Web Stories
Suddimoola News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ದಲಿತರು ಹಿಂದುಳಿದವರು ಭಿಕ್ಷುಕರೇ? : ಬಸವರಾಜ ಬೊಮ್ಮಾಯಿ

ಸುದ್ದಿಮೂಲ ವಾರ್ತೆ

ಕಲಬುರಗಿ, ಏ.28: ಹಿಂದುಳಿದವರು, ದಲಿತರು ಭಿಕ್ಷುಕರೇ ? ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಇಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರಿಗೆ ತಿರುಗೇಟು ನೀಡಿದರು.

ಅವರು ಇಂದು ಸೇಡಂ ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ರಾಜಕುಮಾರ್ ಪಾಟೀಲ್ ಸೇಡಂ ಅವರ ಪರವಾಗಿ ರೋಡ್ ಶೊ ನಡೆಸಿ ಮಾತನಾಡಿದರು.



 

ಲಿಂಗಾಯತರು, ಒಕ್ಕಲಿಗರು ಭಿಕ್ಷುಕರಲ್ಲ ಎಂಬ ಡಿಕೆಶಿ ಹೇಳಿಕೆಗೆ ಪ್ರತಿಕ್ರಿಯೆ ನೀಡಿ ಅನೇಕ ವರ್ಷದಿಂದ ದಲಿತರನ್ನು ಬಾವಿಯಲ್ಲಿ ಬಿಟ್ಟು ಮತ ಹಾಕಿಸಿಕೊಂಡು ಮತ್ತೆ ಬಾವಿಗೆ ಬಿಡುವ ಕೆಲಸ ಮಾಡುತ್ತಾರೆ. ಆದರೆ ಬೊಮ್ಮಾಯಿ ಸಿಎಂ ಆಗಿ ಬರಬಹುದು ಎಂದು ಅಂದುಕೊಂಡಿರಲಿಲ್ಲ‌. ನಾನು ಸಿಎಂ ಆಗಿ ಮಿಸಲಾತಿ ಜಾರಿಗೆ ತಂದ ಮೇಲೆ ಈಗ ಅವರಿಗೆ ಭಯ ಶುರುವಾಗಿದೆ.



ಖರ್ಗೆ ಮೋದಿಯವರ ಬಗ್ಗೆ ಮಾತನಾಡಿದ್ದಾರೆ. ಮೋದಿವರು ಎಲ್ಲ ಟೀಕೆಗಳನ್ನು ನುಂಗಿ ನಂಜುಂಡ ಆಗಿದ್ದಾರೆ ಎಂದರು.

ಸೇಡಂನಲ್ಲಿ ಬಿಜೆಪಿ ಅಭ್ಯರ್ಥಿ ತೇಲ್ಕೂರು ಗೆದ್ದರೆ ರಾಜ್ಯದಲ್ಲಿ ಬಿಜೆಪಿ ಜನಪರ ಸರ್ಕಾರ ಅಧಿಕಾರಕ್ಕೆ ಬರುತ್ತದೆ. ಅವರು ಎಲ್ಲಿ ಹೋಗಿದ್ದಾರೆ ಎಲ್ಲ ರಾಜ್ಯಗಳಲ್ಲಿ ‌ಬಿಜೆಪಿ ಗೆದ್ದಿದೆ. ಗುಜರಾತ್, ಉತ್ತರ ಪ್ರದೇಶ, ಉತ್ತರಾಖಾಂಡ್ ರಾಜ್ಯಗಳಲ್ಲಿ ಬಿಜೆಪಿ ಅಧಿಕಾರಕ್ಕೆ ಬಂದಿದೆ. ಕರ್ನಾಟಕದಲ್ಲಿಯೂ ಬಿಜೆಪಿ ಅಧಿಕಾರಕ್ಕೆ ಬರುತ್ತದೆ. ಅದಕ್ಕೆ ಕಾಂಗ್ರೆಸ್ ನವರಿಗೆ ಭಯ ಶುರುವಾಗಿದೆ. ಹೀಗಾಗಿ ಮೋದಿಯವರ ವಿರುದ್ದ ಹತಾಶರಾಗಿ ಮಾತನಾಡುತ್ತಿದ್ದಾರೆ ಎಂದರು.

ಕಾಂಗ್ರೆಸ್ ನವರು ಗ್ಯಾರೆಂಟಿಗಳು ಕೊಡುತ್ತಿದ್ದಾರೆ. ಮಹಿಳೆಯರಿಗೆ ಉಚಿತ ಬಸ್ ವ್ಯವಸ್ಥೆ ಮಾಡುವುದಾಗಿ ಹೇಳಿದ್ದಾರೆ. ನಾವು ಅದನ್ನು ಈಗಾಗಲೇ ಬಜೆಟ್ ನಲ್ಲಿ ಘೋಷಣೆ ಮಾಡಿದ್ದೇವೆ. ರಾಹುಲ್ ಗಾಂಧಿಗೆ ಇವರು ಹೇಳುವುದು ಅರ್ಥವಾಗುವುದಿಲ್ಲ. ಅವನು ಘೋಷಣೆ ಮಾಡುತ್ತಾನೆ.

ನಮ್ಮದು ಡಬಲ್ ಎಂಜಿನ್ ಸರ್ಕಾರ, ಕಲ್ಯಾಣ ಕರ್ನಾಟಕದ ಕಲ್ಯಾಣ ಮಾಡುತ್ತೇವೆ. ಮುಂದಿನ ಬಾರಿ ಅಧಿಕಾರಕ್ಕೆ ಬಂದು ರಾಜ್ಯವನ್ನು ನಂಬರ್ ಒನ್ ರಾಜ್ಯ ಮಾಡುತ್ತೇವೆ. ರಾಜಕುಮಾರ್ ಪಾಟೀಲ್ ತೇಲ್ಕೂರು ಅವರು ಹಠ ಹಿಡಿದು ಕೆಲಸ ಮಾಡುತ್ತಾರೆ‌. ಅವರು ಗುಲಬರ್ಗಾ ಡಿಸಿಸಿ ಬ್ಯಾಂಕ್ ಅಧ್ಯಕ್ಷ ಸ್ಥಾನ ಪಡೆದು 4 ಲಕ್ಷ ರೈತರಿಗೆ 1100 ಕೋಟಿ ಸಾಲ ನೀಡಿದ್ದಾರೆ. ನೀವು ಅವರನ್ನು ಗೆಲ್ಲಿಸಿ ಸುಭದ್ರ ಸರ್ಕಾರ ರಚನೆಗೆ ಆಶೀರ್ವದಿಸಿ ಎಂದು ಮನವಿ ಮಾಡಿದರು.
Author
Suddi Moola
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಶ್ರೀ ಶಂಕರಭಾರತಿ ಶಾಲೆಯ ವಾರ್ಷಿಕೋತ್ಸವ ಮಾರ್ಕ್‌ಸ್‌ ಕಾರ್ಡ್‌ಗಾಗಿ ಮಕ್ಕಳನ್ನು ತಯಾರು ಮಾಡಬೇಡಿ - ಬೆಳಗಲ್ಸಮಾಜ ಸೇವಾ ಮನೋಭಾವ ರೂಪಿಸಿಕೊಳ್ಳಿ - ಪ್ರೊ. ಶಿವಾನಂದ ಕೆಳಗಿನಮನಿಚನ್ನಪ್ಪ ಅವರಿಗೆ ರಾಜ್ಯಮಟ್ಟದ ಜ್ಯೋತಿಬಾ ಪುಲೆ ಪ್ರಶಸ್ತಿಜಿಲ್ಲಾ ಟಾಸ್‌‌ಕೆರ್ಸ್ ಸಮಿತಿ ಸಭೆ ‘ರೈತರಿಗೆ ಯಾವುದೇ ತೊಂದರೆಯಾಗದಂತೆ ನೋಡಿಕೊಳ್ಳಿ’ರಾಷ್ಟ್ರೀಯ ಹೆದ್ದಾರಿ ಪಕ್ಕದ ಜಮೀನುಗಳಿಗೆ ಹೋಗಲು ದಾರಿ ಮಾಡಿಕೊಡಲು ಆಗ್ರಹಜವಾಹರ ನವೋದಯ ವಿದ್ಯಾರ್ಥಿ ಪ್ರಜ್ವಲ್ ರಾಜ್ಯಕ್ಕೆ ಪ್ರಥಮಮುದಗಲ್ ಪಿಎಸ್‌ಐ ಸೇರಿ ಪೊಲೀಸರ ಅಮಾನತ್ತು ಮಾಡಲು ಒತ್ತಾಯಹುಲಿಕೇರಿ ಒತ್ತುವರಿಯಾಗಿದ್ದರೆ ಕ್ರಮ ಕೈಗೊಳ್ಳಲಿ - ಹಿಟ್ನಾಳಪಟ್ಟಣ ಸಹಕಾರ ಬ್ಯಾಾಂಕ್ ಮಹಾಮಂಡಳದ ನಿರ್ದೇಶಕರಿಗೆ ಡಿ.ಎಚ್.ಓ ಸನ್ಮಾನ ಗೆಳೆಯರ ಬಳಗದ ಬೆಂಬಲ, ನೌಕರರೊಂದಿಗಿನ ಒಳ್ಳೆಯ ಒಡನಾಟದಿಂದ ಉನ್ನತ ಸ್ಥಾನಮಾನಇಂದು ಗ್ರಾಮೀಣ ಭಾಗದ ವಿವಿಧ ಪ್ರದೇಶದಲ್ಲಿ ವಿದ್ಯುತ್ ವ್ಯತ್ಯಯ