Web Stories
Suddimoola News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಹಳೆಯ ನಿಶ್ಚಿತ ಪಿಂಚಣಿ ಜಾರಿಗೆ ಒತ್ತಾಯಿಸಿ ಸಮಾವೇಶ

ಸುದ್ದಿಮೂಲ ವಾರ್ತೆ

ಮೈಸೂರು, ನ.2 : ಅನುದಾನಿತ ನೌಕರರಿಗೆ ಮಾರಕವಾಗಿರುವ ಪಿಂಚಣಿ ನಿಯಂತ್ರಣ ಕಾಯ್ದೆಯನ್ನು ರದ್ದುಗೊಳಿಸಿ, ಹಳೆಯ ನಿಶ್ಚಿತ ಪಿಂಚಣಿ ಜಾರಿಗಾಗಿ ಆಗ್ರಹಿಸಿ ಶಿವಮೊಗ್ಗದಲ್ಲಿ ನ. 5 ರಂದು ರಾಜ್ಯಮಟ್ಟದ ಸಮಾವೇಶ ನಡೆಸಲಾಗುವುದು ಎಂದು ರಾಜ್ಯ ಅನುದಾನಿತ ಶಾಲಾಕಾಲೇಜುಗಳ ಪಿಂಚಣಿ ವಂಚಿತ ನೌಕರರ ಸಂಘದ ಮೈಸೂರು ಜಿಲ್ಲಾ ಘಟಕ ತಿಳಿಸಿದೆ.

ನಗರದ ಪತ್ರಕರ್ತರ ಭವನದಲ್ಲಿ ಮಾತನಾಡಿದ ಸಂಘದ ಜಿಲ್ಲಾಧ್ಯಕ್ಷ ಶಿಂಡೇನಹಳ್ಳಿ, ಡಾ. ಶರತ್ ಕುಮಾರ್, ಸರ್ಕಾರಿ ಮತ್ತು ಅನುದಾನಿತ ನೌಕರರಿಗೆ 2006ರ ಮಾ.31 ಹಿಂದೆ ನಿವೃತ್ತಿಯ ನಂತರನಿವೃತ್ತಿ ಭತ್ಯೆ ಇತ್ಯಾದಿ ಸೌಲಭ್ಯಗಳನ್ನು ಸಮಾನವಾಗಿ ಕೊಡಲಾಗುತ್ತಿತ್ತು.

ಅನಂತರ ಏಪ್ರಿಲ್ ನಿಂದ ಅಂದಿನ ಸರ್ಕಾರ ಸರ್ಕಾರಿ ನೌಕರರಿಗೆ ಮಾತ್ರ ರಾಷ್ಟ್ರೀಯ ಪಿಂಚಣಿ ಯೋಜನೆ ಹೊಸ ಯೋಜನೆಯನ್ನು ಜಾರಿಗೆ ತಂದು, ಅನುದಾನಿತ ನೌಕರರನ್ನು ಈ ಪಿಂಚಣಿ ಸೌಲಭ್ಯದಿಂದ ಕೈಬಿಟ್ಟಿತು. ಅಲ್ಲದೆ ಸರ್ಕಾರವು ಅನುದಾನಿತ ಸಿಬ್ಬಂದಿಗಳ ಸೇವಾ ಮತ್ತು ಪಿಂಚಣಿ ಸೌಲಭ್ಯವನ್ನು ನಿಯಂತ್ರಿಸುವ ಸಲುವಾಗಿ ಕರ್ನಾಟಕ ಖಾಸಗಿ ಅನುದಾನಿತ ಶಿಕ್ಷಣ ಸಂಸ್ಥೆಗಳ ಸಿಬ್ಬಂದಿಗಳ ವೇತನ, ನಿವೃತ್ತಿ ವೇತನ ಮತ್ತು ಇತರೆ ಸೌಲಭ್ಯಗಳ ನಿಯಂತ್ರಣ 2014ನ್ನು ಜಾರಿಗೊಳಿಸಲಾಗಿದೆ.

ಈ ವಿಧೇಯಕವನ್ನು ಪ್ರಶ್ನಿಸಿ, ರಾಜ್ಯ ಉಚ್ಛ ನ್ಯಾಯಾಲಯದಲ್ಲಿ ಸದರಿ ವಿಧೇಯಕವನ್ನು ವಜಾಗೊಳಿಸಿರುತ್ತದೆ. ಸದರಿ ತೀರ್ಪಿನ ವಿರುದ್ಧ ರಾಜ್ಯ ಸರ್ಕಾರವು ರಿಟ್ ಅರ್ಜಿ ಸಲ್ಲಿಸಿ ಪ್ರಕರಣವು ನ್ಯಾಯಾಲಯದಲ್ಲಿ ನಡೆಯುತ್ತಿದೆ‌ ಎಂದರು.

ಈ ಹಿನ್ನೆಲೆಯಲ್ಲಿ ನೂತನ ಕಾಯ್ದೆಯನ್ನು ಸಂಪೂರ್ಣವಾಗಿ ರದ್ದುಗೊಳಿಸಿ, ಹಿಂದೆ ಇದ್ದಂತೆ ಹಳೆಯ ನಿಶ್ಚಿತ ಪಿಂಚಣಿಯನ್ನು ಯಥಾವತ್ತಾಗಿ ಜಾರಿಗೊಳಿಸಬೇಕು. ಸರ್ಕಾರಿ ನೌಕರರಿಗೆ ಇರುವಂತೆ, ಅನುದಾನಿತ ನೌಕರರಿಗೂ ಆರೋಗ್ಯ ಸಂಜೀವಿನಿಯನ್ನು ಯಥಾವತ್ತಾಗಿ ಜಾರಿಗೊಳಿಸಬೇಕೆಂದು ಸಮಾವೇಶದಲ್ಲಿ ಆಗ್ರಹಿಸಲಾಗುವುದು ಎಂದು ತಿಳಿಸಿದರು.

ಸಂಘದ ಗೌ. ಕಾರ್ಯದರ್ಶಿ ಬಿ.ಆರ್.ಶಿವಕುಮಾರ್ ಮತ್ತಿತರರಯ ಇದ್ದರು.
Author
Suddi Moola
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಶ್ರೀ ಶಂಕರಭಾರತಿ ಶಾಲೆಯ ವಾರ್ಷಿಕೋತ್ಸವ ಮಾರ್ಕ್‌ಸ್‌ ಕಾರ್ಡ್‌ಗಾಗಿ ಮಕ್ಕಳನ್ನು ತಯಾರು ಮಾಡಬೇಡಿ - ಬೆಳಗಲ್ಸಮಾಜ ಸೇವಾ ಮನೋಭಾವ ರೂಪಿಸಿಕೊಳ್ಳಿ - ಪ್ರೊ. ಶಿವಾನಂದ ಕೆಳಗಿನಮನಿಚನ್ನಪ್ಪ ಅವರಿಗೆ ರಾಜ್ಯಮಟ್ಟದ ಜ್ಯೋತಿಬಾ ಪುಲೆ ಪ್ರಶಸ್ತಿಜಿಲ್ಲಾ ಟಾಸ್‌‌ಕೆರ್ಸ್ ಸಮಿತಿ ಸಭೆ ‘ರೈತರಿಗೆ ಯಾವುದೇ ತೊಂದರೆಯಾಗದಂತೆ ನೋಡಿಕೊಳ್ಳಿ’ರಾಷ್ಟ್ರೀಯ ಹೆದ್ದಾರಿ ಪಕ್ಕದ ಜಮೀನುಗಳಿಗೆ ಹೋಗಲು ದಾರಿ ಮಾಡಿಕೊಡಲು ಆಗ್ರಹಜವಾಹರ ನವೋದಯ ವಿದ್ಯಾರ್ಥಿ ಪ್ರಜ್ವಲ್ ರಾಜ್ಯಕ್ಕೆ ಪ್ರಥಮಮುದಗಲ್ ಪಿಎಸ್‌ಐ ಸೇರಿ ಪೊಲೀಸರ ಅಮಾನತ್ತು ಮಾಡಲು ಒತ್ತಾಯಹುಲಿಕೇರಿ ಒತ್ತುವರಿಯಾಗಿದ್ದರೆ ಕ್ರಮ ಕೈಗೊಳ್ಳಲಿ - ಹಿಟ್ನಾಳಪಟ್ಟಣ ಸಹಕಾರ ಬ್ಯಾಾಂಕ್ ಮಹಾಮಂಡಳದ ನಿರ್ದೇಶಕರಿಗೆ ಡಿ.ಎಚ್.ಓ ಸನ್ಮಾನ ಗೆಳೆಯರ ಬಳಗದ ಬೆಂಬಲ, ನೌಕರರೊಂದಿಗಿನ ಒಳ್ಳೆಯ ಒಡನಾಟದಿಂದ ಉನ್ನತ ಸ್ಥಾನಮಾನಇಂದು ಗ್ರಾಮೀಣ ಭಾಗದ ವಿವಿಧ ಪ್ರದೇಶದಲ್ಲಿ ವಿದ್ಯುತ್ ವ್ಯತ್ಯಯ