿ ಮತ್ತು ಮಣಿಕಾಂತ್ ಖದ್ರಿಿ ತಂಡದಿಂದ ಗಾಯನ ಏಪಾ ಡಿಸಲಾಗಿದೆ. ಶ್ರೀಕೃಷ್ಣ ದೇವರಾಯ (ಎದುರು ಬಸವಣ್ಣ) ವೇದಿಕೆಯಲ್ಲಿ ವಾಸುಕಿ ವೈಭವ್ ಮತ್ತು ತಂಡ ವಿರೂಪಾಕ್ಷೇಶ್ವರ ವೇದಿಕೆಯಲ್ಲಿ ಬಿಗ್ಬಾಾಸ್ ವಿಜೇತ ತಂಡ ಹನುಮಂತ ಮತ್ತು ತಂಡದಿಅದ ಗೀತ ಗಾಯನದೊಂದಿಗೆ ಜನ-ಮನ ರಂಜಿಸಲಿ ದ್ದಾರೆ ಎಂದರು.
ಹಂಪಿ ಉತ್ಸವದ ವಿಶೇಷ : ಡ್ರೋೋನ್ ಶೋ:
ಈ ಬಾರಿಯ ವಿಶೇಷವಾಗಿ ಒಂದು ಸಾವಿರಕ್ಕೂ ಅಧಿಕ ಡ್ರೋೋನ್ ಬಳಸಿ ಹಂಪಿ ಗತವೈಭವ ಸಾರುವ 12 ಚಿತ್ರಗಳು ಆಗಸದಲ್ಲಿ ಮೂಡಿಬರಲಿವೆ. ಹಂಪಿ ಉತ್ಸವದ ಮೆರಗು ಕಣ್ತುಂಬಿಕೊಳ್ಳಲು ಜಿಲ್ಲೆಯ ಎಲ್ಲಾ ತಾಲ್ಲೂಕಿಗೆ 3 ದಿನಗಳ ಕಾಲ ಉಚಿತ ಸಾರಿಗೆ ವ್ಯವಸ್ಥೆೆ ಕಲ್ಪಿಿಸಲಾಗಿದೆ. ಹೆಚ್ಚಿಿನ ಪಾರ್ಕಿಂಗ್ ವ್ಯವಸ್ಥೆೆ ಮಾಡಲಾಗುವುದು.
ಸಾರ್ವಜನಿಕರಿಗೆ ಸಮರ್ಪಕವಾಗಿ ಕುಡಿಯುವ ನೀರು, ಶೌಚಾಲಯ, ನೆರಳಿನ ವ್ಯವಸ್ಥೆೆ ಯಾವುದೇ ಕೊರತೆಯಾಗದಂತೆ ಅಗತ್ಯ ಕ್ರಮವಹಿಸಲಾಗಿದೆ ಎಂದು ತಿಳಿಸಿದರು.
ಧ್ವನಿ ಮತ್ತು ಬೆಳಕು ಕಾರ್ಯಕ್ರಮ : ಹಂಪಿ ಉತ್ಸವದ ಮತ್ತೊೊಂದು ಪ್ರಮುಖ ಆಕರ್ಷಣೆ ಧ್ವನಿ ಮತ್ತು ಬೆಳಕು ಕಾರ್ಯಕ್ರಮ. ಇಲ್ಲಿ ಸ್ಥಳೀಯ ಕಲಾವಿದರಿಂದ ವಿಜನಯನಗರ ಸಾಮ್ರಾಾಜ್ಯದ ಗತವೈಭವ ಸಾರುವ ಸುವರ್ಣ ಯುಗವನ್ನು ಅಭಿ ನಯದ ಮೂಲಕ ಕಣ್ಣಿಿಗೆ ಕಟ್ಟುವ ರೀತಿಯಲ್ಲಿ ಭಿತ್ತರಿಸುವರು. ಇದು ಉತ್ಸವಕ್ಕೆೆ ತೆರೆ ಎಳೆದರೂ ಸಹ 7 ದಿನಗಳ ಕಾಲ ಮುಂದುವರೆಯಲಿದೆ ಎಂದ ಅವರು, ಉತ್ಸವ ಯಶಸ್ಸಿಿಗಾಗಿ ಸರ್ಕಾರಕ್ಕೆೆ ರು.25 ಕೋಟಿ ಪ್ರಸ್ತಾಾವನೆ ಸಲ್ಲಿಸಲಾಗಿದೆ ಎಂದು ತಿಳಿಸಿದರು.
ಜಿಲ್ಲಾ ಪೊಲೀಸ್ ವರಿಷ್ಠಾಾಧಿಕಾರಿ ಎಸ್. ಜಾಹ್ನವಿ ಮಾಹಿತಿ ನೀಡಿದರು. ಪತ್ರಿಿಕಾಗೋಷ್ಠಿಿಯಲ್ಲಿ ಜಿಲ್ಲಾ ಪಂಚಾಯತ್ ಸಿಇಓ ನೋಂಗ್ಜಾಾಯ್ ಮೊಹ್ಮದ್ ಅಲಿ ಅಕ್ರಂ ಷಾ ಇದ್ದರು.
Author
Suddi Moola
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಶ್ರೀ ಶಂಕರಭಾರತಿ ಶಾಲೆಯ ವಾರ್ಷಿಕೋತ್ಸವ ಮಾರ್ಕ್‌ಸ್‌ ಕಾರ್ಡ್‌ಗಾಗಿ ಮಕ್ಕಳನ್ನು ತಯಾರು ಮಾಡಬೇಡಿ - ಬೆಳಗಲ್ಸಮಾಜ ಸೇವಾ ಮನೋಭಾವ ರೂಪಿಸಿಕೊಳ್ಳಿ - ಪ್ರೊ. ಶಿವಾನಂದ ಕೆಳಗಿನಮನಿಚನ್ನಪ್ಪ ಅವರಿಗೆ ರಾಜ್ಯಮಟ್ಟದ ಜ್ಯೋತಿಬಾ ಪುಲೆ ಪ್ರಶಸ್ತಿಜಿಲ್ಲಾ ಟಾಸ್‌‌ಕೆರ್ಸ್ ಸಮಿತಿ ಸಭೆ ‘ರೈತರಿಗೆ ಯಾವುದೇ ತೊಂದರೆಯಾಗದಂತೆ ನೋಡಿಕೊಳ್ಳಿ’ರಾಷ್ಟ್ರೀಯ ಹೆದ್ದಾರಿ ಪಕ್ಕದ ಜಮೀನುಗಳಿಗೆ ಹೋಗಲು ದಾರಿ ಮಾಡಿಕೊಡಲು ಆಗ್ರಹಜವಾಹರ ನವೋದಯ ವಿದ್ಯಾರ್ಥಿ ಪ್ರಜ್ವಲ್ ರಾಜ್ಯಕ್ಕೆ ಪ್ರಥಮಮುದಗಲ್ ಪಿಎಸ್‌ಐ ಸೇರಿ ಪೊಲೀಸರ ಅಮಾನತ್ತು ಮಾಡಲು ಒತ್ತಾಯಹುಲಿಕೇರಿ ಒತ್ತುವರಿಯಾಗಿದ್ದರೆ ಕ್ರಮ ಕೈಗೊಳ್ಳಲಿ - ಹಿಟ್ನಾಳಪಟ್ಟಣ ಸಹಕಾರ ಬ್ಯಾಾಂಕ್ ಮಹಾಮಂಡಳದ ನಿರ್ದೇಶಕರಿಗೆ ಡಿ.ಎಚ್.ಓ ಸನ್ಮಾನ ಗೆಳೆಯರ ಬಳಗದ ಬೆಂಬಲ, ನೌಕರರೊಂದಿಗಿನ ಒಳ್ಳೆಯ ಒಡನಾಟದಿಂದ ಉನ್ನತ ಸ್ಥಾನಮಾನಇಂದು ಗ್ರಾಮೀಣ ಭಾಗದ ವಿವಿಧ ಪ್ರದೇಶದಲ್ಲಿ ವಿದ್ಯುತ್ ವ್ಯತ್ಯಯ