Web Stories
Suddimoola News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಅಂಗಾಂಗ ದಾನ ಮಾಡಿದ ಹ್ಯಾಟಿ ಗ್ರಾಮದ ಕುಟುಂಬಸ್ಥರಿಗೆ ಸಾಂತ್ವನ

ಸುದ್ದಿಮೂಲವಾರ್ತೆ
ಕೊಪ್ಪಳ ಮೇ 25: ಮೆದುಳು ನಿಷ್ಕ್ರಿಯ ಗೊಂಡಿದ್ದ ಮಗನ ಅಂಗಾಂಗವನ್ನು ದಾನ ಮಾಡಿದ ಹ್ಯಾಟಿ ಗ್ರಾಮದ ದಂಪತಿಗಳ ಮನೆಗೆ ಬಿಜೆಪಿ ಪರಾಜಿತ ಅಭ್ಯರ್ಥಿ ಮಂಜುಳಾ ಕರಡಿ ಭೇಟಿ ಸಾಂತ್ವಾನ ಹೇಳಿದರು.

ಈ ಸಂದರ್ಭದಲ್ಲಿ ಮಾತನಾಡಿದ ಅವರು, ಮೂರು ದಿನಗಳ ಹಿಂದೆ ಕೊಪ್ಪಳದ ತಾಲೂಕಿನ ಹ್ಯಾಟಿ ಗ್ರಾಮದ ಯುವಕ ಮಹೇಶ್ ರಸ್ತೆ ಅಪಘಾತದಲ್ಲಿ ತಲೆಗೆ ಗಂಭೀರವಾಗಿ ಪೆಟ್ಟು ಬಿದ್ದು ಮೆದುಳು ನಿಶ್ಚಿಯಗೊಂಡಿದ್ದರು. ಯುವಕನ ತಂದೆ ಕನಕಪ್ಪ ತಾಯಿ ಸುಮಿತ್ರ ಅವರು ಕೊಪ್ಪಳದ ಅಭಿನವ ಶ್ರೀಗಳ ನುಡಿಯಿಂದ ಪ್ರೇರಣೆಗೊಂಡು ಮಗನ ಸಾವಿನಲ್ಲೂ ಸಾರ್ಥಕತೆ ಮೆರೆದು ಮಗನ ಅಂಗಾಂಗವನ್ನು ದಾನ ಮಾಡಿ ಮಾದರಿಯಾಗಿದ್ದಾರೆ ಎಂದು ತಿಳಿಸಿದರು.

ಗವಿಮಠದ ಅಭಿನವ ಗವಿಸಿದ್ದೇಶ್ವರ ಸ್ವಾಮೀಜಿಯವರು ಮಾರ್ಗದಂತೆ ನುಡಿದ ದಂಪತಿ ಕಾರ್ಯ ಎಲ್ಲರಿಗೂ ಅನುಕರಣೀಯವಾಗಿದೆ. ಅಂಗಾಂಗ ದಾನದಿಂದ ಐದಾರು ಮಂದಿಯ ಜೀವ ಉಳಿಸಬಹುದು. ಇನ್ನು ಜನರು ಕೂಡ ರಕ್ತದಾನ ಮಾಡಲು ಮುಂದಾಗಬೇಕು. ಈ ಮೂಲಕವೂ ಜನರ ಜೀವ ಉಳಿಸಬಹುದು. ಆರು ತಿಂಗಳಿಗೊಮ್ಮೆ ರಕ್ತ ನೀಡಬಹುದು ಎಂದರು.
ಯಾರಾದರೂ ಅಪಘಾತ ಕ್ಕೀಡಾಗಿ ಮೆದುಳು ನಿಷ್ಕ್ರಿಯ ಗೊಂಡರೆ, ಗವಿಶ್ರೀ ನುಡಿಯಂತೆ ಅಂಗಾಂಗ ದಾನ ಮಾಡಲು ಮುಂದಾಗಬೇಕು. ಇದರಿಂದ ವ್ಯಕ್ತಿ ಮೃತಪಟ್ಟರು ಅಂಗಾಂಗ ಜೀವದಿಂದ ಇರಲಿವೆ. ಹಲವರ ಜೀವನಕ್ಕೆ ಬೆಳಕಾದಂತೆ ಆಗುತ್ತದೆ ಎಂದು ಗವಿಶ್ರೀ ಅವರನ್ನು ಸ್ಮರಿಸಿದರು.
Author
Suddi Moola
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಶ್ರೀ ಶಂಕರಭಾರತಿ ಶಾಲೆಯ ವಾರ್ಷಿಕೋತ್ಸವ ಮಾರ್ಕ್‌ಸ್‌ ಕಾರ್ಡ್‌ಗಾಗಿ ಮಕ್ಕಳನ್ನು ತಯಾರು ಮಾಡಬೇಡಿ - ಬೆಳಗಲ್ಸಮಾಜ ಸೇವಾ ಮನೋಭಾವ ರೂಪಿಸಿಕೊಳ್ಳಿ - ಪ್ರೊ. ಶಿವಾನಂದ ಕೆಳಗಿನಮನಿಚನ್ನಪ್ಪ ಅವರಿಗೆ ರಾಜ್ಯಮಟ್ಟದ ಜ್ಯೋತಿಬಾ ಪುಲೆ ಪ್ರಶಸ್ತಿಜಿಲ್ಲಾ ಟಾಸ್‌‌ಕೆರ್ಸ್ ಸಮಿತಿ ಸಭೆ ‘ರೈತರಿಗೆ ಯಾವುದೇ ತೊಂದರೆಯಾಗದಂತೆ ನೋಡಿಕೊಳ್ಳಿ’ರಾಷ್ಟ್ರೀಯ ಹೆದ್ದಾರಿ ಪಕ್ಕದ ಜಮೀನುಗಳಿಗೆ ಹೋಗಲು ದಾರಿ ಮಾಡಿಕೊಡಲು ಆಗ್ರಹಜವಾಹರ ನವೋದಯ ವಿದ್ಯಾರ್ಥಿ ಪ್ರಜ್ವಲ್ ರಾಜ್ಯಕ್ಕೆ ಪ್ರಥಮಮುದಗಲ್ ಪಿಎಸ್‌ಐ ಸೇರಿ ಪೊಲೀಸರ ಅಮಾನತ್ತು ಮಾಡಲು ಒತ್ತಾಯಹುಲಿಕೇರಿ ಒತ್ತುವರಿಯಾಗಿದ್ದರೆ ಕ್ರಮ ಕೈಗೊಳ್ಳಲಿ - ಹಿಟ್ನಾಳಪಟ್ಟಣ ಸಹಕಾರ ಬ್ಯಾಾಂಕ್ ಮಹಾಮಂಡಳದ ನಿರ್ದೇಶಕರಿಗೆ ಡಿ.ಎಚ್.ಓ ಸನ್ಮಾನ ಗೆಳೆಯರ ಬಳಗದ ಬೆಂಬಲ, ನೌಕರರೊಂದಿಗಿನ ಒಳ್ಳೆಯ ಒಡನಾಟದಿಂದ ಉನ್ನತ ಸ್ಥಾನಮಾನಇಂದು ಗ್ರಾಮೀಣ ಭಾಗದ ವಿವಿಧ ಪ್ರದೇಶದಲ್ಲಿ ವಿದ್ಯುತ್ ವ್ಯತ್ಯಯ