Web Stories
Suddimoola News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಮಹಿಳಾ ಸಬಲೀಕರಣಕ್ಕೆ ಕೋ-ಆಪರೇಟಿವ್ ಸೊಸೈಟಿ ಪೂರಕ 


ಸುದ್ದಿಮೂಲ ವಾರ್ತೆ




ಹೊಸಕೋಟೆ, ಸೆ. 22 : ಮಹಿಳೆಯರು ಆರ್ಥಿಕವಾಗಿ ಸಾಮಾಜಿಕವಾಗಿ ಸಬಲೀಕರಣ ಸಾಧಿಸಲು ಮಹಿಳಾ ಕೋ-ಆಪರೇಟಿವ್ ಸೊಸ್ಶೆಟಿಗಳು ಪೂರಕವಾಗಿವೆ ಎಂದು ಮಹಾಕವಿ ಕಾಳಿದಾಸ ಮಹಿಳಾ ಕ್ರೆಡಿಟ್ ಕೋ-ಆಪರೇಟಿವ್ ಸೊಸೈಟಿ ಲಿಮಿಟೆಡ್ ಗೌರವಾಧ್ಯಕ್ಷೆ ಶಾಂತಮ್ಮ ಎಂಟಿಬಿ ನಾಗರಾಜ್ ತಿಳಿಸಿದರು.


ಹೊಸಕೋಟೆ ನಗರದ ಎಂವಿ ಬಡಾವಣೆಯಲ್ಲಿರುವ ಸೊಸೈಟಿ ಆವರಣದಲ್ಲಿ ನಡೆದ 2023-24ನೇ ಸಾಲಿನ ವಾರ್ಷಿಕ ಸರ್ವಸದಸ್ಯರ ಮಹಾಸಭೆಯಲ್ಲಿ ಮಾತನಾಡಿದರು.


ಕಾಳಿದಾಸ ಮಹಿಳಾ ಕೋ ಆಪರೇಟಿವ್ ಸೊಸೈಟಿ ಪ್ರಮುಖವಾಗಿ ಮಹಿಳೆಯರ ಅಭ್ಯುದಯದ ದೃಷ್ಟಿಯಿಂದ ಪ್ರಾರಂಭವಾದ ಸೊಸೈಟಿ. ಮಹಿಳೆಯರಿಗೆ ಕಡಿಮೆ ಬಡ್ಡಿ ದರದಲ್ಲಿ ಸಾಲ ಸೌಲಭ್ಯ ಕಲ್ಪಿಸುವ ಅರ್ಥಿಕವಾಗಿ ಸಾಮಾಜಿಕವಾಗಿ ಮೇಲೆತ್ತುವ ನಿಲುವು ಸಂಸ್ಥೆಯಾಗಿದೆ. ಈಗಾಗಲೇ ಸೊಸೈಟಿಯಲ್ಲಿ 2551 ಜನ ಷೇರುದಾರರಿದ್ದು, ಸೊಸೈಟಿಯಲ್ಲಿ ಪ್ರಾಮಾಣಿಕವಾಗಿ ವ್ಯವಹಾರ ಮಾಡಿಕೊಂಡು ಅಭಿವೃದ್ದಿಯತ್ತ ಸಾಗಲು ಶ್ರಮಿಸಿದ್ದಾರೆ ಎಂದರು.


ಸೊಸೈಟಿ ಅಧ್ಯಕ್ಷೆ ಕೆ.ಮಾತಾ ನಾಗರಾಜ್ ಮಾತನಾಡಿ, ಸೊಸೈಟಿಯು ಪ್ರಸಕ್ತ ಸಾಲಿನಲ್ಲಿ 15 ಲಕ್ಷ ಲಾಭಾಂಶವನ್ನು ಗಳಿಸುವ ಮೂಲಕ ಅಭಿವೃದ್ಧಿ ಹಾದಿಯಲ್ಲಿ ಸಾಗುತ್ತಿದೆ. ತಾಲೂಕಿನ ಸೂಲಿಬೆಲೆ ಹೋಬಳಿಯ ಬೆಚಿಡಿಗಾನಹಳ್ಳಿ, ಕಸಬಾ ಹೋಬಳಿಯ ದೊಡ್ಡಹುಲ್ಲೂರು, ಜಡಿಗೇನಹಳ್ಳಿ ಹೋಬಳಿಯ ವಾಗಟ, ಕೋಡಿಹಳ್ಳಿ ಗ್ರಾಮ ಹೊರತುಪಡಿಸಿ ಎಲ್ಲಾ ಗ್ರಾಮಗಳು ಸೊಸೈಟಿ ಕಾರ್ಯವ್ಯಾಪ್ತಿಗೆ ಒಳಪಟ್ಟಿರುತ್ತದೆ. ಸಹಕಾರ ಸಂಘದ ಧ್ಯೇಯೋದ್ದೇಶಗಳಿಗೆ ಅನುಗುಣವಾಗಿ ಸೊಸೈಟಿ ಅಭಿವೃದ್ದಿಯತ್ತ ಸಾಗಲು ಸದಸ್ಯರ ಸಹಕಾರ ಅತ್ಯಗತ್ಯ ಎಂದರು.


ಸೊಸೈಟಿ ಉಪಾಧ್ಯಕ್ಷೆ ಎನ್.ಗೌರಮ್ಮ, ಬಿಎಂಆರ್‌ಡಿಎ ಮಾಜಿ ಅಧ್ಯಕ್ಷ ಸಿ.ನಾಗರಾಜ್, ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ವರಲಕ್ಕ್ಷ್ಮಿ ಸೇರಿದಂತೆ ಎಲ್ಲಾ ನಿರ್ದೇಶಕರು ಹಾಜರಿದ್ದರು.






Author
Suddi Moola
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಶ್ರೀ ಶಂಕರಭಾರತಿ ಶಾಲೆಯ ವಾರ್ಷಿಕೋತ್ಸವ ಮಾರ್ಕ್‌ಸ್‌ ಕಾರ್ಡ್‌ಗಾಗಿ ಮಕ್ಕಳನ್ನು ತಯಾರು ಮಾಡಬೇಡಿ - ಬೆಳಗಲ್ಸಮಾಜ ಸೇವಾ ಮನೋಭಾವ ರೂಪಿಸಿಕೊಳ್ಳಿ - ಪ್ರೊ. ಶಿವಾನಂದ ಕೆಳಗಿನಮನಿಚನ್ನಪ್ಪ ಅವರಿಗೆ ರಾಜ್ಯಮಟ್ಟದ ಜ್ಯೋತಿಬಾ ಪುಲೆ ಪ್ರಶಸ್ತಿಜಿಲ್ಲಾ ಟಾಸ್‌‌ಕೆರ್ಸ್ ಸಮಿತಿ ಸಭೆ ‘ರೈತರಿಗೆ ಯಾವುದೇ ತೊಂದರೆಯಾಗದಂತೆ ನೋಡಿಕೊಳ್ಳಿ’ರಾಷ್ಟ್ರೀಯ ಹೆದ್ದಾರಿ ಪಕ್ಕದ ಜಮೀನುಗಳಿಗೆ ಹೋಗಲು ದಾರಿ ಮಾಡಿಕೊಡಲು ಆಗ್ರಹಜವಾಹರ ನವೋದಯ ವಿದ್ಯಾರ್ಥಿ ಪ್ರಜ್ವಲ್ ರಾಜ್ಯಕ್ಕೆ ಪ್ರಥಮಮುದಗಲ್ ಪಿಎಸ್‌ಐ ಸೇರಿ ಪೊಲೀಸರ ಅಮಾನತ್ತು ಮಾಡಲು ಒತ್ತಾಯಹುಲಿಕೇರಿ ಒತ್ತುವರಿಯಾಗಿದ್ದರೆ ಕ್ರಮ ಕೈಗೊಳ್ಳಲಿ - ಹಿಟ್ನಾಳಪಟ್ಟಣ ಸಹಕಾರ ಬ್ಯಾಾಂಕ್ ಮಹಾಮಂಡಳದ ನಿರ್ದೇಶಕರಿಗೆ ಡಿ.ಎಚ್.ಓ ಸನ್ಮಾನ ಗೆಳೆಯರ ಬಳಗದ ಬೆಂಬಲ, ನೌಕರರೊಂದಿಗಿನ ಒಳ್ಳೆಯ ಒಡನಾಟದಿಂದ ಉನ್ನತ ಸ್ಥಾನಮಾನಇಂದು ಗ್ರಾಮೀಣ ಭಾಗದ ವಿವಿಧ ಪ್ರದೇಶದಲ್ಲಿ ವಿದ್ಯುತ್ ವ್ಯತ್ಯಯ