Web Stories
Suddimoola News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಸಹಕಾರಿ ಸಂಘಗಳು ಸೇವಾ ಮನೋಭಾವನೆ ಮೂಲಕ ವ್ಯವಹರಿಸಲಿ

ಸುದ್ದಿಮೂಲ ವಾರ್ತೆ

ತಿಪಟೂರು, ಸೆ. 26 : ಸಹಕಾರ ಸಂಘಗಳು ಪ್ರಾಮಾಣಿಕತೆ, ಸಹಕಾರಿ ತತ್ವ ಹಾಗೂ ಸೇವಾ ಮನೋಭಾವನೆ ಮೂಲಕ ವ್ಯವಹಾರ ನಡೆಸಿದಾಗ ಮಾತ್ರ ಸಮಾಜದಲ್ಲಿ ಮಾದರಿ ಸಂಘಗಳಾಗಿ ಬೆಳೆಯಲು ಸಾಧ್ಯ ಎಂದು ಗುರುಪರ ದೇಶಿಕೇಂದ್ರ ಸ್ವಾಮೀಜಿ ಸೌಹಾರ್ದ ಸಹಕಾರಿ ಸಂಘದ ಅಧ್ಯಕ್ಷ ಕೆರೆಗೋಡಿ ರಂಗಾಪುರ ಸ್ವಾಮೀಜಿ ತಿಳಿಸಿದರು.

ನಗರದ ಸಿದ್ಧರಾಮೇಶ್ವರ ಪಾಲಿಟೆಕ್ನಿಕ್ ಕಾಲೇಜಿನ ಸಭಾಂಗಣದಲ್ಲಿ ಸಂಘದ 2ನೇ ವರ್ಷದ ಹಾಗೂ 2022-23ನೇ ಸಾಲಿನ ಸರ್ವ ಸದಸ್ಯರ ಮಹಾಸಭೆ ಉದ್ಘಾಟಿಸಿ ಆರ್ಶೀವಚನ ನೀಡಿದರು.

ಇಂದು ಹಳ್ಳಿಗಳಲ್ಲಿ ಹಾಲು ಉತ್ಪಾದಕರ ಸಂಘಗಳು, ರೈತ ಸೇವಾ ಸಹಕಾರ ಸಂಘಗಳು ಗಟ್ಟಿಯಾಗಿ ನೆಲೆಯೂರಿ ಗ್ರಾಮೀಣ ಭಾಗದ ಜನರ ಆರ್ಥಿಕ ಮಟ್ಟ ಸುಧಾರಿಸಲು ಅನುಕೂಲವಾಗಿವೆ. ಮುಂದಿನ ದಿನಗಳಲ್ಲಿ ಸರ್ಕಾರ ಪ್ರತಿಯೊಂದೂ ಹಳ್ಳಿಗಳಲ್ಲೂ ಒಂದೊಂದು ಸಹಕಾರಿ ಸಂಘಗಳನ್ನು ಸ್ಥಾಪಿಸಿ ಆ ಮೂಲಕ ರೈತರಿಗೆ, ಕೃಷಿಗೆ ಅಗತ್ಯ ಆರ್ಥಿಕ ನೆರವು ನೀಡಬೇಕು. ಅರ್ಹರು ತಮ್ಮ ಅಗತ್ಯಗಳಿಗೆ ಆರ್ಥಿಕ ನೆರವು ಪಡೆದು ಸಕಾಲಕ್ಕೆ ಮರುಪಾವತಿಸಿ, ಇತರೆ ಸದಸ್ಯರುಗಳು ಸಹ ಆರ್ಥಿಕ ನೆರವು ಪಡೆಯಲು ಸಹಕರಿಸಬೇಕಿದೆ ಎಂದರು.

ಇತ್ತೀಚೆಗೆ ಸಾಕಷ್ಟು ಸಂಘಗಳಲ್ಲಿ ಆರ್ಥಿಕ ನೆರವು ಪಡೆದವರು ಸಕಾಲಕ್ಕೆ ಹಿಂತಿರುಗಿಸದೆ ಸಹಕಾರಿ ಸಂಘಗಳ ಮೇಲೆ ನಂಬಿಕೆ ಇಟ್ಟು ಠೇವಣಿ ಇಡುವವರಿಗೆ ತೊಂದರೆ ಮತ್ತು ಸಂಘಗಳ ವ್ಯವಹಾರಕ್ಕೂ ಕುತ್ತು ಬಂದು ಸಹಕಾರಿ ಸಂಘಗಳಿಗೆ ಬರುವುದನ್ನು ಕಾಣುತ್ತಿದ್ದೇವೆ ಎಂದರು.

ಸಮಾರಂಭದಲ್ಲಿ ಸಂಘದ ಉಪಾಧ್ಯಕ್ಷ ಶಿವಶಂಕರ್, ತಡಸೂರು ಸುರೇಶ್, ತರಕಾರಿ ನಾಗರಾಜು, ಪ್ರಾಂಶುಪಾಲ ಭರತ್ ಮತ್ತಿತರರಿದ್ದರು.
Author
Suddi Moola
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಶ್ರೀ ಶಂಕರಭಾರತಿ ಶಾಲೆಯ ವಾರ್ಷಿಕೋತ್ಸವ ಮಾರ್ಕ್‌ಸ್‌ ಕಾರ್ಡ್‌ಗಾಗಿ ಮಕ್ಕಳನ್ನು ತಯಾರು ಮಾಡಬೇಡಿ - ಬೆಳಗಲ್ಸಮಾಜ ಸೇವಾ ಮನೋಭಾವ ರೂಪಿಸಿಕೊಳ್ಳಿ - ಪ್ರೊ. ಶಿವಾನಂದ ಕೆಳಗಿನಮನಿಚನ್ನಪ್ಪ ಅವರಿಗೆ ರಾಜ್ಯಮಟ್ಟದ ಜ್ಯೋತಿಬಾ ಪುಲೆ ಪ್ರಶಸ್ತಿಜಿಲ್ಲಾ ಟಾಸ್‌‌ಕೆರ್ಸ್ ಸಮಿತಿ ಸಭೆ ‘ರೈತರಿಗೆ ಯಾವುದೇ ತೊಂದರೆಯಾಗದಂತೆ ನೋಡಿಕೊಳ್ಳಿ’ರಾಷ್ಟ್ರೀಯ ಹೆದ್ದಾರಿ ಪಕ್ಕದ ಜಮೀನುಗಳಿಗೆ ಹೋಗಲು ದಾರಿ ಮಾಡಿಕೊಡಲು ಆಗ್ರಹಜವಾಹರ ನವೋದಯ ವಿದ್ಯಾರ್ಥಿ ಪ್ರಜ್ವಲ್ ರಾಜ್ಯಕ್ಕೆ ಪ್ರಥಮಮುದಗಲ್ ಪಿಎಸ್‌ಐ ಸೇರಿ ಪೊಲೀಸರ ಅಮಾನತ್ತು ಮಾಡಲು ಒತ್ತಾಯಹುಲಿಕೇರಿ ಒತ್ತುವರಿಯಾಗಿದ್ದರೆ ಕ್ರಮ ಕೈಗೊಳ್ಳಲಿ - ಹಿಟ್ನಾಳಪಟ್ಟಣ ಸಹಕಾರ ಬ್ಯಾಾಂಕ್ ಮಹಾಮಂಡಳದ ನಿರ್ದೇಶಕರಿಗೆ ಡಿ.ಎಚ್.ಓ ಸನ್ಮಾನ ಗೆಳೆಯರ ಬಳಗದ ಬೆಂಬಲ, ನೌಕರರೊಂದಿಗಿನ ಒಳ್ಳೆಯ ಒಡನಾಟದಿಂದ ಉನ್ನತ ಸ್ಥಾನಮಾನಇಂದು ಗ್ರಾಮೀಣ ಭಾಗದ ವಿವಿಧ ಪ್ರದೇಶದಲ್ಲಿ ವಿದ್ಯುತ್ ವ್ಯತ್ಯಯ