Web Stories
Suddimoola News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಕಕ ಮಂಡಳಿ, ಕಕ ಸಂಘದ ಅಕ್ರಮ ತನಿಖೆಗೆ ಸಿಎಂ ಆದೇಶ

ಸುದ್ದಿಮೂಲ ವಾರ್ತೆ

ಕಲಬುರಗಿ, ಮೇ.30: ಕಲ್ಯಾಣ ಕರ್ನಾಟಕ ಪ್ರದೇಶ ಅಭಿವೃದ್ಧಿ ಮಂಡಳಿಗೆ ಬಿಡುಗಡೆ ಮಾಡಿದ 3000 ಕೋಟಿ ರೂ. ಅನುದಾನದಲ್ಲಿ ವ್ಯಾಪಕ ಅಕ್ರಮಗಳು ನಡೆದಿವೆ ಎಂದು ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ್ ರಾಜ್ ಸಚಿವ ಪ್ರಿಯಾಂಕ್ ಖರ್ಗೆ ಅವರು ಪತ್ರ ಬರೆದಿದ್ದಾರೆ. ಪತ್ರದ ಆಧಾರದಲ್ಲಿ ಮಂಡಳಿಯಲ್ಲಿನ ಅಕ್ರಮಗಳಿಗೆ ಸಂಬಂಧಿಸಿದಂತೆ ನಿರ್ದಾಕ್ಷಿಣ್ಯವಾಗಿ ತನಿಖೆ ನಡೆಸುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಆದೇಶ ಹೊರಡಿಸಿದ್ದಾರೆ.

ಈ ಕುರಿತು ಸರ್ಕಾರದ ಮುಖ್ಯ ಕಾರ್ಯದರ್ಶಿ ವಂದಿತಾ ಶರ್ಮಾ ಅವರಿಗೆ ಟಿಪ್ಪಣಿ ಬರೆದಿರುವ ಮುಖ್ಯಮಂತ್ರಿ, ಕಲ್ಯಾಣ ಕರ್ನಾಟಕ ಅಭಿವೃದ್ದಿ ಮಂಡಳಿಗೆ ಬಿಡುಗಡೆ ಮಾಡಿ ವೆಚ್ಚ ಮಾಡಿರುವ 3000 ಕೋಟಿ ರು. ಅನುದಾನದಲ್ಲಿ ವ್ಯಾಪಕ ಅಕ್ರಮಗಳು ನಡೆದಿವೆ ಎಂದು ದೂರುಗಳು ಎರಡು ಮೂರು ವರ್ಷಗಳಿಂದ ಕೇಳಿಬರುತ್ತಿವೆ. ಆದ್ದರಿಂದ ಈ ಕೂಡಲೇ ನಿರ್ದಾಕ್ಷಿಣ್ಯವಾಗಿ ಇಲಾಖೆ ತನಿಖೆ ನಡೆಸಿ ಎಲ್ಲೆಲ್ಲಿ ನಿಯಮಬಾಹಿರ ಅನುದಾನಗಳನ್ನು ವಿನಿಯೋಗಿಸಿ ಕಾಮಗಾರಿಗಳಲ್ಲಿ ಅಕ್ರಮ ನಡೆದಿದೆ ಎಂಬ ವಿಷಯದ ಕುರಿತು ಗಂಭೀರವಾಗಿ ಪರಿಗಣಿಸಿ 15 ದಿನಗಳ ಒಳಗೆ ತಪ್ಪಿತಸ್ಥರ ವಿವರಗಳೊಂದಿಗೆ ವರದಿ ಸಲ್ಲಿಸುವಂತೆ ಆದೇಶಿಸಿದ್ದಾರೆ.

ಅಲ್ಲದೇ, ಕಲ್ಯಾಣ ಕರ್ನಾಟಕ ವಿಮೋಚನಾ ದಿನಾಚರಣೆಗಾಗಿ ಬಿಡುಗಡೆ ಮಾಡಿ ವೆಚ್ಷಮಾಡಲಾಗಿರುವ 3.50 ಕೋಟಿ ರು. ಅನುದಾನವನ್ನು ಕೆಟಿಪಿಪಿ ಕಾಯ್ದೆಯನ್ವರ ಪ್ರಕ್ರಿಯೆಗಳನ್ನು ನಡೆಸದೆ ಹೆಚ್ಚುವರಿಯಾಗಿ 50 ಲಕ್ಷ ರು. ವೆಚ್ಚ ಮಾಡುವಲ್ಲಿ ಅಕ್ರಮಗಳು ನಡೆದಿವೆ ಎಂದು ದೂರು ಸಲ್ಲಿಕೆಯಾಗಿರುತ್ತವೆ. ಈ ವಿಷಯದ ಕುರಿತು ಗಂಭೀರವಾಗಿ ಪರಿಗಣಿಸಿ 15 ದಿನಗಳ ಒಳಗೆ ತಪ್ಪಿತಸ್ಥರ ವಿವರಗಳೊಂದಿಗೆ ವರದಿ ಸಲ್ಲಿಸುವಂತೆ ಆದೇಶಿಸಲಾಗಿದೆ.

ಕಲ್ಯಾಣ ಕರ್ನಾಟಕ ಮಾನವ ಸಂಪನ್ಮೂಲ ಕೃಷಿ ಹಾಗೂ ಸಾಂಸ್ಕೃತಿಕ ಸಂಘಕ್ಕೆ ಬಿಡುಗಡೆ ಮಾಡಿ ವೆಚ್ಚ ಮಾಡಿರುವ 300 ಕೋಟಿ ರು. ಅನುದಾನದಲ್ಲಿ ವ್ಯಾಪಕ ಅಕ್ರಮಗಳು ನಡೆದಿವೆ ಎಂದು ದೂರುಗಳು ಎರಡು ಮೂರು ವರ್ಷಗಳಿಂದ ಕೇಳಿ ಬರುತ್ತಿವೆ. ಈ ವಿಷಯದ ಕುರಿತು ನಿರ್ದಾಕ್ಷಿಣ್ಯವಾಗಿ ಇಲಾಖೆ ತನಿಖೆ ನಡೆಸಿ ಎಲ್ಲೆಲ್ಲಿ ನಿಯಮಬಾಹಿರವಾಗಿ ಅನುದಾನಗಳನ್ನು ವಿನಿಯೋಗಿಸಿ, ಕಾಮಗಾರಿಗಳಲ್ಲಿ ಅಕ್ರಮ ನಡೆದಿದೆ ಎಂಬ ವಿಷಯದ ಕುರಿತು ಗಂಭೀರವಾಗಿ ಪರಿಗಣಿಸಿ 15 ದಿನಗಳ ಒಳಗಾಗಿ ತಪ್ಪಿತಸ್ಥರ ವಿವರಗಳೊಂದಿಗೆ ವರದಿಯನ್ನು ಸಲ್ಲಿಸುವಂತೆ ಆದೇಶಿಸಿದ್ದಾರೆ.
Author
Suddi Moola
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಶ್ರೀ ಶಂಕರಭಾರತಿ ಶಾಲೆಯ ವಾರ್ಷಿಕೋತ್ಸವ ಮಾರ್ಕ್‌ಸ್‌ ಕಾರ್ಡ್‌ಗಾಗಿ ಮಕ್ಕಳನ್ನು ತಯಾರು ಮಾಡಬೇಡಿ - ಬೆಳಗಲ್ಸಮಾಜ ಸೇವಾ ಮನೋಭಾವ ರೂಪಿಸಿಕೊಳ್ಳಿ - ಪ್ರೊ. ಶಿವಾನಂದ ಕೆಳಗಿನಮನಿಚನ್ನಪ್ಪ ಅವರಿಗೆ ರಾಜ್ಯಮಟ್ಟದ ಜ್ಯೋತಿಬಾ ಪುಲೆ ಪ್ರಶಸ್ತಿಜಿಲ್ಲಾ ಟಾಸ್‌‌ಕೆರ್ಸ್ ಸಮಿತಿ ಸಭೆ ‘ರೈತರಿಗೆ ಯಾವುದೇ ತೊಂದರೆಯಾಗದಂತೆ ನೋಡಿಕೊಳ್ಳಿ’ರಾಷ್ಟ್ರೀಯ ಹೆದ್ದಾರಿ ಪಕ್ಕದ ಜಮೀನುಗಳಿಗೆ ಹೋಗಲು ದಾರಿ ಮಾಡಿಕೊಡಲು ಆಗ್ರಹಜವಾಹರ ನವೋದಯ ವಿದ್ಯಾರ್ಥಿ ಪ್ರಜ್ವಲ್ ರಾಜ್ಯಕ್ಕೆ ಪ್ರಥಮಮುದಗಲ್ ಪಿಎಸ್‌ಐ ಸೇರಿ ಪೊಲೀಸರ ಅಮಾನತ್ತು ಮಾಡಲು ಒತ್ತಾಯಹುಲಿಕೇರಿ ಒತ್ತುವರಿಯಾಗಿದ್ದರೆ ಕ್ರಮ ಕೈಗೊಳ್ಳಲಿ - ಹಿಟ್ನಾಳಪಟ್ಟಣ ಸಹಕಾರ ಬ್ಯಾಾಂಕ್ ಮಹಾಮಂಡಳದ ನಿರ್ದೇಶಕರಿಗೆ ಡಿ.ಎಚ್.ಓ ಸನ್ಮಾನ ಗೆಳೆಯರ ಬಳಗದ ಬೆಂಬಲ, ನೌಕರರೊಂದಿಗಿನ ಒಳ್ಳೆಯ ಒಡನಾಟದಿಂದ ಉನ್ನತ ಸ್ಥಾನಮಾನಇಂದು ಗ್ರಾಮೀಣ ಭಾಗದ ವಿವಿಧ ಪ್ರದೇಶದಲ್ಲಿ ವಿದ್ಯುತ್ ವ್ಯತ್ಯಯ