Web Stories
Suddimoola News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಕಲೆಗಳ ಸಂರಕ್ಷಣೆ ನಮ್ಮೆಲ್ಲರ ಕರ್ತವ್ಯ: ದೇವಿದಾಸ್ ಸುಬ್ರಾಯ್ ಶೇಠ್

ಸುದ್ದಿಮೂಲ ವಾರ್ತೆ

ಸೂಲಿಬೆಲೆ, ಮೇ 25: ದೃಶ್ಯ ಮಾಧ್ಯಮಗಳ ಹಾವಳಿಯಿಂದ ಗ್ರಾಮೀಣ ಭಾಗದ ಅನೇಕ ಕಲೆಗಳು ನಶಿಸಿಹೊಗುವ ಹಂತಕ್ಕೆ ತಲುಪಿವೆ. ಕಲೆಯನ್ನು ಉಳಿಸುವ ಹಾಗೂ ಕಲಾವಿದರನ್ನು ರಕ್ಷಿಸಿ ವೇದಿಕೆ ಕಲ್ಪಿಸಿಕೊಡುವ ಕೆಲಸ ನಮ್ಮಿಂದಾಗಬೇಕು ಕಲೆಗಳ ಸಂರಕ್ಷಣೆ ನಮ್ಮೆಲ್ಲರ ಕರ್ತವ್ಯವಾಗಬೇಕು ಎಂದು ಶಿಕ್ಷಣ ತಜ್ಞ ದೇವಿದಾಸ್ ಸುಬ್ರಾಯ್ ಶೇಠ್ ಹೇಳಿದರು.

ಸೂಲಿಬೆಲೆಯ ಚನ್ನಬೈರೇಗೌಡನಗರದ ಪಂಚದೇವಾಲಯದ ಆವರಣದಲ್ಲಿ ನಾಡಪ್ರಭು ಕೆಂಪೇಗೌಡ ಯುವಕರ ಸಂಘ ಹಾಗೂ ಕನ್ನಡ ಸಂಸ್ಕೃತಿ ಇಲಾಖೆ ಬೆಂಗಳೂರು ಗ್ರಾಮಾಂತರ ಜಿಲ್ಲೆ ಇವರ ಸಂಯುಕ್ತ

ಆಶ್ರಯದಲ್ಲಿ ಹಮ್ಮಿಕೊಂಡಿದ್ದ ಸಾಂಸ್ಕೃತಿಕ ಹಬ್ಬ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.

ಸಂಘ ಸಂಸ್ಥೆಗಳ ಮೂಲಕ ಗ್ರಾಮೀಣ ಭಾಗದ ಹಿರಿಯ ಕಲಾವಿದರು ಹಾಗೂ ಕಿರಿಯ ಕಲಾವಿದರನ್ನು ಗುರುತಿಸಿ ಕನ್ನಡ ಸಂಸ್ಕೃತಿ ಇಲಾಖೆ ಹಾಗೂ ದಾನಿಗಳ ಮೂಲಕ ಅವರಿಗೆ ವೇದಿಕೆಯ ಜೊತೆಯಲ್ಲಿ ಜೋಳಿಗೆ ತುಂಬುವ ಕೆಲಸಕ್ಕೆ ಸಹಾಯಹಸ್ತ ಚಾಚಬೇಕು ಎಂದು ಹೇಳಿದರು.

ಹರಿಕಥ ವಿದ್ಯಾನ್ ಪೋಸ್ಟ್ ಶ್ರೀನಿವಾಸ ಮಾತನಾಡಿ, ಸಂಘ ಸಂಸ್ಥೆಗಳಮೂಲಕ ಕಲಾವಿದರನ್ನು ಗುರುತಿಸಿ ಅವರಿಗೆ ಸೂಕ್ತ ವೇದಿಕೆ ಹಾಗೂ ಗೌರವ ನೀಡುವ ಮೂಲಕ ಕಲೆಯನ್ನು ಪಸರಿಸುವ ಕೆಲಸ ನೆಡೆಯಬೇಕು ಎಂದು ಹೇಳಿದರು.

ಜೇನುಗೂಡು ರೂರಲ್ ಡೆವಲ್ಪಮೆಂಟ್ ಅಂಡ್ ಕಲ್ಚರಲ್ ಟ್ರಸ್ಟಿನ ಪ್ರಧಾನ ಕಾರ್ಯದರ್ಶಿ ಬೆಟ್ಟಹಳ್ಳೀ ಗೋಪಿನಾಥ್ ಮಾತನಾಡಿ, ಕಲೆ ಜೀವಂತವಾಗಿ ಇಡುವ ಕೆಲಸ ಆಗಬೇಕು. ಪೌರಾಣಿಕ, ಸಾಂಸ್ಕೃತಿಕ ಕಾರ್ಯಕ್ರಮಗಳು ನಿರಂತರವಾಗಬೇಕು,ದೃಶ್ಯ ಮಾಧ್ಯಮಗಳಿಂದ ಗ್ರಾಮೀಣ ಜನತೆ ಅಂತರ ಕಾಯ್ದುಕೊಳ್ಳಬೇಕು. ಕಲಾವಿದರಿಗೆ ಹೆಚ್ಚಿನ ಪ್ರೋತ್ಸಾಹ ದೊರೆಯಬೇಕು ಎಂದರು.

ಬಿ.ಸಂತೋಷ್ ಮತ್ತು ತಂಡದಿಂದ ಸುಗಮ ಸಂಗೀತ, ಮುನಿಕದಿರಪ್ಪ ತಂಡದಿಂದ ಭಜನಾ ಕಾರ್ಯಕ್ರಮ, ಡಿ.ಎಂ.ರಘುಕುಮಾರ್ ಅವರಿಂದ ಜನಪದ ಸಂಗೀತ, ಪೋಸ್ಟ್ ಶ್ರೀನಿವಾಸ್ ರಿಂದ ರಂಗಗೀತೆಗಳ ಕಾರ್ಯಕ್ರಮ

ಹಮ್ಮಿಕೊಳ್ಳಲಾಗಿತ್ತು.
Author
Suddi Moola
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಶ್ರೀ ಶಂಕರಭಾರತಿ ಶಾಲೆಯ ವಾರ್ಷಿಕೋತ್ಸವ ಮಾರ್ಕ್‌ಸ್‌ ಕಾರ್ಡ್‌ಗಾಗಿ ಮಕ್ಕಳನ್ನು ತಯಾರು ಮಾಡಬೇಡಿ - ಬೆಳಗಲ್ಸಮಾಜ ಸೇವಾ ಮನೋಭಾವ ರೂಪಿಸಿಕೊಳ್ಳಿ - ಪ್ರೊ. ಶಿವಾನಂದ ಕೆಳಗಿನಮನಿಚನ್ನಪ್ಪ ಅವರಿಗೆ ರಾಜ್ಯಮಟ್ಟದ ಜ್ಯೋತಿಬಾ ಪುಲೆ ಪ್ರಶಸ್ತಿಜಿಲ್ಲಾ ಟಾಸ್‌‌ಕೆರ್ಸ್ ಸಮಿತಿ ಸಭೆ ‘ರೈತರಿಗೆ ಯಾವುದೇ ತೊಂದರೆಯಾಗದಂತೆ ನೋಡಿಕೊಳ್ಳಿ’ರಾಷ್ಟ್ರೀಯ ಹೆದ್ದಾರಿ ಪಕ್ಕದ ಜಮೀನುಗಳಿಗೆ ಹೋಗಲು ದಾರಿ ಮಾಡಿಕೊಡಲು ಆಗ್ರಹಜವಾಹರ ನವೋದಯ ವಿದ್ಯಾರ್ಥಿ ಪ್ರಜ್ವಲ್ ರಾಜ್ಯಕ್ಕೆ ಪ್ರಥಮಮುದಗಲ್ ಪಿಎಸ್‌ಐ ಸೇರಿ ಪೊಲೀಸರ ಅಮಾನತ್ತು ಮಾಡಲು ಒತ್ತಾಯಹುಲಿಕೇರಿ ಒತ್ತುವರಿಯಾಗಿದ್ದರೆ ಕ್ರಮ ಕೈಗೊಳ್ಳಲಿ - ಹಿಟ್ನಾಳಪಟ್ಟಣ ಸಹಕಾರ ಬ್ಯಾಾಂಕ್ ಮಹಾಮಂಡಳದ ನಿರ್ದೇಶಕರಿಗೆ ಡಿ.ಎಚ್.ಓ ಸನ್ಮಾನ ಗೆಳೆಯರ ಬಳಗದ ಬೆಂಬಲ, ನೌಕರರೊಂದಿಗಿನ ಒಳ್ಳೆಯ ಒಡನಾಟದಿಂದ ಉನ್ನತ ಸ್ಥಾನಮಾನಇಂದು ಗ್ರಾಮೀಣ ಭಾಗದ ವಿವಿಧ ಪ್ರದೇಶದಲ್ಲಿ ವಿದ್ಯುತ್ ವ್ಯತ್ಯಯ