Web Stories
Suddimoola News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

140 ವರ್ಷಗಳ ಹಳೆಯ ಪಂಚಲಿಂಗೇಶ್ವರ ದೇವಾಲಯದ ರಥಕ್ಕೆ ಹಾನಿ

 

ಸುದ್ದಿಮೂಲ ವಾರ್ತೆ

ಆನೇಕಲ್, ಅ. 15 : ಬೇಗೂರಿನ 13ನೇ ಶತಮಾನದಲ್ಲಿ ಗಂಗ ಮತ್ತು ಚೋಳರ ಕಾಲದಲ್ಲಿ ನಿರ್ಮಾಣವಾಗಿದ್ದ ಪಂಚಲಿಂಗೇಶ್ವರ ದೇವಾಲಯದ ಗೋಡೆ ಕುಸಿದು ಉತ್ಸವದ ರಥಕ್ಕೆ ಹಾನಿ‌ಯಾಗಿರುವ ಘಟನೆ ಬೊಮ್ಮನಹಳ್ಳಿಯ ಬೇಗೂರಿನಲ್ಲಿ ನಡೆದಿದೆ.



ಇತ್ತೀಚಿಗೆ ಸುರಿದ ಧಾರಾಕಾರ ಮಳೆಯಿಂದಾಗಿ ಶೆಡ್ ನಲ್ಲಿ ಇದ್ದ ರಥೋತ್ಸವಕ್ಕೆ ಗೋಡೆ ಕುಸಿತಗೊಂಡು ನೂರಾರು ವರ್ಷಗಳ ಇತಿಹಾಸವಿರುವ ರಥಕ್ಕೆ ಹಾನಿಯಾಗಿದೆ.

ಬೇಗೂರು ಗ್ರಾಮದ ಪುರಾಣ ಪ್ರಸಿದ್ಧ ನಾಗನಾಥೇಶ್ವರ ದೇವಾಲಯಕ್ಕೆ ನೂರಾರು ವರ್ಷಗಳ ಇತಿಹಾಸವಿದ್ದು, ಪ್ರತಿವರ್ಷವೂ ರಥೋತ್ಸವನ್ನ ಅದ್ಧೂರಿಯಾಗಿ ಆಚರಣೆ ಮಾಡಲಾಗುತ್ತಿತ್ತು. ಬಳಿಕ ರಥವನ್ನ ದೇವಾಲಯದಲ್ಲಿನ ರಥ ಮಂಟಪದಲ್ಲಿ ನಿಲ್ಲಿಸಲಾಗುತ್ತಿತ್ತು.

ಕಳೆದೊಂದು ವಾರದಿಂದ ಸುರಿಯುತ್ತಿರುವ ಮಳೆಯಿಂದಾಗಿ ರಥಮಂಟಪದ ಗೋಡೆ ಶಿಥಿಲಗೊಂಡಿತ್ತು. ಕಳೆದ ರಾತ್ರಿ ಗೋಡೆ ಕುಸಿತಗೊಂಡ ಪರಿಣಾಮ ರಥಕ್ಕೆ ಬಾರಿ ಪ್ರಮಾಣದ ಹಾನಿಯಾಗಿದೆ. ಜೊತೆಗೆ ದೇವರ ಮೆರವಣಿಗೆಯ ಪಲ್ಲಕ್ಕಿ ವಸ್ತುಗಳಿಗೂ ಹಾನಿಯಾಗಿದೆ.

ದೇವಾಲಯದ ಆಡಳಿತ ಮಂಡಳಿ ಕ್ರೇನ್ ಮೂಲಕ ರಥವನ್ನ ಹೊರತೆಗೆದಿದ್ದಾರೆ. ದೇವಾಲಯದ ಆಡಳಿತ ಮಂಡಳಿ ಹಾಗೂ ಗ್ರಾಮಸ್ಥರು ಹಾನಿಯಾಗಿರುವ ರಥವನ್ನ ಸರಿಪಡಿಸಲು ಮುಂದಾಗಿದ್ದಾರೆ.

ಎಂದುಸ್ಥಳೀಯ ಮುಖಂಡರಾದ ಆಂಜಿನಪ್ಪ ಹೇಳಿದರು

ಪ್ರತಿ ವರ್ಷ ಕಾರ್ತಿಕ ಮಾಸದಲ್ಲಿ ಬ್ರಹ್ಮರಥೋತ್ಸವವನ್ನು ಅದ್ಧೂರಿಯಾಗಿ ಆಚರಿಸಲಾಗುತ್ತದೆ. ಈ ರಥಕ್ಕೆ ಸುಮಾರು 140 ವರ್ಷಗಳ ಇತಿಹಾಸವಿದೆ. ಈ ರಥೋತ್ಸವದ ಅಂಕಣ ಮಂಟಪಕ್ಕೆ ಹಾನಿಯಾಗಿದೆ. ಕಳೆದ ಎರಡು ಮೂರು ಬಾರಿ ಕೂಡ ರಥೋತ್ಸವವನ್ನು ಸರಿಪಡಿಸಲಾಗಿತ್ತು ಎನ್ನುತ್ತಾರೆ ಸ್ಥಳೀಯರಾದ ಭರತ್ದೀಕ್ಷಿತ್.
Author
Suddi Moola
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಶ್ರೀ ಶಂಕರಭಾರತಿ ಶಾಲೆಯ ವಾರ್ಷಿಕೋತ್ಸವ ಮಾರ್ಕ್‌ಸ್‌ ಕಾರ್ಡ್‌ಗಾಗಿ ಮಕ್ಕಳನ್ನು ತಯಾರು ಮಾಡಬೇಡಿ - ಬೆಳಗಲ್ಸಮಾಜ ಸೇವಾ ಮನೋಭಾವ ರೂಪಿಸಿಕೊಳ್ಳಿ - ಪ್ರೊ. ಶಿವಾನಂದ ಕೆಳಗಿನಮನಿಚನ್ನಪ್ಪ ಅವರಿಗೆ ರಾಜ್ಯಮಟ್ಟದ ಜ್ಯೋತಿಬಾ ಪುಲೆ ಪ್ರಶಸ್ತಿಜಿಲ್ಲಾ ಟಾಸ್‌‌ಕೆರ್ಸ್ ಸಮಿತಿ ಸಭೆ ‘ರೈತರಿಗೆ ಯಾವುದೇ ತೊಂದರೆಯಾಗದಂತೆ ನೋಡಿಕೊಳ್ಳಿ’ರಾಷ್ಟ್ರೀಯ ಹೆದ್ದಾರಿ ಪಕ್ಕದ ಜಮೀನುಗಳಿಗೆ ಹೋಗಲು ದಾರಿ ಮಾಡಿಕೊಡಲು ಆಗ್ರಹಜವಾಹರ ನವೋದಯ ವಿದ್ಯಾರ್ಥಿ ಪ್ರಜ್ವಲ್ ರಾಜ್ಯಕ್ಕೆ ಪ್ರಥಮಮುದಗಲ್ ಪಿಎಸ್‌ಐ ಸೇರಿ ಪೊಲೀಸರ ಅಮಾನತ್ತು ಮಾಡಲು ಒತ್ತಾಯಹುಲಿಕೇರಿ ಒತ್ತುವರಿಯಾಗಿದ್ದರೆ ಕ್ರಮ ಕೈಗೊಳ್ಳಲಿ - ಹಿಟ್ನಾಳಪಟ್ಟಣ ಸಹಕಾರ ಬ್ಯಾಾಂಕ್ ಮಹಾಮಂಡಳದ ನಿರ್ದೇಶಕರಿಗೆ ಡಿ.ಎಚ್.ಓ ಸನ್ಮಾನ ಗೆಳೆಯರ ಬಳಗದ ಬೆಂಬಲ, ನೌಕರರೊಂದಿಗಿನ ಒಳ್ಳೆಯ ಒಡನಾಟದಿಂದ ಉನ್ನತ ಸ್ಥಾನಮಾನಇಂದು ಗ್ರಾಮೀಣ ಭಾಗದ ವಿವಿಧ ಪ್ರದೇಶದಲ್ಲಿ ವಿದ್ಯುತ್ ವ್ಯತ್ಯಯ