Web Stories
Suddimoola News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಐಸಿಎಸ್‌ಇ-ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ರಾಜ್ಯಕ್ಕೆ ಎರರಡನೇ ಸ್ಥಾನ ಇಗ್ಗಲೂರು ನ್ಯಾಷನಲ್ ಪಬ್ಲಿಕ್ ಶಾಲೆಯಲ್ಲಿ ವಿದ್ಯಾರ್ಥಿಗಳಿಗೆ ಅಭಿನಂದನೆ

ಸುದ್ದಿಮೂಲ ವಾರ್ತೆ
ಆನೇಕಲ್, ಮೇ 22:  ಪ್ರಯತ್ನ ಒಂದು ಇದ್ದರೆ ಜೀವನದಲ್ಲಿ ಏನು ಬೇಕಾದರೂ ಸಾಧನೆ ಮಾಡಬಹುದು. ಗ್ರಾಮೀಣ ಭಾಗದ ಮಕ್ಕಳು ಪ್ರತಿಷ್ಠಿತ ಶಾಲೆಗಳಿಗೆ ಸ್ಪರ್ಧೆ ಮಾಡುತ್ತಿರುವುದು ನಿಜಕ್ಕೂ ಒಳ್ಳೆಯ ವಿಚಾರ. ವಿದ್ಯಾರ್ಥಿಗಳು ಮತ್ತು ಪೋಷಕರಿಗೆ ಅಭಿನಂದನೆ ಸಲ್ಲಿಸುತ್ತೇನೆ ಎಂದು  ಪ್ರೊ ಕಬಡ್ಡಿ ತೀರ್ಪುಗಾರ ಹಾಗೂ  ಆನೇಕಲ್ ದೈಹಿಕ ಶಿಕ್ಷಕರ ಸಂಘದ ಅಧ್ಯಕ್ಷರು ಗೋಪಾಲ್ ಹೇಳಿದರು.

ಆನೇಕಲ್ ತಾಲ್ಲೂಕಿನ ಇಗ್ಗಲೂರು ಸಮೀಪವಿರುವ ನ್ಯಾಷನಲ್ ಪಬ್ಲಿಕ್ ಶಾಲೆಯಲ್ಲಿ ಇಂದು ಐಸಿಎಸ್ಇ ನಲ್ಲಿ 100% ಫಲಿತಾಂಶ ಬಂದ ಹಿನ್ನೆಲೆಯಲ್ಲಿ ವಿದ್ಯಾರ್ಥಿಗಳಿಗೆ ಶಾಲೆಯ ಆಡಳಿತ ಮಂಡಳಿಯ ವತಿಯಿಂದ ಅಭಿನಂದನಾ ಸಮಾರಂಭ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು.

ರಾಜ್ಯ ಮಟ್ಟದಲ್ಲಿ ಎರಡನೇ ಸ್ಥಾನ ನ್ಯಾಷನಲ್ ಪಬ್ಲಿಕ್ ಶಾಲೆ ಪಡೆದುಕೊಂಡಿದೆ. ಒಟ್ಟು 43 ವಿದ್ಯಾರ್ಥಿಗಳ ಪೈಕಿ 37 ಜನ ವಿದ್ಯಾರ್ಥಿಗಳು ಡಿಸ್ಟಿಂಕ್ಷನ್ ಪಡೆದು  ಶಿವಾಂಗಿ.ಆರ್ 99% ಅಂಕ ಪಡೆದು ರಾಜ್ಯಮಟ್ಟದಲ್ಲಿ ಎರಡನೇ ಸ್ಥಾನ ಪಡೆದಿದ್ದಾರೆ. ಚೇತನ ಎಮ್ ಗೌಡ 98%, ಹೇಮಚಂದ್ರ ಎಮ್ ರೆಡ್ಡಿ 98%, ಗಿರಿ ನಂದಿನಿ ಆರ್ 98%, ಅಂಕ ಪಡೆದು  ವಿದ್ಯಾರ್ಥಿಗಳು  ಶಾಲೆಗೆ ಕೀರ್ತಿಯನ್ನು ತಂದುಕೊಟ್ಟಿದ್ದಾರೆ .

ಇನ್ನು ಇದೇ ವೇಳೆ ಮಾತನಾಡಿದ ಶಾಲೆಯ ಕಾರ್ಯದರ್ಶಿ ಪಳ್ಳಳ್ಳಪ್ಪ ಯಾದವ್, ಕಳೆದ 17 ವರ್ಷಗಳಿಂದ ಶಾಲೆಯನ್ನು ನಡೆಸಿಕೊಂಡು ಬರುತ್ತಿದ್ದೇವೆ. ಉತ್ತಮ ಪೋಷಕರು ಮತ್ತು ಉತ್ತಮ ಶಿಕ್ಷಣದಿಂದಾಗಿ ಸಾಧನೆ ಮಾಡಲು ಸಾಧ್ಯವಾಗಿದೆ. ಸತತ 9 ವರ್ಷಗಳಿಂದ 100ಕ್ಕೆ 100ರಷ್ಟು ಫಲಿತಾಂಶ ಬರುತ್ತಿದ್ದು, ಈ ವರ್ಷ 43 ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದು ಅವರಲ್ಲಿ 37 ಜನ ಡಿಸ್ಟಿಂಕ್ಷನ್ ಮತ್ತು 6 ಪ್ರಥಮ ಶ್ರೇಣಿಯಲ್ಲಿ ಉತ್ತೀರ್ಣರಾಗಿದ್ದಾರೆ. ಹೀಗಾಗಿ ಶಾಲೆಗೆ 100ಕ್ಕೆ 100 ರಷ್ಟು ಫಲಿತಾಂಶ ಬಂದಿದೆ. ಈ ನಾಲ್ಕು ಜನ ವಿದ್ಯಾರ್ಥಿಗಳಿಗೆ ಅಭಿನಂದನೆಯನ್ನು ಸಲ್ಲಿಸುತ್ತೇನೆ ಎಂದು ತಿಳಿಸಿದರು . ಜೊತೆಗೆ ಎಲ್ಲಾ ಪೋಷಕರಿಗೂ ಅಭಿನಂದನೆಗಳನ್ನು ತಿಳಿಸಿದರು.

ವಿದ್ಯಾರ್ಥಿನಿ ಚೇತನಾ ಮಾತನಾಡಿ, ಶಿಕ್ಷಕರಿಗೆ ಅಭಿನಂದನೆಯನ್ನು ಸಲ್ಲಿಸುತ್ತೇನೆ. ನನ್ನ ಗುರಿ ಐಎಎಸ್ ಆಗುವ ಆಸೆ ಇದೆ. ಐಎಎಸ್ ಆದರೆ ಈಗಾಗಲೇ ಸರ್ಕಾರಿ ಶಾಲೆಗಳು ಅಳಿವಿನಂಚಿನಲ್ಲಿದೆ. ಸರ್ಕಾರಿ ಶಾಲೆಗಳನ್ನ ಉಳಿಸುವುದಕ್ಕೆ ಪ್ರಯತ್ನವನ್ನು ಮಾಡುತ್ತೇನೆ. ನನಗೆ ಸಿಕ್ಕಿದ ಶಿಕ್ಷಣವನ್ನು ಎಲ್ಲರಿಗೂ ಸಿಗುವಂತ ಕೆಲಸ ನಾನು ಮಾಡುತ್ತೇನೆ. ಜತಗೆ  ನನ್ನ ಸುತ್ತಮುತ್ತ ಇರುವ ಮಕ್ಕಳಿಗೆ ಉಚಿತ ಪಾಠವನ್ನು ಮಾಡಿಕೊಡುತ್ತೇನೆ ಎಂದು ತಮ್ಮ ಅಭಿಪ್ರಾಯವನ್ನು ತಿಳಿಸಿದರು.

ಇನ್ನು ಈ ಕಾರ್ಯಕ್ರಮದಲ್ಲಿ ಶಾಲಾ ಆಡಳಿತ ಮಂಡಳಿಯ ಅಧ್ಯಕ್ಷರು ರಾಮರೆಡ್ಡಿ , ಕಾರ್ಯದರ್ಶಿಗಳು ಪಳ್ಳಳ್ಳಪ್ಪ ಯಾದವ್,  ಪ್ರಾಂಶುಪಾಲರು ವೀಣಾ ಮೋಂಟಿ ಡಿಸೋಜಾ,  ಪ್ರೌಢಶಾಲೆಯ ಇಂಚಾರ್ಜ್ ಸುಧಾ,  ತರಗತಿ ಶಿಕ್ಷಕರು ಬಾನುಲೇಖ,  ಮುರಳಿ ಮತ್ತು ಶಿಕ್ಷಕರು ಭಾಗವಹಿಸಿದ್ದರು.
Author
Suddi Moola
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಶ್ರೀ ಶಂಕರಭಾರತಿ ಶಾಲೆಯ ವಾರ್ಷಿಕೋತ್ಸವ ಮಾರ್ಕ್‌ಸ್‌ ಕಾರ್ಡ್‌ಗಾಗಿ ಮಕ್ಕಳನ್ನು ತಯಾರು ಮಾಡಬೇಡಿ - ಬೆಳಗಲ್ಸಮಾಜ ಸೇವಾ ಮನೋಭಾವ ರೂಪಿಸಿಕೊಳ್ಳಿ - ಪ್ರೊ. ಶಿವಾನಂದ ಕೆಳಗಿನಮನಿಚನ್ನಪ್ಪ ಅವರಿಗೆ ರಾಜ್ಯಮಟ್ಟದ ಜ್ಯೋತಿಬಾ ಪುಲೆ ಪ್ರಶಸ್ತಿಜಿಲ್ಲಾ ಟಾಸ್‌‌ಕೆರ್ಸ್ ಸಮಿತಿ ಸಭೆ ‘ರೈತರಿಗೆ ಯಾವುದೇ ತೊಂದರೆಯಾಗದಂತೆ ನೋಡಿಕೊಳ್ಳಿ’ರಾಷ್ಟ್ರೀಯ ಹೆದ್ದಾರಿ ಪಕ್ಕದ ಜಮೀನುಗಳಿಗೆ ಹೋಗಲು ದಾರಿ ಮಾಡಿಕೊಡಲು ಆಗ್ರಹಜವಾಹರ ನವೋದಯ ವಿದ್ಯಾರ್ಥಿ ಪ್ರಜ್ವಲ್ ರಾಜ್ಯಕ್ಕೆ ಪ್ರಥಮಮುದಗಲ್ ಪಿಎಸ್‌ಐ ಸೇರಿ ಪೊಲೀಸರ ಅಮಾನತ್ತು ಮಾಡಲು ಒತ್ತಾಯಹುಲಿಕೇರಿ ಒತ್ತುವರಿಯಾಗಿದ್ದರೆ ಕ್ರಮ ಕೈಗೊಳ್ಳಲಿ - ಹಿಟ್ನಾಳಪಟ್ಟಣ ಸಹಕಾರ ಬ್ಯಾಾಂಕ್ ಮಹಾಮಂಡಳದ ನಿರ್ದೇಶಕರಿಗೆ ಡಿ.ಎಚ್.ಓ ಸನ್ಮಾನ ಗೆಳೆಯರ ಬಳಗದ ಬೆಂಬಲ, ನೌಕರರೊಂದಿಗಿನ ಒಳ್ಳೆಯ ಒಡನಾಟದಿಂದ ಉನ್ನತ ಸ್ಥಾನಮಾನಇಂದು ಗ್ರಾಮೀಣ ಭಾಗದ ವಿವಿಧ ಪ್ರದೇಶದಲ್ಲಿ ವಿದ್ಯುತ್ ವ್ಯತ್ಯಯ